ಸುದ್ದಿ 

ಪ್ರೇಮದ ಹೆಸರಿನಲ್ಲಿ ಸಂಬಂಧ ಕಳೆದುಕೊಂಡ ತಂದೆ – ಮಗಳ ತಿಥಿ ಮಾಡಿದ ಘಟನೆ

ಪ್ರೇಮದ ಹೆಸರಿನಲ್ಲಿ ಸಂಬಂಧ ಕಳೆದುಕೊಂಡ ತಂದೆ – ಮಗಳ ತಿಥಿ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದ ಒಂದು ಘಟನೆ ಈಗ ಸಮಾಜದ ಚಿಂತನೆಗೆ ಕಾರಣವಾಗಿದೆ. ಪ್ರೇಮ ಸಂಬಂಧದ ಹಿನ್ನೆಲೆಯಿಂದ ಮಗಳು ಮನೆ ಬಿಟ್ಟು ಹೋದ ಕಾರಣಕ್ಕೆ ಆಕ್ರೋಶಗೊಂಡ ತಂದೆ ತನ್ನ ಜೀವಂತ ಮಗಳ ತಿಥಿ ನೆರವೇರಿಸಿದ್ದಾರೆ. ನಾಗರಾಳ ಗ್ರಾಮದ ಯುವತಿ, ಅದೇ ಗ್ರಾಮದ ಯುವಕನೊಂದಿಗೆ ಪ್ರೇಮ ಸಂಬಂಧ ಬೆಳೆಸಿಕೊಂಡಿದ್ದು, ಇತ್ತೀಚೆಗೆ ಆತನೊಂದಿಗೆ ಮನೆ ಬಿಟ್ಟು ಹೋದಳು. ಯುವಕ ಸ್ಥಳೀಯ ತಹಸೀಲ್ದಾರ್ ಕಚೇರಿಯಲ್ಲಿ ಗ್ರಾಮ ಸೇವಕನಾಗಿ ಕೆಲಸ ಮಾಡುತ್ತಿದ್ದಾನೆ. ಯುವತಿಯ ನಾಪತ್ತೆಯ ಕುರಿತು ತಂದೆ ರಾಯಬಾಗ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ತನಿಖೆಯ ವೇಳೆ ಮಗಳು ತನ್ನ ಸ್ವಂತ ಇಚ್ಛೆಯಿಂದ ಯುವಕನೊಂದಿಗೆ ತೆರಳಿರುವುದು ದೃಢಪಟ್ಟಿತು. ಕುಟುಂಬದ ನಾಲ್ಕು ಹೆಣ್ಣುಮಕ್ಕಳ ಪೈಕಿ ಕಿರಿಯಳಾದ ಈ ಮಗಳ ನಡೆ ತಂದೆಗೆ ಭಾರೀ ನೋವನ್ನುಂಟುಮಾಡಿತು.…

ಮುಂದೆ ಓದಿ..
ಸುದ್ದಿ 

ಐಪಿಎಲ್‌ ಮಾದರಿಯಲ್ಲಿ ಕಂಬಳ ಆಯೋಜನೆಗೆ ತಯಾರಿ.

