ಸುದ್ದಿ 

ಚಿತ್ರದುರ್ಗದಲ್ಲಿ ಲೋಕಾಯುಕ್ತ ಸಿಡಿಲಿನ ದಾಳಿ – ಕೃಷಿ ಇಲಾಖೆಯ ಎಡಿ ಚಂದ್ರಕುಮಾರ್ ಮನೆ ಸೇರಿ 3 ಕಡೆ ಶೋಧ

Taluknewsmedia.com

Taluknewsmedia.comಚಿತ್ರದುರ್ಗದಲ್ಲಿ ಲೋಕಾಯುಕ್ತ ಸಿಡಿಲಿನ ದಾಳಿ – ಕೃಷಿ ಇಲಾಖೆಯ ಎಡಿ ಚಂದ್ರಕುಮಾರ್ ಮನೆ ಸೇರಿ 3 ಕಡೆ ಶೋಧ ಬೆಳ್ಳಂ ಬೆಳಿಗ್ಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಸಿಡಿಲಿನ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕೃಷಿ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಚಂದ್ರಕುಮಾರ್ ಎಡಿ ಅವರ ವಿರುದ್ಧ ಲೋಕಾಯುಕ್ತ ತನಿಖೆ ಪ್ರಾರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಮೂರು ಕಡೆ ಏಕಕಾಲದಲ್ಲಿ ಶೋಧ ನಡೆಸಿದೆ. ದಾಳಿ ನಡೆದ ಸ್ಥಳಗಳು: ತರಳಬಾಳು ನಗರದ ಮನೆ, ಹೊಳಲ್ಕೆರೆ ತಾಲೂಕು ಕಚೇರಿ, ಟಿ.ನುಲೇನೂರು ಗ್ರಾಮದ ನಿವಾಸ. ಲೋಕಾಯುಕ್ತ ಅಧಿಕಾರಿಗಳ ಪ್ರಾಥಮಿಕ ಮಾಹಿತಿಯ ಪ್ರಕಾರ, ಚಂದ್ರಕುಮಾರ್ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪಗಳು ಕೇಳಿಬಂದಿದ್ದು, ಅದರ ಆಧಾರದ ಮೇಲೆ ಶೋಧ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಶೋಧ ಕಾರ್ಯಾಚರಣೆಯ ವೇಳೆ ಅಧಿಕಾರಿಗಳು ವಿವಿಧ ದಾಖಲೆಗಳು, ಬ್ಯಾಂಕ್ ಪಾಸ್‌ಬುಕ್‌ಗಳು, ಆಸ್ತಿ ದಾಖಲೆಗಳು,…

