ಸುದ್ದಿ 

ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲೇ ಸಿಬ್ಬಂದಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

Taluknewsmedia.com

Taluknewsmedia.comಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲೇ ಸಿಬ್ಬಂದಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್! ಚಿತ್ರದುರ್ಗ ಜಿಲ್ಲೆಯ ಡಿಡಿಪಿಐ ಕಚೇರಿಯಲ್ಲೇ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ನೀರಿನ ಕ್ಯಾನ್ಗೆ ಎಣ್ಣೆ (ಮದ್ಯ) ಮಿಕ್ಸ್ ಮಾಡಿ ಕಚೇರಿಗೆ ತಂದಿದ್ದ ಸಿಬ್ಬಂದಿ, ಕಚೇರಿಯಲ್ಲೇ ಕುಡಿಯುತ್ತಾ ಪಾರ್ಟಿ ಮಾಡಿರುವುದು ಕ್ಯಾಮೆರಾಕ್ಕೆ ಸಿಕ್ಕಿದೆ. ಸೋರ್ಸ್‌ಗಳ ಪ್ರಕಾರ, ಸಿಬ್ಬಂದಿಯೋರ್ವ ಕಾರು ಖರೀದಿ ಮಾಡಿದ ಹಿನ್ನೆಲೆಯಲ್ಲಿ ಕಚೇರಿಯಲ್ಲೇ ಪಾರ್ಟಿ ಆಯೋಜಿಸಲಾಗಿತ್ತು. ಆದರೆ ಕಚೇರಿಯಂತಹ ಸರ್ಕಾರಿ ಸ್ಥಳದಲ್ಲೇ ಎಣ್ಣೆ ಪಾರ್ಟಿ ನಡೆದಿರುವುದು ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ನಡವಳಿಕೆಯನ್ನು ಖಂಡಿಸುತ್ತಾ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳ ಮಳೆ ಸುರಿಯುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಪ್ರತಿಕ್ರಿಯಿಸಿ, “ಘಟನೆಯ ವಿಚಾರ ತಿಳಿದು, ಕಾರು ಚಾಲಕ ಸೇರಿ ಐವರು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡಿದ್ದೇನೆ. ಅಧೀಕ್ಷಕ ಸುನಿಲ್,…

ಮುಂದೆ ಓದಿ..
ವಿಶೇಷ ಸುದ್ದಿ 

ನಿಗೂಢ ಸಾವಿನಿಂದ ಕೊಲೆ ತನಿಖೆಯ ತನಕ..

