ಸುದ್ದಿ 

ಅಮೆರಿಕಾಗೆ ತೆರಳಿದ್ದವರ ಮನೆಯ ಬಾಗಿಲು ಒಡೆದು ಕಳ್ಳತನ – ಅಪರಿಚಿತರ ಕೈಚಳಕ ?

ಅಮೆರಿಕಾಗೆ ತೆರಳಿದ್ದವರ ಮನೆಯ ಬಾಗಿಲು ಒಡೆದು ಕಳ್ಳತನ – ಅಪರಿಚಿತರ ಕೈಚಳಕ ? ಹೆಚ್.ಎಸ್.ಆರ್ ಲೇಔಟ್ ಸೆಕ್ಟರ್-1 ರಲ್ಲಿ ಅಪರಿಚಿತರು ಒಂದು ಖಾಲಿ ಮನೆಯ ಬಾಗಿಲು ಒಡೆದು ಒಳನುಗ್ಗಿ ಕಳ್ಳತನ ನಡೆಸಿರುವ ಘಟನೆ ನಡೆದಿದೆ. ಈ ಕುರಿತು ಬಿ.ವಿ. ವೇಣುಗೋಪಾಲ್ ಎಂಬ ನಿವೃತ್ತ ಇಂಜಿನಿಯರ್ ಹೆಚ್.ಎಸ್.ಆರ್ ಲೇಔಟ್‌ನ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅವರು 25 ವರ್ಷಗಳಿಂದ ಸೆಕ್ಟರ್-1, 23ನೇ ಮೇನ್, 15ನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ವಾಸವಿದ್ದು, ತಮ್ಮ ಮನೆಯ ಹಿಂದೆ ಇರುವ 2127ನೇ ಮನೆ (22ನೇ ‘ಸಿ’ ಮೇನ್) ಯ ಮಾಲೀಕರಾದ ವಿಜಯ್ ಕುಮಾರ್ ಕುಟುಂಬ ಸಮೇತರಾಗಿ ಸುಮಾರು ತಿಂಗಳ ಹಿಂದೆಯೇ ಅಮೆರಿಕಾಗೆ ತೆರಳಿದ್ದಾರೆ. ಬೆಳಗ್ಗೆ ಮನೆಯಿಂದ ಹೊರಬಂದ ವೇಣುಗೋಪಾಲ್ ರವರಿಗೆ ವಿಜಯ್ ಕುಮಾರ್ ಅವರ ಮನೆಯ ಬಾಗಿಲು ತೆರೆದಿರುವುದು ಕಂಡು ಬಂದು ಶಂಕೆ ಮೂಡಿದೆ. ತಕ್ಷಣವೇ ವಿಜಯ್ ಕುಮಾರ್ ರವರಿಗೆ ದೂರವಾಣಿ ಮೂಲಕ…

ಮುಂದೆ ಓದಿ..
ಸುದ್ದಿ 

ಕೆಲಸಕ್ಕೆಂದು ಹೊರಗೆ ಹೋದ 19 ವರ್ಷದ ಯುವತಿ , ಮನೆಗೆ ಮರಳದೇ ನಾಪತ್ತೆ – ಆತಂಕದಲ್ಲಿ ಕುಟುಂಬಸ್ಥರು.

