ಅಂಕಣ 

ಮೊಸಳೆ ಹೊಸಹಳ್ಳಿಯ ಭೀಕರ ಅಪಘಾತ……..

Taluknewsmedia.com

Taluknewsmedia.comಮೊಸಳೆ ಹೊಸಹಳ್ಳಿಯ ಭೀಕರ ಅಪಘಾತ…….. ಭಾರತ ದೇಶದಲ್ಲಿ ಅತ್ಯಂತ ತುರ್ತಾಗಿ ಆಗಬೇಕಾಗಿರುವ ಕೆಲಸಗಳಲ್ಲಿ ಈ ಕ್ಷಣದ ಪ್ರಮುಖ ವಿಷಯವೆಂದರೆ ವಾಹನ ಚಾಲನಾ ಪರವಾನಗಿ ನೀಡುವ ರೀತಿ ನೀತಿ ನಿಯಮಗಳನ್ನು ಪುನರ್ ಪರಿಶೀಲಿಸಬೇಕಾಗಿದೆ. ಅದನ್ನು ಕೇವಲ ಆರ್ ಟಿ ಓ ಅಧಿಕಾರಿಗಳು ಮಾತ್ರ ನಿರ್ಧರಿಸುವ ಹಂತ ಮೀರಿ ಹೋಗಿದೆ. ಭಾರತದಲ್ಲಿ ಸರಾಸರಿ ಪ್ರತಿ ಮೂರು ನಿಮಿಷಕ್ಕೆ ಒಬ್ಬರು ಅಪಘಾತದಿಂದ ಸಾಯುತ್ತಿದ್ದಾರೆ. ಇನ್ನೆಷ್ಟೋ ಜನ ಪ್ರತಿ ಕ್ಷಣ ಗಾಯಾಳುವಾಗಿ ಬದುಕನ್ನೇ ದುರಂತಮಯವಾಗಿಸಿಕೊಳ್ಳುತ್ತಿದ್ದಾರೆ. ಇದರ ಪರೋಕ್ಷ ಪರಿಣಾಮ ಅನೇಕ ಕುಟುಂಬಗಳು ತೊಂದರೆಗೆ ಸಿಲುಕಿವೆ. ಹಾಗೆಯೇ ದೇಶದ ಸಾಮಾಜಿಕ ಮತ್ತು ಆರ್ಥಿಕತೆಯ ಮೇಲೆ ಬಹಳ ದೊಡ್ಡ ದುಷ್ಪರಿಣಾಮ ಬೀರುತ್ತಿದೆ. ಜೊತೆಗೆ ರಸ್ತೆಯಲ್ಲಿ ಪ್ರಯಾಣಿಸುವ ವ್ಯಕ್ತಿಯ ಮಾನಸಿಕತೆಯೂ ಕುಸಿಯುತ್ತಿದೆ. ಏಕೆಂದರೆ ಮನೆಯಿಂದ ಆಚೆ ಹೋದ ವ್ಯಕ್ತಿ ಮತ್ತೆ ಮನೆಗೆ ವಾಪಸ್ ಬರುವವರೆಗೆ, ಅದರಲ್ಲೂ ಮುಖ್ಯವಾಗಿ ದೂರದ ಪ್ರಯಾಣವಿದ್ದಾಗ ಮನೆಯವರಿಗೆ ಎದೆ ಡವ ಡವ ಬಡಿದುಕೊಳ್ಳುತ್ತಿರುತ್ತದೆ.…

