ಸುದ್ದಿ 

ನಾಗಮಂಗಲಿಗರು ಶುದ್ಧ ಕನ್ನಡ ಮಾತನಾಡುವ ಜನ : ವ.ನಂ.ಶಿವರಾಮು

Taluknewsmedia.com

Taluknewsmedia.comನಾಗಮಂಗಲಿಗರು ಶುದ್ಧ ಕನ್ನಡ ಮಾತನಾಡುವ ಜನ : ವ.ನಂ.ಶಿವರಾಮು ನಾಗಮಂಗಲ : ಪ್ರಪಂಚದಲ್ಲಿ ಎಲ್ಲಾದರು ಕನ್ನಡ ಕೇಳಿದರೆ ಅದು ನಾಗಮಂಗಲದ ಜನರ ಧ್ವನಿ. ಶುದ್ಧ ಕನ್ನಡ ನಾಗಮಂಗಲ ಜನರಿಂದ ಮಾತ್ರ ಸಾಧ್ಯ ಎಂದು ಮೈಸೂರು ಇಪ್ರೊ ಜಾನಪದ ಮಹಾ ವಿದ್ಯಾಲಯದ ಶೈಕ್ಷಣಿಕ ನಿರ್ದೇಶಕ ಪ್ರೊ.ವ.ನಂ.ಶಿವರಾಮು ಅಭಿಪ್ರಾಯ ಪಟ್ಟರು. ಪಟ್ಟಣದ ಶ್ರೀ ಸೌಮ್ಯಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ೭೦ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದಿನದ ಮಹತ್ವ ಕುರಿತು ಪ್ರಧಾನ ಉಪನ್ಯಾಸ ನೀಡಿ ಮಾತನಾಡಿದರು. ಕನ್ನಡ ಭಾಷೆ ಒಂದು ಸಂಸ್ಕೃತಿ. ಕನ್ನಡತನದ ಸೊಗಡು ಸಮಾಜದಲ್ಲಿ ಆವರಿಸಿದ್ದಾಗ ಸಂಬಂಧಗಳಲ್ಲಿ ಗಟ್ಟಿತನ ಇತ್ತು. ಆಂಟಿ ಅಂಕಲ್ ಸಂಸ್ಕೃತಿ ಬಂದಮೇಲೆ ಕನ್ನಡ ಸೊರಗಿ ಅನೈತಿಕ ಸಂಬಂಧ ಅನಾಚಾರ ಅತ್ಯಾಚಾರ ಹೆಚ್ಚಾಗಲು ಕಾರಣವಾಯಿತು ಎಂದು ಬೇಸರ ವ್ಯಕ್ತಪಡಿಸಿದರು. ಮಹಿಳೆಯರು ಮನಸ್ಸು ಮಾಡಿದರೆ ಮನೆ ಪೂರಾ ಕನ್ನಡವಾಗುತ್ತದೆ, ಕನ್ನಡ ಉಳಿಯುತ್ತದೆ. ಕನ್ನಡ…

ಮುಂದೆ ಓದಿ..
ಸುದ್ದಿ 

ಸರ್ಕಾರ ಮಾಡಬೇಕಾದ ಕಾರ್ಯಗಳನ್ನು ಶ್ರೀಮಠ ಮಾಡುತ್ತಿರುವುದು ಹೆಮ್ಮೆಯ ವಿಚಾರ: ಶರಣ ಪ್ರಕಾಶ್ ಪಾಟೀಲ್