ನಾಪತ್ತೆಯಾದ ಯುವತಿಯ ಹೆಸರು ಜೀವಿತಾ (19). ಸುಬ್ರಹ್ಮಣಿ ಯವರು ಇಲೆಕ್ಟ್ರಿಷಿಯನ್ ಉದ್ಯೋಗದಲ್ಲಿದ್ದು, ಪತ್ನಿ ಗೀತಾ ಗೃಹಿಣಿಯಾಗಿದ್ದಾರೆ. ಇವರಿಗೆ ಈಶ್ವರಿ, ಜೀವಿತಾ, ವೈದ್ಯನಾದನ್ ಹಾಗೂ ವಾಸುದೇವನ್ ಎಂಬ ನಾಲ್ವರು ಮಕ್ಕಳು. ಜೀವಿತಾ ಸುಮಾರು ಇಪ್ಪತ್ತು ದಿನಗಳ ಹಿಂದೆ ಹೆಚ್‌ಎಸ್‌ಆರ್ ಲೇಔಟ್‌ನ ಪ್ರೋಫೇಷನ್ ಕೂರಿಯರ್ ಆಫೀಸ್‌ನಲ್ಲಿ ಕೆಲಸಕ್ಕೆ ಸೇರಿದಳು. ದಿನಾಂಕ 18.06.2025ರಂದು ಬೆಳಿಗ್ಗೆ ಸುಮಾರು 9:30 ಗಂಟೆಗೆ ಮನೆಯಿಂದ ಕೆಲಸಕ್ಕೆ ಹೊರಟ ಜೀವಿತಾ, ನಂತರ ಮನೆಗೆ ಮರಳಿಲ್ಲ. ಅದರ ಬಳಿಕ ಪೋಷಕರು ಜೀವಿತಾಳ ಮೋಬೈಲ್ ಸಂಖ್ಯೆಗೆ ಕರೆ ಮಾಡಿದಾಗ ಫೋನ್ ಮನೆಯಲ್ಲಿಯೇ ಬಿಟ್ಟಿದ್ದು ಕಂಡುಬಂದಿದೆ. ನಂತರ ಆಕೆ ಕೆಲಸ ಮಾಡುವ ಕಚೇರಿಗೆ ಕರೆ ಮಾಡಿದಾಗ ಆ ದಿನ ಆಕೆ ಆಫೀಸ್‌ಗೆ ಬಾರದಿರುವುದು ತಿಳಿದು ಬಂದಿದೆ. ಕುಟುಂಬಸ್ಥರು ಸಂಬಂಧಿಕರು ಮತ್ತು ಸ್ನೇಹಿತರ ಬಳಿ ವಿಚಾರಿಸಿದರೂ ಯಾವುದೇ ಮಾಹಿತಿ ಸಿಗದ ಕಾರಣ ಇದೀಗ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಚಹರೆ…

ಮುಂದೆ ಓದಿ..
ಸುದ್ದಿ 

ಪಿಜ್ಜಾ ಡೆಲಿವರಿ ಬಾಯ್ ರಾಂಗ್ ರೂಟ್‌ನಲ್ಲಿ ಬಂದು ಜಗಳ: ವ್ಯಕ್ತಿಯ ಮೇಲೆ ಹಲ್ಲೆ…

ಹೆಚ್.ಎಸ್.ಆರ್ ಲೇಔಟ್‌ನ ಅಗರ ಲೇಕ್ ಬಳಿ ಪಿಜ್ಜಾ ಡೆಲಿವರಿ ಬಾಯ್‌ ಒಬ್ಬರು ದ್ವಿಚಕ್ರ ವಾಹನದಲ್ಲಿ ರಾಂಗ್ ರೂಟ್‌ನಲ್ಲಿ ಬಂದು ಅಪಘಾತಕ್ಕೆ ಕಾರಣರಾಗಿದ್ದು, ಬಳಿಕ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಮನೋಜ್ ಕುಮಾರ್.ಹೆಚ್ ಅವರು ಠಾಣೆಗೆ ನೀಡಿದ ದೂರಿನ ಪ್ರಕಾರ, ಅವರು ಕನಕಪುರದ ಬಿಸಿಎಎಂಸಿ ಲೇಔಟ್, ರಘುನಹಳ್ಳಿಯಲ್ಲಿ ವಾಸವಿದ್ದಾರೆ. ಜೂನ್ 21 ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಅವರು ಅಗರ ಲೇಕ್ ಬಳಿಯ ಡೊಮಿನೋಸ್ ಹತ್ತಿರ ರಸ್ತೆಯನ್ನು ದಾಟುತ್ತಿರುವಾಗ, KA-05-LM-0482 ಸಂಖ್ಯೆಯ ಪಿಜ್ಜಾ ಡೆಲಿವರಿ ವಾಹನ ಚಾಲಕನು ರಾಂಗ್ ರೂಟ್‌ನಲ್ಲಿ ಬಂದು ಅವರ ವಾಹನಕ್ಕೆ ಗುದ್ದಿದನು. ಅಪಘಾತದ ನಂತರ ಮಾತಿಗೆ ಮಾತು ಬೆಳೆದು, ಡೆಲಿವರಿ ಬಾಯ್ ಮತ್ತು ಅವನ ಸ್ನೇಹಿತ ಇಬ್ಬರೂ ಸೇರಿ ಮನೋಜ್ ಕುಮಾರ್ ಅವರನ್ನು ತಡೆದು ಕೈಗಳಿಂದ ಹೊಡೆದಿದ್ದಾರೆ. ಈ ಸಂದರ್ಭದಲ್ಲಿ ಮನೋಜ್ ಕುಮಾರ್ ನ ಎಡಗೈಗೆ ಗಾಯವಾಗಿದ್ದು, ಆತಂಕ…