ಮುಂದೆ ಓದಿ..
ಸುದ್ದಿ 

ಕೋಲಾರ: ಪೋಕ್ಸೋ ಕೇಸ್ ಹೆಸರಿನಲ್ಲಿ ಹಣ ಸುಲಿಗೆ – ಮಕ್ಕಳ ಸಹಾಯವಾಣಿ ಸಂಯೋಜಕ ಬಂಧನ

Taluknewsmedia.com

Taluknewsmedia.comಕೋಲಾರ: ಪೋಕ್ಸೋ ಕೇಸ್ ಹೆಸರಿನಲ್ಲಿ ಹಣ ಸುಲಿಗೆ – ಮಕ್ಕಳ ಸಹಾಯವಾಣಿ ಸಂಯೋಜಕ ಬಂಧನ ಕೋಲಾರದಲ್ಲಿ ಮಕ್ಕಳ ಸಹಾಯವಾಣಿ ಸಂಯೋಜಕ ಕಲ್ಯಾಣ್ ಕುಮಾರ್ ಪೋಕ್ಸೋ ಕೇಸ್ ಹೆಸರಿನಲ್ಲಿ ಹಣಕ್ಕೆ ಸುಲಿಗೆ ಹಾಕಿದ ಆರೋಪದಲ್ಲಿ ಬಂಧಿತನಾಗಿ ಆತಂಕ ಉಂಟುಮಾಡಿದೆ. ಕ್ಯಾಸಂಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ಈ ಪ್ರಕರಣದಲ್ಲಿ ತ್ವರಿತ ತನಿಖೆ ನಡೆಯುತ್ತಿದೆ. ಪೊಲೀಸರು ತಿಳಿಸಿದ್ದಾರೆ, 17 ವರ್ಷ 7 ತಿಂಗಳ ಬಾಲಕಿ ಗರ್ಭಿಣಿಯಾಗಿದ್ದು, ಬಾಲ್ಯ ವಿವಾಹ ಸಂಬಂಧ ದೂರು ದಾಖಲಾಗಿತ್ತು. ಬಾಲಕಿ ಕುಟುಂಬಸ್ಥರಿಂದ ಸಹಾಯವಾಣಿಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಲ್ಯಾಣ್ ಕುಮಾರ್ ಪೋಕ್ಸೋ ಕೇಸ್ ಹೆಸರಿನಲ್ಲಿ ಮೊತ್ತದ 50,000 ರೂ. ಬೇಡಿಕೆ ಇಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಆರೋಪಿ ಕಲ್ಯಾಣ್ ಕುಮಾರ್ ಮೊದಲ ಹಂತದಲ್ಲಿ 30,000 ರೂ. ಪಡೆಯಲು ಯಶಸ್ವಿಯಾಗಿ ಒತ್ತಡ ಹೇರಿದ, ಉಳಿದ 20,000 ರೂ. ಪಡೆಯಲು ಬೆದರಿಕೆ ನೀಡಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ.…

ಮುಂದೆ ಓದಿ..
ಸುದ್ದಿ 

ಪ್ರಿಯತಮೆಗಾಗಿ ಮನೆಯಲ್ಲಿ ಕಳ್ಳತನ: ಆರೋಪಿ ಬಂಧನ

Taluknewsmedia.com

Taluknewsmedia.comಪ್ರಿಯತಮೆಗಾಗಿ ಮನೆಯಲ್ಲಿ ಕಳ್ಳತನ: ಆರೋಪಿ ಬಂಧನ ಹೆಬ್ಬಗೋಡಿ: ಪ್ರಿಯತಮೆಗಾಗಿ ಮನೆಯಲ್ಲಿ ಕಳ್ಳತನ ಮಾಡುವಲ್ಲಿ ಆರೋಪಿ ಶ್ರೇಯಸ್ (22) ಬಂಧಿತನಾಗಿದ್ದಾನೆ ಎಂದು ಹೆಬ್ಬಗೋಡಿ ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದುದಾಗಿ ತನಿಖೆ ದಾಖಲೆಗಳು ಹೇಳಿವೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ, ಶ್ರೇಯಸ್ ತನ್ನ ಪ್ರಿಯತಮೆಯ ಚಿನ್ನದ ಓಲೆ ಮಾಡಿಸಿಕೊಡುವಂತೆ ಕೇಳಿದ್ದ ಕಾರಣ, ಹರೀಶ್ ಎಂಬವರ ಮನೆಯಲ್ಲಿ ಕಳ್ಳತನ ನಡೆಸಿದ ಬಗ್ಗೆ ವಿಚಾರಣೆ ನಡೆಯುತ್ತಿದೆ. ಪೊಲೀಸರು ಆರೋಪಿ ಶ್ರೇಯಸ್‌ನಿಂದ 415 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ನಿಮ್ಮೆಲ್ಲರಿಗೂ ಎಚ್ಚರಿಕೆ: ಪ್ರಿಯತೆಯಿಗಾಗಿ ಕೂಡ ಕಾನೂನು ತಲೆತಗಿಸುವಂತೆ ಕಳ್ಳತನ ಮಾಡುವುದು ಗಂಭೀರ ಅಪರಾಧ. ಪೊಲೀಸರು ಪ್ರಕರಣದ ಮುಂದಿನ ವಿಚಾರಣೆ ಮುಂದುವರಿಸುತ್ತಿದ್ದಾರೆ.

