ಸುದ್ದಿ 

ಅನಧಿಕೃತ ಆಸ್ಪತ್ರೆ ಕಾರ್ಯಚಟುವಟಿಕೆ: ವೈದ್ಯರ ವಿರುದ್ಧ ತನಿಖೆ

ಬೆಂಗಳೂರು, ಆಗಸ್ಟ್ 2: 2025ನಗರದ ಕಾಲೇಜ್ ರಸ್ತೆಯಲ್ಲಿ ಹೊಸದಾಗಿ ಸ್ಥಾಪಿತವಾಗಿರುವ ಸನ್ ಡೈಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಾವುದೇ ಸರ್ಕಾರಿ ಅನುಮತಿ ಇಲ್ಲದೇ ವೈದ್ಯಕೀಯ ಚಟುವಟಿಕೆಗಳು ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಡಾ. ಸುಸೀಲ್ ಕುಮಾರ್ ಮತ್ತು ನಾ. ಕುಮಾರ್ ಎಂಬ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. 2025ರ ಮೇ 23ರಂದು ಇವರಿಬ್ಬರು ಸಾರ್ವಜನಿಕರಿಗೆ ತಿಳಿಯದಂತೆ ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದಾಗಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆಸ್ಪತ್ರೆಗೆ ಸಂಬಂಧಿಸಿದ ಯಾವುದೇ ವೈದ್ಯಕೀಯ ಪರವಾನಗಿ ಅಥವಾ ದಾಖಲೆಗಳು ಲಭ್ಯವಾಗಿಲ್ಲ. ಅಲ್ಲದೆ, ಶಸ್ತ್ರಚಿಕಿತ್ಸಾ ಘಟಕ ಮತ್ತು ವಾರ್ಡ್‌ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಆಸ್ಪತ್ರೆಯ ಕಾರ್ಯವೈಖರಿ ಪರಿಶೀಲನೆ ನಡೆಸಿದ್ದು, ಹಲವಾರು ನಿಯಮಾನುಸಾರ ಲೋಪಗಳಿರುವುದನ್ನು ಗಮನಿಸಿದ್ದಾರೆ. ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದ್ದ ಶಸ್ತ್ರಚಿಕಿತ್ಸೆಗಳ ಕುರಿತು ಯಾವುದೇ ದಾಖಲೆ ಅಥವಾ ಕುರುಹುಗಳು ಇಲ್ಲದಿರುವುದರಿಂದ, ಪ್ರಕರಣ…

ಮುಂದೆ ಓದಿ..
ಸುದ್ದಿ 

” ಅಬ್ ಕಿ ಬಾರ್ಟ್ರಂಪ್ ಕಿ ಸರ್ಕಾರ್ “

” ಅಬ್ ಕಿ ಬಾರ್ಟ್ರಂಪ್ ಕಿ ಸರ್ಕಾರ್ ” ಹೀಗೆ 2020 ರ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಆಗಿನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ಅಮೆರಿಕದಲ್ಲಿಯೇ ಒಂದು ಚುನಾವಣಾ ಭಾಷಣ ಮಾಡಿದರು. ಮೂಲಭೂತವಾಗಿ ಈ ಭಾಷಣ ಭಾರತದ ಅಲಿಪ್ತ ನೀತಿಗೆ ವಿರುದ್ಧವಾಗಿತ್ತು. ಹಾಗೆಯೇ ಭಾರತದಂತ ಜಗತ್ತಿನ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನಿ ಇನ್ನೊಂದು ರಾಷ್ಟ್ರದ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುವುದು ಉತ್ತಮ ನಡೆಯಾಗಿರಲಿಲ್ಲ. ಜೊತೆಗೆ ಇದು ಮೋದಿಯವರ ವಿದೇಶಾಂಗ ನೀತಿಯ ದೂರದೃಷ್ಟಿತ್ವ ಮತ್ತು ಗ್ರಹಿಕೆಯ ಕೊರತೆಯಲ್ಲಿನ ತಪ್ಪು ತೀರ್ಮಾನವಾಗಿತ್ತು. ಈಗ ಅದು ನಿಜವಾಗಿದೆ.ಕೊನೆಗೂ ಆ ಚುನಾವಣೆಯಲ್ಲಿ ಟ್ರಂಪ್ ಸೋತು ಜೋ ಬೈಡನ್ ಅಧ್ಯಕ್ಷರಾಗುತ್ತಾರೆ. ಅಲ್ಲಿಂದಲೇ ಭಾರತ ಅಮೆರಿಕಾದ ನಡುವಿನ ಸಂಬಂಧ ಸ್ವಲ್ಪ ಮಟ್ಟಿಗೆ ಕುಸಿಯತೊಡಗಿತು. ವಾಸ್ತವವಾಗಿ ಅಮೆರಿಕಾದ ಅಧ್ಯಕ್ಷರಲ್ಲಿಯೇ ಅತ್ಯಂತ ಕೆಳಮಟ್ಟದ ನೈತಿಕತೆಯನ್ನು ಹೊಂದಿರುವವರು ಡೊನಾಲ್ಡ್ ಟ್ರಂಪ್.…