ಮುಂದೆ ಓದಿ..
ಸುದ್ದಿ 

ಚಾಮರಾಜಪೇಟೆಯಲ್ಲಿ 26 ವರ್ಷದ ಯುವಕ ನಾಪತ್ತೆ – ತಂದೆಯಿಂದ ಚಾಮರಾಜಪೇಟೆಯ ಪೊಲೀಸ್ ಠಾಣೆಗೆ ದೂರು..

ನಗರದ ಚಾಮರಾಜಪೇಟೆಯ ಪೈಪ್ ಲೈನ್ ರಸ್ತೆಯಲ್ಲಿ ಆಲೂಗಡ್ಡೆ ಚಿಪ್ಸ್ ಅಂಗಡಿ ನಡೆಸುತ್ತಿರುವ ವ್ಯಕ್ತಿಯ ಮಗನು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಯುವಕನ ತಂದೆ ಲಿಂಗಮೂರ್ತಿ ಬಿನ್ ಸಂಜೀವಪ್ಪ (51), ಚಾಮರಾಜಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಲಿಂಗಮೂರ್ತಿ ಯವರ ಪ್ರಕಾರ, ಅವರು ತಮ್ಮ ಕುಟುಂಬ ಸಮೇತ ಕಸ್ತೂರ್ ಬಾ ನಗರದಲ್ಲಿರುವ ಅಶ್ವಥ್ ಕಟ್ಟೆ ರಸ್ತೆಯಲ್ಲಿ ಕಳೆದ ಒಂದು ವರ್ಷದಿಂದ ವಾಸಿಸುತ್ತಿದ್ದಾರೆ. ಪೈಪ್ ಲೈನ್ ರಸ್ತೆ, ಸೋಮಶೇಖರ್ ತೋಟದ ಬಳಿ ಚಿಪ್ಸ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಅವರ ಮಗ ರುದ್ರೇಶ್ (26) ಈ ಅಂಗಡಿಯಲ್ಲಿ ಸಹಾಯ ಮಾಡುತ್ತಿದ್ದರು. ದಿನಾಂಕ 15-06-2025 ರಂದು ಬೆಳಿಗ್ಗೆ ಸುಮಾರು 10:00 ಗಂಟೆಗೆ, ರುದ್ರೇಶ್ ತಾವು ಬಳಸುತ್ತಿದ್ದ ಟಿವಿಎಸ್ ಅಪಾಚೆ ದ್ವಿಚಕ್ರ ವಾಹನ (ನಂ. KA 05 H 2595) ತೆಗೆದುಕೊಂಡು ಹೊರಟ್ಟಿದ್ದನು. ಆದರೆ ಸಂಜೆವರೆಗೆ ಮನೆಗೆ ಮರಳದೆ, ಮೊಬೈಲ್‌ಗೆ…

ಮುಂದೆ ಓದಿ..