Taluknewsmedia.com

Taluknewsmedia.comನಿಗೂಢ ಸಾವಿನಿಂದ ಕೊಲೆ ತನಿಖೆಯ ತನಕ.. ಮರತ್ತಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಏಪ್ರಿಲ್ 24 ರಂದು ಡಾ. ಕೃತಿಕಾ ರೆಡ್ಡಿ ಅವರ ಸಾವಿನ ಸುದ್ದಿ ವೈದ್ಯಕೀಯ ವಲಯದಲ್ಲಿ ನಡುಕ ಮೂಡಿಸಿತ್ತು. ಆರಂಭದಲ್ಲಿ “ಅಸಹಜ ಸಾವು” (UDR) ಎಂದು ದಾಖಲಿಸಲ್ಪಟ್ಟ ಈ ಪ್ರಕರಣ, ಈಗ ಸಂಪೂರ್ಣ ಕೊಲೆ ತನಿಖೆಯ ರೂಪ ಪಡೆದಿದೆ.ಆದಿಯಲ್ಲಿ ಕುಟುಂಬದವರು ಯಾವುದೇ ಅನುಮಾನ ವ್ಯಕ್ತಪಡಿಸದೆ ಮರಣೋತ್ತರ ಪರೀಕ್ಷೆಗೂ ವಿರೋಧಿಸಿದ್ದರು. ಆದರೆ ಪೊಲೀಸರ ಅನುಮಾನದಿಂದಾಗಿ ಮರಣೋತ್ತರ ಪರೀಕ್ಷೆ ಕಡ್ಡಾಯಗೊಳಿಸಲಾಯಿತು — ಇದೇ ತಿರುವು ತನಿಖೆಗೆ ಹೊಸ ದಾರಿ ತೋರಿಸಿತು. ಎಫ್‌ಎಸ್‌ಎಲ್ ವರದಿ:ಪ್ರೊಪೋಫಾಲ್ ಓವರ್‌ಡೋಸ್‌ನ ಪತ್ತೆ…ಮೃತದೇಹದ ಬಳಿ ಪತ್ತೆಯಾದ ವೈದ್ಯಕೀಯ ಉಪಕರಣಗಳು ಮತ್ತು ಇಂಜೆಕ್ಷನ್‌ಗಳನ್ನು SOCO (Scene of Crime Officer) ತಂಡವು ವಶಪಡಿಸಿಕೊಂಡು ಎಫ್‌ಎಸ್‌ಎಲ್ (Forensic Science Laboratory) ಗೆ ಕಳುಹಿಸಿತು.ಫಲಿತಾಂಶಗಳು ಪೊಲೀಸರ ಅನುಮಾನಕ್ಕೆ ತಕ್ಕಂತೆ ಬಂದವು — ಕೃತಿಕಾ ರೆಡ್ಡಿಯವರ ಶರೀರದಲ್ಲಿ ಪ್ರೊಪೋಫಾಲ್…

ಮುಂದೆ ಓದಿ..
ಸುದ್ದಿ 

ವೀರೇಂದ್ರ ಪಪ್ಪಿಗೆ ಹೈಕೋರ್ಟ್‌ನಿಂದ ಭಾಗಶಃ ನೆಮ್ಮದಿ : ಇಡಿ ತನಿಖೆಗೆ ಕಾನೂನಿನ ಮಿತಿ ಸ್ಪಷ್ಟ!

Taluknewsmedia.com

Taluknewsmedia.comವೀರೇಂದ್ರ ಪಪ್ಪಿಗೆ ಹೈಕೋರ್ಟ್‌ನಿಂದ ಭಾಗಶಃ ನೆಮ್ಮದಿ : ಇಡಿ ತನಿಖೆಗೆ ಕಾನೂನಿನ ಮಿತಿ ಸ್ಪಷ್ಟ! ಬೆಂಗಳೂರು : ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ನೀಡಿದೆ. ವೀರೇಂದ್ರ ಪತ್ನಿ ಆರ್.ಡಿ. ಚೈತ್ರಾ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿದರೂ, ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ನ್ಯಾಯಪೀಠ ಇಡಿ ಕ್ರಮಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಪ್ರಮುಖ ಸ್ಪಷ್ಟತೆ ನೀಡಿದೆ. ಹೈಕೋರ್ಟ್ ತೀರ್ಪಿನಲ್ಲಿ, ಪಿಎಂಎಲ್ ಕಾಯ್ದೆಯ ಅಡಿಯಲ್ಲಿ ತನಿಖೆ ಕೈಗೊಳ್ಳುವ ಸಂದರ್ಭಗಳಲ್ಲಿ ಕಾನೂನಿನ ಗಡಿ ಹಾಗೂ ಪ್ರಕ್ರಿಯೆಯ ಕಡ್ಡಾಯ ಅನುಸರಣೆಯ ಅಗತ್ಯವಿದೆ ಎಂದು ತಿಳಿಸಿದೆ. ಇದು ಮುಂದೆ ನಡೆಯುವ ತನಿಖೆಯಲ್ಲಿ ವೀರೇಂದ್ರ ಪಪ್ಪಿ ಕಾನೂನಾತ್ಮಕ ಹಕ್ಕುಗಳನ್ನು ಬಳಕೆ ಮಾಡಲು ಅವಕಾಶ ಕಲ್ಪಿಸುವಂತಾಗಿದೆ. ಕನಕಪುರದ ಹಾರೋಹಳ್ಳಿ ಠಾಣೆ ಪ್ರಕರಣ ಆಧಾರವಾಗಿದ್ದರೂ, ಇಡಿ ತನಿಖೆ ಕಾನೂನಿನ ಪ್ರಕ್ರಿಯೆಯಂತೆ ಮುಂದುವರಿಯಬೇಕು ಮತ್ತು ವೈಯಕ್ತಿಕ…