ಐಪಿಎಲ್‌ ಮಾದರಿಯಲ್ಲಿ ಕಂಬಳ ಆಯೋಜನೆಗೆ ತಯಾರಿ. ಕರ್ನಾಟಕ ಸರ್ಕಾರದಿಂದ ರಾಜ್ಯ ಕ್ರೀಡೆಯ ಮಾನ್ಯತೆ ಪಡೆದಿರುವ ಕರಾವಳಿಯ ಜನಪದ ಕ್ರೀಡೆ ಕಂಬಳ ಇದೀಗ ಜಾಗತಿಕ ಮೇಳೆಗೆ ಕಾಲಿಡಲು ಸಜ್ಜಾಗಿದೆ. ಐಪಿಎಲ್‌ (ಇಂಡಿಯನ್ ಪ್ರೀಮಿಯರ್ ಲೀಗ್) ಮಾದರಿಯಲ್ಲಿಯೇ ಅದ್ಧೂರಿಯಾಗಿ ಕಂಬಳ ಆಯೋಜನೆ ಮಾಡುವ ಯೋಜನೆ ರೂಪುಗೊಂಡಿದೆ. ಈ ನೂತನ ಪ್ರಯತ್ನದ ಹಿಂದಿರುವುದು ರಾಜ್ಯ ಕಂಬಳ ಅಸೋಸಿಯೇಷನ್‌, ಇದರ ಅಧ್ಯಕ್ಷ ಡಾ. ಐಕಳಬಾವ ದೇವಿಪ್ರಸಾದ್‌ ಶೆಟ್ಟಿ ಶನಿವಾರ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಸರ್ಕಾರದ ಅನುದಾನ ಅತ್ಯಲ್ಪ… ಪ್ರಸಕ್ತ ಕರಾವಳಿಯಲ್ಲಿ ಪ್ರತಿ ವರ್ಷ ಸುಮಾರು 25 ಕಂಬಳಗಳು ನಡೆಯುತ್ತಿವೆ. ಆದರೆ ಸರ್ಕಾರದಿಂದ ಸಿಗುವ ಅನುದಾನ ತುಂಬಾ ಅಲ್ಪವಾಗಿದೆ. ಕಳೆದ ವರ್ಷ ₹5 ಲಕ್ಷ ನೀಡಿದ್ದರೆ, ಈ ಬಾರಿ ಕೇವಲ ₹2 ಲಕ್ಷಕ್ಕೆ ಸೀಮಿತವಾಗಿದೆ. ಒಂದು ಕಂಬಳ ನಡೆಸಲು ₹25 ರಿಂದ ₹40 ಲಕ್ಷ ವೆಚ್ಚವಾಗುತ್ತದೆ. ಈ ಮೊತ್ತವನ್ನು…

ಮುಂದೆ ಓದಿ..
ಅಂಕಣ 

ತ್ರಿಭಾಷಾ ಸೂತ್ರ ಎಷ್ಟು ಸರಿ……..ದ್ವಿಭಾಷಾ ಸೂತ್ರ ಉತ್ತಮವೇ……

ತ್ರಿಭಾಷಾ ಸೂತ್ರ ಎಷ್ಟು ಸರಿ……..ದ್ವಿಭಾಷಾ ಸೂತ್ರ ಉತ್ತಮವೇ…… ಕನ್ನಡ : ರಾಜ್ಯ ಭಾಷೆ….ಹಿಂದಿ : ರಾಷ್ಟ್ರ ಭಾಷೆ….ಇಂಗ್ಲೀಷ್ : ಅಂತರರಾಷ್ಟ್ರೀಯ ಭಾಷೆ….. ಈ ಭಾಷಾ ಸೂತ್ರ ಸರಿಯೇ ?ಇದು ಸಂವಿಧಾನಾತ್ಮಕವೇ ?ಇದು ವಾಸ್ತವವೇ ?ಪ್ರಾಯೋಗಿಕವೇ ?ಕನ್ನಡದ ಹಿತಕ್ಕೆ ಇದು ಒಳ್ಳೆಯದೇ ಅಥವಾ ಮಾರಕವೇ ?ಭಾರತದ ಒಕ್ಕೂಟ ವ್ಯವಸ್ಥೆಗೆ ಇದು ಹಿತವೇ ಅಥವಾ ಅಪಾಯಕಾರಿಯೇ ?ಭಾಷಾ ಅಸ್ಮಿತೆ ಮತ್ತು ದೇಶದ ಅಸ್ಮಿತೆಗೆ ಇದು ಪೂರಕವೇ ವಿರುದ್ಧವೇ ?ಸಾಂಸ್ಕೃತಿಕ, ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಾಮರಸ್ಯಕ್ಕೆ ಉಪಕಾರವೇ ? ವಿನಾಶವೇ ?…. ನೀವು ಅಪ್ಪಟ ಕನ್ನಡ ಅಭಿಮಾನಿಗಳೇ ಆಗಿರಲಿ,ನೀವು ಭಾವುಕ ದೇಶಭಕ್ತರೇ ಆಗಿರಲಿ,ನೀವು ಹಿಂದಿ ಭಾಷೆಯ ಪಂಡಿತರೇ ಆಗಿರಲಿ,ನೀವು ಸಹಜ ಸ್ವಾಭಾವಿಕ ಸಾಮಾನ್ಯ ಪ್ರಜೆಗಳೇ ಆಗಿರಲಿ ಮತ್ತು ಏನೇ ಆಗಿರಲಿ ಈ ವಿಷಯದ ಬಗ್ಗೆ ಸ್ಪಷ್ಟ ಅಭಿಪ್ರಾಯ ರೂಪಿಸಿಕೊಳ್ಳುವ ಮೊದಲು ಕೆಲವು ಪ್ರಶ್ನೆಗಳಿಗೆ ಸೂಕ್ತ ಉತ್ತರ ಹುಡುಕಿಕೊಂಡಾಗ ಮಾತ್ರ ಈ…