ಆನ್‌ಲೈನ್ ವಂಚನೆ: ಗ್ರಾಹಕರ ಕ್ರೆಡಿಟ್ ಕಾರ್ಡ್‌ನಿಂದ ₹40,183 ಅಕ್ರಮ ವಹಿವಾಟು

ನಗರದಲ್ಲೊಂದು ಮತ್ತೊಂದು ಆನ್‌ಲೈನ್ ಹಣಕಾಸು ವಂಚನೆಯ ಘಟನೆ ಬೆಳಕಿಗೆ ಬಂದಿದೆ. HSBC ಬ್ಯಾಂಕ್‌ನ ಕ್ರೆಡಿಟ್ ಕಾರ್ಡ್ ಹೊಂದಿರುವ ಗ್ರಾಹಕ ಶ್ರೀ ರಮೀಜ್ ರಾಜಾ ಅಮನುಲ್ಲಹಾ ರವರು ತಮ್ಮ ಕಾರ್ಡ್‌ನಿಂದ ಅಕ್ರಮವಾಗಿ ಹಣ ವರ್ಗಾವಣೆಗೊಂಡ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಶ್ರೀ ರಮೀಜ್ ರಾಜಾ ಅಮನುಲ್ಲಹಾ ರವರ ಪ್ರಕಾರ, ಅವರು ಹೊಂದಿರುವ Visa Platinum ಕ್ರೆಡಿಟ್ ಕಾರ್ಡ್ (ನಂ. 4862 XXXX XXXX 2595) ಮೂಲಕ ದಿನಾಂಕ 08.06.2025 ರಂದು Jioeat.in ಎಂಬ ಆನ್‌ಲೈನ್ ಆಹಾರ ವಿತರಣಾ ವೇದಿಕೆಯ ಲಿಂಕ್ ಮೂಲಕ ಆರ್ಡರ್ ಮಾಡಲು ಯತ್ನಿಸಿದ್ದು, ಆ ಸಮಯದಲ್ಲಿ ಬಂದ ಓಟಿಪಿ (OTP) ಅನ್ನು ಅವರು ಶೇರ್ ಮಾಡಿದ ಬಳಿಕ ತಮ್ಮ ಗಮನಕ್ಕೆ ಬಾರದ ರೀತಿಯಲ್ಲಿ ಹಂತ ಹಂತವಾಗಿ ಮೊತ್ತ ₹40,183 ರಷ್ಟು ಹಣವನ್ನು ಅನಧಿಕೃತವಾಗಿ ವರ್ಗಾಯಿಸಲಾಗಿದೆ. ಶ್ರೀ ರಮೀಜ್ ರಾಜಾ ಅಮನುಲ್ಲಹಾ ಮಾಹಿತಿ ಪ್ರಕಾರ, ಈ…

ಮುಂದೆ ಓದಿ..
ಸುದ್ದಿ 

28 ವರ್ಷದ ಯುವತಿ ಅನುಶ್ರೀ ನಾಪತ್ತೆ – ಕುಟುಂಬಸ್ಥರಿಂದ ಪೊಲೀಸ್ ತನಿಖೆಗೆ ಮನವಿ..

