ಸುದ್ದಿ 

ಬೆಂಗಳೂರಿನಲ್ಲಿ ಆಸ್ತಿ ಹಗರಣ – ಸ್ನೇಹಿತನ ವಿಶ್ವಾಸಕ್ಕೆ ಮೋಸ

Taluknewsmedia.com

Taluknewsmedia.comಬೆಂಗಳೂರು:ನಗರದ ಜಾಲಹಳ್ಳಿ ಪ್ರದೇಶದಲ್ಲಿ ಮನೆ ಹೊಂದಿದ್ದ ಮಹಿಳೆ, ಆರ್ಥಿಕ ತೊಂದರೆಯಿಂದ ಸಾಲ ಪಡೆದು ತೀರಿಸಲಾಗದೆ ಸಂಕಷ್ಟಕ್ಕೀಡಾದ ವೇಳೆ, ಸಹಾಯ ಮಾಡುವ ನೆಪದಲ್ಲಿ ಸ್ನೇಹಿತ ಹಾಗೂ ಇತರರು ಸೇರಿ ಲಕ್ಷಾಂತರ ರೂಪಾಯಿಗಳ ಮೋಸ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅರುಣ್ ರವರ ಪ್ರಕಾರ, ಅವರು 2018ರಲ್ಲಿ ಶೇಷಾದ್ರಿಪುರಂನ ಎನ್.ಕೆ.ಜಿ.ಎಸ್.ಬಿ ಕೋ-ಆಪರೇಟಿವ್ ಸೊಸೈಟಿ ಬ್ಯಾಂಕ್ನಿಂದ ರೂ.40 ಲಕ್ಷ ಸಾಲ ಪಡೆದಿದ್ದರು. ಆದರೆ ಬಡ್ಡಿ ಸೇರಿ ರೂ.68 ಲಕ್ಷ ತೀರಿಸಲಾಗದೆ ಮನೆಯು ಹರಾಜಿಗೆ ಬಂದಿತ್ತು. ಈ ಸಂದರ್ಭದಲ್ಲಿ ಸ್ನೇಹಿತರ ಮೂಲಕ ಪರಿಚಯವಾದ ಆನಂದ್ ಹೆಚ್.ಆರ್ ಸಹಾಯ ಮಾಡುವುದಾಗಿ ಹೇಳಿ, “ಸ್ವತ್ತು ನನ್ನ ಹೆಸರಿಗೆ ಮಾಡಿಕೊಡಿ” ಎಂದು ನಂಬಿಸಿ, ಅರುಣ್ ರವರಿಂದ ಒಟ್ಟಾರೆ ರೂ.68 ಲಕ್ಷ ಪಡೆದುಕೊಂಡಿದ್ದಾನೆ. ಆದರೆ, ಆ ಹಣವನ್ನು ಆರೋಪಿಗಳು (ಎ1 ರಿಂದ ಎ6) ತಮ್ಮಲ್ಲಿ ಹಂಚಿಕೊಂಡು, ಅರುಣ್ ರವರಿಗೆ ತಿಳಿವಳಿಕೆ ಇಲ್ಲದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, 2019ರ ಜುಲೈ…

ಮುಂದೆ ಓದಿ..
ಸುದ್ದಿ 

ಹೆಬ್ಬಾಳ ರಿಂಗ್‌ರಸ್ತೆಯಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ಮಹಿಳೆ ಗಂಭೀರ ಗಾಯ

