ಅಂಕಣ 

ಅಲ್ಲಮ – ಅಕ್ಕಮಹಾದೇವಿಯವರ ಜೀವನೋತ್ಸಾಹ ತುಂಬುವ ವಚನದ ಸಾಲುಗಳು……

ಇದು ಪ್ರೀತಿಯ ಮಾಯೆಯೊಳಗೆ ಸಿಲುಕಿ, ಕಾಮದ ಬಲೆಯೊಳಗೆ ಬಂಧಿಯಾಗಿ, ಅಜ್ಞಾನದ ಮೋಹ ಪಾಶದಲ್ಲಿ ಒದ್ದಾಡಿ, ಹಣದ ದಾಹದಲ್ಲಿ ಮೈಮರೆತು ಅದರಿಂದ ಹೊರಬಂದ ವ್ಯಕ್ತಿಯೊಬ್ಬನ ಸ್ವಗತ…..)ಶಬ್ದವೆಂಬನೆ ಶೋತ್ರದೆಂಜಲು, ಸ್ಪರ್ಶವೆಂಬೆನೆ ತೊಕ್ಕಿ ನೆಂಜಲು, ರೂಪವೆಂಬನೆ ನೇತ್ರದೆಂಜಲು, ಪರಿಮಳವೆಂಬನೆ ಘ್ರಾಣದೆಂಜಲು, ರುಚಿಯೆಂಬೆನೆ ಜಿಹ್ವೆ ಎಂಜಲು, ನಾನೆಂಬೆನೆ ಅರಿವಿನೆಂಜಲು, ಎಂಜಲೆಂಬ ಬಿನ್ನವಳಿದ ಬೆಳಗಿನೊಳಗಣ ಬೆಳಗು, ಗುಹೇಶ್ವರ ಲಿಂಗವು……. ಅಲ್ಲಮಪ್ರಭು,ಸತ್ಯವೂ ಇಲ್ಲ ಅಸತ್ಯವೂ ಇಲ್ಲ, ಸಹಜವೂ ಇಲ್ಲ ಅಸಹಜವೂ ಇಲ್ಲ. ನಾನು ಇಲ್ಲ ನೀನು ಇಲ್ಲ, ಇಲ್ಲ ಇಲ್ಲ ಎಂಬುದು ತಾನಿಲ್ಲ, ಗುಹೇಶ್ವರ ಲಿಂಗತಾ ಬಯಲು….ಅಲ್ಲಮಪ್ರಭು,ಹಸಿವಾದೊಡೆ ಭಿಕ್ಷಾನ್ನಗಳುಂಟು, ತೃಷೆಯಾದರೆ ಕೆರೆ ಹಳ್ಳ ಭಾವಿಗಳುಂಟು, ಶಯನಕ್ಕೆ ಹಾಳು ದೇಗುಲಗಳುಂಟು, ಚೆನ್ನಮಲ್ಲಿಕಾರ್ಜುನಯ್ಯ ಆತ್ಮ ಸಂಗಾತಕ್ಕೆ ನೀನೆನಗುಂಟು… – ಅಕ್ಕ ಮಹಾದೇವಿ,ಆಳ ಪ್ರೀತಿಯಲ್ಲಿ ಸಿಲುಕಿ ಅದರಿಂದ ವಂಚನೆಗೊಳಗಾಗಿ ವಿರಹಿಯಾದ ವ್ಯಕ್ತಿಗಳು ಹುಚ್ಚರಾಗುತ್ತಾರೆ ಅಥವಾ ವ್ಯಸನಿಗಳಾಗುತ್ತಾರೆ ಅಥವಾ ತತ್ವಜ್ಞಾನಿಗಳಾಗುತ್ತಾರೆ ಎಂಬ ಮಾತಿದೆ…..ಇಲ್ಲಿನ ವ್ಯಕ್ತಿಯು ತತ್ವಜ್ಞಾನಿಯಾಗುವ ಹಾದಿಯಲ್ಲಿದ್ದಾನೆ ಎನಿಸುತ್ತದೆ……ಪ್ರೀತಿಯ ಆಳದಲ್ಲಿ ಅರಳುವ…

