ಅಂಕಣ 

ಅಂತರಂಗದ ಗೆಳೆಯ ಗಣೇಶನಿಗೆ ಆತ್ಮೀಯ ಪತ್ರ………

Taluknewsmedia.com

Taluknewsmedia.comಅಂತರಂಗದ ಗೆಳೆಯ ಗಣೇಶನಿಗೆ ಆತ್ಮೀಯ ಪತ್ರ……… ಗೆಳೆಯ ಗಣೇಶ ನಿನಗೆ ಹಬ್ಬದ ಶುಭಾಶಯಗಳು……….‌‌ ಹೃದಯದ ಸ್ನೇಹಿತ ಗಣೇಶ, ಹೇಗಿದ್ದೀಯಾ ?ನಿನ್ನ ಹೊಟ್ಟೆ ನೋಡಿದರೆ ತುಂಬಾ ಆರಾಮವಾಗಿ ಇರಲೇಬೇಕು ಅನಿಸುತ್ತಿದೆ. ನಿನಗೇನು ಕಡಿಮೆ ಗೆಳೆಯ,100 ಕೋಟಿಗೂ ಹೆಚ್ಚು ಜನ ಪ್ರತಿನಿತ್ಯ ಭಕ್ಷ್ಯಬೋಜನಗಳನ್ನು ಉಣಬಡಿಸುತ್ತಾರೆ. ವರ್ಷಕ್ಕೊಮ್ಮೆ ನಿನ್ನನ್ನು ಹಾಡಿ ಹೊಗಳಿ ಬೀದಿಬೀದಿಗಳಲ್ಲಿ ಕುಣಿದು ಕುಪ್ಪಳಿಸುತ್ತಾರೆ.ನೀನು ಅದರಲ್ಲಿ ಮೈಮರೆತು ನಮ್ಮನ್ನು ಮರೆತಿರಬಹುದು. ಅದನ್ನು ನೆನಪಿಸುವ ಸಲುವಾಗಿಯೇ ಮತ್ತು ಇಲ್ಲಿನ ನಿಜ ಸ್ಥಿತಿ ನಿನಗೆ ತಿಳಿಸಲು ಈ ಪತ್ರ ಬರೆಯುತ್ತಿದ್ದೇನೆ. ಗೆಳೆಯ,ನಮ್ಮ ಜನ ನಿನ್ನನ್ನು ತುಂಬಾ ಪ್ರೀತಿಸುತ್ತಾರೆ. ನಿನ್ನನ್ನು ಕಂಡರೆ ಅವರಿಗೆ ಅಪಾರ ಅಭಿಮಾನ – ಬಹಳ ಭಕ್ತಿ. ನಮ್ಮ ಗಣೇಶ ನಮ್ಮೆಲ್ಲಾ ಕಷ್ಟ ಪರಿಹರಿಸುವ ವಿಘ್ನ ವಿನಾಯಕ ಎಂದು ನಂಬಿದ್ದಾರೆ.ಅನೇಕ ಹೆಸರುಗಳಿಂದ ನಿನ್ನನ್ನು ಕರೆಯುತ್ತಾರೆ. ಎಲ್ಲಾ ಶುಭ ಕಾರ್ಯಗಳಲ್ಲಿ ನಿನಗೇ ಅಗ್ರ ಪೂಜೆ. ಒಂಥರಾ ಎಲ್ಲರಿಗೂ ನೀನೇ ಬಾಸ್. ಆದರೆ ಗೆಳೆಯ,ನನ್ನ…

ಮುಂದೆ ಓದಿ..
ಅಂಕಣ 

ಸಮಾಜ ಸೇವೆ ಎಂದರೇನು ?