ಮುಂದೆ ಓದಿ..
ಸುದ್ದಿ 

ಕರ್ನಾಟಕದ ಅತೀ ದೊಡ್ಡ ಅಬಕಾರಿ ಹಗರಣ – ನೂರು ಕೋಟಿ ರೂ. ಸಿಎಲ್-7 ಲೈಸೆನ್ಸ್ ವಂಚನೆ!

Taluknewsmedia.com

Taluknewsmedia.comಕರ್ನಾಟಕದ ಅತೀ ದೊಡ್ಡ ಅಬಕಾರಿ ಹಗರಣ – ನೂರು ಕೋಟಿ ರೂ. ಸಿಎಲ್-7 ಲೈಸೆನ್ಸ್ ವಂಚನೆ! ಬೆಂಗಳೂರು: ರಾಜ್ಯದ ಅಬಕಾರಿ ಇಲಾಖೆಯಲ್ಲಿ ನೂರು ಕೋಟಿಗೂ ಹೆಚ್ಚು ಮೊತ್ತದ ಸಿಎಲ್-7 ಲೈಸೆನ್ಸ್ ಹಗರಣ ಬಯಲಾಗಿದೆ. ಲೈಸೆನ್ಸ್ ನೀಡುವಲ್ಲಿ ನಡೆದಿರುವ ಭಾರೀ ಅಕ್ರಮಗಳಿಂದ ಈಗ 20ಕ್ಕೂ ಹೆಚ್ಚು ಅಬಕಾರಿ ಅಧಿಕಾರಿಗಳು ಜೈಲು ಸೇರುವ ಸಾಧ್ಯತೆ ಇದೆ ಎಂಬ ಸುದ್ದಿಯು ಬಣ್ಣ ಬದಲಿಸಿದೆ. ಕೆ.ಆರ್.ಪುರಂ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಕಲಿ ಬಾರ್ ಮತ್ತು ಲಾಡ್ಜ್ ಲೈಸೆನ್ಸ್‌ಗಳು ಪ್ರಚಲಿತದಲ್ಲಿದ್ದವು ಎಂದು ತಿಳಿದುಬಂದಿದೆ. ಇಲಾಖೆಯ ಕೆಲ ಅಧಿಕಾರಿಗಳೇ ಸಿಎಲ್-2, ಸಿಎಲ್-7 ಹಾಗೂ ಸಿಎಲ್-9 ಲೈಸೆನ್ಸ್‌ಗಳನ್ನು ನಕಲಿ ದಾಖಲೆಗಳ ಆಧಾರದ ಮೇಲೆ ನೀಡಿರುವುದು ಬಹಿರಂಗವಾಗಿದೆ. ಲಂಚಕ್ಕಾಗಿ ದಾಖಲೆಗಳಲ್ಲಿ ತಿದ್ದುಪಡಿ ಮಾಡಿ ಬಾರ್, ವೈನ್ ಶಾಪ್ ಹಾಗೂ ಲಾಡ್ಜ್‌ಗಳಿಗೆ ಅಕ್ರಮವಾಗಿ ಪರವಾನಗಿ ನೀಡಲಾಗಿದೆ ಎನ್ನಲಾಗಿದೆ. ದೆಹಲಿಯ ಅಬಕಾರಿ ಹಗರಣವನ್ನು ಮೀರಿಸುವ ಮಟ್ಟದ ಈ ಅಕ್ರಮ ಈಗ…