ಮುಂದೆ ಓದಿ..
ಅಂಕಣ 

ಮನೆ ಗೆದ್ದು ಮಾರು ಗೆಲ್ಲುಅಥವಾಮನ ಗೆದ್ದು ಮಾರು ಗೆಲ್ಲು…

ಹೀಗೆ ಒಂದು ಜನಪದೀಯ ಮಾತು ಚಾಲ್ತಿಯಲ್ಲಿದೆ. ಇದರ ವಾಸ್ತವತೆಯ ಬಗ್ಗೆ ಯೋಚಿಸತೊಡಗಿದಾಗ…..ಮನೆ ಎಂದರೆ ಕುಟುಂಬ. ಕುಟುಂಬವನ್ನು ಸರಿಯಾಗಿ ಮತ್ತು ತೃಪ್ತಿಕರವಾಗಿ ನಿರ್ವಹಿಸಿದ ನಂತರ ಇತರ ಮುಖ್ಯವಾಗಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡರೆ ಮಾತ್ರ ಯಶಸ್ವಿಯಾಗಲು ಸಾಧ್ಯ. ಮನೆಯಲ್ಲಿಯೇ ಅತೃಪ್ತಿ ಇದ್ದರೆ ಅಥವಾ ಅದನ್ನು ಉತ್ತಮವಾಗಿ ನಿರ್ವಹಿಸದೆ ಸಮಾಜವನ್ನು ತಿದ್ದುವುದು ಸಾಧ್ಯವಿಲ್ಲ ಅದು ಒಂದು ರೀತಿಯ ವ್ಯಂಗ್ಯ ಎಂದು ಹೇಳಲಾಗುತ್ತದೆ. ಇದು ಸರಿಯೇ – ವಾಸ್ತವವೇ….ಆಧುನಿಕ ಸಂಕೀರ್ಣ ಬದುಕಿನ ಕುಟುಂಬಗಳನ್ನು ಗಮನಿಸಿದಾಗ ಮನೆ ಎಂಬ ಈ ಮಾತುಗಳು ತುಂಬಾ ಪರಿಣಾಮಕಾರಿ ಎಂದು ಅನಿಸುವುದಿಲ್ಲ. ಮನೆ ಗೆಲ್ಲುವುದು ಅದರಲ್ಲೂ ಕೌಟುಂಬಿಕ ವ್ಯವಸ್ಥೆಯನ್ನು ಗೆಲ್ಲುವುದು ಅಷ್ಟು ಸುಲಭವಲ್ಲ. ಬಹುಶಃ ನಂಬುಗೆಯ ಏಳು ಜನ್ಮವಾದರೂ ಸಾಕಾಗುವುದಿಲ್ಲ. ಮಧ್ಯಮವರ್ಗದ ಬದುಕು ತುಂಬಾ ಕಷ್ಟಕರ. ಅಪ್ಪ ಅಮ್ಮ ಗಂಡ ಹೆಂಡತಿ ಮಕ್ಕಳು ಅತ್ತೆ ಮಾವ ಸೊಸೆ ಅಳಿಯ ಮೈದುನ ಅತ್ತಿಗೆ ಅಜ್ಜ ಅಜ್ಜಿ ಈ ರೀತಿಯ ಸಂಬಂಧಗಳನ್ನು…

ಮುಂದೆ ಓದಿ..
ಅಂಕಣ 

ದೇವರು ಮತ್ತು ಸರ್ಕಾರ ಯಾರು ಹೊಣೆ…….