ಮುಂದೆ ಓದಿ..
ಸುದ್ದಿ 

ಬಿಜೆಪಿ ಶಾಸಕ ಮುನಿರತ್ನ ಆರೋಪಗಳಿಗೆ ಕುಸುಮಾ ಹನುಮಂತರಾಯಪ್ಪ ತೀವ್ರ ಪ್ರತಿಕ್ರಿಯೆ

Taluknewsmedia.com

Taluknewsmedia.comಬಿಜೆಪಿ ಶಾಸಕ ಮುನಿರತ್ನ ಆರೋಪಗಳಿಗೆ ಕುಸುಮಾ ಹನುಮಂತರಾಯಪ್ಪ ತೀವ್ರ ಪ್ರತಿಕ್ರಿಯೆ ಬಿಜೆಪಿ ಶಾಸಕ ಮುನಿರತ್ನ ಅವರ ಆರೋಪಗಳಿಗೆ ಆರ್‌ಆರ್ ನಗರದ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರು ಮೊದಲ ಬಾರಿಗೆ ಬಾಯ್ಬಿಟ್ಟಿದ್ದಾರೆ. “ಜನರಿಗೆ ಸ್ಪಂದಿಸುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಾರ್ಯಕ್ರಮವನ್ನು ಹಾಳುಮಾಡುವ ನಿಟ್ಟಿನಲ್ಲಿ ಮುನಿರತ್ನ ರಾಜಕೀಯ ಆಟವಾಡುತ್ತಿದ್ದಾರೆ,” ಎಂದು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಪಾರ್ಕ್‌ಗಳಿಗೆ ಭೇಟಿ ನೀಡಿ ನಾಗರಿಕರ ಅಸಮಾಧಾನ, ಬೇಡಿಕೆ ಹಾಗೂ ಸಮಸ್ಯೆಗಳನ್ನು ನೇರವಾಗಿ ತಿಳಿದುಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಈ ಸಾರ್ವಜನಿಕ ಕಾರ್ಯಕ್ರಮದ ಕುರಿತು ಪತ್ರಿಕೆಗಳ ಮೂಲಕ ಜಾಹೀರಾತು ನೀಡಲಾಗಿದ್ದು, ಸ್ಥಳೀಯ ಶಾಸಕರಿಗೂ ಆಹ್ವಾನ ಕಳುಹಿಸಲಾಗಿದೆ ಎಂದು ಅವರು ತಿಳಿಸಿದರು. “ಆದರೆ ಇಲ್ಲಿ ನಡೆಯುತ್ತಿರುವ ಜನಪರ ಕಾರ್ಯಕ್ರಮಕ್ಕೆ ಬೆಂಬಲ ನೀಡುವ ಬದಲು, ಬಿಜೆಪಿ ಶಾಸಕ ಮುನಿರತ್ನ ಅವರು ಕಾರ್ಯಕ್ರಮವನ್ನು ಅವಮಾನಿಸುವ ಕೆಲಸ ಮಾಡಿದ್ದಾರೆ. ಜನರ ಅಭಿವೃದ್ಧಿಗೆ ಅಡ್ಡಿಯಾಗುವ…

ಮುಂದೆ ಓದಿ..
ಸುದ್ದಿ 

ವಿಜಯಪುರದಲ್ಲಿ ಡಬಲ್ ಮರ್ಡರ್: ಕಲ್ಲಿನಿಂದ ಜಜ್ಜಿ ಯುವಕರ ನರ್ಹತ್ಯೆ!

