ಗ್ರಾಮೀಣಾಭಿವೃದ್ದಿ ಯೋಜನೆಯ ಹೆಸರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ಅಪರಾಧ ನಡೆದಿರುವುದು, ಮೈಕ್ರೊ ಫೈನಾನ್ಸ್ ನಡೆಸಿರುವ ಆರೋಪಗಳು ವ್ಯಾಪಕವಾಗಿದೆ.
ಧರ್ಮಸ್ಥಳ ಅಪರಾಧ ಪ್ರಕರಣಗಳ ಕುರಿತಾದ ಹೋರಾಟಗಳ ವಿಷಯದಲ್ಲಿ ತಪ್ಪು ಮಾಹಿತಿ ಹರಡುತ್ತಿರುವ ಸಂದರ್ಭದಲ್ಲಿ .. ಮುಸುಕುದಾರಿ ಚಿನ್ನಯ್ಯ ಕೊಟ್ಟ ದೂರಿನ ಬಳಿಕ ಧರ್ಮಸ್ಥಳ ದೌರ್ಜನ್ಯದ ವಿರುದ್ಧದ ಹೋರಾಟ ಪ್ರಾರಂಭವಾಗಿದ್ದಲ್ಲ. ಧರ್ಮಸ್ಥಳದ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ, ಭೂ ಅಕ್ರಮ, ಮೈಕ್ರೋ ಫೈನಾನ್ಸ್ ದೌರ್ಜನ್ಯಗಳನ್ನು ತನಿಖೆ ನಡೆಸಲು ನೆಲ ಅಗೆಯಬೇಕಿಲ್ಲ. ಚಿನ್ನಯ್ಯ ಅನಾಮಿಕರಾಗಿ ಬಂದು ದೂರು ನೀಡಿದ ಬಳಿಕ ಅಸಹಜ ಸಾವುಗಳಾದ ಶವಗಳನ್ನು ಹೂತ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಯಿತೇ ವಿನಹ, ಅದು ಹೋರಾಟದ ಪ್ರಾರಂಭವಲ್ಲ. ಚಿನ್ನಯ್ಯರ ದೂರೇ ಹೋರಾಟದ ಮುಖ್ಯವಸ್ತುವಲ್ಲ. ಎಡಪಂಥೀಯ, ದಲಿತ, ಸಮಾನತಾವಾದಿ, ಮಹಿಳಾ ಹೋರಾಟಗಾರರು, ಚಿಂತಕರು ಯಾವತ್ತೂ ಕೂಡಾ ಹೋರಾಟಕ್ಕೆ ಅಪರಿಚಿತವಾಗಿದ್ದ ಚಿನ್ನಯ್ಯ, ಸುಜಾತ ಭಟ್ ರವರ ಹಿಂದೆ ಹೋಗಿದ್ದಿಲ್ಲ. ‘ಅವರ ದೂರಿಗೂ ನ್ಯಾಯ ಒದಗಿಸಿ’ ಎಂಬುದಷ್ಟೇ ನಮ್ಮೆಲ್ಲರ ಹೇಳಿಕೆಯಾಗಿತ್ತು. ಹಾಗಾಗಿ, ಚಿನ್ನಯ್ಯ, ಸುಜಾತ ಭಟ್ ರವರುಗಳು ಯೂಟರ್ನ್ ಹೊಡೆದ್ರು ಎಂಬುದೆಲ್ಲಾ ಸಾವು, ದೌರ್ಜನ್ಯ,…
ಮುಂದೆ ಓದಿ..