ತುಂಬಾ ಆಶ್ಚರ್ಯವಾಗುವ ವಿಷಯವೆಂದರೆ, ಸಾಮಾನ್ಯವಾಗಿ ಬಹುತೇಕ ಜನ ಪ್ರತಿಕ್ಷಣ ತಮ್ಮ ಎಲ್ಲಾ ಕೆಲಸ ಕಾರ್ಯಗಳು, ಪರಿಣಾಮಗಳು, ಫಲಿತಾಂಶಗಳು, ಪ್ರತಿ ಚಟುವಟಿಕೆಗಳಿಗೂ ದೇವರೇ ಕಾರಣ ಎಂದು ನಂಬುತ್ತಾರೆ, ಪೂಜಿಸುತ್ತಾರೆ. ತಮ್ಮೆಲ್ಲಾ ಯಶಸ್ಸು, ಕಷ್ಟ ಸುಖಗಳು, ಸೋಲು ಗೆಲುವುಗಳು ಎಲ್ಲವನ್ನು ಆ ದೇವರೇ ನಿರ್ಧರಿಸುವುದು ಎಂದೇ ಭಾವಿಸುತ್ತಾರೆ……ದೇವರಿಗಾಗಿ ಬೆಳಗ್ಗೆ, ಸಂಜೆ ಪೂಜೆ ಮಾಡುವುದಲ್ಲದೆ ದೇವಸ್ಥಾನಗಳಿಗೆ ಹೋಗುತ್ತಾರೆ. ತೀರ್ಥಕ್ಷೇತ್ರಗಳಿಗೂ ಭೇಟಿ ಕೊಡುತ್ತಾರೆ. ಪೂಜೆ, ಹೋಮ ಹವನಗಳನ್ನು ಮಾಡಿಸುತ್ತಾರೆ. ಅಂದರೆ ಅವರ ಪ್ರತಿ ಚಟುವಟಿಕೆಯಲ್ಲೂ ದೇವರಂತು ಇದ್ದೇ ಇರುತ್ತಾರೆ…. ಆದರೆ ಮೊನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭ್ರಮದ ಆಚರಣೆ ಸಂದರ್ಭದಲ್ಲಿ ಕಾಲ್ತುಳಿತದಿಂದ 11 ಜನ ಸತ್ತು 45ಕ್ಕೂ ಹೆಚ್ಚು ಜನ ಗಾಯಾಳುವಾದ ಘಟನೆಗೆ ಪ್ರತಿಯೊಬ್ಬರೂ ಸರ್ಕಾರವನ್ನು, ಪೊಲೀಸರನ್ನು, ಕೆ ಎಸ್ ಸಿ ಎ ಅನ್ನೋ, ಐಪಿಎಲ್ ಅನ್ನೋ ದೂರುತ್ತಾರೆ. ಆದರೆ ಯಾರೊಬ್ಬರೂ ದೇವರನ್ನು ಮಾತ್ರ ಪ್ರಶ್ನಿಸುತ್ತಿಲ್ಲ. ಇದೇ ಆಶ್ಚರ್ಯದ ವಿಷಯ….. ನಿಜಕ್ಕೂ ಸರ್ಕಾರ,…

ಮುಂದೆ ಓದಿ..
ಅಂಕಣ 

ನಮ್ಮ ತಪ್ಪುಗಳ ಆತ್ಮಾವಲೋಕನವೂ ಆಗಲಿ…….