Taluknewsmedia.com

Taluknewsmedia.comಸಮಾಜ ಸೇವೆ ಎಂದರೇನು ? ನಿಸ್ವಾರ್ಥವೇ ?ತ್ಯಾಗವೇ ?ಸ್ವಾರ್ಥದ ಮುಖವಾಡವೇ ?ವೃತ್ತಿಯೇ ?ಹವ್ಯಾಸವೇ ?ಕರ್ತವ್ಯವೇ ?ವ್ಯಾಪಾರ ವ್ಯವಹಾರವೇ ?ಅಧಿಕಾರ ಹಣ ಪ್ರಚಾರದ ಮೋಹವೇ ?ಪಲಾಯನ ಮಾರ್ಗವೇ ?ನಾಯಕತ್ವದ ಪ್ರದರ್ಶನವೇ ?ಕೆಲಸವಿಲ್ಲದವರ ಅನಾವಶ್ಯಕ ಓಡಾಟವೇ ?ಹೊಟ್ಟೆ ಪಾಡಿನ ದಾರಿಯೇ ?ಬುದ್ದಿಯ ತೋರ್ಪಡಿಕೆಯೇ ?ಮನಸ್ಸಿನ ಅಹಂನ ತಣಿಸುವಿಕೆಯೇ ?ಜೀವನದ ಸಾಧನೆಯೇ ?ಅನುಭವದ ವಿಸ್ತರಣೆಯೇ ?ಜ್ಞಾನದ ಹಂಚಿಕೆಯೇ ?ಅಧ್ಯಾತ್ಮಿಕ ಧಾರ್ಮಿಕ ಉದ್ದೇಶವೇ ?ಬದುಕಿನ ಸಾರ್ಥಕತೆಯೇ ?ನಿರ್ಭಾವುಕ ಮನಸ್ಥಿತಿಯೇ ? ಹೀಗೆ ಹಲವಾರು ಪ್ರಶ್ನೆಗಳು ಹುಟ್ಟುತ್ತವೆ. ಸಮಾಜ ಸಂಕೀರ್ಣವಾದಷ್ಟು ಸಮಾಜ ಸೇವೆ ವಿವಿಧ ಅರ್ಥಗಳನ್ನು ಪಡೆಯುತ್ತಿದೆ. ಮದರ್ ತೆರೇಸಾ ಅವರನ್ನು ಸಮಾಜ ಸೇವೆಯ ಬಹುದೊಡ್ಡ ಆದರ್ಶ ಎಂದು ಪರಿಗಣಿಸಲಾಗುತ್ತದೆ. ಇತ್ತೀಚಿನ ಕೆಲವು ಧರ್ಮಾಧಾರಿತ ವ್ಯಕ್ತಿಗಳ ಮತಾಂತರ ಆರೋಪಗಳ ನಡುವೆಯೂ ಸಮಾಜ ಸೇವೆಗೆ ಇವರು ಒಂದು ಮಾದರಿ. ಕೊಲ್ಕತ್ತಾದ ಬೀದಿಗಳಲ್ಲಿ ಮಲಗಿದ್ದ ಅನಾಥ ಕುಷ್ಠರೋಗಿಗಳ ಸೇವೆಗೆ ಸ್ವಯಂ ಆಸಕ್ತಿಯಿಂದ ಮುಂದೆ ಬಂದು ಸೇವೆ ಸಲ್ಲಿಸುತ್ತಾ…