ಮುಂದೆ ಓದಿ..
ಸುದ್ದಿ 

ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯದ 9,337 ಶಾಲೆಗಳ ಅಡುಗೆ ಮನೆಗಳಿಗೆ 21.55 ಕೋಟಿ ರೂ. ಅನುದಾನ

ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯದ 9,337 ಶಾಲೆಗಳ ಅಡುಗೆ ಮನೆಗಳಿಗೆ 21.55 ಕೋಟಿ ರೂ. ಅನುದಾನ ಬೆಂಗಳೂರು:ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ಯೋಜನೆಯಡಿ ರಾಜ್ಯದ 9,337 ಸರ್ಕಾರಿ ಶಾಲೆಗಳ ಅಡುಗೆ ಮನೆಗಳನ್ನು ಆಧುನೀಕರಿಸಲು ಸರ್ಕಾರ 21.55 ಕೋಟಿ ರೂ. ಅನುದಾನ ಬಿಡುಗಡೆಗೆ ಅನುಮೋದನೆ ನೀಡಿದೆ. ಶಾಲೆಗಳಲ್ಲಿ ಹಾಗೂ ಸ್ವಯಂಸೇವಾ ಸಂಸ್ಥೆಗಳ ಮೂಲಕ ಬಿಸಿಯೂಟ ತಯಾರಿಸಲು ಈವರೆಗೆ ಅಲ್ಯುಮಿನಿಯಂ ಪಾತ್ರೆಗಳನ್ನು ಬಳಸಲಾಗುತ್ತಿತ್ತು. ಆದರೆ ಇವು ದೀರ್ಘಾವಧಿಯಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಅಲ್ಯುಮಿನಿಯಂ ಪಾತ್ರೆಗಳ ಬಳಕೆಯನ್ನು ಹಂತ ಹಂತವಾಗಿ ಕಡಿಮೆ ಮಾಡಲು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 2025-26ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ, ಆಯ್ದ 9,337 ಶಾಲೆಗಳಿಗೆ ಹೊಸ ಸ್ಟೈನ್‌ಲೆಸ್‌ ಸ್ಟೀಲ್‌ ಪಾತ್ರೆಗಳು ಹಾಗೂ ಇತರೆ ಅಡುಗೆ ಪರಿಕರಗಳನ್ನು ಖರೀದಿಸಲು ಕ್ರಮ ಕೈಗೊಂಡಿದೆ.…