ಕಾಲ್ತುಳಿತದ ಸಾವುಗಳಿಗೆ ಸರ್ಕಾರದ ತಪ್ಪು, ಕೆ ಎಸ್ ಸಿ ಎ ತಪ್ಪು, ಆರ್‌ಸಿಬಿ ಫ್ರಾಂಚೈಸಿ ತಪ್ಪು, ಪೊಲೀಸರ ತಪ್ಪು, ಮಾಧ್ಯಮಗಳ ತಪ್ಪು, ಆಟಗಾರರ ತಪ್ಪು, ಇವುಗಳ ನಡುವೆ ಇನ್ನೊಂದು ದೊಡ್ಡ ತಪ್ಪನ್ನು ಮರೆಯಬಾರದು. ಈ ಅವಘಡದ ಮತ್ತೊಂದು ಮುಖ……. 20/30 ವರ್ಷದ ಒಳಗಿನ ಯುವಕ ಯುವತಿಯರಿಗೆ ವಿದ್ಯುತ್ ಕಂಬದ ಮೇಲೆ ನಿಂತು ಖ್ಯಾತ ಕ್ರೀಡಾಪಟುವನ್ನೋ, ಸಿನಿಮಾ ನಟನನ್ನೋ, ರಾಜಕೀಯ ವ್ಯಕ್ತಿಯನ್ನೋ ನೋಡುವ ದುಸ್ಸಾಹಸ ಮಾಡಬಾರದು ಎಂಬ ಸಾಮಾನ್ಯ ಪ್ರಜ್ಞೆ ಇಲ್ಲದಿದ್ದರೆ ಹೇಗೆ…..ಅತಿ ಬುದ್ದಿವಂತ ಮುಂದಿನ ಭವಿಷ್ಯದ ಪ್ರಜೆಗಳು ಬುದ್ಧ, ವಿವೇಕಾನಂದ, ಬಸವಣ್ಣ ಗಾಂಧಿ, ಅಂಬೇಡ್ಕರ್, ರಾಣಿ ಚೆನ್ನಮ್ಮ, ರಾಯಣ್ಣ, ವಿಶ್ವೇಶ್ವರಯ್ಯ, ನಾಲ್ವಡಿ ಕೃಷ್ಣರಾಜ ಒಡೆಯರ್ ಮುಂತಾದವರ ಪ್ರತಿಮೆಗಳ ತಲೆಯ ಮೇಲೆ ನಿಂತು ಸಿಗರೇಟು ಸೇದುತ್ತಾ ಕೋತಿಗಳಂತೆ ದಾರಿಯಲ್ಲಿ ಸಾಗುವ ಮೆರವಣಿಗೆ ವೀಕ್ಷಿಸಿದರೆ ಹೇಗೆ……ಇಂಜಿನಿಯರಿಂಗ್, ಡಾಕ್ಟರ್, ಪದವಿ, ಸ್ನಾತಕೋತ್ತರ, ಡಿಪ್ಲೋಮೋ ಮುಂತಾದ ಕಾಲೇಜುಗಳಲ್ಲಿ ಓದುತ್ತಿರುವ ಹುಡುಗರಿಗೆ ಸಮುದ್ರ ತೀರದಲ್ಲಿ…

ಮುಂದೆ ಓದಿ..
ಅಂಕಣ 

ಮಾನವೀಯತೆ ಕಳೆದು ಹೋಗುವ ಮುನ್ನ…….