ಮುಂದೆ ಓದಿ..
ಸುದ್ದಿ 

ಪತ್ನಿಗೆ ಇಂಜೆಕ್ಷನ್ ನೀಡಿ ಕೊಲೆ: ವಿಕ್ಟೋರಿಯಾ ಆಸ್ಪತ್ರೆ ಜನರಲ್ ಸರ್ಜನ್ ಆರೋಪಿ 6 ತಿಂಗಳ ಬಳಿಕ ಅರೆಸ್ಟ್

Taluknewsmedia.com

Taluknewsmedia.comಪತ್ನಿಗೆ ಇಂಜೆಕ್ಷನ್ ನೀಡಿ ಕೊಲೆ: ವಿಕ್ಟೋರಿಯಾ ಆಸ್ಪತ್ರೆ ಜನರಲ್ ಸರ್ಜನ್ ಆರೋಪಿ 6 ತಿಂಗಳ ಬಳಿಕ ಅರೆಸ್ಟ್ ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಜನರಲ್ ಸರ್ಜನ್ ಡಾ. ಮಹೇಂದ್ರ ರೆಡ್ಡಿ ತನ್ನ ಪತ್ನಿ ಡಾ. ಕೃತಿಕಾ ರೆಡ್ಡಿಯನ್ನು ಕೊಲೆ ಮಾಡಿದ್ದ ಘಟನೆ 6 ತಿಂಗಳ ಬಳಿಕ ಎಫ್ಎಸ್ಎಲ್ ವರದಿ ಮೂಲಕ ಬಹಿರಂಗವಾಗಿದೆ. ಬೆಂಗಳೂರಿನಿಂದ ಮಣಿಪಾಲಕ್ಕೆ ತೆರಳಿದ್ದ ಮಹೇಂದ್ರ ರೆಡ್ಡಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಪ್ರಕರಣದ ವಿಚಾರಣೆ ಮುಂದುವರಿದಿದೆ. ಮಾಹಿತಿಯ ಪ್ರಕಾರ, ಡಾ. ಮಹೇಂದ್ರ ಮತ್ತು ಡಾ. ಕೃತಿಕಾ ರೆಡ್ಡಿ ಇಬ್ಬರೂ 2024ರ ಮೇ 26ರಂದು ಕುಟುಂಬ ಒಪ್ಪಂದದ ಮೂಲಕ ಮದುವೆಯಾಗಿದ್ದರು. ಡಾ. ಕೃತಿಕಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಡೆರ್ಮೆಟಾಲಜಿಸ್ಟ್ ಆಗಿದ್ದರೆ, ಡಾ. ಮಹೇಂದ್ರ ಜನರಲ್ ಸರ್ಜನ್ ಆಗಿದ್ದರು. ಕೃತಿಕಾಗೆ ಅಜೀರ್ಣತೆ, ಗ್ಯಾಸ್ಟ್ರಿಕ್ ಸಮಸ್ಯೆ ಹಾಗೂ ಲೋ ಶುಗರ್ ಸಮಸ್ಯೆಗಳಿದ್ದವು. ಆದರೆ ಕುಟುಂಬಸ್ಥರು ಈ ಅಸೌಖ್ಯವನ್ನು ಗಮನಿಸದೆ ಮದುವೆ ಮಾಡಿದ್ದಾರೆಂಬುದು ಆರೋಪವಾಗಿದೆ.…

ಮುಂದೆ ಓದಿ..
ಸುದ್ದಿ 

ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ!

