ಹಾಸನಾಂಬೆ ದರ್ಶನಕ್ಕೆ ನೂಕುನುಗ್ಗಲು ಉಂಟಾಗಲು ಕಾರಣ ಭಕ್ತಿಯೇ – ಮತಿ ಭ್ರಮಣೆಯೇ – ಅಜ್ಞಾನವೇ – ದುರಾಸೆಯೇ……
ಹಾಸನಾಂಬೆ ದರ್ಶನಕ್ಕೆ ನೂಕುನುಗ್ಗಲು ಉಂಟಾಗಲು ಕಾರಣ ಭಕ್ತಿಯೇ – ಮತಿ ಭ್ರಮಣೆಯೇ – ಅಜ್ಞಾನವೇ – ದುರಾಸೆಯೇ…… ಹಾಸನಾಂಬೆ ದೇವಿಯ ದರ್ಶನಕ್ಕಾಗಿ ಬಹುದೊಡ್ಡ ಜನಜಂಗುಳಿ ಸೇರುತ್ತಿದೆ. ಇಡೀ ಹಾಸನ ನಗರದಲ್ಲಿ ಟ್ರಾಫಿಕ್ ಜಾಮ್ ಮತ್ತು ದೇವಾಲಯದ ಸುತ್ತಮುತ್ತ ಸ್ವಲ್ಪ ನೂಕುನುಗ್ಗಲು, ದೊಡ್ಡ ಸರತಿಯ ಸಾಲುಗಳು ಕಂಡುಬರುತ್ತಿದೆ. ಎಂದೂ ಇಲ್ಲದಷ್ಟು ಭಕ್ತಿಯ ರಸ ಜನರಲ್ಲಿ ಉಕ್ಕಿ ಹರಿಯುತ್ತಿದೆ. ಈ ವಾರ ಅದು ತಿರುಪತಿಯ ಭಕ್ತರ ಸಂಖ್ಯೆಯನ್ನು ಮೀರಿದೆ ಎನ್ನುವ ಸುದ್ದಿಯು ಸಹ ಕೇಳಿ ಬರುತ್ತಿದೆ…… ಭಾರತೀಯರ ಮೋಕ್ಷದ ಹಾದಿಯ ನಂಬಿಕೆಗಳಲ್ಲಿ ಜ್ಞಾನ, ಭಕ್ತಿ, ಕರ್ಮ, ಯೋಗ ( ರಾಜ ) ಮಾರ್ಗಗಳಲ್ಲಿ ಅತಿ ಹೆಚ್ಚು ಸಂಖ್ಯೆಯ ಜನರನ್ನು ಆಕರ್ಷಿಸಿರುವುದು ಭಕ್ತಿ ಮಾರ್ಗ ಮತ್ತು ಅತ್ಯಂತ ಭಾವನಾತ್ಮಕ ಸೆಳೆತವನ್ನು ಹೊಂದಿರುವುದು ಸಹ ಭಕ್ತಿ ಮಾರ್ಗವೇ. ಅದಕ್ಕೆ ಮೂಲ ಕಾರಣ ಅತ್ಯಂತ ಭಕ್ತಿ ಎಂಬ ಭಾವ ಅತ್ಯಂತ ಆಂತರಿಕವಾದದ್ದು, ಸುಲಭವಾದದ್ದು, ಸರಳವಾದದ್ದು,…
ಮುಂದೆ ಓದಿ..
