“ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ” : ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ
“ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ” : ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ ಹಾಸನ: ರಾಜ್ಯದಲ್ಲಿ ಯಾವುದೇ ರೀತಿಯ ವಿದ್ಯುತ್ ಕೊರತೆ ಇಲ್ಲ, ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪೂರೈಕೆ ಸುಗಮವಾಗಿ ನಡೆಯುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಅವರು ಸೋಮವಾರ ಅರಸೀಕೆರೆ ತಾಲ್ಲೂಕಿನ ಸಂಕೋಡನಹಳ್ಳಿ ಗ್ರಾಮದಲ್ಲಿ ಪಿಎಂ ಕುಸುಮ್ (ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ ಮಹಾಭಿಯಾನ) ಯೋಜನೆಯಡಿ ನಿರ್ಮಾಣವಾಗಲಿರುವ ಸೌರಶಕ್ತಿ ಪಾರ್ಕ್ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. 2400 ಮೆಗಾವ್ಯಾಟ್ ಸೌರಶಕ್ತಿ ಗುರಿ.. ಸಚಿವರು ಮಾತನಾಡುವ ವೇಳೆ, “ರಾಜ್ಯಾದ್ಯಂತ ವಿವಿಧ ಭಾಗಗಳಲ್ಲಿ ಸೌರಶಕ್ತಿ ಸ್ಥಾವರಗಳ ಸ್ಥಾಪನೆ ಮೂಲಕ 2400 ಮೆಗಾವ್ಯಾಟ್ ಉತ್ಪಾದನೆ ಗುರಿ ಹೊಂದಲಾಗಿದೆ. ಯೋಜನೆ ಸಮಯಕ್ಕೆ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ,” ಎಂದರು. ವಿದ್ಯುತ್ ನಿರ್ವಹಣೆ ಮತ್ತು ವಿತರಣಾ ವ್ಯವಸ್ಥೆಯನ್ನು ಸುಧಾರಿಸಲು 100 ಹೊಸ ಉಪಕೇಂದ್ರಗಳನ್ನು ನಿರ್ಮಿಸುವ ಯೋಜನೆಗೂ ಇಲಾಖೆ…
ಮುಂದೆ ಓದಿ..