Taluknewsmedia.com

Taluknewsmedia.comವಿಜಯಪುರದಲ್ಲಿ ಡಬಲ್ ಮರ್ಡರ್: ಕಲ್ಲಿನಿಂದ ಜಜ್ಜಿ ಯುವಕರ ನರ್ಹತ್ಯೆ! ವಿಜಯಪುರ: ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ದ್ವಿಹತ್ಯೆ ಘಟನೆ ವಿಜಯಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹಳೆಯ ವೈಷಮ್ಯ ಹಿನ್ನೆಲೆ ಇಬ್ಬರು ಯುವಕರನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಭೀಕರ ಘಟನೆ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಡೆದಿದೆ. ಹತ್ಯೆಗೆ ಒಳಗಾದವರು ಸಾಗರ್ ಬೆಳುಂಡಗಿ (25) ಮತ್ತು ಇಸಾಕ್ ಖುರೇಶಿ (24) ಎಂದು ಗುರುತಿಸಲಾಗಿದೆ. ಇಬ್ಬರನ್ನೂ ಕಲ್ಲಿನಿಂದ ಹೊಡೆದು ಬರ್ಬರವಾಗಿ ಕೊಲೆಮಾಡಿದ ಆರೋಪದ ಮೇಲೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಾಹಿತಿಯ ಪ್ರಕಾರ, ಸುಮಾರು ಎರಡು ವರ್ಷಗಳ ಹಿಂದೆ ಇದೇ ಗ್ರಾಮದ ಈರಣ್ಣಗೌಡ ಎಂಬವರ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಸಾವಿಗೀಡಾದ ಸಾಗರ್ ಮತ್ತು ಇಸಾಕ್‌ ಹೆಸರು ಪ್ರಸ್ತಾಪವಾಗಿತ್ತು. ಇತ್ತೀಚೆಗೆ ಚಿಕಿತ್ಸೆ ಫಲಕಾರಿಯಾಗದೆ ಈರಣ್ಣಗೌಡ ಮೃತಪಟ್ಟಿದ್ದರಿಂದ, ಅದೇ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ…

ಮುಂದೆ ಓದಿ..
ಸುದ್ದಿ 

ಮಂಡ್ಯ : ಮಳೆಗೆ ಮಂಡ್ಯ ಜನ ಕಂಗೆಟ್ಟು – ಸಚಿವರ ಭೇಟಿ, ಪರಿಹಾರ ಭರವಸೆ ಮಾತ್ರ!

Taluknewsmedia.com

Taluknewsmedia.comಮಂಡ್ಯ : ಮಳೆಗೆ ಮಂಡ್ಯ ಜನ ಕಂಗೆಟ್ಟು – ಸಚಿವರ ಭೇಟಿ, ಪರಿಹಾರ ಭರವಸೆ ಮಾತ್ರ! ಸಕ್ಕರೆನಾಡು ಮಂಡ್ಯ ಜಿಲ್ಲೆ ಮತ್ತೆ ವರುಣನ ಕೋಪಕ್ಕೆ ತತ್ತರಿಸಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಗ್ಗು ಪ್ರದೇಶಗಳ ಮನೆಗಳು ಜಲಾವೃತಗೊಂಡು ಜನರು ನರಳುತ್ತಿದ್ದಾರೆ. ರೈತರ ದುಡಿಮೆ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿ ದೊಡ್ಡ ನಷ್ಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಜಲಾವೃತಗೊಂಡ ಮಂಡ್ಯದ ಕೆರೆ ಅಂಗಳದಲ್ಲಿರುವ ಕೆ.ಹೆಚ್.ಬಿ. ಬಡಾವಣೆಗೆ ಸಚಿವ ಎನ್. ಚಲುವರಾಯಸ್ವಾಮಿ ಖುದ್ದು ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದರು. ಅವರೊಂದಿಗೆ ಶಾಸಕ ಗಣಿಗ ಪಿ. ರವಿಕುಮಾರ್, ಡಿಸಿ, ಎಸ್ಪಿ, ಸಿಇಓ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು. ಸಚಿವರು ಮಾತನಾಡುತ್ತಾ, “ಮಂಡ್ಯದಲ್ಲೂ ಶ್ರೀರಂಗಪಟ್ಟಣ, ದಸರಗುಪ್ಪೆ ಸೇರಿದಂತೆ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಕೆ.ಹೆಚ್.ಬಿ ಕಾಲೋನಿಗೂ ನೀರು ನುಗ್ಗಿದ್ದು, ತಡೆಗೋಡೆ ನಿರ್ಮಿಸಲು 41 ಕೋಟಿ ರೂ. ಟೆಂಡರ್ ಕರೆಯಲಾಗಿದೆ,” ಎಂದರು.…

ಮುಂದೆ ಓದಿ..
ಸುದ್ದಿ 

ಸರ್ಕಾರದಿಂದ ಆಂಬುಲೆನ್ಸ್ ಸೇವೆ ಸಿಬ್ಬಂದಿ ಸಿಬ್ಬಂದಿ ನೇಮಕಕ್ಕೆ ಒಪ್ಪಿಗೆ.