Taluknewsmedia.com

Taluknewsmedia.comರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ! ರಾಜ್ಯದಾದ್ಯಂತ ಭ್ರಷ್ಟಾಚಾರಕ್ಕೆ ವಿರುದ್ಧವಾಗಿ ಲೋಕಾಯುಕ್ತದ ಭಾರಿ ಆಪರೇಷನ್! ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ, ಬೀದರ್, ಉತ್ತರ ಕನ್ನಡ ಮತ್ತು ಬೆಂಗಳೂರು ನಗರ ಸೇರಿ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಲ್ಲಿ ಶೋಧ ಕಾರ್ಯ ನಡೆದಿದೆ. ಬೆಂಗಳೂರು ನಗರದಲ್ಲಿ ಮೂರು ಕಡೆ ದಾಳಿ ಬೆಂಗಳೂರು ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ 6 ಗಂಟೆಗೆ ಮೂವರು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಮೆಡಿಕಲ್ ಅಧಿಕಾರಿ ಮಂಜುನಾಥ್, ಜಿ.ವಿ. ಪಿಯು ಬೋರ್ಡ್ ನಿರ್ದೇಶಕಿ ಸುಮಂಗಳ, ಸರ್ವೇಯರ್ ಅಧಿಕಾರಿ ಗಂಗಾ ಮರೀಗೌಡ ಇವರ ನಿವಾಸ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತದ ನಾಲ್ಕು ತಂಡಗಳು ಶೋಧ…

ಮುಂದೆ ಓದಿ..
ಸುದ್ದಿ 

ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಎಟಿಎಂ ಕಳ್ಳತನ ಪ್ರಕರಣವು ಸಾಮಾಜಿಕ ವಲಯದಲ್ಲೂ ಚರ್ಚೆಯಾಗಿದೆ.

Taluknewsmedia.com

Taluknewsmedia.comಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಎಟಿಎಂ ಕಳ್ಳತನ ಪ್ರಕರಣವು ಸಾಮಾಜಿಕ ವಲಯದಲ್ಲೂ ಚರ್ಚೆಯಾಗಿದೆ. ಜನರು ಪೊಲೀಸರ ತ್ವರಿತ ಕ್ರಮವನ್ನು ಶ್ಲಾಘಿಸಿದ್ದಾರೆ. ಹೊಸದುರ್ಗ ಪಟ್ಟಣದ ಜನರು ಎಚ್ಚರಿಕೆಯಿಂದ ವರ್ತಿಸಿ ಸಮಯಕ್ಕೆ ಸರಿಯಾಗಿ ಪೊಲೀಸರಿಗೆ ಮಾಹಿತಿ ನೀಡಿರುವುದು ಪ್ರಮುಖ ಪಾತ್ರ ವಹಿಸಿದೆ ಎಂದು ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೊಲೀಸರ ಪ್ರಕಾರ, ಬಂಧಿತ ತೇಜುಕುಮಾರ್ ಅಂತರರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಳ್ಳತನ ಚಟುವಟಿಕೆಯ ಪ್ರಮುಖ ಸದಸ್ಯನಾಗಿದ್ದು, ಕರ್ನಾಟಕ ಸೇರಿದಂತೆ ಪಕ್ಕದ ರಾಜ್ಯಗಳಲ್ಲಿಯೂ ಎಟಿಎಂ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈತನಿಂದ ಹೆಚ್ಚಿನ ಮಾಹಿತಿ ಪಡೆಯಲು ತನಿಖೆ ಮುಂದುವರಿದಿದೆ. ನಾಗರಿಕರು ತಮ್ಮ ಸುತ್ತಮುತ್ತ ಸಂಶಯಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಮನವಿ ಮಾಡಿದ್ದಾರೆ. ಬ್ಯಾಂಕ್ ಎಟಿಎಂ ಕೇಂದ್ರಗಳಲ್ಲಿ ಹೆಚ್ಚುವರಿ ಸಿಸಿಟಿವಿ ನಿಗಾ ಹಾಗೂ ರಾತ್ರಿ ಪಾಳಿಯಲ್ಲಿ ಭದ್ರತಾ ಸಿಬ್ಬಂದಿ ನೇಮಕದ ಅಗತ್ಯವಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪೊಲೀಸರ ಧೈರ್ಯ, ತ್ವರಿತ ಕ್ರಮ ಮತ್ತು…