ಮುಂದೆ ಓದಿ..
ಅಂಕಣ 

ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17………

Taluknewsmedia.com

Taluknewsmedia.comಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17……… ನನ್ನ ದೃಷ್ಟಿಯಲ್ಲಿ ವೈಯಕ್ತಿಕವಾಗಿ ಕಲ್ಯಾಣ ಕರ್ನಾಟಕ ಇನ್ನೂ ಶಾಪಗ್ರಸ್ತವಾಗೇ ಇದೆ. ಸ್ವಾತಂತ್ರ್ಯ ಹೊರತುಪಡಿಸಿ ಜೀವನಮಟ್ಟ ಸುಧಾರಣೆಯ ವಿಮೋಚನೆ ತೃಪ್ತಿಕರವಾಗಿಲ್ಲ….. ಇದನ್ನು ಅರ್ಥಮಾಡಿಕೊಳ್ಳಲು ಕರ್ನಾಟಕದ ಭೌಗೋಳಿಕ ಪ್ರದೇಶಗಳ ಚಿತ್ರಣದ ಮಾಹಿತಿ ಬೇಕಾಗುತ್ತದೆ….. ಭಾರತದ ಶ್ರೀಮಂತ ರಾಜ್ಯಗಳಲ್ಲಿ ಕರ್ನಾಟಕ ಅತ್ಯಂತ ಪ್ರಮುಖವಾದದ್ದು. GST ಸಂಗ್ರಹದಲ್ಲಿ ದೇಶದ ಎರಡನೇ ಅತಿದೊಡ್ಡ ಕೊಡುಗೆ ನೀಡುತ್ತಿದೆ. ಇಲ್ಲಿನ ಶಾಸಕರ ಸರಾಸರಿ ಆದಾಯ ದೇಶದಲ್ಲೇ ಅತಿ ಹೆಚ್ಚು. ಕರ್ನಾಟಕದ ರಾಜಧಾನಿ ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿದೆ. ಕರ್ನಾಟಕವನ್ನು ಸರಳವಾಗಿ ಇಲ್ಲಿನ ಭೌಗೋಳಿಕತೆಯ ಆಧಾರದ ಮೇಲೆ ಐದು ವಿಭಾಗಗಳಾಗಿ ವಿಂಗಡಿಸಬಹುದು….1) ಮಲೆನಾಡು ಕರ್ನಾಟಕ2) ಮೈಸೂರು ಕರ್ನಾಟಕ3) ಕರಾವಳಿ ಕರ್ನಾಟಕ4) ಕಿತ್ತೂರು (ಮುಂಬಯಿ) ಕರ್ನಾಟಕ5) ಕಲ್ಯಾಣ (ಹೈದರಾಬಾದ್) ಕರ್ನಾಟಕ. ಗಾಳಿ ನೀರು ಆಹಾರ ಶಿಕ್ಷಣ ಆರೋಗ್ಯ ಸಾರಿಗೆ ಸಂಪರ್ಕ ರಸ್ತೆ ಮನೆ ಪ್ರಾಕೃತಿಕ ವಾತಾವರಣ…

ಮುಂದೆ ಓದಿ..
ಅಂಕಣ 

ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ದ್ವೇಷ ಭಾಷಣಗಳು – ಬರಹಗಳು……..