Taluknewsmedia.com

Taluknewsmedia.comಬೆಂಗಳೂರು, ಆ.08 – ಬೆಳಗಿನ ಜಾವ ಹೆಬ್ಬಾಳ ರಿಂಗ್‌ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಪೊಲೀಸರ ಮಾಹಿತಿಯಂತೆ, ಪರಶುರಾಮ್ ಅವರ ಮಗಳಾದ ನೇಹಾ ಪಿ. ಗಡ್ಕರಿ (30) ಅವರು ಶುಕ್ರವಾರ ಬೆಳಿಗ್ಗೆ ಸುಮಾರು 6.30 ರಿಂದ 6.40ರ ವೇಳೆಗೆ ತಮ್ಮ ಸ್ಕೂಟರ್ (ನಂಬರ KA-04-KW-0201) ನಲ್ಲಿ ಮನೆಯಿಂದ ಆಫೀಸ್‌ಗೆ ತೆರಳುತ್ತಿದ್ದರು. ಲುಂಬಿನಿ ಗಾರ್ಡನ್‌ ವೀರಣ್ಯಪಾಳ್ಯ ಅಪ್‌ರ್ಯಾಂಪ್ ಹತ್ತಿರ ವೇಗ ಹಾಗೂ ನಿರ್ಲಕ್ಷ್ಯದಿಂದ ಸವಾರಿ ಮಾಡುವ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದು ತಲೆಗೆ ಪೆಟ್ಟಾಗಿದ್ದಾಳೆ. ಸಾರ್ವಜನಿಕರ ನೆರವಿನಿಂದ ಪ್ರೈವೇಟ್ ಆಂಬ್ಯುಲೆನ್ಸ್ ಮೂಲಕ ಅವರನ್ನು ತಕ್ಷಣವೇ ಆಸ್ಟರ್ CMI ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತಮ್ಮ ಮಗಳ ಚಿಕಿತ್ಸೆಯಲ್ಲಿ ತೊಡಗಿಸಿಕೊಂಡಿದ್ದರಿಂದ ದೂರುವನ್ನು ತಡವಾಗಿ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಮುಂದೆ ಓದಿ..
ಸುದ್ದಿ 

ಬಿ.ಕಾಂ ವಿದ್ಯಾರ್ಥಿ ನಾಪತ್ತೆ – ಹುಡುಕಾಟ ಜೋರಾಗಿದೆ

Taluknewsmedia.com

Taluknewsmedia.comಬೆಂಗಳೂರು, – ನಗರದ ಸರ್ಮಾಪುರದಲ್ಲಿರುವ ಎಸ್.ವಿ.ಪಿ. ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಕೆ. ಮಂಜುನಾಥ್ (ವಯಸ್ಸು ಅಂದಾಜು 21) ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಾತೃ ಫೌಂಡೇಷನ್‌ನಲ್ಲಿ ಸುಮಾರು 7 ವರ್ಷಗಳಿಂದ ವಾಸಿಸುತ್ತಿದ್ದ ಮಂಜುನಾಥ್‌ರನ್ನು, ಜು. 6 ರಂದು ಬೆಳಿಗ್ಗೆ ಸುಮಾರು 9 ಗಂಟೆಗೆ ಸಂಸ್ಥೆಯ ಚಾಲಕರಾದ ಕುಮಾರಸ್ವಾಮಿ ಕಾಲೇಜಿಗೆ ಬಿಟ್ಟಿದ್ದರು. ಆದರೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾಲೇಜಿನ ಪ್ರಾಂಶುಪಾಲರು ಕರೆ ಮಾಡಿ, ವಿದ್ಯಾರ್ಥಿ ಕಾಣೆಯಾಗಿರುವುದಾಗಿ ಫೌಂಡೇಷನ್‌ಗೆ ತಿಳಿಸಿದ್ದಾರೆ. ಘಟನೆಯ ನಂತರ ಕಾಲೇಜು ಆವರಣ, ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಬೆಂಗಳೂರು ಮೆಜೆಸ್ಟಿಕ್ ಭಾಗಗಳಲ್ಲಿ ಹುಡುಕಾಟ ನಡೆಸಿದರೂ, ಮಂಜುನಾಥ್ ಪತ್ತೆಯಾಗಿಲ್ಲ. ಹುಡುಗನ ತಂದೆ-ತಾಯಿಗೆ ವಿಷಯ ತಿಳಿಸಲಾಗಿದ್ದು, ಮಂಜುನಾಥ್ ಪತ್ತೆಗೆ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದಾರೆ.