ಮಾನವೀಯತೆ ಕಳೆದು ಹೋಗುವ ಮುನ್ನ……. ವೈಯಕ್ತಿಕ ಅಥವಾ ಸೈದ್ಧಾಂತಿಕ ವಾದ ವಿವಾದಗಳು ಏನೇ ಇರಲಿ, ಪರ ವಿರೋಧ ನಿಲುವುಗಳು ಏನಾದರೂ ಆಗಿರಲಿ, ಆದರೆ ಮನುಷ್ಯನ ನಾಗರಿಕ ಸಮಾಜದ ಗುಣಲಕ್ಷಣಗಳನ್ನು ನಿಜಕ್ಕೂ ಅದರ ಮೂಲ ಸ್ವರೂಪದಲ್ಲಿ ಉಳಿಸಬೇಕಾದ ಅನಿವಾರ್ಯತೆ ಈಗ ಅತ್ಯಂತ ಪ್ರಮುಖ ವಿಷಯವಾಗಬೇಕಿದೆ…….. ಅಭಿವೃದ್ಧಿಯ, ಆಧುನಿಕತೆಯ, ತಾಂತ್ರಿಕ ಪ್ರಗತಿಯ ಲಾಭಗಳನ್ನು ನಾವು ಪಡೆಯಬೇಕಾದರೆ ಮಾನವೀಯ ಮೌಲ್ಯಗಳ ಉಳಿವು ಮತ್ತು ಬೆಳವಣಿಗೆ ಬಹುಮುಖ್ಯ ಅಂಶ. ಇಲ್ಲದಿದ್ದರೆ ಎಲ್ಲಾ ಪ್ರಗತಿಯು ನಮ್ಮನ್ನು ನಿಧಾನವಾಗಿ ವಿನಾಶದ ಅಂಚಿಗೆ ಕೊಂಡೊಯ್ಯಬಹುದು. ಬಹುಶಃ ಈಗ ಆ ಹಂತದಲ್ಲಿ ನಾವಿದ್ದೇವೆ………. ಆಹಾರದ ಕಲಬೆರಕೆ ಹಣಕ್ಕಾಗಿ,ಮಾಧ್ಯಮಗಳ ಬ್ರೇಕಿಂಗ್ ನ್ಯೂಸ್ ಹಣಕ್ಕಾಗಿ,ಮೌಲ್ವಿ, ಫಾದರ್, ಸ್ವಾಮಿಗಳ ವೇಷ ಹಣಕ್ಕಾಗಿ,ಡಾಕ್ಟರುಗಳು, ಮೇಷ್ಟ್ರುಗಳ ಆದ್ಯತೆ ಹಣಕ್ಕಾಗಿ,ರಾಜಕಾರಣಿಗಳು, ಸಮಾಜ ಸೇವಕರ ಮುಖವಾಡ ಹಣಕ್ಕಾಗಿ,ಅಧಿಕಾರಿಗಳ ಓದು ಬರಹ ಹಣಕ್ಕಾಗಿ,ಸಾಹಿತಿಗಳ ಹೋರಾಟಗಾರ ಮಾತು, ಅಕ್ಷರಗಳು ಹಣಕ್ಕಾಗಿ,…… ಕೊನೆಗೆ ಹೆಣ್ಣು ಗಂಡಿನ ಮದುವೆ ಸಂಬಂಧಗಳು ಸಹ ಹಣಕ್ಕಾಗಿ ಎಂಬಲ್ಲಿಗೆ…

