ಚಿತ್ರದುರ್ಗದಲ್ಲಿ ಲೋಕಾಯುಕ್ತ ಸಿಡಿಲಿನ ದಾಳಿ – ಕೃಷಿ ಇಲಾಖೆಯ ಎಡಿ ಚಂದ್ರಕುಮಾರ್ ಮನೆ ಸೇರಿ 3 ಕಡೆ ಶೋಧ
Taluknewsmedia.comಚಿತ್ರದುರ್ಗದಲ್ಲಿ ಲೋಕಾಯುಕ್ತ ಸಿಡಿಲಿನ ದಾಳಿ – ಕೃಷಿ ಇಲಾಖೆಯ ಎಡಿ ಚಂದ್ರಕುಮಾರ್ ಮನೆ ಸೇರಿ 3 ಕಡೆ ಶೋಧ ಬೆಳ್ಳಂ ಬೆಳಿಗ್ಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಸಿಡಿಲಿನ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕೃಷಿ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಚಂದ್ರಕುಮಾರ್ ಎಡಿ ಅವರ ವಿರುದ್ಧ ಲೋಕಾಯುಕ್ತ ತನಿಖೆ ಪ್ರಾರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಮೂರು ಕಡೆ ಏಕಕಾಲದಲ್ಲಿ ಶೋಧ ನಡೆಸಿದೆ. ದಾಳಿ ನಡೆದ ಸ್ಥಳಗಳು: ತರಳಬಾಳು ನಗರದ ಮನೆ, ಹೊಳಲ್ಕೆರೆ ತಾಲೂಕು ಕಚೇರಿ, ಟಿ.ನುಲೇನೂರು ಗ್ರಾಮದ ನಿವಾಸ. ಲೋಕಾಯುಕ್ತ ಅಧಿಕಾರಿಗಳ ಪ್ರಾಥಮಿಕ ಮಾಹಿತಿಯ ಪ್ರಕಾರ, ಚಂದ್ರಕುಮಾರ್ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪಗಳು ಕೇಳಿಬಂದಿದ್ದು, ಅದರ ಆಧಾರದ ಮೇಲೆ ಶೋಧ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಶೋಧ ಕಾರ್ಯಾಚರಣೆಯ ವೇಳೆ ಅಧಿಕಾರಿಗಳು ವಿವಿಧ ದಾಖಲೆಗಳು, ಬ್ಯಾಂಕ್ ಪಾಸ್ಬುಕ್ಗಳು, ಆಸ್ತಿ ದಾಖಲೆಗಳು,…
ಮುಂದೆ ಓದಿ..