ಮುಂದೆ ಓದಿ..
ಅಂಕಣ 

ಕಳ್ಳ ಬೆಕ್ಕುಗಳು ಸಿಕ್ಕಿವೆ,ಗಂಟೆ ಕಟ್ಟೋಣ………

Taluknewsmedia.com

Taluknewsmedia.comಕಳ್ಳ ಬೆಕ್ಕುಗಳು ಸಿಕ್ಕಿವೆ,ಗಂಟೆ ಕಟ್ಟೋಣ……… 83 ವರ್ಷಗಳ ಹಿಂದೆ…… 1942 – ಆಗಸ್ಟ್ 9,ಬ್ರಿಟೀಷರೇ ಭಾರತ ಬಿಟ್ಟು ತೊಲಗಿ…..ಕ್ವಿಟ್ ಇಂಡಿಯಾ…… 2024 – ಆಗಸ್ಟ್ 9, ( ಇಂದು ಆಗಸ್ಟ್ 22 ಸ್ವಲ್ಪ ತಡವಾಗಿ)ಭ್ರಷ್ಟಾಚಾರಿಗಳೇ – ಜಾತಿವಾದಿಗಳೇ, ಧರ್ಮಾಂಧರೇ,ಮತಾಂಧರೇ,ಸಂವಿಧಾನ ವಿರೋಧಿಗಳೇ..‌ ನೀವು ಬದಲಾಗಿ – ಐಕ್ಯವಾಗಿ, ಇಲ್ಲವೇ ದೇಶ ಬಿಟ್ಟು ತೊಲಗಿ.ದಯವಿಟ್ಟು ಯಾವುದೇ ಕಾರಣಕ್ಕೂ ನಮಗೆ ತೊಂದರೆ ಕೊಡಬೇಡಿ. ನಾವು ಸಾಮಾನ್ಯ ಜನ. ನೀವು ಬದುಕಿ ನಮ್ಮನ್ನು ಬದುಕಲು ಬಿಡಿ…… ಹಾಗಾದರೆ ಯಾರು ಬದಲಾಗಬೇಕು ಮತ್ತು ಹೇಗೆ ಬದಲಾಗಬೇಕು…… 1) ಕೇಂದ್ರ ಮತ್ತು ರಾಜ್ಯದ ಸರ್ಕಾರಿ ಅಧಿಕಾರಿಗಳು ಮೊದಲು ಬದಲಾಗಬೇಕಿದೆ…. ಅದರಲ್ಲೂ ಮುಖ್ಯವಾಗಿ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯಗಳ ಲೋಕಸೇವಾ ಆಯೋಗದಿಂದ ಆಯ್ಕೆಯಾಗಿ ಉನ್ನತ ಅಧಿಕಾರದಲ್ಲಿರುವವರು, ಎಲ್ಲಾ ಗೆಜೆಟೆಡ್ ಶ್ರೇಣಿಯ ಅಧಿಕಾರಿಗಳು ಭ್ರಷ್ಟ ಮುಕ್ತರಾಗಿ ಸಂವಿಧಾನಾತ್ಮಕ ಅಧಿಕಾರ ಬಳಸಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಒಂದು ಕ್ರಾಂತಿಯೇ…

ಮುಂದೆ ಓದಿ..
ಅಂಕಣ 

ಧರ್ಮಸ್ಥಳದ ಶ್ರೀ ವಿರೇಂದ್ರ ಹೆಗಡೆಯವರಿಗೊಂದು ಬಹಿರಂಗ ಪತ್ರ…….

Taluknewsmedia.com

Taluknewsmedia.comಧರ್ಮಸ್ಥಳದ ಶ್ರೀ ವಿರೇಂದ್ರ ಹೆಗಡೆಯವರಿಗೊಂದು ಬಹಿರಂಗ ಪತ್ರ……. ಬೇವು ಬಿತ್ತಿ ಮಾವು ಬೆಳೆಯಲು ಸಾಧ್ಯವಿಲ್ಲ ಪದ್ಮ ವಿಭೂಷಣ, ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತ ಶ್ರೀಯುತ ಡಿ. ವೀರೇಂದ್ರ ಹೆಗಡೆಯವರೇ ಮತ್ತು ಆ ರೀತಿಯ ಕರ್ನಾಟಕದ ಮಹತ್ವದ ವ್ಯಕ್ತಿಗಳೇ……… ಕಳೆದ 75 ವರ್ಷಗಳ ಕರ್ನಾಟಕದ ಇತಿಹಾಸದಲ್ಲಿ ರಾಜಕೀಯ, ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಧರ್ಮಸ್ಥಳ ಮತ್ತು ಅದರ ಮುಖ್ಯಸ್ಥರಾದ ವೀರೇಂದ್ರ ಹೆಗಡೆಯವರ ಪಾತ್ರವೂ ಇದೆ. ಅದರಲ್ಲೂ ಮುಖ್ಯವಾಗಿ ಧಾರ್ಮಿಕ ಕೇಂದ್ರವಾಗಿ ಕರ್ನಾಟಕದಲ್ಲಿ ಧರ್ಮಸ್ಥಳ ಮುಂಚೂಣಿಯಲ್ಲಿದೆ. ದಿನಕ್ಕೆ ಕನಿಷ್ಠವೆಂದರು 20 ರಿಂದ 30,000 ಭಕ್ತಾದಿಗಳು, ವಾರಾಂತ್ಯ ಮತ್ತು ವಿಶೇಷ ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಅಲ್ಲಿ ಸೇರುತ್ತಾರೆ. ನಿಮ್ಮ ಸಂಸ್ಥೆ ಉಚಿತ ಊಟದ ವ್ಯವಸ್ಥೆಯ ಜೊತೆಗೆ, ಕಡಿಮೆ ಬೆಲೆಯ ವಸತಿ ಸೌಕರ್ಯವನ್ನು ಒದಗಿಸುತ್ತಿದೆ. ಅನೇಕ ಶಿಕ್ಷಣ ಸಂಸ್ಥೆಗಳನ್ನು, ವೈದ್ಯಕೀಯ ಸಂಸ್ಥೆಗಳನ್ನು ನಡೆಸುತ್ತಿದೆ. ಆರ್ಥಿಕ ಕ್ಷೇತ್ರದಲ್ಲಿಯೂ ತಾವು…