ಮುಂದೆ ಓದಿ..
ಸುದ್ದಿ 

ಆಸ್ಪತ್ರೆಯ ಎಸಿ ಕಾಪರ್ ಪೈಪ್ ಕಳವು: ₹25,000 ಮೌಲ್ಯದ pipe ಕಳ್ಳತನ

ಬೆಂಗಳೂರು, ಆಗಸ್ಟ್ 1: 2025ನಗರದ ಪ್ರಕೃತಿ ಆಸ್ಪತ್ರೆಯಲ್ಲಿ ಕಳವು ಪ್ರಕರಣ ನಡೆದಿದ್ದು, ಎಸಿ ವ್ಯವಸ್ಥೆಗೆ ಅಳವಡಿಸಿದ್ದ ಸುಮಾರು 30 ಅಡಿ ಉದ್ದದ ಕಾಪರ್ ಪೈಪ್ ಕಳ್ಳರು ಕದ್ದಿರುವ ಘಟನೆ ವರದಿಯಾಗಿದೆ. ಪ್ರಕರಣ ಸಂಬಂಧ ಸ್ಥಳೀಯ ಠಾಣೆಗೆ ದೂರು ನೀಡಲಾಗಿದೆ. ಆಸ್ಪತ್ರೆಯ ವ್ಯವಸ್ಥಾಪಕರು ನೀಡಿದ ದೂರಿನ ಪ್ರಕಾರ, ಜುಲೈ 13ರಂದು ರಾತ್ರಿ 10 ಗಂಟೆಗೆ ಎಸಿ ಪರಿಶೀಲಿಸಿದಾಗ ಎಲ್ಲವೂ ಸಹಜವಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ ಜುಲೈ 14ರ ಬೆಳಿಗ್ಗೆ 7 ಗಂಟೆಗೆ ಮರುಪರಿಶೀಲನೆ ಮಾಡಿದಾಗ ಎಸಿ ಕೆಲಸ ಮಾಡುತ್ತಿಲ್ಲವೆಂಬುದನ್ನು ಗಮನಿಸಿದರು. ತಕ್ಷಣ ಬಿಲ್ಡಿಂಗ್ ಹೊರಭಾಗದಲ್ಲಿರುವ ಬಿಲ್ಲಿಂಗ್ ಏರಿಯಾವರೆಗೆ ಹೋಗಿ ಪರಿಶೀಲಿಸಿದಾಗ, ಅಳವಡಿಸಲಾಗಿದ್ದ ಕಾಪರ್ ಪೈಪ್ ಕಳ್ಳತನಗೊಂಡಿರುವುದು ಕಂಡುಬಂದಿತು. ಕಳವಾದ pipe ಅನ್ನು ಎಸಿ ಬಿಲ್ಲಿಂಗ್ ಏರಿಯಾದಲ್ಲಿ ಅಳವಡಿಸಲಾಗಿದ್ದು, ಶ್ರಮಪಟ್ಟು ಅಳವಡಿಸಿದ ಈ pipe ನ ಮೌಲ್ಯವು ಸುಮಾರು ₹25,000 ಆಗಿದೆ. ಆಸ್ಪತ್ರೆಯ ಸಿಬ್ಬಂದಿ ಮತ್ತು ನಿರ್ವಾಹಕರು ಈ ಬಗ್ಗೆ ಶಂಕೆ…