Taluknewsmedia.com

Taluknewsmedia.comಸರ್ಕಾರ ಮಾಡಬೇಕಾದ ಕಾರ್ಯಗಳನ್ನು ಶ್ರೀಮಠ ಮಾಡುತ್ತಿರುವುದು ಹೆಮ್ಮೆಯ ವಿಚಾರ: ಶರಣ ಪ್ರಕಾಶ್ ಪಾಟೀಲ್ ನಾಗಮಂಗಲ :ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ೨೦೨೫ನೇ ಸಾಲಿನ ವೈದ್ಯಕೀಯ ಮತ್ತು ಅನ್ವಯಿಕ ಆರೋಗ್ಯ ವಿಜ್ಞಾನಗಳ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಭವ್ಯವಾಗಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮಾತನಾಡಿ ಶ್ರೀ ಬಾಲಗಂಗಾಧರನಾಥ ಮಹಾ ಸ್ವಾಮೀಜಿಗಳ ಪರಿಶ್ರಮದ ಫಲವಾಗಿ ಸ್ಥಾಪನೆಯಾದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಈ ಮಠವನ್ನು ಪೂಜ್ಯ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇಂತಹ ಕ್ಷೇತ್ರದಲ್ಲಿ ಓದುತ್ತಿರುವುದು ನಿಮಗೆ ಶ್ರೇಷ್ಠ ಅವಕಾಶ ಹಾಗೂ ಸರ್ಕಾರ ಮಾಡಬೇಕಾದ ಕಾರ್ಯಗಳನ್ನು ಶ್ರೀಮಠವು ಮಾಡುತ್ತಿರುವುದು ಹೆಮ್ಮೆ ಪಡುವ ವಿಷಯ ಎಂದು ಹರ್ಷ ವ್ಯಕ್ತಪಡಿಸಿದರು ಇದೇ ಸಂದರ್ಭದಲ್ಲಿ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯವು ಹೊರತಂದಿರುವ ಅಂಕಣ ಬರಹದ ಹೊತ್ತಿಗೆಗಳನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ…

ಮುಂದೆ ಓದಿ..
ಸುದ್ದಿ 

ಕೋಟೆ ಗಣಪತಿ ವಿಸರ್ಜನೆಗಾಗಿ ಸಿಂಗಾರಗೊಂಡಿರುವ ನಾಗಮಂಗಲ

Taluknewsmedia.com

Taluknewsmedia.comಕೋಟೆ ಗಣಪತಿ ವಿಸರ್ಜನೆಗಾಗಿ ಸಿಂಗಾರಗೊಂಡಿರುವ ನಾಗಮಂಗಲ ಇಂದು ನಾಗಮಂಗಲ ಪಟ್ಟಣದಲ್ಲಿ ವೈಭವಯುತ ಮೆರವಣಿಗೆಯೊಂದಿಗೆ 73ನೇ ವರ್ಷದ ಕೋಟೆ ಗಣಪತಿ ವಿಸರ್ಜನಾ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಯಶಸ್ವಿಯಾದ ಅನ್ನ ಸಂತರ್ಪಣ ಕಾರ್ಯಕ್ರಮ: ದಿ:15/10/25 ರಂದು ಕೋಟೆ ಗಣಪತಿ ಸೇವಾ ಸಮಿತಿಯಿಂದ ಜರುಗಿದ ಅನ್ನ ಸಂತರ್ಪಣ ಕಾರ್ಯಕ್ರಮದಲ್ಲಿ ಸು 9000 ಮಂದಿ ಪ್ರಸಾದ ಸ್ವೀಕರಿಸಿ ವಿನಾಯಕನ ಕೃಪೆಗೆ ಪಾತ್ರರಾದರು. ಟಿ ಮರಿಯಪ್ಪ ವೃತ್ತದ ಮಹಾದ್ವಾರ ಪ್ರಮುಖ ಆಕರ್ಷಣೆ: ಬೀದರ್ – ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಹಾಗೂ ಕೆ ಎಸ್ ಟಿ ರಸ್ತೆ ಸಂಧಿಸುವ ಟಿ ಮರಿಯಪ್ಪ ವೃತ್ತದಲ್ಲಿ ನಿರ್ಮಿಸಿರುವ ಭಜರಂಗಿ ಹಾಗೂ ಶ್ರೀರಾಮಚಂದ್ರ ಲಕ್ಷ್ಮಣರ ಪ್ರತಿಮೆ ಇರುವ ಮಹಾದ್ವಾರವು ದಾರಿಹೋಕರ ನಯನ ಚಿತ್ತಗಳನ್ನು ಆಕರ್ಷಿಸುತ್ತಿದ್ದು ಹಿಂದುತ್ವದ ಭಾವವನ್ನು ಪ್ರತಿಯೊಬ್ಬ ನೋಡುಗರಲ್ಲೂ ಮೂಡಿಸುವಂತಿದೆ. ಸುಮಾರು 25,000 ಜನರು ಭಾಗಿಯಾಗುವ ನಿರೀಕ್ಷೆ :ಇಂದು ನೆಡೆಯುವ ಶೋಭಾಯಾತ್ರೆಯಲ್ಲಿ ಸರಿಸುಮಾರು 25,000 ಜನರು ಹಾಗೂ ನೂರಾರು ಕಲಾ…