Taluknewsmedia.com

Taluknewsmedia.comಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ದ್ವೇಷ ಭಾಷಣಗಳು – ಬರಹಗಳು…….. ಸುಪ್ರೀಂ ಕೋರ್ಟ್ ಸಹ ಈ ವಿಷಯದಲ್ಲಿ ಗೊಂದಲದಲ್ಲಿದೆ.ಅದರಲ್ಲಿ ಆಶ್ಚರ್ಯವೂ ಇಲ್ಲ. ಬಹುಶಃ ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದರ ಅರ್ಥವನ್ನು ಸ್ಪಷ್ಟವಾಗಿ ಹೇಳುವುದು ಸಾಧ್ಯವೇ ಇಲ್ಲ. ಅದನ್ನು ಅನೇಕ ಷರತ್ತುಗಳಿಗೆ ಅನ್ವಯಿಸಿ ಹೇಳಬೇಕಾಗುತ್ತದೆ……… ನಮ್ಮ ಅಭಿಪ್ರಾಯ ಏನಿದೆಯೋ ಅದನ್ನು ಮುಕ್ತವಾಗಿ ವ್ಯಕ್ತಪಡಿಸುವ ಸ್ವಾತಂತ್ರ್ಯವನ್ನು ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಕರೆಯಬಹುದೇ ? ಹಾಗಾದರೆ,ಒಬ್ಬ ಸಕ್ಕರೆ ಕಹಿಯಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಬಹುದು, ಇನ್ನೊಬ್ಬ ಕಾಗೆ ಬೆಳ್ಳಗಿದೆ ಎನ್ನಬಹುದು, ಮತ್ತೊಬ್ಬ ಜಾತಿಯೇ ಶ್ರೇಷ್ಠ ಎಂದು ಹೇಳಬಹುದು, ಮಗದೊಬ್ಬ ಆ ಪಕ್ಷ ದೇಶ ದ್ರೋಹಿ ಎನ್ನಬಹುದು, ಇನ್ಯಾರೋ ಮಹಿಳೆಯರು ಸ್ವಾತಂತ್ರ್ಯಕ್ಕೆ ಅರ್ಹರಲ್ಲ ಎನ್ನಬಹುದು, ಮತ್ತೊಬ್ಬ ಅಧಿಕಾರಿಗಳೆಲ್ಲಾ ಭ್ರಷ್ಟರು ಎನ್ನಬಹುದು, ಮತ್ಯಾರೋ ಯುವಕರೆಲ್ಲಾ ಕೆಟ್ಟವರು ಎನ್ನಬಹುದು, ಅವರ್ಯಾರೋ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದ ಬಗ್ಗೆ ಇನ್ನೇನೋ ಹೇಳಬಹುದು, ಹೀಗೆ ನಾನಾ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿ ಅದು ನನಗಿರುವ ಅಭಿವ್ಯಕ್ತಿ…

ಮುಂದೆ ಓದಿ..
ಸುದ್ದಿ 

ಕರ್ನಾಟಕ ರತ್ನ ಪ್ರಶಸ್ತಿ ವಿಜೇತರ ಪಟ್ಟಿಯನ್ನೊಮ್ಮೆ ಗಮನಿಸಿ……..

Taluknewsmedia.com

Taluknewsmedia.comಕರ್ನಾಟಕ ರತ್ನ…….. ಕರ್ನಾಟಕ ರತ್ನ ಪ್ರಶಸ್ತಿ ವಿಜೇತರ ಪಟ್ಟಿಯನ್ನೊಮ್ಮೆ ಗಮನಿಸಿ…….. ರಾಷ್ಟ್ರಕವಿ ಕುವೆಂಪು, ( ಸಾಹಿತ್ಯ)ಡಾಕ್ಟರ್ ರಾಜ್ ಕುಮಾರ್, ( ಸಿನಿಮಾ )ಶ್ರೀ ಎಸ್. ನಿಜಲಿಂಗಪ್ಪ,( ರಾಜಕೀಯ)ಡಾಕ್ಟರ್ ಸಿಎನ್ಆರ್ ರಾವ್,( ವಿಜ್ಞಾನ )ಡಾಕ್ಟರ್ ದೇವಿ ಶೆಟ್ಟಿ,( ವೈದ್ಯಕೀಯ)ಶ್ರೀ ಭೀಮ್ ಸೇನ್ ಜೋಶಿ,( ಸಂಗೀತ )ಸಿದ್ದಗಂಗೆಯ ಶ್ರೀಗಳಾದ ಶಿವಕುಮಾರ ಸ್ವಾಮಿ,( ಧಾರ್ಮಿಕ – ಸಮಾಜ ಸೇವೆ )ಶ್ರೀ ದೇ. ಜವರೇಗೌಡ,( ಸಾಹಿತ್ಯ }ಶ್ರೀ ವೀರೇಂದ್ರ ಹೆಗ್ಗಡೆ,( ಧಾರ್ಮಿಕ – ಸಮಾಜ ಸೇವೆ )ಶ್ರೀ ಪುನೀತ್ ರಾಜಕುಮಾರ್,( ಸಿನಿಮಾ )ಶ್ರೀ ವಿಷ್ಣುವರ್ಧನ್,( ಸಿನಿಮಾ )ಶ್ರೀಮತಿ ಬಿ. ಸರೋಜಾ ದೇವಿ,( ಸಿನಿಮಾ )………… ಇದರಲ್ಲಿ ಸಿನಿಮಾ ಕ್ಷೇತ್ರಕ್ಕೆ ಸೇರಿದ ನಾಲ್ಕು ಜನ, ಧಾರ್ಮಿಕ, ಸಮಾಜ ಸೇವಾ ಕ್ಷೇತ್ರಕ್ಕೆ ಸೇರಿದ ಇಬ್ಬರು, ಸಾಹಿತ್ಯ ಕ್ಷೇತ್ರದ ಇಬ್ಬರು, ರಾಜಕೀಯ, ಸಂಗೀತ, ವಿಜ್ಞಾನ ಮತ್ತು ವೈದ್ಯಕೀಯ ಕ್ಷೇತ್ರದ ತಲಾ ಒಬ್ಬರು ಸೇರಿ ಒಟ್ಟು 12 ಜನರಿಗೆ…