ಮುಂದೆ ಓದಿ..
ಸುದ್ದಿ 

ಬಸ್‌ನಲ್ಲಿ 50,000 ರೂ. ನಗದು ಕಳವು: ಅಪರಿಚಿತನ ಸಾಹಸಕ್ಕೆ ವ್ಯಾಪಾರಿ ಬಲಿ

ಬೆಂಗಳೂರು, ಆಗಸ್ಟ್ 1 : 2025ತೂಬಗೆರೆಯೊಂದರಲ್ಲಿ ಬಟ್ಟೆ ಅಂಗಡಿಯನ್ನು ನಡೆಸುವ ವ್ಯಕ್ತಿಯೊಬ್ಬರು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಬಸ್‌ನಲ್ಲಿ 50,000 ರೂಪಾಯಿ ನಗದು ಕಳವಾದ ಘಟನೆ ವರದಿಯಾಗಿದೆ. ಈ ಘಟನೆ ತಂತ್ರಭರಿತವಾಗಿ ನಡೆದಿದ್ದು, ಅಪರಿಚಿತ ವ್ಯಕ್ತಿಯೊಬ್ಬನು “ಕಾಲು ಫ್ರಾಕ್ಚರ್” ಆಗಿದೆ ಎಂದು ಹೇಳಿ ಸೀಟು ಪಡೆದು ನಂತರ ಹಣ ಕದ್ದಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ವ್ಯಾಪಾರ ಸಂಬಂಧಿತ ಕೆಲಸಕ್ಕಾಗಿ ವ್ಯಕ್ತಿಯು 29 ಜುಲೈ 2025 ರಂದು ಬೆಳಗ್ಗೆ 8 ಗಂಟೆಗೆ ತೂಬಗೆರೆಯಿಂದ ನಗದು ಹಣದೊಂದಿಗೆ ಬೆಂಗಳೂರಿಗೆ ಹೊರಟಿದ್ದರು. KA57F1968 ಸಂಖ್ಯೆಯ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅವರು ದೊಡ್ಡಬಳ್ಳಾಪುರದ ಮಾರ್ಗವಾಗಿ ಬರುತ್ತಿದ್ದರು. ಮಧ್ಯದಲ್ಲಿ ಬ್ಯಾಟರಾಯನಪುರ ಬಸ್ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಕಾಲು ಫ್ರಾಕ್ಚರ್ ಆಗಿದೆ ಎಂದು ಹೇಳಿ ಸೀಟು ಕೇಳಿದ. ಮಾನವೀಯತೆಯಿಂದ ಪೀಡಿತ ವ್ಯಕ್ತಿ ಸೀಟನ್ನು ನೀಡಿದ ಬಳಿಕ, ಎಸ್ಟ್ರೀಮ್ ಮಾಲ್ ನಿಲ್ದಾಣದ ಬಳಿ ಆ ಅಪರಿಚಿತನು ಇಳಿದು…

ಮುಂದೆ ಓದಿ..
ಸುದ್ದಿ 

ಮಾದಕ ವಸ್ತು ಮಾರಾಟಕ್ಕೆ ಯತ್ನ: ತೆಲಂಗಾಣ ಮೂಲದ ವ್ಯಕ್ತಿಯಿಂದ 990 ಗ್ರಾಂ ಗಾಂಜಾ ವಶ – ಗಂಗಮ್ಮನ ಗುಡಿ ಪೊಲೀಸ್ ದಾಳಿ.