ಮುಂದೆ ಓದಿ..
ಸುದ್ದಿ 

ಟಿಕೆಟ್ ಬುಕ್ ಮಾಡಿದ ನಂತರ ಪ್ರಯಾಣ ದಿನ ಬದಲಾವಣೆಗೆ ಅವಕಾಶವನ್ನು ನೀಡಲು ರೈಲ್ವೆ ಇಲಾಖೆ, ಚಿಂತನೆ.

Taluknewsmedia.com

Taluknewsmedia.comಟಿಕೆಟ್ ಬುಕ್ ಮಾಡಿದ ನಂತರ ಪ್ರಯಾಣ ದಿನ ಬದಲಾವಣೆಗೆ ಅವಕಾಶವನ್ನು ನೀಡಲು ರೈಲ್ವೆ ಇಲಾಖೆ, ಚಿಂತನೆ. ರಾಜ್ಯದಲ್ಲಿ ಹೆಚ್ಚು ಜನರು ಉಪಯೋಗಿಸುವ ವಾಹನಗಳಲ್ಲಿ ರೈಲ್ವೆಯು ಕೂಡ ಒಂದಾಗಿದ್ದು ಹಾಗೆಯೇ ಇದು ಉತ್ತಮವಾದ ಶುಲ್ಕವನ್ನು ಕೂಡ ಹೊಂದಿದೆ. ಮಧ್ಯಮ ವರ್ಗದವರಿಗೆ ಬಡವರಿಗೆ ಹಾಗೂ ದೂರದ ಊರುಗಳಿಗೆ ಪ್ರಯಾಣಿಸುವವರಿಗೆ ಇದು ಉತ್ತಮವಾದ ವಾಹನವಾಗಿದೆ. ರೈಲ್ವೆ ಇಲಾಖೆಯಲ್ಲಿನ ಸಮಸ್ಯೆ ಎಂದರೆ ಒಮ್ಮೆ ಟಿಕೆಟ್ ಬುಕ್ಕಾದ ತಕ್ಷಣ ಆ ದಿನ ಪ್ರಯಾಣ ಮಾಡಲಿಲ್ಲವೆಂದರೆ ಅದು ಕ್ಯಾನ್ಸಲ್ ಆಗುವ ಸಂಭವ ಇತ್ತು ಹಾಗೆ ಯಾವುದೇ ಶುಲ್ಕವು ಮರಳಿ ಬರುವುದಿಲ್ಲ. ಟಿಕೆಟ್ ಬುಕ್ ಮಾಡಿದ ನಂತರ ಪ್ರಯಾಣಿಕರು ತಮ್ಮ ಪ್ರಯಾಣದ ದಿನವನ್ನು ಬದಲಿಸಲು ಅವಕಾಶವಿರಲಿಲ್ಲ ಹಾಗೆ ಆ ಟಿಕೆಟ್ ಅನ್ನ ರದ್ದುಗೊಳಿಸಿ ಬೇರೆ ಟಿಕೆಟ್ ಬುಕಿಂಗ್ ಮಾಡುವ ವ್ಯವಸ್ಥೆ ಇತ್ತು. ಇಲಾಖೆ ಈ ಮನವಿಯನ್ನು ಪರಿಶೀಲಿಸುತ್ತಿದೆ. ಟಿಕೆಟ್ ಬುಕ್ ಮಾಡಿದ ನಂತರ ಪ್ರಯಾಣಿಕರು ತಮ್ಮ ದಿನವನ್ನು…

ಮುಂದೆ ಓದಿ..
ಸುದ್ದಿ 

ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ನವವಿವಾಹಿತೆಯ ದುರ್ಘಟನೆ!