ಮುಂದೆ ಓದಿ..
ಸುದ್ದಿ 

ನೇಪಾಳದ ದಂಗೆ……

Taluknewsmedia.com

Taluknewsmedia.comನೇಪಾಳದ ದಂಗೆ…… ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ ಚಟುವಟಿಕೆಗಳು, ಹೆಚ್ಚುತ್ತಿರುವ ಪ್ರಾಕೃತಿಕ ವೈಪರೀತ್ಯಗಳು ಮತ್ತು ಮುಖ್ಯವಾಗಿ ಸಣ್ಣ ದೇಶಗಳಲ್ಲಿ ಜನ ಅಸಮಾಧಾನಗೊಂಡು ದಂಗೆಯ ಸ್ವರೂಪದ ಗಲಭೆಗಳಾಗುತ್ತಿರುವುದನ್ನು ಗಮನಿಸಬಹುದು. ಮಧ್ಯಕಾಲೀನ ಯುಗದತ್ತ ಜಾಗತಿಕ ವಿದ್ಯಮಾನಗಳು ಚಲಿಸುತ್ತಿವೆ.ಪುರಾತನ ಕಾಲದಲ್ಲಿ ಮನುಷ್ಯ ಅನಾಗರಿಕನಾಗಿದ್ದು ನಾಗರೀಕ ಪ್ರಪಂಚಕ್ಕೆ ಮರಳಿದ ಮೇಲೆ ಬಹುತೇಕ ಎಲ್ಲ ನಾಗರಿಕತೆಗಳು ಒಂದಷ್ಟು ನೆಮ್ಮದಿಯಿಂದ ಬದುಕನ್ನು ಕಟ್ಟಿಕೊಂಡಿದ್ದವು. ಹಲವು ಯುದ್ಧಗಳು, ಅಕ್ರಮಣಗಳು ನಡೆಯುತ್ತಿದ್ದವು. ಆದರೆ ಇತಿಹಾಸದ ದಾಖಲೆಗಳ ಪ್ರಕಾರ ಅವುಗಳ ಪ್ರಮಾಣ ಕಡಿಮೆ ಇತ್ತು. ತಾನು ತನ್ನ ಸುರಕ್ಷತೆಗಾಗಿ ಮಾತ್ರ ರಕ್ಷಣಾತ್ಮಕವಾಗಿ ಹೋರಾಡುತ್ತಿದ್ದ….. ಆದರೆ ಮಧ್ಯಕಾಲೀನ ಯುಗದಲ್ಲಿ ವಿಶ್ವದ ಬಹುತೇಕ ನಾಗರಿಕತೆಗಳಲ್ಲಿ ಹಿಂಸೆ ತಾಂಡವವಾಡುತ್ತಿತ್ತು. ಮನುಷ್ಯನ ವಿಸ್ತರಣಾ ಸ್ವಭಾವ ಮತ್ತು ತನ್ನ ಅಹಂ ಎಲ್ಲೆ ಮೀರಿತ್ತು. ಎಲ್ಲೆಲ್ಲಿಯೂ ರಕ್ತದ ಕೋಡಿಗಳು ಹರಿದವು. ಹತ್ತೊಂಬತ್ತನೆಯ ಶತಮಾನದ…