ಮುಂದೆ ಓದಿ..
ಸುದ್ದಿ 

ಬಿಜೆಪಿ ಶಾಸಕ ಮುನಿರತ್ನ ಆರೋಪಗಳಿಗೆ ಕುಸುಮಾ ಹನುಮಂತರಾಯಪ್ಪ ತೀವ್ರ ಪ್ರತಿಕ್ರಿಯೆ

ಬಿಜೆಪಿ ಶಾಸಕ ಮುನಿರತ್ನ ಆರೋಪಗಳಿಗೆ ಕುಸುಮಾ ಹನುಮಂತರಾಯಪ್ಪ ತೀವ್ರ ಪ್ರತಿಕ್ರಿಯೆ ಬಿಜೆಪಿ ಶಾಸಕ ಮುನಿರತ್ನ ಅವರ ಆರೋಪಗಳಿಗೆ ಆರ್‌ಆರ್ ನಗರದ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರು ಮೊದಲ ಬಾರಿಗೆ ಬಾಯ್ಬಿಟ್ಟಿದ್ದಾರೆ. “ಜನರಿಗೆ ಸ್ಪಂದಿಸುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಾರ್ಯಕ್ರಮವನ್ನು ಹಾಳುಮಾಡುವ ನಿಟ್ಟಿನಲ್ಲಿ ಮುನಿರತ್ನ ರಾಜಕೀಯ ಆಟವಾಡುತ್ತಿದ್ದಾರೆ,” ಎಂದು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಪಾರ್ಕ್‌ಗಳಿಗೆ ಭೇಟಿ ನೀಡಿ ನಾಗರಿಕರ ಅಸಮಾಧಾನ, ಬೇಡಿಕೆ ಹಾಗೂ ಸಮಸ್ಯೆಗಳನ್ನು ನೇರವಾಗಿ ತಿಳಿದುಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಈ ಸಾರ್ವಜನಿಕ ಕಾರ್ಯಕ್ರಮದ ಕುರಿತು ಪತ್ರಿಕೆಗಳ ಮೂಲಕ ಜಾಹೀರಾತು ನೀಡಲಾಗಿದ್ದು, ಸ್ಥಳೀಯ ಶಾಸಕರಿಗೂ ಆಹ್ವಾನ ಕಳುಹಿಸಲಾಗಿದೆ ಎಂದು ಅವರು ತಿಳಿಸಿದರು. “ಆದರೆ ಇಲ್ಲಿ ನಡೆಯುತ್ತಿರುವ ಜನಪರ ಕಾರ್ಯಕ್ರಮಕ್ಕೆ ಬೆಂಬಲ ನೀಡುವ ಬದಲು, ಬಿಜೆಪಿ ಶಾಸಕ ಮುನಿರತ್ನ ಅವರು ಕಾರ್ಯಕ್ರಮವನ್ನು ಅವಮಾನಿಸುವ ಕೆಲಸ ಮಾಡಿದ್ದಾರೆ. ಜನರ ಅಭಿವೃದ್ಧಿಗೆ ಅಡ್ಡಿಯಾಗುವ…

ಮುಂದೆ ಓದಿ..
ಸುದ್ದಿ 

ನವೆಂಬರ್ ಕ್ರಾಂತಿ ನಿರೀಕ್ಷೆ: ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಚರ್ಚೆ, ಬಿಜೆಪಿಯಲ್ಲಿ ಅಧ್ಯಕ್ಷ ಬದಲಾವಣೆ ಮಾತು