ಮುಂದೆ ಓದಿ..
ಅಂಕಣ 

ಬೆಳಗಿನ ವಾಯುವಿಹಾರದಲ್ಲಿ ಕಂಡದ್ದು……..

Taluknewsmedia.com

Taluknewsmedia.comಬೆಳಗಿನ ವಾಯುವಿಹಾರದಲ್ಲಿ ಕಂಡದ್ದು…….. ಎಂದಿನಂತೆ ಬೆಳಗಿನ 4 ಗಂಟೆಗೆ ಎದ್ದವನು ಅಂದಿನ ಬರಹಗಳನ್ನು ಬರೆದು Post ಮಾಡಿ 5/30 ಕ್ಕೆ ಸರಿಯಾಗಿ ಮನೆಯಿಂದ ಹೊರಟೆ….. ತುಂತುರು ಹನಿಗಳ ನಡುವೆ ತೂರಿಬಂದ ತಣ್ಣನೆಯ ಗಾಳಿ ಮೈಸೋಕಿಸಿ ರೋಮಾಂಚನ ಉಂಟುಮಾಡಿತು. ಆಹ್ಲಾದಕರ ವಾತಾವರಣ ಗಿಡಮರಗಳ ನಡುವಿನಿಂದ ತೂರಿಬಂದ ಪಕ್ಷಿಗಳ ಕಲರವ – ಮಂದಿರದಿಂದ ಭಕ್ತಿಗೀತೆ ಮಸೀದಿಯಿಂದ ನಮಾಜು, ಚರ್ಚಿನಿಂದ ಪ್ರಾರ್ಥನೆ ಮೂಡಿ ಬರುತ್ತಿದ್ದು ಸಂಗೀತದ ರಸಾನುಭವ ಮುದನೀಡಿತು……… ಬೆಳಗ್ಗೆ ಸೇವಿಸಿದ್ದ ಅಸ್ಸಾಂನ ರುಚಿ ರುಚಿಯಾದ ಮಸಾಲಾ ಟೀ ಸ್ವಾದ ಗಂಟಲಿನಿಂದ ಕೆಳಗಿಳಿದು ದೇಹ ಬೆಚ್ಚಗಾಗಿಸಿ ಸಂಭ್ರಮಿಸಿತು… ಹಾಗೇ ಸ್ವಲ್ಪ ದೂರ ನಡೆಯುತ್ತಿದ್ದಂತೆ ಒಂದು ರಸ್ತೆಯ ಬದಿಯಲ್ಲಿ ಸುಮಾರು 10/12 ವರ್ಷದ ಆಸುಪಾಸಿನ ಒಂದಷ್ಟು ಮಕ್ಕಳು ನಡುಗುವ ಚಳಿಯಲ್ಲೂ ಆ ದಿನದ ಪತ್ರಿಕೆಗಳನ್ನು ವಿಂಗಡಿಸಿ ಸೈಕಲ್ ಗೆ ಕಟ್ಟಿ ಗಡಿಬಿಡಿಯಲ್ಲಿ ಹೊರಡುವ ಆತುರದಲ್ಲಿದ್ದರು. ಅವರಿಗೆ ಸಿಗುವ ಸಂಬಳ ತಿಂಗಳಿಗೆ 500/1000 ಇರಬಹುದಷ್ಟೇ.ಎಷ್ಟೋ…

ಮುಂದೆ ಓದಿ..
ಅಂಕಣ 

ಸ್ವಚ್ಚಂದ – ಸ್ವತಂತ್ರ – ಮುಕ್ತ – ಬದುಕು.