Taluknewsmedia.com

Taluknewsmedia.comಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ನವವಿವಾಹಿತೆಯ ದುರ್ಘಟನೆ! ಚಿಕ್ಕಬಳ್ಳಾಪುರ ಜಿಲ್ಲೆ, ಗುಡಿಬಂಡೆ ತಾಲೂಕು — ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ನವವಿವಾಹಿತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುಡಿಬಂಡೆ ತಾಲೂಕಿನ ಕೊಂಡಾವಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಕೆ.ಎಸ್. ಜಯಶ್ರೀ (30) ಎಂದು ಗುರುತಿಸಲಾಗಿದೆ. ಕೇವಲ ಆರು ತಿಂಗಳ ಹಿಂದಷ್ಟೇ ಶಿಡ್ಲಘಟ್ಟ ತಾಲ್ಲೂಕಿನ ಕೊಂಡಪ್ಪನಹಳ್ಳಿ ಗ್ರಾಮದ ಚಂದ್ರಶೇಖರ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಮನೆಯ ಬಾತ್‌ರೂಮ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಜಯಶ್ರೀ, ತನ್ನ ಫೇಸ್‌ಬುಕ್ ಖಾತೆಯಲ್ಲಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಡೆತ್ ನೋಟ್‌ನಲ್ಲಿ ಪತಿ ಚಂದ್ರಶೇಖರ್‌ನ ವಿರುದ್ಧ ಗಂಭೀರ ಆರೋಪ ಮಾಡಿರುವ ಜಯಶ್ರೀ,ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಕಿರುಕುಳ ನೀಡುತ್ತಿದ್ದ ಎಂಬುದಾಗಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು “ಚಂದ್ರಶೇಖರ್ ಬಂಧನದವರೆಗೆ ಶವ ಸಂಸ್ಕಾರ ಮಾಡಬಾರದು” ಎಂಬ ನಿಲುವು ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗುಡಿಬಂಡೆ ಠಾಣೆ…

ಮುಂದೆ ಓದಿ..
ಸುದ್ದಿ 

ಹಣವಿಲ್ಲದಿದ್ದರೂ ಹಸಿದವರಿಗೆ ಹೊಟ್ಟೆತುಂಬ ಊಟ ನೀಡುವ ‘ಫುಡ್ ಬ್ಯಾಂಕ್ ಯೋಜನೆ..