ಮುಂದೆ ಓದಿ..
ಸುದ್ದಿ 

ಕೋಲಾರ: ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ನಾಪತ್ತೆ – ಶವವಾಗಿ ಪತ್ತೆ

Taluknewsmedia.com

Taluknewsmedia.comಕೋಲಾರ: ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ನಾಪತ್ತೆ – ಶವವಾಗಿ ಪತ್ತೆ ಕೋಲಾರ: ಕೆ.ಜಿ.ಎಫ್‌ ತಾಲ್ಲೂಕಿನ ಅಯ್ಯಪ್ಲಲ್ಲಿ ಕೆರೆಯಲ್ಲಿ 53 ವರ್ಷದ ಶಿಕ್ಷಕಿ ಅಖ್ತರಿ ಬೇಗಂ ಅವರ ಶವ ಪತ್ತೆ ಹೇರಲಾಗಿದೆ. ಅವರು ಎರಡೂ ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಅಖ್ತರಿ ಬೇಗಂ ಕೋಲಾರ ತಾಲ್ಲೂಕಿನ ನರಸಾಪುರ ಗ್ರಾಮದಲ್ಲಿ ಸಮೀಕ್ಷೆ ಮುಗಿಸಿ ಮನೆಗೆ ಮರಳುವ ಮಾರ್ಗದಲ್ಲಿ ನಾಪತ್ತೆಯಾಗಿದ್ದರು. ಅವರು ಕೋಲಾರ ನಗರದ ಮಹಾಲಕ್ಷ್ಮಿ ಬಡಾವಣೆಯಲ್ಲಿ ನಿವಾಸಿಯಾಗಿದ್ದು, ಮನೆಗೆ ತೆರಳುವ ಮೊದಲು ಮೊಬೈಲ್ ಮನೆಯಲ್ಲಿ ಬಿಟ್ಟು, ಒಡವೆ ಚಿಚ್ಚಿಟ್ಟು ಹೊರಗೆ ಹೋಗಿದ್ದರು. ನಾಪತ್ತೆಯಾದ ಕುರಿತು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಅವರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವುದು ದೃಢಪಟ್ಟಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ವಿಚಾರಗಳು ತನಿಖೆಯ ಹಂತದಲ್ಲಿವೆ.

ಮುಂದೆ ಓದಿ..
ಸುದ್ದಿ 

ಚಿಕ್ಕಮಗಳೂರಿನಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ

Taluknewsmedia.com

Taluknewsmedia.comಚಿಕ್ಕಮಗಳೂರಿನಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹವ್ವಳ್ಳಿ ಗ್ರಾಮದಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆಯ ಘಟನೆ ಸಂಭವಿಸಿದೆ. ಮೃತೆಯಾದ ಮಹಿಳೆ ನೇತ್ರಾವತಿ (34) ಹವ್ವಳ್ಳಿ ಗ್ರಾಮದ ನಿವಾಸಿ. ಸುಮಾರು ಐದು ತಿಂಗಳ ಹಿಂದೆ ಸಕಲೇಶಪುರದ ನವೀನ್ ಅವರೊಂದಿಗೆ ವಿವಾಹವಾಗಿದ್ದರು. ವಿವಾಹದ ಬಳಿಕ ಪತಿ–ಪತ್ನಿಯ ನಡುವೆ ನಿರಂತರ ಕೌಟುಂಬಿಕ ಕಲಹ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ನೇತ್ರಾವತಿ ತವರು ಮನೆ ಸೇರಿದ್ದಳು. ಇತ್ತೀಚೆಗೆ ಪತಿ ನವೀನ್ ವಿರುದ್ಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಳು. ಈ ವಿಚಾರದಿಂದ ಆಕ್ರೋಶಗೊಂಡ ನವೀನ್, ಸಕಲೇಶಪುರದಿಂದ ಹವ್ವಳ್ಳಿ ಗ್ರಾಮಕ್ಕೆ ಬಂದು ಮಚ್ಚಿಯಿಂದ ಪತ್ನಿ ನೇತ್ರಾವತಿಯ ಮೇಲೆ ದಾಳಿ ನಡೆಸಿ ಬರ್ಬರವಾಗಿ ಕೊಲೆ ಮಾಡಿದ. ಗಾಯಗೊಂಡ ನೇತ್ರಾವತಿಯನ್ನು ತುರ್ತು ಚಿಕಿತ್ಸೆಗೆ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾಳೆ. ಘಟನೆಯ ಸ್ಥಳಕ್ಕೆ…