ಬೆಂಗಳೂರು, ಜುಲೈ 01 – ನಗರದ ಕೆ.ಜಿ.ಹಳ್ಳಿ ವ್ಯಾಪ್ತಿಯ ಅಂಗಾಳಪರಮೇಶ್ವರಿ ದೇವಸ್ಥಾನ ರಸ್ತೆ (ರೈಲ್ವೆ ಪ್ಯಾರಲಲ್ ರಸ್ತೆಯ ಬಳಿ) ಪಾಳು ಬಿದ್ದ ಮನೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 990 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ದಿನಾಂಕ 29-07-2025 ರಂದು ಮಧ್ಯಾಹ್ನ 3:05ಕ್ಕೆ ಪಿಎಸ್‌ಐ ಕವೀಶ್.ಎಸ್ ಅವರಿಗೆ ಬಾತ್ಮೀದಾರರಿಂದ ಮಾಹಿತಿ ದೊರಕಿದ್ದು, ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡಲಾಗುತ್ತಿದೆ ಎಂಬುದರ ಬಗ್ಗೆ ಖಚಿತ ವರದಿ ಸಿಕ್ಕಿತು. ಅವರು ACP ಪೀಣ್ಯ ಉಪ ವಿಭಾಗದ ಅನುಮತಿ ಪಡೆದು, ಸಿಬ್ಬಂದಿ ಹಾಗೂ ಪಂಚರೊಂದಿಗೆ ಸ್ಥಳಕ್ಕೆ ತೆರಳಿದರು. ಮಧ್ಯಾಹ್ನ 3:30ಕ್ಕೆ ನಡೆದ ದಾಳಿಯ ವೇಳೆ, ಸಿಮೆಂಟ್ ಬಣ್ಣದ ಪ್ಯಾಂಟ್ ಮತ್ತು ಜರ್ಕೀನ್ ಧರಿಸಿದ್ದ ವ್ಯಕ್ತಿಯೊಬ್ಬ ಬೂದು ಬಣ್ಣದ ಬ್ಯಾಗ್‌ನೊಂದಿಗೆ ಪಾಳು ಮನೆಯ ಬಳಿ ಶಂಕಿತವಾಗಿ ನಿಂತಿದ್ದನು. ಪೊಲೀಸರು ಹತ್ತಿರ ಹೋಗುತ್ತಲೇ, ಆತನು ಓಡಿ ಪಾಳು ಮನೆಯ ಓಣಿಯೊಳಗೆ…

ಮುಂದೆ ಓದಿ..
ಸುದ್ದಿ 

ಚಾಲಕನಾಗಿ ಕೆಲಸ ಮಾಡುತ್ತಿದ್ದ 20 ವರ್ಷದ ಯುವಕ ನಾಪತ್ತೆ: ಕುಟುಂಬಸ್ಥರಿಂದ ಆತಂಕ

ಕೆಜಿ ಹಳ್ಳಿ ನಿವಾಸಿ, 20 ವರ್ಷದ ವಿನಯ್ ಕುಮಾರ್ ಎಂಬ ಯುವಕ ಕಳೆದ 13 ದಿನಗಳಿಂದ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತಂತೆ ಅವರ ಸೋದರಿಯವರುಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಂಜಲಿಯವರ ಪ್ರಕಾರ, ವಿನಯ್ ಕುಮಾರ್ ಚಾಲಕನಾಗಿ ಕೆಲಸ ಮಾಡುತ್ತಿದ್ದು, ದಿನಾಂಕ 18-07-2025 ರಂದು ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಆದರೆ ಆ ದಿನದ ನಂತರದಿಂದ ಇವತ್ತಿನವರೆಗೆ ಅವರು ಮನೆಗೆ ಮರಳಿಲ್ಲ. ಅದೇ ದಿನ ರಾತ್ರಿ ಅವರ ಮೊಬೈಲ್ ಸಂಖ್ಯೆಗಳಿಗೂ ಕರೆ ಮಾಡಿದಾಗ ಫೋನುಗಳು ಸ್ವಿಚ್ ಆಫ್ ಆಗಿವೆ. ವಿನಯ್ ಕುಟುಂಬದವರೊಂದಿಗೆ ಸಂಪರ್ಕ ಕೂಡ ಸಾಧಿಸಿಲ್ಲ. ಅಂಜಲಿ ಅವರು ನೀಡಿದ ಮಾಹಿತಿಯಂತೆ, ವಿನಯ್‌ಗೆ ಕನ್ನಡ ಸ್ವಲ್ಪ ಬರುವುದು ಹಾಗೂ ಹಿಂದಿಯಲ್ಲಿ ಚೆನ್ನಾಗಿ ಮಾತನಾಡುತ್ತಾರೆ. ಅವರಿಗೆ ಯಾವುದೇ ಸ್ನೇಹಿತರು ಇಲ್ಲ, ಮತ್ತು ಎಲ್ಲೆಡೆ ಹುಡುಕಿದರೂ ಯಾವುದೇ ಮಾಹಿತಿ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ತಮ್ಮ ತಮ್ಮನನ್ನು ಪತ್ತೆ ಹಚ್ಚುವಂತೆ ಅವರು…