Taluknewsmedia.com

Taluknewsmedia.comಹಣವಿಲ್ಲದಿದ್ದರೂ ಹಸಿದವರಿಗೆ ಹೊಟ್ಟೆತುಂಬ ಊಟ ನೀಡುವ ‘ಫುಡ್ ಬ್ಯಾಂಕ್ ಯೋಜನೆ.. ರಾಜ್ಯದ 236 ತಾಲೂಕುಗಳಲ್ಲಿ ಕಾರ್ಯಾರಂಭ ಒಂದು ಹೊತ್ತಿನ ಊಟಕ್ಕೆ ಗತಿಯಿಲ್ಲದವರು ಹಸಿವಿನಿಂದ ಇರಬಾರದೆಂದು ‘ಫುಡ್ ಬ್ಯಾಂಕ್ ಪರಿಕಲ್ಪನೆಯನ್ನು ಪರಿಚಯಿಸಲಾಗಿದೆ. ಹಸಿದವರಿಗೆ ಊಟ ನೀಡುವ ಫುಡ್ ಬ್ಯಾಂಕ್ ಕೈಯಲ್ಲಿ ಹಣವಿಲ್ಲದಿದ್ದರೂ ಹಸಿದವರಿಗೆ ಹೋಟೆಲ್​ನಲ್ಲಿ ಊಟ ನೀಡುವ ಯೋಜನೆಯೊಂದು ಸದ್ದಿಲ್ಲದೆ ಕಾರ್ಯಾರಂಭ ಮಾಡಿದೆ. ರಾಜ್ಯದ 236 ತಾಲೂಕುಗಳಲ್ಲಿ ಫುಡ್ ಬ್ಯಾಂಕ್ ಪ್ರಾರಂಭ ಆಗುತ್ತಿದೆ. ಹೌದು, ಒಪ್ಪೊತ್ತಿನ ಊಟಕ್ಕೆ ಗತಿಯಿಲ್ಲದವರು ಹಸಿವಿನಿಂದ ಇರಬಾರದೆಂದು ‘ಫುಡ್ ಬ್ಯಾಂಕ್ ಎಂಬ ಯೋಜನೆಯನ್ನು ಆರಂಭಿಸಲಾಗಿದೆ. ಬಡವರ ಹಸಿವು ತಣಿಸುವ ಕಾರ್ಯವನ್ನು ಮಾರಾಂಡಹಳ್ಳಿ ಗ್ರಾಮದಲ್ಲಿ ಜನಿಸಿದ ಎಂ. ಬಿ ಕೃಷ್ಣಮೂರ್ತಿ ಕರ್ನಾಟಕ ಫುಡ್ ಬ್ಯಾಂಕ್ ಆರಂಭಿಸಿದೆ. ಬಡವರ ಹಸಿವು ತಣಿಸಲೆಂದು ‘ಫುಡ್ ಬ್ಯಾಂಕ್’ ವ್ಯವಸ್ಥೆ ಇರುವ ಹೋಟೆಲ್ ಹೊರಗಡೆ ಅಳವಡಿಸಿರುವ ಟೋಕನ್ ತೆಗೆದುಕೊಂಡು ಕೌಂಟರ್​ನಲ್ಲಿ ನೀಡಿ ಯಾವುದೇ ಅಂಜಿಕೆಯಿಲ್ಲದೆ ಹೊಟ್ಟೆ ತುಂಬಾ ಊಟ ಮಾಡಬಹುದಾಗಿದೆ. ಸಹೃದಯಿಗಳು…

ಮುಂದೆ ಓದಿ..
ಸುದ್ದಿ 

ಗ್ರಾಮ ಭಾರತಿ ಟ್ರಸ್ಟ್ ವತಿಯಿಂದ ವಿಶ್ವ ಆತ್ಮ ಹತ್ಯ ತಡೆ ದಿನ

Taluknewsmedia.com

Taluknewsmedia.comಗ್ರಾಮ ಭಾರತಿ ಟ್ರಸ್ಟ್ ವತಿಯಿಂದ ವಿಶ್ವ ಆತ್ಮ ಹತ್ಯ ತಡೆ ದಿನ ನಗರದ ಗುರುಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಆಡಳಿತ ಸಹಕಾರದೊಂದಿಗೆ ಗ್ರಾಮಭಾರತಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾ. ಶ್ರೀ ನಟೇಶ್ ಜಿಲ್ಲಾ ಸದಸ್ಯ ಕಾರ್ಯದರ್ಶಿಗಳು ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ ಪ್ರತಿ ವರ್ಷ ಸುಮಾರು 9 ಲಕ್ಷ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿದ್ದು ಇದೊಂದು ಆತಂಕಕಾರಿ ವಿಷಯ ಇದನ್ನು ತಡೆಗಟ್ಟಲು ಪ್ರತಿಯೊಬ್ಬ ನಾಗರಿಕನು ಸಂವಿಧಾನ ಬದ್ಧ ಕರ್ತವ್ಯಗಳಲ್ಲೂ ಒಂದಾಗಿದ್ದು ಇದಕ್ಕೆ ಪ್ರತಿಯೊಬ್ಬನಾಗರಿಕನು ಕೈಜೋಡಿಸಬೇಕೆಂದು ತಿಳಿಸಿದರು. ತಮ್ಮ ಸುತ್ತು ಮುತ್ತಲ ಪ್ರದೇಶದಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳು, ಮಾದಕ ವಸ್ತುಗಳು ಸಂಗ್ರಹಣೆ ಮತ್ತು ಮಾರಾಟ, ಪರಿಸರದ ಮೇಲೆ ಆಗುತ್ತಿರುವ ಅಕ್ರಮಗಳ ಬಗ್ಗೆ ಜಾಗೃತಿ ವಹಿಸಿ ಆರೋಗ್ಯವಂತ ಸಮಾಜ ನಿರ್ಮಾಣದ ರೂವಾರಿಗಳಾಗಬೇಕು ಆಗಲೇ ಸುಸಂಸ್ಕೃತ ಸಮಾಜ ತಲೆಯೆತ್ತಲು…