ಮುಂದೆ ಓದಿ..
ಸುದ್ದಿ 

ಹೆಬ್ಬಾಳ ನ್ಯಾರೋ ಬ್ರಿಡ್ಜ್ ಬಳಿ ಬಸ್-ಸ್ಕೂಟರ್ ಡಿಕ್ಕಿ: ಮಹಿಳೆಗೆ ಗಂಭೀರ ಗಾಯ

Taluknewsmedia.com

Taluknewsmedia.comಬೆಂಗಳೂರು, ಆಗಸ್ಟ್ 9 – ಹೆಬ್ಬಾಳದ ಬಿ.ಬಿ. ರಸ್ತೆಯ ನ್ಯಾರೋ ಬ್ರಿಡ್ಜ್ ಬಳಿ ಇಂದು ಸಂಜೆ ಸಂಭವಿಸಿದ ಬಸ್-ಸ್ಕೂಟರ್ ಡಿಕ್ಕಿ ಘಟನೆಯಲ್ಲಿ ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಪೊಲೀಸರ ಮಾಹಿತಿ ಪ್ರಕಾರ, ಸಂಜೆ ಸುಮಾರು 4 ಗಂಟೆಯ ಸಮಯದಲ್ಲಿ ಸೌಮ್ಯ ಲತಾ ಕೊಂ ಹೊನ್ನೆಗೌಡ (40) ಅವರು ತಮ್ಮ ಸ್ಕೂಟರ್ (KA-04-JH-1451) ಮೇಲೆ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದರು. ಈ ವೇಳೆ ಯಲಹಂಕ ದಿಕ್ಕಿಗೆ ಸಾಗುತ್ತಿದ್ದ ಬಿ.ಎಂ.ಟಿ.ಸಿ ಬಸ್ (KA-57-F-5827) ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಿಂದ ಸೌಮ್ಯ ಲತಾ ಕೆಳಗೆ ಬಿದ್ದು ಬಲಗೈ ಮೇಲೆ ಬಸ್ಸಿನ ಚಕ್ರ ಹರಿದ ಪರಿಣಾಮವಾಗಿ ಬಲಗೈ ಹರಿದು ಭುಜಕ್ಕೂ ಪೆಟ್ಟಾಗಿದೆ. ಘಟನಾ ಸ್ಥಳದಲ್ಲಿದ್ದ ಸಾರ್ವಜನಿಕರು ಮತ್ತು ಬಸ್ ಚಾಲಕ ತಕ್ಷಣ ಅವರನ್ನು ಆಸ್ಮರ್ ಸಿ.ಎಂ.ಐ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಹೆಬ್ಬಾಳ ಟ್ರಾಫಿಕ್ ಪೊಲೀಸರು…