Taluknewsmedia.com

Taluknewsmedia.comಸ್ವಚ್ಚಂದ – ಸ್ವತಂತ್ರ – ಮುಕ್ತ – ಬದುಕು. ” Looking ugly and madness is the ultimate status (Freedom ) of mind “ ” ಕುರೂಪ ಅಥವಾ ರೂಪವಂತರಲ್ಲವಾಗಿರುವುದು ಮತ್ತು ಹುಚ್ಚು ಮನಸ್ಥಿತಿ, ವ್ಯಕ್ತಿಯ ಪರಿಪೂರ್ಣ ಸ್ವಾತಂತ್ರ್ಯದ ಅಂತಿಮ ಹಂತ “ಎಂಬ ಅರ್ಥದ ಇಂಗ್ಲೀಷ್ ನಾಣ್ಣುಡಿಯೊಂದು ಬಹಳ ಹಿಂದೆ ಓದಿದ ನೆನಪು….. ವ್ಯಾವಹಾರಿಕ ಜಗತ್ತಿನಲ್ಲಿ ಇದು ಅಷ್ಟಾಗಿ ಅನ್ವಯವಾಗುವುದಿಲ್ಲ. ಏಕೆಂದರೆ ಇಲ್ಲಿ ಮುಖವಾಡಗಳೇ ಹೆಚ್ಚಿನ ಪ್ರಾಮುಖ್ಯತೆ ಪಡೆಯುತ್ತದೆ. ನಮ್ಮ ಎಲ್ಲ ಭಾವನೆಗಳನ್ನು ಸಹ ಮುಖವಾಡದ ಮರೆಯಲ್ಲಿಯೇ ವ್ಯಕ್ತಪಡಿಸಬೇಕು. ಕಾನೂನು, ನೈತಿಕತೆ, ಸಂಬಂಧಗಳು, ವ್ಯವಹಾರ, ಶಿಷ್ಟಾಚಾರ, ಕೊಳ್ಳುಬಾಕ ಸಂಸ್ಕೃತಿ ಎಲ್ಲವೂ ನಮ್ಮನ್ನು ಮುಖವಾಡದಲ್ಲಿ ಮರೆಮಾಚಿಕೊಳ್ಳಲು ಒತ್ತಡ ಹೇರುತ್ತದೆ. ಇಲ್ಲದಿದ್ದರೆ ಬದುಕು ನಡೆಯುವುದೇ ಇಲ್ಲ…. ಆದರೆ ನಿಜವಾದ ಸ್ವಚ್ಛಂದ ಮಾನಸಿಕ ಸ್ವಾತಂತ್ರ್ಯ ದೇವರು ಧರ್ಮದ ಹಂಗಿಲ್ಲದ, ಆಧ್ಯಾತ್ಮಿಕ ಸ್ಥಿತಪ್ರಜ್ಞತೆಯ ಭಾವದಲ್ಲಿ ಇದರ ಅನುಭವವಾಗುತ್ತದೆ….. ಬಗೆಹರಿಸಲಾಗದ,…

ಮುಂದೆ ಓದಿ..
ಅಂಕಣ 

ಬೀದಿ ನಾಯಿಗಳ ಸಮಸ್ಯೆ ಮತ್ತು ನಿಯಂತ್ರಣ……..