ಮುಂದೆ ಓದಿ..
ಸುದ್ದಿ 

ಗ್ರಾಮ ಭಾರತಿ ಟ್ರಸ್ಟ್ ಮತ್ತು ಮುಳಬಾಗಿಲು ಫುಡ್ ಬ್ಯಾಂಕ್ ಅರ್ ಎಲ್ ಜಾಲಪ್ಪ ಮೊಬೈಲ್ ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರೀಕರ..

Taluknewsmedia.com

Taluknewsmedia.comಮುಳಬಾಗಿಲು: ಮನುಷ್ಯ ಆರೋಗ್ಯದ ಕೊರತೆ ಉಂಟಾದಾಗ ಮಾತ್ರ ಅದು ಎಷ್ಟು ಮುಖ್ಯ ಎಂಬುದು ಅರಿವಾಗುತ್ತದೆ ಎಂದು ಮುಳಬಾಗಿಲು ಫುಡ್ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಕೃಷ್ಣಮೂರ್ತಿ ಹೇಳಿದರು ನಗರದ ಎಸ್ ಬಿ ಐ ಬ್ಯಾಂಕ್ ಮುಂದೆ ಗ್ರಾಮ ಭಾರತಿ ಟ್ರಸ್ಟ್ ಮತ್ತು ಮುಳಬಾಗಿಲು ಫುಡ್ ಬ್ಯಾಂಕ್ ಅರ್ ಎಲ್ ಜಾಲಪ್ಪ ಮೊಬೈಲ್ ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಹಿರಿಯ ನಾಗರಿಕರಿಗೆ ಅನೇಕ ಸೌಲಭ್ಯ ಒದಗಿಸಿದೆ. ಜತೆಗೆ ಅವರಿಗಾಗಿಯೇ ಆರೋಗ್ಯ ಭದ್ರತೆ ಒದಗಿಸಿದೆ. ಆದರೆ,ಹಿರಿಯ ನಾಗರಿಕರ ತಮ್ಮ ಜೀವನ ಕೊನೆಗಳಿಗೆಗೆ ಬೇಕಾದ ಅವಶ್ಯಕತೆಗಳಿಗೆ ಮಕ್ಕಳು ಭದ್ರತೆಯಾಗಬೇಕು ಎಂದರು.ಅನೇಕ ಪ್ರಕರಣದಲ್ಲಿ ಮಕ್ಕಳು ಪೋಷಕರಿಂದ ಅವರ ಅಸ್ತಿ, ಅಂತಸ್ತನ್ನು ತಮ್ಮ ಹೆಸರಿಗೆ ವರ್ಗಾಹಿಸಿಕೊಂಡು ಕೊನೆಗೆ ಅವರನ್ನು ಬೀದಿಗೆ ತಳ್ಳುವ ನೂರಾರು ಘಟನೆಗಳು ಈಗಾಗಲೇ ನಡೆದಿದೆ. ಈ ಬಗ್ಗೆ ಹಿರಿಯ ನಾಗರೀಕರು ಎಚ್ಚರಿಕೆ…