ಮುಂದೆ ಓದಿ..
ಸುದ್ದಿ 

ಮದುವೆ ವಾಗ್ದಾನ ತಪ್ಪಿಸಿದ ಯುವಕನ ವಿರುದ್ಧ ದೂರು

Taluknewsmedia.com

Taluknewsmedia.comಬೆಂಗಳೂರು, ಆ.09 : ಮದುವೆಯಾಗುವುದಾಗಿ ವಾಗ್ದಾನ ಮಾಡಿ, ನಂತರ ನಿರಾಕರಿಸಿದ ಪ್ರಕರಣವೊಂದು ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಪ್ರಕಾರ, 2023ರ ಮಾರ್ಚ್‌ನಲ್ಲಿ ಹರೀಶ್ ಬಾಬು ಎಂಬಾತನು ಮದುವೆಯಾಗುವುದಾಗಿ ಹೇಳಿ, ತಮ್ಮೊಂದಿಗೆ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದ. ಈ ಅವಧಿಯಲ್ಲಿ ತಾವು ಹಣ ಹಾಗೂ ಆಭರಣಗಳನ್ನು ನೀಡಿದ್ದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ. ಬಳಿಕ, ಹರೀಶ್ ಬಾಬು “ನೀನು ನನಗೆ ಬೇಡ, ನಾನು ಬೇರೆ ಹುಡುಗಿಯನ್ನು ಮದುವೆಯಾಗುತ್ತೇನೆ” ಎಂದು ಹೇಳಿ, ಕರೆ-ಮೆಸೇಜ್ ಮಾಡದಂತೆ ಬೆದರಿಕೆ ಹಾಕುತ್ತಿದ್ದಾನೆಂದು ಆರೋಪಿಸಿದ್ದಾರೆ. ಅಂತೋಣಿ ರಾಜ್ ಎಂಬಾತನು ಹರೀಶ್ ಬಾಬುಗೆ ತಮ್ಮ ಬಗ್ಗೆ ಸುಳ್ಳು ಆರೋಪಗಳನ್ನು ಹೇಳಿ, ಇವರಿಬ್ಬರ ಸಂಬಂಧ ಹಾಳುಮಾಡಲು ಕಾರಣನಾಗಿದ್ದಾನೆಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಜೊತೆಗೆ, ಕೇಸು ವಾಪಸ್ಸು ಪಡೆಯುವಂತೆ ಹರೀಶ್ ಬಾಬು ಒತ್ತಾಯಿಸುತ್ತಿದ್ದಾನೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮುಂದೆ ಓದಿ..
ಸುದ್ದಿ 

ಚಂಬೇನಹಳ್ಳಿಯಲ್ಲಿ ಮಹಿಳೆಯ ಚಿನ್ನದ ಚೈನ್ ಕಳವು

Taluknewsmedia.com

Taluknewsmedia.comಚಂಬೇನಹಳ್ಳಿ, ಆಗಸ್ಟ್ 9:ಚಂಬೇನಹಳ್ಳಿಯಲ್ಲಿ ಮಹಿಳೆಯೊಬ್ಬರ ಚಿನ್ನದ ಚೈನ್ ಕಳವುಗೊಳ್ಳುವ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಸಂಜೆ ಸುಮಾರು 4.30ರ ವೇಳೆಗೆ, ಸ್ಥಳೀಯ ಮಹಿಳೆಯೊಬ್ಬರು ಶ್ರೀ ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ, ಚಂಬೇನಹಳ್ಳಿ ಸರ್ಕಾರಿ ಶಾಲೆಯ ಮುಂಭಾಗದಲ್ಲಿ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ವಿಳಾಸ ವಿಚಾರಿಸುವ ನೆಪದಲ್ಲಿ ಮಾತನಾಡಿಸಿದ್ದಾರೆ. ಮಹಿಳೆ ಮಾತುಕತೆ ನಡೆಸುತ್ತ ಸ್ವಲ್ಪ ಮುಂದೆ ಸಾಗಿದ ನಂತರ, ತಮ್ಮ ಕುತ್ತಿಗೆಯಲ್ಲಿದ್ದ ಸುಮಾರು 80 ಗ್ರಾಂ ತೂಕದ ಚಿನ್ನದ ಚೈನ್ ಕಾಣೆಯಾಗಿರುವುದನ್ನು ಗಮನಿಸಿದ್ದಾರೆ. ಆರೋಪಿ ಇಬ್ಬರು ವೇಗವಾಗಿ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಬಳಿಕ ಮಹಿಳೆ ಮನೆಗೆ ಹೋಗಿ ಮಗನಿಗೆ ಮಾಹಿತಿ ನೀಡಿದ್ದು, ಹುಡುಕಾಟ ನಡೆಸಿದರೂ ಚೈನ್ ಪತ್ತೆಯಾಗಿಲ್ಲ. ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಪೊಲೀಸರು ಆರೋಪಿಗಳ ಪತ್ತೆ ಹಾಗೂ ಕಳವುಗೊಂಡ ಚೈನ್ ವಶಪಡಿಸಿಕೊಳ್ಳುವ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಮುಂದೆ ಓದಿ..
ಸುದ್ದಿ 