ಮುಂದೆ ಓದಿ..
ಅಂಕಣ 

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

Taluknewsmedia.com

Taluknewsmedia.comಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ…… ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ, ಯಾವುದೇ ಪ್ರತಿಕ್ರಿಯೆ ನೀಡದೆ ನಮ್ಮ ಪಾಡಿಗೆ ನಾವಿದ್ದರೆ ಖಂಡಿತವಾಗಲೂ ಮುಂದಿನ ದಿನಗಳು ನಮ್ಮ ಬುಡಕ್ಕೆ ಈ ಸಮಸ್ಯೆ ಬರಬಹುದು. ಏಕೆಂದರೆ ಇತ್ತೀಚಿನ ವರ್ಷಗಳಲ್ಲಿ ಗಣೇಶೋತ್ಸವದ ಗಲಭೆಗಳು ಸಾಮಾನ್ಯವಾಗುತ್ತಿದೆ. ಅದರ ಅರ್ಥ ಮನಸ್ಸುಗಳು ಧರ್ಮದ ಆಧಾರದ ಮೇಲೆ ಒಡೆದು ಹೋಗುತ್ತಿದೆ. ಇದಕ್ಕೆ ಆ ಕ್ಷಣದ ಆ ಘಟನೆಯಾ ಮೇಲೆ ಚರ್ಚೆ ಮಾಡಿಕೊಂಡು ಒಂದು ನಿರ್ಧಾರಕ್ಕೆ ಬರುವುದು ತೀರ ಬಾಲಿಶವಾದದ್ದು. ವ್ಯವಸ್ಥೆ ಮತ್ತು ಅದು ಸಾಗುತ್ತಿರುವ ದಿಕ್ಕನ್ನು ನಾವು ಸೂಕ್ಷ್ಮವಾಗಿ ಅವಲೋಕಿಸಬೇಕಿದೆ. ನಮ್ಮನ್ನು ಕಾಪಾಡಬೇಕಾಗಿದ್ದ ದೇವರು, ನಮ್ಮನ್ನು ರಕ್ಷಿಸಿ ಕ್ರಮಬದ್ಧ ಜೀವನಶೈಲಿ ರೂಪಿಸಬೇಕಾಗಿದ್ದ ಧರ್ಮಗಳು ಇಂದು ನಮ್ಮನ್ನು ವಿಭಜಿಸಿರುವುದು ಮಾತ್ರವಲ್ಲದೆ ದೇವರು ಧರ್ಮವನ್ನು ಉಳಿಸಬೇಕಾದ ಪರಿಸ್ಥಿತಿ…