ಮುಂದೆ ಓದಿ..
ಸುದ್ದಿ 

ಮನೆ ಬೀಗ ಹಾಕಿ ಚಿನ್ನದ ಚೈನ್ ಕಳವು – ಕಳ್ಳತನ ಪ್ರಕರಣ ದಾಖಲು

ಬೆಂಗಳೂರು, ಜುಲೈ 30 – ಆನೇಕಲ್ ಪ್ರದೇಶದಲ್ಲಿ ಮನೆ ಬೀಗ ಹಾಕಿ ಒಳನುಗ್ಗಿದ ದುಷ್ಕರ್ಮಿಗಳು, ಗಾದ್ರೇಜ್ ಬೀರುವಿನಲ್ಲಿ ಇಡಲಾಗಿದ್ದ ಚಿನ್ನದ ಸರವನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಪ್ರಕರಣ ಸಂಬಂಧ ಸ್ಥಳೀಯ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆ ಶ್ರೀಮತಿ ರಮಾ ಕೊಂ ರಾಮು ಅವರು, ತಾವು ಗಂಡ ಹಾಗೂ ಮಕ್ಕಳೊಂದಿಗೆ ವಾಸವಿದ್ದು ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅವರು ನೀಡಿದ ಮಾಹಿತಿಯಂತೆ, ದಿನಾಂಕ 30-07-2025 ರಂದು ಬೆಳಗ್ಗೆ 7:30 ಗಂಟೆಗೆ ಅವರ ಮಕ್ಕಳು ಕೆಲಸಕ್ಕಾಗಿ ಬೆಂಗಳೂರಿಗೆ ಹೋಗಿದ್ದು, ನಂತರ ಬೆಳಗ್ಗೆ 9:00 ಗಂಟೆಗೆ ರಮಾ ದೆಯೂ ಸಹ ತನ್ನ ಕೆಲಸಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಗಂಡನು ಮನೆಯಲ್ಲೇ ಇದ್ದನು. ಸಂಜೆ 6:30ರ ಸುಮಾರಿಗೆ ಮನೆಗೆ ಹಿಂತಿರುಗಿದಾಗ ಬಾಗಿಲಿಗೆ ಬೀಗ ಹಾಕಿರುವುದನ್ನು ಅವರು ಗಮನಿಸಿದರು. ತಕ್ಷಣ ಮನೆ ಮಾಲೀಕರ ಸಹಾಯದಿಂದ ಬೀಗ ತೆಗೆಯಲಾಯಿತು. ಮನೆಯೊಳಗೆ ಪ್ರವೇಶಿಸಿದಾಗ…