ಮುಂದೆ ಓದಿ..
ಅಂಕಣ 

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಮುಗಿಲು ಮುಟ್ಟಿದ ಕ್ರಿಕೆಟ್ ಪ್ರೇಮಿಗಳ ಸಂಭ್ರಮ…….ಎಲ್ಲರಿಗೂ ಅಭಿನಂದನೆಗಳು,ಆದರೆ……….ಕ್ರೀಡಾ ಘನತೆಯನ್ನು – ಭಾರತದ ನಾಗರಿಕ ಪ್ರಜ್ಞೆಯನ್ನು ಉಳಿಸೋಣ ಮತ್ತು ವಿಶ್ವಕ್ಕೆ ಪ್ರಚರಿಸೋಣ……….ಕ್ರಿಕೆಟ್ ಒಂದು ಜೂಜಾಟವಲ್ಲ,ಮೋಜಿನಾಟವೂ ಅಲ್ಲ,ಮನರಂಜನೆಯೂ ಅಲ್ಲ,ವ್ಯಾಪಾರವು ಅಲ್ಲ,ದೇಶದ ಸ್ವಾಭಿಮಾನದ ಪ್ರಶ್ನೆಯೂ ಅಲ್ಲ,,ಅದೊಂದು ಕ್ರೀಡೆ, ಕೇವಲ ಕ್ರೀಡೆ ಮಾತ್ರ……..ಅಂತಹ ಒಂದು ಸ್ಪರ್ದೆಯಲ್ಲಿ ನಿನ್ನೆ RCB ಗೆದ್ದಿದೆ. ಅದಕ್ಕೆ ನಮಗೂ ಸಂತೋಷವಾಯಿತು. ಅದು ಅಷ್ಟಕ್ಕೆ ಮಾತ್ರ ಸೀಮಿತವಾಗಿರಬೇಕಿತ್ತು. ಆದರೆ……ಭಾರತದ ಒಟ್ಟು ಜನಸಂಖ್ಯೆಯಲ್ಲಿ ಕನಿಷ್ಠ ಶೇಕಡಾ 30/40% ಜನರಿಗೆ ಕ್ರಿಕೆಟ್ ಬಗ್ಗೆ ಮಾಹಿತಿ ಇದೆ. ಅದನ್ನು ಇಷ್ಟಪಟ್ಟು ನೋಡುತ್ತಾರೆ. ಆ ಕಾರಣದಿಂದಲೇ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ ವಿಶ್ವದ ಶ್ರೀಮಂತ ಕ್ರೀಡಾ ಸಂಸ್ಥೆ ಎಂದು ಹೆಸರು ಗಳಿಸಿದೆ….ಕ್ರಿಕೆಟ್ ನೆರಳಲ್ಲಿ ಭಾರತದ ಇತರ ಕ್ರೀಡೆಗಳು ಸೊರಗಿವೆ ಎಂಬ ಆರೋಪವೂ ಇದೆ. ಅಷ್ಟು ವ್ಯಾಪಕವಾಗಿ ಕ್ರಿಕೆಟ್ ಆವರಿಸಿದೆ.ದುರಾದೃಷ್ಟವಶಾತ್ ಭಾರತದಲ್ಲಿ ಕ್ರಿಕೆಟ್ ಒಂದು ಕ್ರೀಡೆ ಎಂಬುದನ್ನು ಮೀರಿ ತೀರಾ ಅತಿರೇಕದ ಭಾವನೆಗಳನ್ನು ಮಾಧ್ಯಮಗಳು ಕೆರಳಿಸುತ್ತಿವೆ. ಅದೊಂದು…

ಮುಂದೆ ಓದಿ..
ಅಂಕಣ 

ನಮಗಾಗಿ ಪರಿಸರ ಮುಗಿದು,ಪರಿಸರಕ್ಕಾಗಿ ನಾವು ಎಂಬ ದುಸ್ಥಿತಿಯಲ್ಲಿ………

ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ………ಈ ವರ್ಷದ World environment day ಜೂನ್ 5………ಕಳೆದ ವರ್ಷದ ತಾಪಮಾನದ ಹೊಡೆತಕ್ಕೆ ಬಹಳಷ್ಟು ಜನ ಮತ್ತು ಪ್ರಾಣಿ ಪಕ್ಷಿಗಳು ನುಜ್ಜುಗುಜ್ಜಾದ ಕಾರಣ ಇದರ ನೆನಪು ಬೇಗ ಆಗುತ್ತಿದೆ….ಅದರಲ್ಲೂ ಉತ್ತರ ಭಾರತದ ಒಂದು ಸ್ಥಳದಲ್ಲಿ ಗರಿಷ್ಠ ತಾಪಮಾನ 56 ಡಿಗ್ರಿ ಸೆಲ್ಸಿಯಸ್ ಎಂದು ಕೇಳಿಯೇ ತಲೆ ತಿರುಗುತ್ತಿದೆ…..ವಿಶ್ವ ಪರಿಸರ ದಿನ ಎಂಬ ನಾಟಕ,ನೀರು ಉಳಿಸಿ ಜೀವ ಉಳಿಸಿ ಎಂಬ ಮೂರ್ಖತನ,ಹಸಿರೇ ಉಸಿರು, ಗಿಡ ನೆಡಿ ಎಂಬ ಫ್ಯಾಷನ್,ಪ್ರಕೃತಿಯೇ ದೇವರು ಎಂಬ ಸೋಗಲಾಡಿತನ…..ಅರೆ, ಮನುಷ್ಯನೇ ಪ್ರಕೃತಿಯ ಒಂದು ಭಾಗ, ಆತನ ಅಸ್ತಿತ್ವವದ ಮೂಲವೇ ಪರಿಸರ, ಅದನ್ನು ಉಳಿಸಿಕೊಳ್ಳದೇ ನಾಶ ಮಾಡುತ್ತಿರುವ ಮನುಷ್ಯನಿಗೆ ಪರಿಸರ ದಿನ ಆಚರಿಸುವ ನೈತಿಕತೆಯೇ ಇಲ್ಲ, ಅದೊಂದು ಆತ್ಮವಂಚನೆ – ಬೂಟಾಟಿಕೆ….ಸ್ವತಃ ತನ್ನ ಕಣ್ಣನ್ನು ತಾನೇ ತಿವಿದುಕೊಂಡು ನನ್ನ ಕಣ್ಣನ್ನು ಉಳಿಸಿ ಎಂದು ಗೋಗರೆಯುವ ನಾಟಕವೇಕೆ,….ಹೃದಯವನ್ನು ಇರಿದುಕೊಂಡು…