ಮುಂದೆ ಓದಿ..
ಅಂಕಣ 

ಪೂರ್ಣ ಚಂದ್ರ ತೇಜಸ್ವಿ…………

Taluknewsmedia.com

Taluknewsmedia.comಪೂರ್ಣಚಂದ್ರತೇಜಸ್ವಿ………… ಕಾಡು ನೆನಪಾದಾಗ ಕಾಡುವ ತೇಜಸ್ವಿ……… ಕನ್ನಡ ಚಿತ್ರರಂಗದಲ್ಲಿ ಶಂಕರ್ ನಾಗ್ ಈಗಲೂ ಏನೋ ಮೋಡಿ ಮಾಡಿದಂತೆ ಎಲ್ಲರನ್ನೂ ಆಕರ್ಷಿಸುತ್ತಾರೆ. ಇತ್ತೀಚೆಗೆ ಪುನೀತ್ ರಾಜಕುಮಾರ್ ಆ ಸ್ಥಾನಕ್ಕೆ ಬಂದಿದ್ದಾರೆ. ಹಾಗೆಯೇ ನನಗೆ ಕನ್ನಡ ಸಾಹಿತ್ಯದಲ್ಲಿ ತೇಜಸ್ವಿಯವರು ಸಹ ಅದೇರೀತಿ ಓದುಗರಲ್ಲಿ ಮೋಡಿ ಮಾಡಿದ್ದಾರೆ. ಇದು ಅವರ ನಡುವಿನ ಹೋಲಿಕೆಯಲ್ಲ. ಇಬ್ಬರದೂ ಬೇರೆ ಬೇರೆ ಕ್ಷೇತ್ರ. ಜನಾಕರ್ಷಣೆಯ ದೃಷ್ಟಿಯಿಂದ ಮಾತ್ರ ಹೇಳಿದ್ದು. ಕನ್ನಡ ಸಾಹಿತ್ಯದಲ್ಲಿ ಆಗಿನ ಸಂದರ್ಭದಲ್ಲಿ ಸಾಕ್ಷಿ ಪ್ರಜ್ಞೆಯಂತಿದ್ದ, ಸ್ವತಃ ಉತ್ತಮ ಬರಹಗಾರರಾಗಿದ್ದರೂ ಲಂಕೇಶ್ ಅವರು ತೇಜಸ್ವಿ ಬರಹಗಳ ಬಗ್ಗೆ ಬರೆಯುತ್ತಾ, ಅವರ ಬರಹದ ಬಗ್ಗೆ ನನಗೆ ಈಗಲೂ ಅಸೂಯೆ ಕಾಡುತ್ತದೆ. ಹಾಗೆ ಬರೆಯಲು ನನಗೂ ಸಾಧ್ಯವಾಗುತ್ತಿಲ್ಲ ಎಂಬ ಅರ್ಥದಲ್ಲಿ ಅವರನ್ನು ಹೊಗಳುತ್ತಾರೆ. ಸಾಹಿತ್ಯದ ಸಹಜತೆ ಕಾಪಾಡುತ್ತಾ, ಬದುಕಿನ ಸ್ವಾಭಾವಿಕತೆಯನ್ನು ತನ್ನ ನಡವಳಿಕೆಯಾಗಿ ರೂಪಿಸಿಕೊಂಡು ಅದನ್ನು ಅಕ್ಷರಗಳಿಗೆ ಇಳಿಸಿ ಸಾಮಾನ್ಯ ಓದುಗರ ಮನದಲ್ಲಿ ಮನೆ ಮಾಡಿದ ಅಪರೂಪದ…

ಮುಂದೆ ಓದಿ..
ಅಂಕಣ 

ಮನೆ ಖರೀದಿ ಬದುಕನ್ನೇ ಮಾರಾಟ ಮಾಡಿದಂತೆ……….

Taluknewsmedia.com

Taluknewsmedia.comಮನೆ ಖರೀದಿ ಬದುಕನ್ನೇ ಮಾರಾಟಮಾಡಿದಂತೆ………. ಸಾಲದ ಇನ್ನೊಂದು ಮುಖ….. ಸ್ವಂತ ಮನೆಯ ಸುಖ ಮತ್ತು ಸಾಲದ ಶೂಲ…… ಅಗತ್ಯವಾದಷ್ಟು ಹಣ ಇದ್ದವರಿಗೆ ಇದು ಅನ್ವಯಿಸುವುದಿಲ್ಲ…. ” 20 ವರ್ಷಗಳ ಅವಧಿಯ ಕಂತುಗಳಲ್ಲಿ ಒಂದು ಮನೆಯನ್ನು ನೀವು ಖರೀದಿಸಿದರೆ 20 ವರ್ಷಗಳ ನಂತರ ಆ ಸಾಲವನ್ನು ತೀರಿಸಿದ ಮೇಲೆ ಆ ಮನೆ ನಿಮ್ಮ ಸ್ವಂತದ್ದಾಗುತ್ತದೆ. ನಿಮ್ಮ ದೃಷ್ಟಿಯಲ್ಲಿ ಆ ಮನೆಯನ್ನು ನೀವು ಖರೀದಿಸಿದ್ದೀರಿ. ಆದರೆ ಸೂಕ್ಷ್ಮವಾಗಿ ಗಮನಿಸಿದರೆ ವಾಸ್ತವದಲ್ಲಿ ಆ ಮನೆ ನಿಮ್ಮನ್ನು ಖರೀದಿಸಿರುತ್ತದೆ “ ಆಸ್ಟ್ರೇಲಿಯಾದ ಉದ್ಯಮಿಯೊಬ್ಬರ ಅನುಭವದ ನುಡಿಗಳು…… ಭಾರತದ ಮಧ್ಯಮ ವರ್ಗದ ಜನರ ಬದುಕಿಗೆ ಇದು ಅತ್ಯಂತ ಹತ್ತಿರವಾಗಿದೆ. ಕೆಲವು ದಶಕಗಳ ಹಿಂದೆ ಸಾಮಾನ್ಯವಾಗಿ ಬಹುತೇಕ ಸರ್ಕಾರಿ ಉದ್ಯೋಗಿಗಳು ಮತ್ತು ಕೆಲವು ಖಾಸಗಿ ಕಂಪನಿಗಳ ಉದ್ಯೋಗಿಗಳು ಹಾಗು ಕೆಲವು ಯಶಸ್ವಿ ಉದ್ಯಮಿಗಳು ಸುಮಾರು 50/60 ರ‌ ವಯಸ್ಸಿನ ಆಸುಪಾಸಿನಲ್ಲಿ ಅಂದರೆ ನಿವೃತ್ತಿಯ ಸಮೀಪದಲ್ಲಿ ಒಂದು…