ಮುಂದೆ ಓದಿ..
ಸುದ್ದಿ 

ಸೋಂಪುರ ಗೇಟ್ ಬಳಿ ಶಶಿಕಲಾ ಮತ್ತು ಮಗ ಕಾಣೆಯಾಗಿದೆ – ಪತ್ತೆಹಚ್ಚುವಂತೆ ಕುಟುಂಬದ ಮನವಿ

ಸರ್ಜಾಪುರ, ಜುಲೈ1, 2025 ಆನೇಕಲ್ ತಾಲ್ಲೂಕು ಸರ್ಜಾಪುರ ಹೋಬಳಿಯ ಸೋಂಪುರ ಗೇಟ್ ನಲ್ಲಿ ವಾಸವಾಗಿದ್ದ ಶಶಿಕಲಾ ಮತ್ತು ಅವರ ಮಗ ವಿನಯ್ ಕುಮಾರ್ ಕಳೆದ ನಾಲ್ಕು ದಿನಗಳಿಂದ ಕಾಣೆಯಾಗಿದ್ದು, ಈ ಕುರಿತು ಅವರ ಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ರಾಯಚೂರು ಜಿಲ್ಲೆಯ ಉಟಕನೂರು ಗ್ರಾಮ ಮೂಲದ ಕುಟುಂಬವು ಕಳೆದ 18 ವರ್ಷಗಳಿಂದ ಬೆಂಗಳೂರು ನಗರದಲ್ಲಿ ವಾಸವಿದ್ದು, ಬಸವಲಿಂಗಪ್ಪ ರವರು ವಿದ್ಯುತ್ ತಜ್ಞನಾಗಿ ಕೆಲಸ ಮಾಡುತ್ತಿದ್ದಾರೆ. ದಿನಾಂಕ 26-07-2025 ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಶಶಿಕಲಾ ಅವರು ತಮ್ಮ ಮಗನೊಂದಿಗೆ ಮನೆಯಿಂದ ಹೊರಟ್ಟಿದ ಬಳಿಕ ವಾಪಸ್ ಬಂದಿಲ್ಲ. ಸಂಬಂಧಿಕರು ಹಾಗೂ ಆತ್ಮೀಯರ ಮನೆಗಳಲ್ಲಿ ಹುಡುಕಿದರೂ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಯಾವುದೇ ವಿಳಾಸ ಪತ್ತೆಯಾಗದ ಹಿನ್ನೆಲೆಯಲ್ಲಿ ಅವರು 30-07-2025 ರಂದು ಸಂಜೆ 7 ಗಂಟೆಗೆ ಠಾಣೆಗೆ ಹಾಜರಾಗಿ ದೂರು ದಾಖಲಿಸಿದ್ದಾರೆ. ಸ್ಥಳೀಯ ಪೊಲೀಸರು…

ಮುಂದೆ ಓದಿ..
ಸುದ್ದಿ 

ಮಟನ್ ಅಂಗಡಿಗೆ ಕಳ್ಳರು ನುಗ್ಗಿ ₹20,000 ನಗದು ಹಾಗೂ ಸ್ಟವ್ ಕಳ್ಳತನ

ಆನೇಕಲ್, ಜುಲೈ 31:ಆನೇಕಲ್ ಚಂದಾಪುರ ಮುಖ್ಯರಸ್ತೆಯ ಜೈಭೀಮ್ ಪೆಟ್ರೋಲ್ ಬಂಕ್ ಪಕ್ಕದಲ್ಲಿರುವ ಮಟನ್ ಅಂಗಡಿಗೆ ಕಳ್ಳರು ನುಗ್ಗಿ ₹20,000 ನಗದು ಹಾಗೂ ಒಂದು ಗ್ಯಾಸ್ ಸ್ಟವ್ ಸ್ಟವ್ ಅನ್ನು ಕದ್ದಿಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಅಂಗಡಿಯ ಮಾಲೀಕರಾದ ಕೆ. ಸಾದೀಕ್ ಪಾಷ್ ಅವರು ದಿನಾಂಕ 31/07/2025 ರಂದು ಬೆಳಿಗ್ಗೆ 11 ಗಂಟೆಗೆ ಠಾಣೆಗೆ ಹಾಜರಾಗಿ ದೂರು ನೀಡಿದವರಾಗಿದ್ದು, ಅವರು ತಮ್ಮ ಅಂಗಡಿಯನ್ನು 30ನೇ ತಾರೀಕಿನ ರಾತ್ರಿ ಸುಮಾರು 8.30ಕ್ಕೆ ಮುಚ್ಚಿ ಮನೆಗೆ ತೆರಳಿದ್ದರು. ಆದರ ದಿನ ಬೆಳಗ್ಗೆ 5.40ರ ಸುಮಾರಿಗೆ ಅಂಗಡಿ ತೆರೆಯಲು ಬಂದಾಗ ಮುಂಭಾಗದ ಬಾಗಿಲು ಒಡೆದು ಹಾಕಿರುವುದು ಗಮನಕ್ಕೆ ಬಂತು. ಅಂಗಡಿಯಲ್ಲಿ ಪರಿಶೀಲನೆ ನಡೆಸಿದಾಗ ಕ್ಯಾಶ್ ಬಾಕ್ಸ್‌ನಲ್ಲಿಟ್ಟಿದ್ದ ₹20,000 ನಗದು ಹಾಗೂ ಗ್ಯಾಸ್ ಸ್ಟವ್ ಕಳ್ಳತನವಾಗಿರುವುದು ತಿಳಿದುಬಂದಿದೆ. ಅನಾಮಿಕ ಕಿಡಿಗೇಡಿಗಳು ಅಂಗಡಿಯೊಳಗೆ ನುಗ್ಗಿ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಸಂದರ್ಭಕ್ಕೆ ಸಂಬಂಧಿಸಿದಂತೆ ಆನೇಕಲ್…