Taluknewsmedia.com

Taluknewsmedia.comಸರ್ಕಾರದಿಂದ ಆಂಬುಲೆನ್ಸ್ ಸೇವೆ ಸಿಬ್ಬಂದಿ ಸಿಬ್ಬಂದಿ ನೇಮಕಕ್ಕೆ ಒಪ್ಪಿಗೆ. ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳಿಗೆ ನೇಮಕವಾಗುತ್ತಿಲ್ಲ ಹೊರಗುತ್ತಿಗೆ ಹಾಗೂ ಗುತ್ತಿಗೆಯ ಆಧಾರದ ಮೇಲೆ ನಡೆಯುವಂತಹ ಪ್ರಕ್ರಿಯೆಗಳು ಸ್ಥಗಿತಗೊಂಡಿವೆ. ಹೀಗೆ ಸಾವಿರಾರು ವಿಚಾರಗಳು ಮತ್ತೆ ಅವುಗಳ ಗೊಂದಲಗಳಲ್ಲಿ ಇರುವವರಿಗೆ ಸರಕಾರ ಕೊಂಚ ರಿಲೀಫ್ ಕೊಟ್ಟಿದೆ . ರಾಜ್ಯದಲ್ಲಿ ಇದು ಮೊದಲ ಬಾರಿಗೆ ಅಂತ ಹೇಳಬಹುದು 108 ಅಂದ್ರೆ ಆಂಬುಲೆನ್ಸ್ ಸೇವೆ ಮುಖ್ಯವಾಗಿ ಜನರಿಗೆ ತುಂಬಾ ಆರೋಗ್ಯದ ವಿಚಾರದಲ್ಲಿ ಹತ್ತಿರವಾಗಿ ಇರುವಂತದ್ದು. ಈ ಒಂದು ಸೇವೆಯಲ್ಲಿ ಗುತ್ತಿಗೆ ಹೊರಗುತ್ತಿಗೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು. ಎಂದು ಆರೋಗ್ಯ ಇಲಾಖೆ ತಿಳಿಸಿ ಮಂಜೂರು ಕೂಡ ಆಗಿದೆ. ಹಾಗೆ 104 ಸಹಾಯವಾಣಿ ಯೋಜನೆಯನ್ನು ಕೂಡ ಆರೋಗ್ಯ ವತಿಯಿಂದಲೇ ಜಾರಿಗೊಳಿಸಲಾಗುತ್ತದೆ . ಈ ಎರಡು ವಿಭಾಗಕ್ಕೆ ಸಂಬಂಧಪಟ್ಟಹಾಗೆ 3691 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಕ್ಕೆ ಸರ್ಕಾರ ಒಪ್ಪಿಗೆಯನ್ನು ಹಾಗೂ ಮಂಜೂರಾತಿಯನ್ನು ನೀಡಿದೆ. ನರ್ಸಿಂಗ್ ಯಾರ್ ಮಾಡಿದರೂ ಖುಷಿ ಪಡುವಂತ…