ಮುಂದೆ ಓದಿ..
ಅಂಕಣ 

ಚಂದ್ರ ಗ್ರಹಣ, ಅಲ್ಲ ರಕ್ತ ಚಂದ್ರ ಗ್ರಹಣ, ಅಲ್ಲ ಖಗ್ರಾಸ ಚಂದ್ರ ಗ್ರಹಣ, ಅಲ್ಲ ರಾಹು ಕೇತು ಶನಿ ಪ್ರವೇಶಿದ ಕಾಟ………

Taluknewsmedia.com

Taluknewsmedia.comಎಚ್ಚರಿಕೆ…. ಎಚ್ಚರಿಕೆ…. ಎಚ್ಚರಿಕೆ…… ಚಂದ್ರ ಗ್ರಹಣ, ಅಲ್ಲ ರಕ್ತ ಚಂದ್ರ ಗ್ರಹಣ, ಅಲ್ಲ ಖಗ್ರಾಸ ಚಂದ್ರ ಗ್ರಹಣ, ಅಲ್ಲ ರಾಹು ಕೇತು ಶನಿ ಪ್ರವೇಶಿದ ಕಾಟ……… ಹೌದು,ರಕ್ತದ ಬಣ್ಣ ಕೆಂಪು,ಗ್ರಹಣದ ಪರಿಣಾಮ ಘೋರ,ರಕ್ತದ ಅರ್ಥ ಸಾವು ನೋವು.ಇದು ಭಯಂಕರ.ನಮ್ಮ ಕನಸಿನ ಚಂದಮಾಮ ರಕ್ತ ವರ್ಣದಲ್ಲಿ,ಇದು ಸಹಜ ಸ್ವಾಭಾವಿಕ ಅಲ್ಲ.ಇದು ಪ್ರಳಯದ ಮುನ್ಸೂಚನೆ….. ಅಲ್ಲೆಲ್ಲೋ ಭೂಕಂಪ, ಇನ್ನೆಲ್ಲೋ ಸುನಾಮಿ, ಮತ್ತೆಲ್ಲೋ ಅಗ್ನಿಯ ನರ್ತನ, ಮಗದೆಲ್ಲೋ ಮೇಘ ಸ್ಪೋಟ, ಅಪಘಾತ, ಅಪರಾಧ, ಅನಾರೋಗ್ಯ, ಬಾಂಬ್ ಸ್ಪೋಟ ಪ್ರಖ್ಯಾತರ ಸಾವು,ಅಬ್ಬಬ್ಬಾ………… ನಿಮ್ಮ ರಾಶಿ ಯಾವುದು,ಅದಕ್ಕೆ ಅನುಗುಣವಾಗಿ ಗ್ರಹಣದ ಪರಿಣಾಮ ನಿಮ್ಮ ಮೇಲೆ. ಭಯವಾಗುತ್ತಿದೆಯೇ……. ಆದರೂ ಇದಕ್ಕೆ ಪರಿಹಾರವೂ ಇದೆ.ಹೋಮ, ಹವನ, ಮಂತ್ರ ತಂತ್ರಗಳನ್ನು ಮಾಡಿ,ಜಪ ತಪ ವ್ರತಗಳನ್ನು ಮಾಡಿ,ನೇಮ ನಿಷ್ಠೆಗಳಿಂದ ಇದ್ದರೆ ಇದರ ಪರಿಣಾಮದ ತೀವ್ರತೆ ಕಡಿಮೆಯಾಗುತ್ತದೆ………. ಇದು ನಿಜವೇ ? ಸುಳ್ಳೇ ? ನಂಬಿಕೆಯೇ ? ಮೂಲ ನಂಬಿಕೆಯೇ ?…