ಮುಂದೆ ಓದಿ..
ಅಂಕಣ 

ನ್ಯಾಯಾಂಗ ಮತ್ತು ಮಾಧ್ಯಮ ಲೋಕದ ಎರಡು ಸುದ್ದಿಗಳು…

ಪ್ರಖ್ಯಾತ ಸಿನಿಮಾ ನಟನೊಬ್ಬನನ್ನು ಕೊಲೆ ಆರೋಪದ ಖಚಿತ ಆಧಾರದ ಮೇಲೆ ಪಂಚತಾರಾ ಹೋಟೆಲ್ಲಿನ ವ್ಯಾಯಾಮ ಶಾಲೆಯಿಂದ ಬಂಧಿಸಿ ಕರೆತರಲಾಗುತ್ತದೆ. ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತದೆ. ಮಾಧ್ಯಮ ಲೋಕ ಪೊಲೀಸ್ ತನಿಖೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತದೆ. ಕೊಲೆ ಆರೋಪಿ ಯಾವ ರೀತಿ ಕೊಲೆ ಮಾಡಿದ ಎಂಬುದನ್ನು ಬಹುತೇಕ ಮಾಧ್ಯಮಗಳು ತಮಗೆ ತೋಚಿದಂತೆ ಹೇಳುತ್ತವೆ. ಪೋಲಿಸ್ ತನಿಖಾ ವರದಿ ತುಂಬಾ ಸ್ಪಷ್ಟವಾಗಿ ದಾಖಲೆಗಳ ಸಮೇತ ನ್ಯಾಯಾಲಯಕ್ಕೆ ಸಲ್ಲಿಸುತ್ತದೆ. ಆದರೂ ಆರೋಪಿಯ ಪರ ವಕೀಲರ ಚಾಣಾಕ್ಷತೆಯಿಂದ ಕಾನೂನಿನ ಇತಿಮಿತಿಗಳನ್ನು ಮೀರಿ ಸುಮಾರು ಆರು ತಿಂಗಳು ಮುಗಿಯುವ ಮೊದಲೇ ಆರೋಪಿಯು ಬೆನ್ನು ನೋವಿನ ಸಮಸ್ಯೆ, ಅದರಿಂದ ಅವರ ಆರೋಗ್ಯದ ಮೇಲೆ ತುಂಬಾ ಗಂಭೀರ ಮಾರಣಾಂತಿಕ ಪರಿಣಾಮ ಬೀರುತ್ತದೆ ಎಂಬ ಕಲ್ಪಿತ ವೈದ್ಯಕೀಯ ಆಧಾರದ ಮೇಲೆ ನಿಜಕ್ಕೂ ಸಾಮಾನ್ಯ ಜನರಿಗೆ ಸಿಗದಂತಹ ವಿಶೇಷ ಸವಲತ್ತು ಸಿಕ್ಕಿ ಶಸ್ತ್ರ ಚಿಕಿತ್ಸೆಗೆಂದು ಆರೋಪಿಗೆ ಜಾಮೀನು ಸಿಗುತ್ತದೆ. ಆದರೆ…

ಮುಂದೆ ಓದಿ..
ಅಂಕಣ 

ಭಾನುವಾರದ ನಮ್ಮ ಕುಟುಂಬದ ದಿನಚರಿ…….