ಹೆಬ್ಬಾಳ ಸೇತುವೆ ಬಳಿ ಕಂಟೈನರ್ ಲಾರಿ ಡಿಕ್ಕಿ – ತಾಯಿ-ಮಗನಿಗೆ ಗಂಭೀರ ಗಾಯ

Taluknewsmedia.com

Taluknewsmedia.comಬೆಂಗಳೂರು: ಅಕ್ಕಿಪೇಟೆಯಿಂದ ಕೋಡಿಗೆಹಳ್ಳಿಯಲ್ಲಿರುವ ಬಂಧುವಿನ ಮನೆಗೆ ತೆರಳುತ್ತಿದ್ದ ತಾಯಿ-ಮಗನ ಸ್ಕೂಟರ್‌ಗೆ ಮಧ್ಯರಾತ್ರಿ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡ ಘಟನೆ ಆಗಸ್ಟ್ 6ರ ಮಧ್ಯರಾತ್ರಿ ನಡೆದಿದೆ. ಪೊಲೀಸರ ಪ್ರಕಾರ, ಗಾಯಗೊಂಡವರು ರಾಜೇಶ್ ಎ. (ಮಗ) ಮತ್ತು ಶಾಂತಿ (ತಾಯಿ). ಇಬ್ಬರೂ ಸ್ಕೂಟರ್ (KA-01-JC-6720) ನಲ್ಲಿ ಬಿಬಿ ರಸ್ತೆ ಮಾರ್ಗವಾಗಿ ಹೆಬ್ಬಾಳ ನ್ಯಾರೋ ಬ್ರಿಡ್ಜ್ ಹತ್ತಿರ ಕೋಡಿಗೆಹಳ್ಳಿಯ ಕಡೆಗೆ ತೆರಳುತ್ತಿದ್ದಾಗ, ಸುಮಾರು 1 ಗಂಟೆಗೆ ಹಿಂಬದಿಯಿಂದ ಬಂದ ಕಂಟೈನರ್ ಲಾರಿ (RJ-14-GG-8561) ಅತಿವೇಗ ಹಾಗೂ ಅಜಾಗರೂಕತೆಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ, ಸ್ಕೂಟರ್ ಸವಾರರು ರಸ್ತೆ ಮೇಲೆ ಬಿದ್ದು, ಲಾರಿಯ ಚಕ್ರ ಕಾಲುಗಳ ಮೇಲೆ ಹರಿದ ಪರಿಣಾಮ ರಾಜೇಶ್ ಎ. ಅವರಿಗೆ ಎರಡೂ ಕಾಲು, ಎಡ ಕೈ ಹಾಗೂ ಹೊಟ್ಟೆ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಎಡ ಕಾಲಿನ ಮಂಡಿಯ ಕೆಳಭಾಗವನ್ನು ಶಸ್ತ್ರಚಿಕಿತ್ಸೆಯಿಂದ ತೆಗೆದುಹಾಕಲಾಗಿದೆ. ಶಾಂತಿ…