ನಗರದ ಸರ್ಜಾಪುರ ಮುಖ್ಯರಸ್ತೆಯ ಮುಳ್ಳೂರು ಕಾಲೋನಿಯಲ್ಲಿ ವಾಸಿಸುತ್ತಿರುವ ನಾರಾಯಣಪ್ಪ ಎಂಬುವವರು ತಮ್ಮ 28 ವರ್ಷದ ಮಗಳು ಅನುಶ್ರೀ ಎನ್. ನಾಪತ್ತೆಯಾಗಿರುವ ಬಗ್ಗೆ ಹೆಚ್.ಎಸ್.ಆರ್ ಲೇಔಟ್‌ನ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಅನುಶ್ರೀ ಹೆಚ್.ಎಸ್.ಆರ್ ಲೇಔಟ್‌ನ URR ರಾಯಲ್ ಕಾಂಪ್ಲೆಕ್ಸ್‌ನಲ್ಲಿ ಇರುವ ಟೆಟ್ರೋ ಪಾರ್ಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಪ್ರತಿದಿನ ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆ ತೆರಳಿ ಸಂಜೆ 7:30ರ ವೇಳೆಗೆ ಮನೆಗೆ ಹಿಂದಿರುಗುತ್ತಿದ್ದರು. ಆದರೆ, ಜೂನ್ 18ರಂದು ಬೆಳಿಗ್ಗೆ 9 ಗಂಟೆಗೆ ಕ್ಯಾಬ್‌ನಲ್ಲಿ ಮನೆಯಿಂದ ಹೊರಟ ನಂತರ ಅವರು ವಾಪಸ್ ಮನೆಗೆ ಬಂದಿಲ್ಲ. ಆ ದಿನ ಸಾಯಂಕಾಲ 8 ಗಂಟೆಗೆ ಕುಟುಂಬದವರು ಅನುಶ್ರೀ ಅವರ ಮೊಬೈಲ್ ಸಂಖ್ಯೆ ಗೆ ಕರೆಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿರುವುದಾಗಿ ತಿಳಿದು ಬಂದಿದೆ. ಮರುದಿನ ಕೆಲಸದ ಸ್ಥಳಕ್ಕೆ ಭೇಟಿ ನೀಡಿ ವಿಚಾರಿಸಿದಾಗ ಅವರು ಆ…

ಮುಂದೆ ಓದಿ..
ಸುದ್ದಿ 

ಹಳೆಯ ಮರದ ರೆಂಬೆ ಬಿದ್ದು ಯುವಕನ ದುರ್ಮರಣ: ಅಧಿಕಾರಿಗಳ ನಿರ್ಲಕ್ಷ್ಯತೆ ವಿರುದ್ಧ ಕುಟುಂಬಸ್ತರ ಆಕ್ರೋಶ ..

ಹಳೆಯ ಮರದ ರೆಂಬೆ ಬಿದ್ದು ಯುವಕನ ದುರ್ಮರಣ: ಅಧಿಕಾರಿಗಳ ನಿರ್ಲಕ್ಷ್ಯತೆ ವಿರುದ್ಧ ಕುಟುಂಬಸ್ತರ ಆಕ್ರೋಶ .. ನಗರದ ಬಿ.ಎಸ್.ಕೆ 1ನೇ ಹಂತದ ಅಶೋಕನಗರದ 16ನೇ ಮೈನ್‌ರೋಡ್ ಬಳಿ ನಡೆದ ದುರ್ಘಟನೆಯಲ್ಲಿ 29 ವರ್ಷದ ಯುವಕ ಅಕ್ಷಯ್ ಎಂ.ಎಸ್ ಸಾವಿಗೀಡಾಗಿರುವ ದುರಂತ ಘಟನೆ ನಡೆದಿದೆ. ಈ ಘಟನೆಗೆ ಕಾರಣ ಬಿಬಿಎಂಪಿ ಅರಣ್ಯ ವಿಭಾಗದ ಅಧಿಕಾರಿಗಳ ನಿರ್ಲಕ್ಷ್ಯತೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಅಕ್ಷಯ್ ಅವರು ದಿನಾಂಕ 15/06/2025 ರಂದು ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಮಾಂಸ ಖರೀದಿಸಲು ತನ್ನ ಸ್ಕೂಟರ್‌ನಲ್ಲಿ ಹೊರಟಿದ್ದಾಗ, ಬ್ರಹ್ಮ ಚೈತನ್ಯ ಮಂದಿರದ ಬಳಿ ರಸ್ತೆ ಪಕ್ಕದಲ್ಲಿರುವ ಹಳೆಯ ಮರದ ಒಣಗಿದ ರೆಂಬೆ ಅವರ ತಲೆಯ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಅವರು ದಿನಾಂಕ 19/06/2025 ರಂದು ಮಧ್ಯಾಹ್ನ 1 ಗಂಟೆಗೆ ನಿಧನರಾದರು.…