ನವೆಂಬರ್ ಕ್ರಾಂತಿ ನಿರೀಕ್ಷೆ: ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಚರ್ಚೆ, ಬಿಜೆಪಿಯಲ್ಲಿ ಅಧ್ಯಕ್ಷ ಬದಲಾವಣೆ ಮಾತು ಬೆಂಗಳೂರು:ರಾಜ್ಯ ರಾಜಕೀಯ ವಲಯದಲ್ಲಿ “ನವೆಂಬರ್ ಕ್ರಾಂತಿ” ಎಂಬ ಮಾತು ಜೋರಾಗಿದೆ. ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆ ಸುತ್ತ ಚರ್ಚೆ ನಡೆಯುತ್ತಿದ್ದರೆ, ಪ್ರಮುಖ ಪ್ರತಿಪಕ್ಷ ಬಿಜೆಪಿಯಲ್ಲೂ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ನಿರೀಕ್ಷೆ ತೀವ್ರವಾಗುತ್ತಿದೆ. ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಕುರಿತ ಚಕ್ರ ತಿರುಗುತ್ತಿರುವಾಗ, ಬಿಜೆಪಿಯಲ್ಲಿ ಬಿ.ವೈ. ವಿಜಯೇಂದ್ರ ಅವರ ನಾಯಕತ್ವ ಸುತ್ತ ಚರ್ಚೆ ಕೇಂದ್ರಿತವಾಗಿದೆ. ಬಿಹಾರ ವಿಧಾನಸಭಾ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆಗಳು ಸಂಭವಿಸಬಹುದು ಎನ್ನುವ ಅಂಕಿ-ಜೋಕೆಗಳು ಕೇಳಿಬರುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರು ನವೆಂಬರ್‌ನಿಂದ ಎರಡು ವರ್ಷ ಪೂರ್ಣಗೊಳ್ಳಲಿದ್ದಾರೆ. ಅವರು ಪಕ್ಷದ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದರೂ, ಅವರನ್ನು ಬದಲಿಸಬೇಕೆಂಬ ಮಾತು ಕೆಲ ನಾಯಕರ ವಲಯದಲ್ಲಿ ಬಲವಾಗಿ ಕೇಳಿ ಬರುತ್ತಿದೆ. ಹಿರಿಯ ನಾಯಕರೂ ಮೌನ ಸಮ್ಮತಿ ವ್ಯಕ್ತಪಡಿಸಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ. ಲೋಕಸಭಾ…

ಮುಂದೆ ಓದಿ..
ಸುದ್ದಿ 

ದರ್ಶನ್‌ಗೆ ನ್ಯಾಯಾಲಯದ ಆದೇಶವೂ ಫಲ ನೀಡಲಿಲ್ಲ – ಜೈಲಿನಲ್ಲಿ ಸೌಲಭ್ಯಗಳ ಕೊರತೆಯೇ ಮುಂದುವರಿಕೆ..

ದರ್ಶನ್‌ಗೆ ನ್ಯಾಯಾಲಯದ ಆದೇಶವೂ ಫಲ ನೀಡಲಿಲ್ಲ – ಜೈಲಿನಲ್ಲಿ ಸೌಲಭ್ಯಗಳ ಕೊರತೆಯೇ ಮುಂದುವರಿಕೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್‌ಗೆ ಹಾಸಿಗೆ, ಹೊದಿಕೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ನ್ಯಾಯಾಲಯ ನೀಡಿದ್ದ ಆದೇಶವೂ ಅಸಡ್ಡೆಗೊಳಗಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಲಯದ ನಿರ್ದೇಶನಗಳ ಪಾಲನೆ ಆಗದೆ ಇರುವ ಕುರಿತು ಮತ್ತೆ ವಿವಾದ ಉಕ್ಕಿದೆ. ದರ್ಶನ್‌ನ ಅರ್ಜಿಯ ಮೇರೆಗೆ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಶುಕ್ರವಾರ ಜೈಲಿನಲ್ಲಿನ ಸೌಲಭ್ಯಗಳ ಕುರಿತು ನೇರ ಪರಿಶೀಲನೆ ನಡೆಸಲು ಸೂಚನೆ ನೀಡಿದೆ.ನ್ಯಾಯಾಲಯದ ಸ್ಪಷ್ಟ ಆದೇಶವಿದ್ದರೂ ಸಹ, ಜೈಲು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ದರ್ಶನ್, ತನ್ನ ಮೇಲೆ ಹಿಂಸೆ ನಡೆಯುತ್ತಿದೆ ಎಂದು ನ್ಯಾಯಾಲಯಕ್ಕೆ ದೂರಿದ್ದರು. ಸೆ.9ರಂದು ನೀಡಿದ್ದ ಆದೇಶದಂತೆ ಹಾಸಿಗೆ, ಹೊದಿಕೆ, ತಲೆದಿಂಬು ಸೇರಿದಂತೆ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸಬೇಕಿತ್ತು. ಆದರೆ, ಆದೇಶವನ್ನು ನಿರ್ಲಕ್ಷಿಸಿದ ಅಧಿಕಾರಿಗಳ ವಿರುದ್ಧ…