Taluknewsmedia.com

Taluknewsmedia.comಬೀದಿ ನಾಯಿಗಳ ಸಮಸ್ಯೆ ಮತ್ತು ನಿಯಂತ್ರಣ…….. ಬೀದಿ ನಾಯಿಗಳ ಸಮಸ್ಯೆ ಬಗೆಹರಿಸಲು ಸುಪ್ರೀಂ ಕೋರ್ಟ್ ಮಧ್ಯೆ ಪ್ರವೇಶಿಸಬೇಕೆ ? ಅದು ಅರ್ಜಿ ವಿಚಾರಣೆ ಮಾಡಿ ಆದೇಶ ಹೊರಡಿಸಬೇಕೆ ? ಅದರ ಅವಶ್ಯಕತೆ ಇದೆಯೇ ? ಬೀದಿ ನಾಯಿಗಳ ಸಮಸ್ಯೆ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಅಷ್ಟೊಂದು ಮಾಹಿತಿ ಇರುತ್ತದೆಯೇ ? ಅವರು ಅಷ್ಟೊಂದು ಆಳವಾಗಿ ಬೀದಿ ನಾಯಿಗಳ ಬಗ್ಗೆ ಅಧ್ಯಯನ ಮಾಡಿರುತ್ತಾರೆಯೇ ಅಥವಾ ಕಾನೂನಿನ ಪ್ರಕಾರ ಏನಾದರೂ ಪರಿಹಾರ ಸಿಗಬಹುದು ಎಂದು ಅರ್ಜಿದಾರರು ಭಾವಿಸಿರಬಹುದೇ ? ಇದು ತುಂಬಾ ಸಣ್ಣ ವಿಷಯ ಎನಿಸುವುದಿಲ್ಲವೇ ? ಸಾಮಾನ್ಯ ಜ್ಞಾನವಿರುವ ಯಾರಿಗಾದರೂ ಬೀದಿ ನಾಯಿಗಳ ಸಮಸ್ಯೆ ಸ್ಥಳೀಯ ಆಡಳಿತಕ್ಕೆ ಸಂಬಂಧಿಸಿದ್ದು ಎನ್ನುವ ಅರಿವಿರುವುದಿಲ್ಲವೇ ? ದೇಶದ ಅತ್ಯಂತ ಪುಟ್ಟ ಹಳ್ಳಿಯಿಂದ ರಾಷ್ಟ್ರದ ರಾಜಧಾನಿಯವರೆಗೂ ಈ ಬೀದಿ ನಾಯಿಗಳ ಬಗ್ಗೆ ಚರ್ಚಿಸುವಂತಹುದೇನಿದೆ. ಗ್ರಾಮ ಪಂಚಾಯಿತಿಯಿಂದ ಹಿಡಿದು ಸಂಸತ್ತಿನವರೆಗೆ, ಪಿಡಿಒ ಇಂದ ಹಿಡಿದು…

ಮುಂದೆ ಓದಿ..
ಸುದ್ದಿ 

ಹುಚ್ಚರ ಸಂತೆಯಲ್ಲಿ ನಿಂತು……

Taluknewsmedia.com

Taluknewsmedia.comಹುಚ್ಚರ ಸಂತೆಯಲ್ಲಿ ನಿಂತು…… ಕಾಲ ಬದಲಾಗಿದೆ, ತಂತ್ರಜ್ಞಾನ ಅಭಿವೃದ್ಧಿ ಹೊಂದಿದೆ. ಜನರ ಬಾಯಿ ಮತ್ತು ಮನಸ್ಸು ದೊಡ್ಡದಾಗಿದೆ. ಜ್ಞಾನ ಅಪಾರವಾಗಿ ಬೆಳೆದು ಮೆದುಳಿನಿಂದ ಆಚೆ ಹೊರಚಾಚುತ್ತಿದೆ. ಆದ್ದರಿಂದ ಇನ್ನು ಮುಂದೆ ರಾಜ್ಯದಲ್ಲಿ ನಡೆಯುವ ಯಾವುದೇ ದೊಡ್ಡ ಅಪರಾಧಿಗಳಿಗೆ ಪೊಲೀಸ್ ತನಿಖೆಯಾಗಲಿ, ಸಿಐಡಿ, ಸಿಓಡಿ ತನಿಖೆಯಾಗಲಿ ಅಥವಾ ವಿಶೇಷ ತನಿಖಾ ತಂಡಗಳ ಅವಶ್ಯಕತೆಯೇ ಇಲ್ಲ. ಜೊತೆಗೆ ಅಪರಾಧಿಗಳನ್ನು ಶಿಕ್ಷಿಸಲು ನ್ಯಾಯಾಲಯಗಳ ಅವಶ್ಯಕತೆಯೂ ಇಲ್ಲ. ಏಕೆಂದರೆ ಅದು ತುಂಬಾ ತಡವಾಗಿ ತೀರ್ಪು ನೀಡುತ್ತದೆ ಮತ್ತು ಕಾನೂನುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತದೆ. ಅದು ಯಾರಿಗೂ ಬೇಕಾಗಿಲ್ಲ. ಅದಕ್ಕಾಗಿ ಖರ್ಚು ಮಾಡುವ ಹಣ, ಶ್ರಮ ಮತ್ತು ಬುದ್ಧಿವಂತಿಕೆಯೂ ಬೇಕಾಗಿಲ್ಲ. ಅದೆಲ್ಲ ಈಗ ಹಳೆಯದಾಗಿದೆ. ಯಾರಿಗೂ ಅಷ್ಟು ಸಮಯ ಮತ್ತು ತಾಳ್ಮೆಯೂ ಇಲ್ಲ. ಆದ್ದರಿಂದ ಇನ್ನು ಮುಂದೆ ಎಂತಹುದೇ ದೊಡ್ಡ ಅಪರಾಧಗಳಾಗಲಿ ಅಥವಾ ಹಿಂದೆ ನಡೆದಿರಬಹುದಾದ ಆದರೆ ಇಂದಿಗೂ ಪತ್ತೆಯಾಗದ ಅಪರಾಧಗಳೇ ಆಗಿರಲಿ, ಟೆಲಿವಿಜನ್ ಸುದ್ದಿ…