ಮುಂದೆ ಓದಿ..
ಸಿನೆಮಾ ಸುದ್ದಿ 

ಫ್ಯಾಮಿಲಿ ಥ್ರಿಲ್ಲರ್ ಚಿತ್ರದಲ್ಲಿ ಕೃಷ್ಣ ಅಜಯರಾವ್ ಯೋಗರಾಜ ಭಟ್- ದಿನಕರ್ ಚಾಲನೆ

ನನ್ ಮಗಳೇ ಹೀರೋಯಿನ್ ಸೇರಿದಂತೆ ಹಲವು ಸದಭಿರುಚಿಯ ಚಿತ್ರಗಳ ನಿರ್ದೇಶಕ ಎಸ್.ಕೆ. ಬಾಹುಬಲಿ ಇದೀಗ ಕೃಷ್ಣ ಅಜೇಯ್ ರಾವ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪಿ.ಕೆ. ಪ್ರೊಡಕ್ಷನ್ಸ್ ಮೂಲಕ ನಿರ್ಮಾಪಕ ಕಿರಣ್ ಅವರು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀ ಬಂಡೆ ಮಹಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಪ್ರಥಮ ದೃಶ್ಯಕ್ಕೆ ಯೋಗರಾಜ ಭಟ್ಟರು ಕ್ಲಾಪ್ ಮಾಡಿದರೆ, ದಿನಕರ್ ತೂಗುದೀಪ ಕ್ಯಾಮೆರಾ ಚಾಲನೆ ಮಾಡಿದರು. ನಿರ್ದೇಶಕ ಎಂ.ಡಿ. ಶ್ರೀಧರ್, ಎಸ್. ನಾರಾಯಣ್, ಶಿವತೇಜಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಫ್ಯಾಮಿಲಿ ಥ್ರಿಲ್ಲರ್ ಚಿತ್ರದಲ್ಲಿ ಕೃಷ್ಣ ಅಜಯರಾವ್ ಯೋಗರಾಜ ಭಟ್- ದಿನಕರ್ ಚಾಲನೆ. ಲವರ್ ಬಾಯ್, ಆಕ್ಷನ್ ಹೀರೋ, ಭಗ್ನ ಪ್ರೇಮಿಯಾಗಿ ಕಾಣಿಸಿಕೊಂಡಿದ್ದ ಅಜಯ್ ರಾವ್ ಈ ಚಿತ್ರದ ಮೂಲಕ ರಗಡ್ ಹೀರೋ ಆಗುತ್ತಿದ್ದಾರೆ. ಮುಹೂರ್ತದ ನಂತರ ನಿರ್ದೇಶಕ ಬಾಹುಬಲಿ ಮಾತನಾಡುತ್ತ…

ಮುಂದೆ ಓದಿ..
ಸುದ್ದಿ 

ವಿಚಾರಣೆಗೆ ಹಾಜರಾಗದೇ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿದ ಎ.ಎಸ್.ಐ.

ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಸುಮಾರು ಒಂದು ವರ್ಷದಿಂದ ಎ.ಎಸ್.ಐ ಹುದ್ದೆಯಲ್ಲಿ ಪ್ರೊಕ್ರೋಮೇಷನ್ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ, ತಮ್ಮ ಕಾರ್ಯತತ್ಪರತೆ ಹಾಗೂ ಮಾಹಿತಿ ನೆಲೆಸಿದ ಕಾರ್ಯಾಚರಣೆ ಮೂಲಕ ಅಪರಾಧಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯ ಪಿಎಸ್‌ಐ ಶ್ರೀ ಶ್ರೀನಿವಾಸ ಕೆ.ಆರ್ ಅವರ ಮಾರ್ಗದರ್ಶನದಲ್ಲಿ, ಠಾಣೆಯ ಎಚ್‌.ಸಿ. ಪ್ರದೀಪ್ ಕುಮಾರ್ (ಸಿಪಾಯಿ ಸಂಖ್ಯೆ 8988) ಅವರ ಸಹಕಾರದೊಂದಿಗೆ, 2013ರ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಯನ್ನು ಬಂಧಿಸಲಾಗಿದೆ. ಈತನ ಮೇಲೆ ಥಾಣೆ ಮೊಕದ್ದಮೆ ಸಂಖ್ಯೆ 273/2013 ಅಡಿಯಲ್ಲಿ ಭದ್ರತಾ ಅಪರಾಧ IPC ಸೆಕ್ಷನ್ 392 ಅಡಿ ಪ್ರಕರಣ ದಾಖಲಿಸಲಾಗಿತ್ತು. ನಾಗೇಶ್ ಬಿನ್ ಪಾಪಣ್ಣ (ವಯಸ್ಸು 33), ಕೇರಾಫ್ ಜಯಮ್ಮ, ಮುನೇಶ್ವರ ಬಡಾವಣೆ, ಬನ್ನೇರುಘಟ್ಟ, ಬೆಂಗಳೂರು ಜಿಲ್ಲೆ ನಿವಾಸಿಯಾಗಿರುವ ಈತನು, ಮಾನ್ಯ ನ್ಯಾಯಾಲಯದಲ್ಲಿ ಜಾಮೀನು ಪಡೆದು ವಿಚಾರಣೆಗೆ ಹಾಜರಾಗಬೇಕಾಗಿದ್ದರೂ ನಿರಂತರ ಗೈರಾಗುತ್ತಾ ಬಂದಿದ್ದ. ನ್ಯಾಯಾಲಯವು ಈತನ ವಿರುದ್ಧ ಹಲವಾರು ಬಾರಿ ವಾರೆಂಟ್…

ಮುಂದೆ ಓದಿ..
ಸುದ್ದಿ 

ಯಶವಂತಪುರದಲ್ಲಿ ಗಾಂಜಾ ಮಾರಾಟ: ಬಿಹಾರ ಮೂಲದ ವ್ಯಕ್ತಿಯಿಂದ 1.9 ಕೆ.ಜಿ ಗಾಂಜಾ ವಶ.

ಯಶವಂತಪುರದ 90 ರೂಟ್ ರಸ್ತೆಯ ಚರ್ಚ್ ಮುಂಭಾಗದ ಖಾಲಿ ಜಾಗದಲ್ಲಿ ಗಾಂಜಾ ಮಾರಾಟದ ಚಟುವಟಿಕೆಯಲ್ಲಿ ತೊಡಗಿದ್ದ ಬಿಹಾರ ಮೂಲದ ವ್ಯಕ್ತಿಯೊಬ್ಬನನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ದಾಳಿ ವೇಳೆ ಆರೋಪಿತನಿಂದ 1.9 ಕೆ.ಜಿ ಗಾಂಜಾ ಹಾಗೂ ನಗದು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಶವಂತಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ (ಪಿಎಸ್‌ಐ) ಶ್ರೀ ಈರಣ್ಣ ನಣಜಗಿ ಅವರು ನೀಡಿದ ಮಾಹಿತಿ ಪ್ರಕಾರ, ದಿನಾಂಕ 19/06/2025 ರಂದು ಸಂಜೆ ಸುಮಾರು 6 ಗಂಟೆ ಸುಮಾರಿಗೆ ಗಸ್ತಿನಲ್ಲಿದ್ದ ವೇಳೆ ಖಚಿತ ಬಾತ್ಮೀದಾರರಿಂದ ಮಾದಕ ವಸ್ತು ಮಾರಾಟದ ಮಾಹಿತಿ ಲಭಿಸಿದ ತಕ್ಷಣ, ಸಹಾಯಕ ಪೊಲೀಸ್ ಆಯುಕ್ತರ ಅನುಮತಿಯನ್ನು ಪಡೆದು ತಂಡದೊಂದಿಗೆ ದಾಳಿ ನಡೆಸಲಾಯಿತು. ಪಂಚರರು ಮತ್ತು ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ದಾಳಿ ನಡೆಸಿದಾಗ, ಅಲ್ಲಿ ಇದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವನು ದಿನೇಶ್ ಮಂಡಲ್ (30 ವರ್ಷ) ಎಂಬ ಬಿಹಾರ…

ಮುಂದೆ ಓದಿ..