ತುಂತುರು ಹನಿಗಳು ಬೀಳುತ್ತಾ ಅದರ ಮರಿ ಹನಿಗಳು ಗಾಳಿಗೆ ಸೊಯ್ಯನೆ ಕಿಟಕಿಯ ಸರಳುಗಳ ಒಳಗಿಂದ ಮನೆಯೊಳಗೆ ಹಾದು ಹೋಗುವ ಬೆಳಗಿನ 6:00 ಗಂಟೆ ಸಮಯದಲ್ಲಿ ಆ ಚುಮು ಚುಮು ಚಳಿಯಲ್ಲಿ ನಮ್ಮ ಬೆಡ್ ರೂಮಿನಲ್ಲಿ ನನ್ನೊಡನೆ ಮಲಗಿದ್ದ ನನ್ನ ಪತ್ನಿ ನೀಡಿದ ಆ ಸುಂದರ ಮುತ್ತಿನ ಸ್ಪರ್ಶ ನನ್ನನ್ನು ಎಚ್ಚರಿಸಿತು. ನಾನೂ ಬಾಗಿ ಆಕೆಯನ್ನು ತಬ್ಭಿ ಪ್ರತಿ ಮುತ್ತನ್ನು ನೀಡಿದೆ. ಮಧ್ಯದಲ್ಲಿ ನನ್ನನ್ನು ಬಿಗಿಯಾಗಿ ತಬ್ಬಿಕೊಂಡು ಮಲಗಿದ್ದ ನಮ್ಮ ಪುಟ್ಟ ಕಂದ ಈ ಕದಲುವಿಕೆಯಿಂದ ಕಣ್ಣು ಬಿಟ್ಟಿತು. ತನ್ನ ಕತ್ತನ್ನು ಪಕ್ಕಕ್ಕೆ ಹೊರಳಿಸಿ ಅವರ ಅಮ್ಮನನ್ನು ತದೇಕಚ್ಚಿತ್ತದಿಂದ ನೋಡಿತು. ಅಮ್ಮ ಆ ಮಗುವಿಗೂ ಒಂದು ಮುತ್ತು ನೀಡಿ ಎದ್ದು ಹೊರ ನಡೆಯಿತು. ಪುಟ್ಟ ಕಂದ ಮತ್ತೆ ನನ್ನನ್ನು ಬಾಚಿ ತಬ್ಬಿಕೊಂಡು ನಿದ್ದೆಗೆ ಜಾರಿತು. ಇಂದು ಭಾನುವಾರ. ಹಾಗೇ ಆ ಮಗುವನ್ನೂ, ಕಿಟಕಿಯಾಚೆಯ ತುಂತುರು ಸೋನೆ ಮಳೆಯನ್ನು ದಿಟ್ಟಿಸುತ್ತಾ…

ಮುಂದೆ ಓದಿ..
ಚುನಾವಣೆ ಜಿಲ್ಲಾ ಪಂಚಾಯ್ತಿ ಪೂರ್ವ ಸಮೀಕ್ಷೆ ರಾಜಕೀಯ ಸುದ್ದಿ 

ಪಾವಗಡ ತಾಲ್ಲೂಕು 58-ಬ್ಯಾಡನೂರು ಜಿಲ್ಲಾ ಪಂಚಾಯ್ತಿ 2025 ರಲ್ಲಿ ಬೆಂಬಲಿಸುವ ಪಕ್ಷ?

You need to be logged in to view this content. Please Log In. Not a Member? Join Us

ಮುಂದೆ ಓದಿ..