ಮುಂದೆ ಓದಿ..
ಸುದ್ದಿ 

2025ರ ನೊಬೆಲ್ ಶಾಂತಿ ಪ್ರಶಸ್ತಿ: ವೆನೆಜುವೆಲಾದ ಹೋರಾಟಗಾರ್ತಿ ಮಾರಿಯಾ ಕೊರಿನಾ ಮಚಾಡೊಗೆ ಗೌರವ

Taluknewsmedia.com

Taluknewsmedia.com2025ರ ನೊಬೆಲ್ ಶಾಂತಿ ಪ್ರಶಸ್ತಿ: ವೆನೆಜುವೆಲಾದ ಹೋರಾಟಗಾರ್ತಿ ಮಾರಿಯಾ ಕೊರಿನಾ ಮಚಾಡೊಗೆ ಗೌರವ 2025ನೇ ಸಾಲಿನ ಬಹುನಿರೀಕ್ಷಿತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ವೆನೆಜುವೆಲಾದ ಮಹಿಳಾ ಹೋರಾಟಗಾರ್ತಿ ಮಾರಿಯಾ ಕೊರಿನಾ ಮಚಾಡೊ ಅವರಿಗೆ ಪ್ರದಾನ ಮಾಡಲಾಗಿದೆ. ಈ ಬಾರಿ ಒಟ್ಟು 338 ಮಂದಿ ಮತ್ತು ಸಂಸ್ಥೆಗಳು ನಾಮನಿರ್ದೇಶಿತರಾಗಿದ್ದರು. ಮಚಾಡೊ ಅವರು ವೆನೆಜುವೆಲಾದ ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ಉಳಿಸಲು ಹಾಗೂ ಸರ್ವಾಧಿಕಾರದಿಂದ ಪ್ರಜಾಪ್ರಭುತ್ವದತ್ತ ಶಾಂತಿಯುತ ಬದಲಾವಣೆಗಾಗಿ ನಡೆಸಿದ ಹೋರಾಟಕ್ಕೆ ಈ ಗೌರವ ದೊರೆತಿದೆ. ಪ್ರಶಸ್ತಿಯ ಮೊತ್ತ ಸುಮಾರು ₹10.38 ಕೋಟಿ ಆಗಿದೆ. ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಕುರಿತು ಪ್ರಕಟಣೆ ನೀಡಿದ್ದು, “ಮಚಾಡೊ ಅವರು ಒಮ್ಮೆಗೆ ತೀವ್ರವಾಗಿ ವಿಭಜನೆಯಾಗಿದ್ದ ವಿರೋಧ ಪಕ್ಷಗಳಲ್ಲಿ ಸಾಮರಸ್ಯ ನಿರ್ಮಿಸಿ, ದೇಶದಲ್ಲಿ ಸ್ವತಂತ್ರ ಚುನಾವಣೆ ಮತ್ತು ಪ್ರಾತಿನಿಧಿಕ ಆಡಳಿತದ ಅಗತ್ಯತೆಯನ್ನು ಒತ್ತಿ ಹೇಳಿದರು. ಅವರ ಈ ನಿರಂತರ ಪ್ರಯತ್ನಗಳು ಪ್ರಜಾಪ್ರಭುತ್ವದ ಪುನರುಜ್ಜೀವನಕ್ಕೆ ದಾರಿ ಮಾಡಿಕೊಟ್ಟಿವೆ” ಎಂದು…

ಮುಂದೆ ಓದಿ..
ಸುದ್ದಿ 

“ಬೆಂಗಳೂರು ನಡಿಗೆ” ಆರಂಭ – ಪ್ರಚಾರ ನಡಿಗೆಯಾ? ಸಮಸ್ಯೆ ಪರಿಹಾರದ ನಡಿಗೆಯಾ?

Taluknewsmedia.com

Taluknewsmedia.com“ಬೆಂಗಳೂರು ನಡಿಗೆ” ಆರಂಭ – ಪ್ರಚಾರ ನಡಿಗೆಯಾ? ಸಮಸ್ಯೆ ಪರಿಹಾರದ ನಡಿಗೆಯಾ? ನಗರದ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಿಗ್ಗೆ ಲಾಲ್ ಬಾಗ್ ಪೂರ್ವ ದ್ವಾರದಲ್ಲಿ “ಬೆಂಗಳೂರು ನಡಿಗೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆದರೆ ನಾಗರಿಕರ ಪ್ರಶ್ನೆ — ನಡಿಗೆಗಳಿಂದ ಸಮಸ್ಯೆ ಪರಿಹಾರವಾಗುವುದೇ? ನಗರದ ಪ್ರತಿಯೊಂದು ವಾರ್ಡ್‌ನಲ್ಲಿ ಮೂಲಸೌಕರ್ಯ ಹದಗೆಟ್ಟಿದೆ, ಗುಂಡಿಗಳು, ಒಳಚರಂಡಿ ತೊಂದರೆ, ಕಸದ ಸಮಸ್ಯೆ, ಟ್ರಾಫಿಕ್ ಅಸ್ತವ್ಯಸ್ತತೆ — ಇವುಗಳ ನಡುವೆ ನಡೆಯುವ ಈ ನಡಿಗೆ, ಜನಸಾಮಾನ್ಯರ ಕಷ್ಟದ “ನಿರೀಕ್ಷಾ ನಡಿಗೆ” ಆಗಿ ತೋರುತ್ತಿದೆ. ಡಿ.ಕೆ. ಶಿವಕುಮಾರ್ ಅವರು ನಾಗರಿಕರ ಅಹವಾಲುಗಳನ್ನು ಖುದ್ದಾಗಿ ಸ್ವೀಕರಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮಕೈಗೊಳ್ಳಲು ಸೂಚಿಸಿದರೂ, ಹಿಂದಿನ ಇಂತಹ ಕಾರ್ಯಕ್ರಮಗಳಲ್ಲಿ ನೀಡಿದ ಭರವಸೆಗಳು ಎಷ್ಟು ನೆಲೆಯಾದವು ಎಂಬ ಪ್ರಶ್ನೆ ಮತ್ತೆ ಎದ್ದಿದೆ. ಕಾರ್ಯಕ್ರಮದಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್, ನಗರಾಭಿವೃದ್ಧಿ…