ಮುಂದೆ ಓದಿ..
ಸುದ್ದಿ 

ಸಿಡಿಲು ಬಡಿದು ಪುತ್ತೂರಿನಲ್ಲಿ ವ್ಯಕ್ತಿ ಸಾವು : ಗ್ರಾಮದಲ್ಲಿ ದುಃಖದ ವಾತಾವರಣ

ಸಿಡಿಲು ಬಡಿದು ಪುತ್ತೂರಿನಲ್ಲಿ ವ್ಯಕ್ತಿ ಸಾವು : ಗ್ರಾಮದಲ್ಲಿ ದುಃಖದ ವಾತಾವರಣ ದಕ್ಷಿಣ ಕನ್ನಡ, ಪುತ್ತೂರು: ಮಳೆಗಾಲದ ಆರ್ಭಟದ ನಡುವೆ ಸಿಡಿಲು ಬಡಿದ ಪರಿಣಾಮ ಮನೆಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ದುರ್ಮರಣ ಹೊಂದಿರುವ ದಾರುಣ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದಲ್ಲಿ ನಡೆದಿದೆ. ಸಿಡಿಲು ಬಡಿದು ಮೃತಪಟ್ಟವರು ವಾಮನ (40) ಎಂದು ಗುರುತಿಸಲಾಗಿದೆ. ವಾಮನ ಅವರು ನಿನ್ನೆ ಸಂಜೆ 5.30ರ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಬಂದು ವಿಶ್ರಾಂತಿ ಪಡೆಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಕಸ್ಮಾತ್ ಸಿಡಿಲು ಬಡಿದು ಅವರ ದೇಹಕ್ಕೆ ತೀವ್ರ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ನಂತರ ಕುಟುಂಬದವರು ಮತ್ತು ನೆರೆಹೊರೆಯವರು ಶೋಕಸಾಗರದಲ್ಲಿ ಮುಳುಗಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿರುವ ವಾಮನ ಅವರ ಕುಟುಂಬ ತೀವ್ರ ಸಂಕಟದಲ್ಲಿದೆ. ಗ್ರಾಮದ ಜನರು ಹಾಗೂ ಸ್ಥಳೀಯ ಸಂಸ್ಥೆಗಳು ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರಿ ಪರಿಹಾರ ನೀಡುವಂತೆ ಮನವಿ…