ಮುಂದೆ ಓದಿ..
ಸುದ್ದಿ 

ಹುಬ್ಬಳ್ಳಿಯಲ್ಲಿ ಮಹಿಳೆಯರ ನಡುವೆ ಗಲಾಟೆ: ಇಬ್ಬರ ವಿರುದ್ಧ ಪೊಲೀಸ್ ದೂರು

Taluknewsmedia.com

Taluknewsmedia.comಹುಬ್ಬಳ್ಳಿ, ಜೂನ್ 17, 2025: ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹೋಟೆಲ್ ನೌಕರಿಯಾಗಿರುವ ಮಹಿಳೆ ಹಾಗೂ ಆಕೆಯ ಪುತ್ರಿಗೆ ಹಲ್ಲೆ ನಡೆದಿದ್ದು, ಇಬ್ಬರ ವಿರುದ್ಧ ಆರೋಪಗಳು ದಾಖಲಾಗಿದೆ.ದೂರುದಾರರಾದ ಮುಮ್ತಾಜ್ ಬೆಗಂ ಇಮ್ತಿಯಾಜ್ (40) ಹಾಗೂ ಬಿಬಿ ಫಾತಿಮಾ (21) ಇವರುಗಳು ಹುಬ್ಬಳ್ಳಿಯ ಇಶ್ವರನಗರದ APMC ಬಳಿ ವಾಸವಿದ್ದಾರೆ. ಇವರ ಮೇಲೆ ಫಾತಿಮಾ ಸಾಜಾ ಹಾಗೂ ಆಕೆಯ ಸಹೋದರರಾದ ಸಾಜಾ ಎಂಬುವವರು ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.ಇದು ಜೂನ್ 5ರಂದು ಬೆಳಿಗ್ಗೆ 8:30ರಿಂದ 9 ಗಂಟೆಯ ಮಧ್ಯೆ ನಡೆದಿದ್ದು, ಗಲಾಟೆ ವೇಳೆ ದುಷ್ಕರ್ಮಿಗಳು 40,000 ರೂಪಾಯಿ ನಗದು, 20,000 ರೂ ಮೌಲ್ಯದ ಚಿನ್ನಾಭರಣ ಹಾಗೂ ಮೊಬೈಲ್ ಫೋನ್ ಕಸಿದುಕೊಂಡಿದ್ದಾರೆ ಎಂಬ ದೂರು ದಾಖಲಾಗಿದೆ. ಹಲ್ಲೆ ಬಳಿಕ ಮಹಿಳೆಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ…

ಮುಂದೆ ಓದಿ..
ಸುದ್ದಿ 

ಗಾಂಜಾ ಸೇವನೆ ಮಾಡುತ್ತಿದ್ದ ಯುವಕನ ಬಂಧನ.

Taluknewsmedia.com

Taluknewsmedia.comಹುಬ್ಬಳ್ಳಿ, ಜೂನ್ 17, 2025: ನಗರದ ನವನಗರ ಪ್ರದೇಶದಲ್ಲಿ ನಿಷೇಧಿತ ಮಾದಕ ವಸ್ತು ಸೇವನೆಯ ಪ್ರಕರಣ ಬೆಳಕಿಗೆ ಬಂದಿದೆ. ದಿನಾಂಕ 15-06-2025 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (KSLU) ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಹುಲ ಜಗದೀಶ ಕಾಲೇಬಾಗ (ವಯಸ್ಸು: 31), ನವನಗರದ 3ನೇ ಕ್ರಾಸ್, EWS-577 ನಿವಾಸಿಯಾಗಿ ಗುರುತಿಸಲಾಗಿದೆ. ಆರೋಪಿತನು ಹಿಂದೂ ಚಲವಾದಿ ಸಮುದಾಯದಿಂದ ಆಗಿದ್ದು, ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾನೆ.ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ರಾಹುಲನು ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ಪದಾರ್ಥವಾದ ಗಾಂಜಾ (ಮಾದಕ ಔಷಧಿ ಅಥವಾ ಮನೋಪರಿಣಾಮಕಾರಿ ವಸ್ತು) ಸೇವನೆ ಮಾಡುತ್ತಿದ್ದ ಸಂದರ್ಭದಲ್ಲಿ ಪ್ರಕರಣದ ಮಾಹಿತಿ ಪಡೆದ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ತಕ್ಷಣವೇ ಆರೋಪಿತನನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡಿದೆ.ಈ ಘಟನೆಯ ಹಿನ್ನೆಲೆಯಲ್ಲಿ ನವನಗರ ಠಾಣೆಯಲ್ಲಿ…

ಮುಂದೆ ಓದಿ..