ಮುಂದೆ ಓದಿ..
ಸುದ್ದಿ 

ಅಪ್ರಾಪ್ತೆ ಮೇಲೆ ಅತ್ಯಾಚಾರ: ತಮಿಳುನಾಡು ಮೂಲದ ಆರೋಪಿ 30 ವರ್ಷ ಕಠಿಣ ಜೈಲು ಶಿಕ್ಷೆಗೆ ತೀರ್ಪು

Taluknewsmedia.com

Taluknewsmedia.comಅಪ್ರಾಪ್ತೆ ಮೇಲೆ ಅತ್ಯಾಚಾರ: ತಮಿಳುನಾಡು ಮೂಲದ ಆರೋಪಿ 30 ವರ್ಷ ಕಠಿಣ ಜೈಲು ಶಿಕ್ಷೆಗೆ ತೀರ್ಪು ಬೆಳಗಾವಿ: ಬೆಳಗಾವಿಯ ಜಿಲ್ಲಾ ಪೋಕ್ಸೋ ನ್ಯಾಯಾಲಯ ಸೋಮವಾರ ತಮಿಳುನಾಡು ಮೂಲದ ಸುರೇಶ ಜಾವನರಾಮ ಚೌಧರಿ (35) ವಿರುದ್ಧ ನಡೆದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 30 ವರ್ಷಗಳ ಕಠಿಣ ಶಿಕ್ಷೆ ಮತ್ತು ₹10,000 ದಂಡ ವಿಧಿಸಿದೆ. ಘಟನೆ ವಿವರ:2022ರ ಜೂನ್ 20 ರಂದು ಆರೋಪಿ ಬಾಲಕಿಯನ್ನು ಫೋನ್ ಮೂಲಕ ಪರಿಚಯ ಮಾಡಿಕೊಂಡು ಪ್ರೀತಿಸುತ್ತಿದ್ದಂತೆ ಹಾಳಿದನು. ಬಳಿಕ ಬಾಲಕಿಯನ್ನು ರಾಮದುರ್ಗ ಹೋಟೆಲ್‌ಗೆ ಕರೆದುಕೊಂಡು ಹೋಗಿ, ಬೆಳಗ್ಗೆ 8:30ಕ್ಕೆ ವಿಮಾನ ನಿಲ್ದಾಣಕ್ಕೆ ತಂದುಕೊಂಡಿದ್ದಾನೆ. ಆರೋಪಿಯು ಮೊದಲೇ ಬುಕ್ ಮಾಡಿದ್ದ ಎರಡು ಟಿಕೆಟ್ ಮೂಲಕ ಬಾಲಕಿಯನ್ನು ಕೊಯಮತ್ತೂರಿಗೆ ಕರೆದೊಯ್ಯುತ್ತ, ದೇವಾಲಯದ ಹತ್ತಿರ ಲಾಡ್ಜ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆಯ ಬಳಿಕ ಆಕೆಯ ಫೋನ್ ಸ್ವಿಚ್ ಆಫ್ ಮಾಡಿ ಸಿಮ್ ಮುರಿದು ಹಾಕಿದ್ದಾನೆ. ಆರೋಪಿ…

ಮುಂದೆ ಓದಿ..