ಮುಂದೆ ಓದಿ..
ಸುದ್ದಿ 

ರೂಪೇನ ಅಗ್ರಹಾರದ ಯುವತಿ ನಾಪತ್ತೆ

Taluknewsmedia.com

Taluknewsmedia.comಬೆಂಗಳೂರು, ಆ.09— ನಗರದ ರೂಪೇನ ಅಗ್ರಹಾರ ಪ್ರದೇಶದ 25 ವರ್ಷದ ಯುವತಿ ಸುಶ್ಮಿತಾ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಶ್ರೀನಿವಾಸ್ ಬಿನ್ ವೆಂಕಟರಮಣಪ್ಪ (ತರಕಾರಿ ವ್ಯಾಪಾರಿ) ಅವರು ಪೊಲೀಸರಿಗೆ ನೀಡಿದ ಮಾಹಿತಿಯ ಪ್ರಕಾರ, ಸುಶ್ಮಿತಾ ಪ್ರತಿದಿನ ಬೆಳಿಗ್ಗೆ 8.30ಕ್ಕೆ ಕೆಲಸಕ್ಕೆ ತೆರಳಿ ರಾತ್ರಿ 8 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದಳು. ಆಗಸ್ಟ್ 7 ರಂದು ಬೆಳಿಗ್ಗೆ “ಕೆಲಸಕ್ಕೆ ಹೋಗಿ ಬರುತ್ತೇನೆ” ಎಂದು ಹೇಳಿ ಮನೆಯಿಂದ ಹೊರಟ ಸುಶ್ಮಿತಾ, ರಾತ್ರಿ ಮನೆಗೆ ವಾಪಸ್ಸಾಗಲಿಲ್ಲ. ಕುಟುಂಬಸ್ಥರು ಅವಳ ಮೊಬೈಲ್ ನಂಬರುಗಳಿಗೆ (7904224909, 8884864909) ಕರೆ ಮಾಡಿದರೂ, ಫೋನ್ ಸ್ವಿಚ್ ಆಫ್ ಆಗಿತ್ತು. ಸಂಬಂಧಿಕರು, ಸ್ನೇಹಿತರು ಹಾಗೂ ಕೆಲಸ ಮಾಡುವ ಕಚೇರಿಯಲ್ಲಿ ವಿಚಾರಿಸಿದಾಗಲೂ ಅವಳ ಬಗ್ಗೆ ಯಾವುದೇ ಮಾಹಿತಿ ದೊರಕಲಿಲ್ಲ. ಎಲ್ಲೆಡೆ ಹುಡುಕಾಟ ನಡೆಸಿದರೂ ಸುಳಿವು ಸಿಗದೆ ಹೋದ ಹಿನ್ನೆಲೆಯಲ್ಲಿ ತಡವಾಗಿ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಟ ಆರಂಭಿಸಿದ್ದಾರೆ.

ಮುಂದೆ ಓದಿ..
ಸುದ್ದಿ 

ಸೇಲಂ ಕೈದಿ ಪತ್ನಿಯಿಂದ ಗಂಭೀರ ಆರೋಪ – ಅಪಹರಣ, ಕೊಲೆ ಪ್ರಕರಣದಲ್ಲಿ ಗಂಡನಿಗೆ ಸುಳ್ಳು ಆರೋಪ?

Taluknewsmedia.com

Taluknewsmedia.comಬೆಂಗಳೂರು, ಆಗಸ್ಟ್ 9:ಸೇಲಂ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶ್ರೀನಿವಾಸ್ ಎಂಬುವವರ ಪತ್ನಿ ಯಲ್ಲಮ್ಮ ಅವರು ತಮ್ಮ ಗಂಡನ ವಿರುದ್ಧ ದಾಖಲಾಗಿರುವ ಪ್ರಕರಣ ಸುಳ್ಳು ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಯಲ್ಲಮ್ಮ ಅವರು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ದೂರು (ಪಿ.ಸಿ.ಆರ್ 265/2025) ಪ್ರಕಾರ, 17-09-2024ರ ರಾತ್ರಿ ಸರ್ಜಾಪುರ ರಸ್ತೆ ಚಂಬೇನಹಳ್ಳಿ ಗೇಟ್ ಬಳಿ ಶ್ರೀನಿವಾಸ್ ಅವರ ಟಾಟಾ ಏಸ್ ವಾಹನಕ್ಕೆ ಮತ್ತೊಂದು ಟಾಟಾ ಏಸ್ ಡಿಕ್ಕಿ ಹೊಡೆಸಲಾಗಿದ್ದು, ನಂತರ 4–5 ಜನರು ಅವರನ್ನು ಬಲವಂತವಾಗಿ ಕಾರಿನಲ್ಲಿ ಹತ್ತಿಸಿ ಚಿಕ್ಕ ತಿರುಪತಿ ರಸ್ತೆಯ ವಿಲ್ಲಾಕ್ಕೆ ಕರೆದೊಯ್ದಿದ್ದಾರೆ. ಆರೋಪಿಯರಲ್ಲೊಬ್ಬನಾದ ರೇವ (ರೋಹಿತ್ ಕುಮಾರ್) ಅವರು, “ನಿನ್ನ ಚಿಕ್ಕ ಮಗ ಮನು ನಮ್ಮ ಹಿಡಿತದಲ್ಲಿದ್ದಾನೆ, ನಾನು ಹೇಳಿದಂತೆ ಕೇಳಬೇಕು” ಎಂದು ಬೆದರಿಕೆ ಹಾಕಿ, ಮುಂದಿನ ದಿನ ದೇವಸ್ಥಾನದ ಬಳಿ ಮಾತುಕತೆಯ ವೇಳೆ ರೇವಂತ್ ಎಂಬ ಯುವಕನನ್ನು ಸಹ…