ಮುಂದೆ ಓದಿ..
ಅಂಕಣ ಸುದ್ದಿ 

ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ……

Taluknewsmedia.com

Taluknewsmedia.comಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ…… ಒಂದು ವೇಳೆ ಶ್ರೀಮತಿ ಭಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸಿದರೆ ಏನಾಗಬಹುದು ಅಥವಾ ಅವರು ಉದ್ಘಾಟಿಸದಿದ್ದರೆ ಏನಾಗಬಹುದು…….. ತುಂಬಾ ತುಂಬಾ ತಲೆಕೆಡಿಸಿಕೊಂಡು ವಾದ ವಿವಾದ ಮಾಡುತ್ತಿರುವವರಿಗಾಗಿ…. ಉದ್ಘಾಟಿಸಿದರೆ ವೈಯಕ್ತಿಕ ಮಟ್ಟದಲ್ಲಿ ಭಾನು ಮುಷ್ತಾಕ್ ಅವರಿಗೆ ಪ್ರಖ್ಯಾತಿಯ ಸಂತೋಷ ಮತ್ತು ಬದುಕಿನ ಸಾರ್ಥಕತೆಯ ಭಾವ ಉಂಟಾಗಬಹುದು. ಹಾಗೆಯೇ ರಾಜಕೀಯ ಪಕ್ಷಗಳಿಗೆ ಒಂದಷ್ಟು ಜನಾಭಿಪ್ರಾಯದ ಲಾಭ – ನಷ್ಟ ಆಗಬಹುದು. ಅದನ್ನು ಹೊರತುಪಡಿಸಿ ಯಾವುದೇ ರೀತಿಯ ಸಾಮಾನ್ಯ ವ್ಯಕ್ತಿಯ ಬದುಕಿನಲ್ಲಿ ಯಾವ ವ್ಯತ್ಯಾಸವೂ ಆಗುವುದಿಲ್ಲ. ಏಕೆಂದರೆ ಭಾನು ಮುಷ್ತಾಕ್ ಎನ್ನುವ ಮಹಿಳೆ ನಿಸರ್ಗದ ಒಂದು ಜೀವಿ. ನಿಸರ್ಗಕ್ಕೆ ಆಕೆ ಹಿಂದು, ಮುಸ್ಲಿಮ, ಹೆಣ್ಣು, ಗಂಡು ಎಂಬ ಯಾವ ಅರಿವೂ ಇರುವುದಿಲ್ಲ. ಉದ್ಘಾಟನೆಯ ವಿಧಾನ ಮತ್ತು ಅದಕ್ಕೆ ಬಳಸಬಹುದಾದ ಹೂವು, ಹಣ್ಣು, ಅರಿಶಿನ, ಕುಂಕುಮ, ಪೂಜೆ, ಮಂತ್ರ, ಅಜಾನ್, ಖುರಾನ್ ಪಠಣ,…

ಮುಂದೆ ಓದಿ..