ಮುಂದೆ ಓದಿ..
ಸುದ್ದಿ 

ಜಾತಿ ಸಮೀಕ್ಷೆಯ ಹೆಸರಿನಲ್ಲಿ ಶಿಕ್ಷಕರಿಗೆ ನರಕಯಾತನೆ! ಆನೇಕಲ್‌ನಲ್ಲಿ ಶಿಕ್ಷಕಿಗೆ ಹೃದಯಾಘಾತ

ಜಾತಿ ಸಮೀಕ್ಷೆಯ ಹೆಸರಿನಲ್ಲಿ ಶಿಕ್ಷಕರಿಗೆ ನರಕಯಾತನೆ! ಆನೇಕಲ್‌ನಲ್ಲಿ ಶಿಕ್ಷಕಿಗೆ ಹೃದಯಾಘಾತ ಸರ್ಕಾರದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಹೆಸರಿನಲ್ಲಿ ಶಿಕ್ಷಕರನ್ನು ದಿನರಾತ್ರಿ ಓಡಿಸುತ್ತಿರುವ ಅಮಾನವೀಯ ಪರಿಸ್ಥಿತಿ ಬೆಳಕಿಗೆ ಬಂದಿದೆ. ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಯಶೋಧ ಅವರಿಗೆ ಸಮೀಕ್ಷೆಯ ವೇಳೆ ಹೃದಯಾಘಾತ ಸಂಭವಿಸಿದೆ. ಊಟ–ನೀರು ಇಲ್ಲದೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಠಾತ್ ಕುಸಿದು ಬಿದ್ದ ಶಿಕ್ಷಕಿಯನ್ನು ತುರ್ತುವಾಗಿ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಸ್ಟಂಟ್ ಅಳವಡಿಸಿದ್ದಾರೆ. ರಾಜ್ಯದೆಲ್ಲೆಡೆ ವಿರೋಧ ವ್ಯಕ್ತವಾಗುತ್ತಿದ್ದರೂ ಸಮೀಕ್ಷೆ ಕಾರ್ಯವನ್ನು ಸರ್ಕಾರ ಬಲವಂತವಾಗಿ ಮುಂದುವರೆಸುತ್ತಿದೆ. ಶಾಲಾ ಶಿಕ್ಷಕರಿಗೆ ಅವರ ಮೂಲ ಬೋಧನಾ ಕಾರ್ಯವನ್ನು ಬಿಟ್ಟು ಮನೆ ಮನೆ ಓಡಾಡುವ ಸಮೀಕ್ಷೆ ಕಾರ್ಯವನ್ನು ನೀಡಿದ್ದು, ಇದರಿಂದ ಅವರು ತೀವ್ರ ದೈಹಿಕ ಹಾಗೂ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಬಿಸಿಲು, ಮಳೆ, ಧೂಳು, ದಾಹ – ಯಾವುದಕ್ಕೂ ವಿಶ್ರಾಂತಿ…

ಮುಂದೆ ಓದಿ..
ಸುದ್ದಿ 

ವಿಜಯಪುರದಲ್ಲಿ ಡಬಲ್ ಮರ್ಡರ್: ಕಲ್ಲಿನಿಂದ ಜಜ್ಜಿ ಯುವಕರ ನರ್ಹತ್ಯೆ!

ವಿಜಯಪುರದಲ್ಲಿ ಡಬಲ್ ಮರ್ಡರ್: ಕಲ್ಲಿನಿಂದ ಜಜ್ಜಿ ಯುವಕರ ನರ್ಹತ್ಯೆ! ವಿಜಯಪುರ: ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ದ್ವಿಹತ್ಯೆ ಘಟನೆ ವಿಜಯಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹಳೆಯ ವೈಷಮ್ಯ ಹಿನ್ನೆಲೆ ಇಬ್ಬರು ಯುವಕರನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಭೀಕರ ಘಟನೆ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಡೆದಿದೆ. ಹತ್ಯೆಗೆ ಒಳಗಾದವರು ಸಾಗರ್ ಬೆಳುಂಡಗಿ (25) ಮತ್ತು ಇಸಾಕ್ ಖುರೇಶಿ (24) ಎಂದು ಗುರುತಿಸಲಾಗಿದೆ. ಇಬ್ಬರನ್ನೂ ಕಲ್ಲಿನಿಂದ ಹೊಡೆದು ಬರ್ಬರವಾಗಿ ಕೊಲೆಮಾಡಿದ ಆರೋಪದ ಮೇಲೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಾಹಿತಿಯ ಪ್ರಕಾರ, ಸುಮಾರು ಎರಡು ವರ್ಷಗಳ ಹಿಂದೆ ಇದೇ ಗ್ರಾಮದ ಈರಣ್ಣಗೌಡ ಎಂಬವರ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಸಾವಿಗೀಡಾದ ಸಾಗರ್ ಮತ್ತು ಇಸಾಕ್‌ ಹೆಸರು ಪ್ರಸ್ತಾಪವಾಗಿತ್ತು. ಇತ್ತೀಚೆಗೆ ಚಿಕಿತ್ಸೆ ಫಲಕಾರಿಯಾಗದೆ ಈರಣ್ಣಗೌಡ ಮೃತಪಟ್ಟಿದ್ದರಿಂದ, ಅದೇ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ…

ಮುಂದೆ ಓದಿ..