ಮುಂದೆ ಓದಿ..
ಸುದ್ದಿ 

ಕೆ.ಜಿ.ಹಳ್ಳಿಯಲ್ಲಿ ಮನೆಯ ಬೀಗ ಒಡೆದು ₹1.4 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಕಳ್ಳತನ

Taluknewsmedia.com

Taluknewsmedia.comಬೆಂಗಳೂರು: ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ, ಸುಮಾರು ₹1.4 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳನ್ನು ಕಳ್ಳರು ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ಶಕ್ತಿ ನಾರಾಯಣರವರ ತಮ್ಮ ಮಾವ ತಿರುಪತಿ ಅವರ ಮನೆಯಿಂದ ಕೆಲ ಅಂತರದಲ್ಲಿ ವಾಸವಾಗಿದ್ದು, ಇಬ್ಬರೂ ಒಂದೇ ರಸ್ತೆಯಲ್ಲಿದ್ದರು. ಜುಲೈ 29ರಂದು ಮಾವನವರು ತಿರುಪತಿಯಲ್ಲಿ ನಿಧನರಾಗಿದ್ದರಿಂದ, ಅವರ ಕುಟುಂಬದವರು ತಮಿಳುನಾಡಿಗೆ ಅಂತ್ಯಕ್ರಿಯೆಗೆ ತೆರಳಿ, ಮನೆಗೆ ಬೀಗ ಹಾಕಿ ಹೋಗಿದ್ದರು. ಕುಟುಂಬವೂ ಅಂತ್ಯಕ್ರಿಯೆಗೆ ತೆರಳಿತ್ತು. ಆಗಸ್ಟ್ 8ರಂದು ಸಂಜೆ 4 ಗಂಟೆ ವೇಳೆಗೆ, ಪತ್ನಿ ಮಾವನ ಮನೆಗೆ ತೆರಳಿದಾಗ, ಬಾಗಿಲಿನ ಬೀಗ ಒಡೆದು ಒಳ ನುಗ್ಗಿರುವುದು ಗಮನಕ್ಕೆ ಬಂದಿದೆ. ಮನೆಯ ಒಳಭಾಗ ಪರಿಶೀಲಿಸಿದಾಗ, ಲಕ್ಷ್ಮೀ ಕಾಯಿನ್ಮಳ, ಎರಡು ಜೊಡಿ ಮಕ್ಕಳ ಚಿನ್ನದ ಓಲೆಗಳು (ಒಟ್ಟು 20 ಗ್ರಾಂ), ಬೆಳ್ಳಿಯ ಕಾಲು ಚೈನ್‌ಗಳು 4 ಜೊಡಿ ಹಾಗೂ 500…

ಮುಂದೆ ಓದಿ..