ಮುಂದೆ ಓದಿ..
ಸುದ್ದಿ 

ವಿಷಕಾರಿ ಕೆಮ್ಮಿನ ಸಿರಪ್ ದುರಂತಕ್ಕೆ ಕೇಂದ್ರದ ಕಠಿಣ ಹೊಡೆತ

Taluknewsmedia.com

Taluknewsmedia.comವಿಷಕಾರಿ ಕೆಮ್ಮಿನ ಸಿರಪ್ ದುರಂತಕ್ಕೆ ಕೇಂದ್ರದ ಕಠಿಣ ಹೊಡೆತ ವಿಷಕಾರಿ ಕೆಮ್ಮಿನ ಸಿರಪ್ ಸೇವನೆಯಿಂದ 20ಕ್ಕೂ ಹೆಚ್ಚು ನಿರಪರಾಧ ಮಕ್ಕಳ ಪ್ರಾಣ ಬಲಿಯಾದ ಹಿನ್ನೆಲೆ, ಕೇಂದ್ರ ಸರ್ಕಾರವು ಔಷಧ ಕಂಪನಿಗಳ ವಿರುದ್ಧ ಇತಿಹಾಸದಲ್ಲೇ ಅತಿ ಕಠಿಣ ಕ್ರಮ ಕೈಗೊಂಡಿದೆ. 🔹 ಕೇಂದ್ರ ಔಷಧ ನಿಯಂತ್ರಣ ಸಂಸ್ಥೆ (CDSCO) ತನಿಖೆ ನಡೆಸಿ, ಮೂರೂ ಕಂಪನಿಗಳ ಉತ್ಪನ್ನಗಳು ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದುದನ್ನು ದೃಢಪಡಿಸಿದೆ.🔹 ಪರಿಣಾಮವಾಗಿ ಸರ್ಕಾರವು ಕೆಳಗಿನ ಮೂರು ಸಿರಪ್‌ಗಳ ತಯಾರಿ ಹಾಗೂ ಮಾರಾಟವನ್ನು ನಿಷೇಧಿಸಿದೆ: 🧪 ಕೋಲ್ಡ್‌ರಿಫ್‌ (Coldriff) 🧪 ರೆಸ್ಪಿರ್‌ಫ್ರೆಶ್‌-ಟಿಆರ್‌ (Respirefresh-TR) 🧪 ರೀಲೈಫ್‌ (Relife) 🔹 ಈ ಸಿರಪ್‌ಗಳನ್ನು ತಕ್ಷಣ ಮಾರುಕಟ್ಟೆಯಿಂದ ಹಿಂಪಡೆಯುವಂತೆ ಹಾಗೂ ಉತ್ಪಾದನೆ ನಿಲ್ಲಿಸುವಂತೆ ಕಂಪನಿಗಳಿಗೆ ಸರ್ಕಾರ ಆದೇಶಿಸಿದೆ.🔹 ಕೇಂದ್ರ ಸರ್ಕಾರವು ಈ ಬೆಳವಣಿಗೆಯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಗೆ ಅಧಿಕೃತ ವರದಿ ಸಲ್ಲಿಸಿದೆ.🔹 ಜೊತೆಗೆ, ಈ ಸಿರಪ್‌ಗಳು ಬೇರೆ…

ಮುಂದೆ ಓದಿ..