ಮುಂದೆ ಓದಿ..
ಸುದ್ದಿ 

ಮಹಾಭಾರತದ ಕೃಷ್ಣ ಎಂಬ ವ್ಯಕ್ತಿತ್ವದ ಸುತ್ತ………..

Taluknewsmedia.com

Taluknewsmedia.comಮಹಾಭಾರತದ ಕೃಷ್ಣಎಂಬ ವ್ಯಕ್ತಿತ್ವದ ಸುತ್ತ……….. ಎಂತಹ ಅತ್ಯದ್ಭುತ ಪಾತ್ರವದು, ಸಾಹಿತ್ಯಿಕವಾಗಿ ಇರಬಹುದು, ವ್ಯಾವಹಾರಿಕವಾಗಿ ಇರಬಹುದು, ಕಾಲ್ಪನಿಕವಾಗಿ ಇರಬಹುದು ಅಥವಾ ವ್ಯಕ್ತಿತ್ವದ ದೃಷ್ಟಿಯಿಂದ ಇರಬಹುದು. ಸರಿಸುಮಾರು ಪರಿಪೂರ್ಣ ಎಂಬ ಅಭಿಪ್ರಾಯ ಮೂಡಿಸುವ ಪಾತ್ರವದು……. ಅರಿಷಡ್ವರ್ಗಗಳು, ನವ ರಸಗಳು, ಅರವತ್ನಾಲಕ್ಕು ವಿದ್ಯೆಗಳು ಸೇರಿ ಎಲ್ಲಾ ರೀತಿಯ ಅನುಭವಗಳು ಅದರಲ್ಲಿ ಅಡಕವಾಗಿದೆ. ಬಹುತೇಕ ಸಕಲಕಲಾವಲ್ಲಬ…….. ಹೇಗೆ ಅದೊಂದು ಅದ್ಬುತ ಪಾತ್ರವೋ, ಶಕ್ತಿಶಾಲಿಯೋ ಹಾಗೆಯೇ ಕೃಷ್ಣನ ಪ್ರತಿ ನಡೆಯನ್ನು ಅಷ್ಟೇ ತೀಕ್ಷ್ಣವಾಗಿ ಪ್ರಶ್ನಿಸುತ್ತಾ ಸಾಗಬಹುದು. ಕೆಲವುಗಳಿಗೆ ನಿರ್ದಿಷ್ಟ – ಖಚಿತ ಉತ್ತರ, ಮತ್ತೆ ಕೆಲವು ವೇಳೆ ಪಲಾಯನ ವಾದ, ಇನ್ನೊಮ್ಮೆ ಜನ್ಮಾಂತರಗಳಲ್ಲಿ ಅಡಗುವುದು, ಮಗದೊಮ್ಮೆ ಆ ಕ್ಷಣದ ಸತ್ಯ, ಮತ್ತೊಮ್ಮೆ ಗೊಂದಲದ ಸಮರ್ಥನೆ, ನಾನೇ ಸರಿ ಎಂಬ ಹಠ, ಸ್ವಲ್ಪ ವಾಸ್ತವವಾದಿ, ಹೆಚ್ಚು ದುರಹಂಕಾರಿ, ಅಪಾರ ತಂತ್ರಗಳು ಹಾಗೆಯೇ ಉದಾರಿ, ತ್ಯಾಗಿ ಇನ್ನೂ ಎಲ್ಲಾ ಭಾವಗಳ ಸಂಗಮ ಈ ಕೃಷ್ಣ….. ಇತರ ಕೆಲವು…