ಮುಂದೆ ಓದಿ..
ಸುದ್ದಿ 

” ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ “

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್…… ಆದ್ದರಿಂದ…… ಸಾವಿನ ಭಯದಿಂದ ತಪ್ಪು ಮಾಡುವುದು ಬಿಡಿ….. ಸೋಲಿನ ಭಯದಿಂದ ಚಿಂತಿಸುವುದನ್ನು ಬಿಡಿ……. ವಿಫಲತೆಯ ಭಯದಿಂದ ಕೊರಗುವುದನ್ನು ಬಿಡಿ…… ಸಾವು – ಸೋಲು – ವಿಫಲತೆಯ ಭಯ ನಮ್ಮನ್ನು ಜೀವನ ಪೂರ್ತಿ ಹಿಂಡುತ್ತಲೇ ಇರುತ್ತದೆ. ನಾವು ಮಾಡುವ ಬಹುತೇಕ ತಪ್ಪುಗಳು ಇವುಗಳ ಕಾರಣಕ್ಕಾಗಿಯೇ ಆಗಿರುತ್ತದೆ.ಆಸ್ಪತ್ರೆ, ಪೋಲೀಸ್, ನ್ಯಾಯಾಲಯ, ದೇವರು, ಧರ್ಮ, ಸ್ವಾಮಿಗಳು ಎಲ್ಲವುಗಳ ಸುತ್ತ ನಾವು ಸುತ್ತುವುದು ಮತ್ತು ಅನೇಕ ಭ್ರಮಾತ್ಮಕ ಮೌಢ್ಯಗಳಿಗೆ ಒಳಗಾಗುವುದು ಸಹ ಈ ಮೂರರ ಕಾರಣಕ್ಕಾಗಿ.ಇವುಗಳನ್ನು ಘನತೆಯಿಂದ ಸ್ವೀಕರಿಸುವ, ವಾಸ್ತವವಾಗಿ ಎದುರಿಸುವ, ಸಹಜವಾದ ಕ್ರಿಯೆ ಎನ್ನುವ ಸಾಮಾಜಿಕ ವಾತಾವರಣ ನಮ್ಮ ವ್ಯವಸ್ಥೆಯಲ್ಲಿ ಇಲ್ಲ.ಮನುಷ್ಯ ಸಂಘ ಜೀವಿ. ಒಂದು ವೇಳೆ ವೈಯಕ್ತಿಕ ನೆಲೆಯಲ್ಲಿ ಇವುಗಳನ್ನು ಸ್ವಾಭಾವಿಕವಾಗಿ ಒಪ್ಪಿಕೊಂಡರು ನಮ್ಮ ಸುತ್ತಮುತ್ತಲಿನ ಜನರ ಪ್ರತಿಕ್ರಿಯೆ ಅತ್ಯಂತ ನಕಾರಾತ್ಮಕವಾಗಿ ಇರುತ್ತದೆ. ಅದನ್ನು ಎದುರಿಸುವುದೇ ಒಂದು ದೊಡ್ಡ ಸವಾಲು.ಇದು ಹೇಳುವಷ್ಟು ಸುಲಭವಲ್ಲ. ಆದರೆ…

ಮುಂದೆ ಓದಿ..