ಮುಂದೆ ಓದಿ..
ಸುದ್ದಿ 

ಸಾಂಕೇತಿಕವಾಗಿ ನಾಯಿಗಳು ಯಾರು ?ಊಹಿಸಿ……….

Taluknewsmedia.com

Taluknewsmedia.comಸಾಂಕೇತಿಕವಾಗಿ ನಾಯಿಗಳು ಯಾರು ?ಊಹಿಸಿ………. ಬೀದಿ ನಾಯಿಗಳ ಬಗ್ಗೆ ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಚರ್ಚೆಗಳು ಆಗುತ್ತಿರುವಾಗ ಕಾಡಿನ ನಾಯಿಯ ಪ್ರವೇಶ…… ಕಾಡಿನ ನಾಯಿಯೊಂದು ಆಹಾರ ಹುಡುಕುತ್ತಾ ದಾರಿ ತಪ್ಪಿಸಿಕೊಂಡು ನಾಡಿಗೆ ಬಂದಿದೆ…. ‌.‌‌‌‌‌…….‌ ಮಳೆಗಾಲದ ಈ ಸಮಯದಲ್ಲಿ ಅದಕ್ಕೆ ಕಾಡಿನಲ್ಲಿ ಆಹಾರದ ಕೊರತೆ ಕಾಡಿತು. ಬಹುತೇಕ ಮಾಂಸಹಾರಿ ಪ್ರಾಣಿ ನಾಯಿ……….. ರಾತ್ರಿಯೆಲ್ಲಾ ಸಂಚರಿಸುತ್ತಾ ಯಾವುದೋ ಹಾದಿ ಹಿಡಿದು ಸಾಗುತ್ತಿರುವಾಗ ಆಕಸ್ಮಿಕವಾಗಿ ಕಾಡು ಕೊನೆಯಾಗಿ ಬೆಳಗಿನ ಹೊತ್ತಿಗೆ ತನಗರಿವಿಲ್ಲದೆ ಮತ್ತು ತಾನೆಂದೂ ನೋಡಿರದ ನಗರ ಪ್ರವೇಶಿಸಿತು…………. ಕಾಡ ನಾಯಿಯಾದರೂ ಇತ್ತೀಚಿನ ವರ್ಷಗಳಲ್ಲಿ ಆಹಾರ ಸರಿಯಾಗಿ ಸಿಗದೆ ಸ್ವಲ್ಪ ಬಡಕಲು ದೇಹದ ನಾಯಿ ಆಟದ ಮೈದಾನದಲ್ಲಿ ತನ್ನದೇ ನಾಯಿ ಪಂಗಡದ ವಿವಿಧ ಆಕಾರದ ದಷ್ಟಪುಷ್ಟ ನಾಯಿಗಳು ಸಂಚರಿಸುತ್ತಿರುವುದನ್ನು ನೋಡಿ ಖುಷಿಯಾಯಿತು. ತಾನು ಸರಿಯಾದ ದಾರಿಯಲ್ಲೇ ಇದ್ದೇನೆ ಎಂದು ಭಾವಿಸಿ ಅದರ ಹತ್ತಿರ ಹೋಗುತ್ತಿದ್ದಂತೆ ಅದರ ಮಾಲೀಕರು ಕಿರುಚುತ್ತಾ ಕೈಯಲ್ಲಿದ್ದ ಕೋಲಿನಿಂದ…

ಮುಂದೆ ಓದಿ..