ಸುದ್ದಿ 

ಸಾವಿನಲ್ಲೂ ಒಂದಾದ ಜೋಡಿ: ಗಂಡನ ನಂತರ ಹೆಂಡತಿಗೂ ಹೃದಯಾಘಾತ

Taluknewsmedia.com

Taluknewsmedia.comಸಾವಿನಲ್ಲೂ ಒಂದಾದ ಜೋಡಿ: ಗಂಡನ ನಂತರ ಹೆಂಡತಿಗೂ ಹೃದಯಾಘಾತ ಬೀಳಗಿ ಪಟ್ಟಣದಲ್ಲಿ ಮನ ಕಲುಕುವ ಘಟನೆ ಸಂಭವಿಸಿದೆ. ಗಂಡನ ನಿಧನದ ಮಾಹಿತಿಯನ್ನು ಕೇಳಿ ದುಃಖ ತಾಳಲಾರದೆ, ಪತ್ನಿಯೂ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಬೀಳಗಿ ಮೂಲದ ಶಶಿಧರ್ ಪತ್ತಾರ (40) ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ತೀವ್ರ ಹೃದಯಾಘಾತದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಗಂಡನ ಸಾವಿನ ವಿಷಯ ತಿಳಿದ ತಕ್ಷಣ, ಮನೆಯಲ್ಲಿದ್ದ ಸರೋಜಾ (35) ಅವರು ಭಾವನಾತ್ಮಕವಾಗಿ ಕುಸಿದು ಬಿದ್ದಿದ್ದು, ತಕ್ಷಣ ವೈದ್ಯಕೀಯ ನೆರವು ಒದಗಿಸಿದರೂ ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಒಂದೇ ಕುಟುಂಬದಲ್ಲಿ ಕ್ಷಣಗಳ ಅಂತರದಲ್ಲಿ ಪತಿ-ಪತ್ನಿ ಇಬ್ಬರ ನಿಧನ ಸಂಭವಿಸಿದ ವಿಚಾರ ತಿಳಿದಾಗ, ಬೀಳಗಿ ಪಟ್ಟಣದಲ್ಲಿ ದುಃಖದ ವಾತಾವರಣ ಆವರಿಸಿದೆ. ಸ್ಥಳೀಯರು ಕುಟುಂಬದ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯನ್ನೂ…

ಮುಂದೆ ಓದಿ..
ಸುದ್ದಿ 

“ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ” : ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ

Taluknewsmedia.com

Taluknewsmedia.com“ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ” : ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ ಹಾಸನ: ರಾಜ್ಯದಲ್ಲಿ ಯಾವುದೇ ರೀತಿಯ ವಿದ್ಯುತ್ ಕೊರತೆ ಇಲ್ಲ, ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಪೂರೈಕೆ ಸುಗಮವಾಗಿ ನಡೆಯುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಅವರು ಸೋಮವಾರ ಅರಸೀಕೆರೆ ತಾಲ್ಲೂಕಿನ ಸಂಕೋಡನಹಳ್ಳಿ ಗ್ರಾಮದಲ್ಲಿ ಪಿಎಂ ಕುಸುಮ್ (ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ ಮಹಾಭಿಯಾನ) ಯೋಜನೆಯಡಿ ನಿರ್ಮಾಣವಾಗಲಿರುವ ಸೌರಶಕ್ತಿ ಪಾರ್ಕ್ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. 2400 ಮೆಗಾವ್ಯಾಟ್ ಸೌರಶಕ್ತಿ ಗುರಿ.. ಸಚಿವರು ಮಾತನಾಡುವ ವೇಳೆ, “ರಾಜ್ಯಾದ್ಯಂತ ವಿವಿಧ ಭಾಗಗಳಲ್ಲಿ ಸೌರಶಕ್ತಿ ಸ್ಥಾವರಗಳ ಸ್ಥಾಪನೆ ಮೂಲಕ 2400 ಮೆಗಾವ್ಯಾಟ್ ಉತ್ಪಾದನೆ ಗುರಿ ಹೊಂದಲಾಗಿದೆ. ಯೋಜನೆ ಸಮಯಕ್ಕೆ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ,” ಎಂದರು. ವಿದ್ಯುತ್ ನಿರ್ವಹಣೆ ಮತ್ತು ವಿತರಣಾ ವ್ಯವಸ್ಥೆಯನ್ನು ಸುಧಾರಿಸಲು 100 ಹೊಸ ಉಪಕೇಂದ್ರಗಳನ್ನು ನಿರ್ಮಿಸುವ ಯೋಜನೆಗೂ ಇಲಾಖೆ…

ಮುಂದೆ ಓದಿ..
ಸುದ್ದಿ 

ಕೊಡಗು ಜಿಲ್ಲೆಯ 215 ಅಂಗನವಾಡಿ ಹುದ್ದೆಗಳ ಭರ್ತಿ: ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದವರಿಗೆ ಅವಕಾಶ..

Taluknewsmedia.com

Taluknewsmedia.comಕೊಡಗು ಜಿಲ್ಲೆಯ 215 ಅಂಗನವಾಡಿ ಹುದ್ದೆಗಳ ಭರ್ತಿ: ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದವರಿಗೆ ಅವಕಾಶ.. ಸರ್ಕಾರಿ ಸೇವೆಯಲ್ಲಿ ಸೇರಬೇಕೆಂದಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದ ಮಹಿಳೆಯರಿಗೆ ಸುವರ್ಣಾವಕಾಶ. ಕೊಡಗು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD Kodagu) ವತಿಯಿಂದ 215 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 13, 2025 ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹುದ್ದೆಗಳ ವಿವರ… ಪ್ರಕಟಣೆಯ ಪ್ರಕಾರ, ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು 56 ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು 159 ಲಭ್ಯವಿವೆ. ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿಯುಸಿ ಪಾಸಾದವರು ಹಾಗೂ ಸಹಾಯಕಿ ಹುದ್ದೆಗೆ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಇದಲ್ಲದೆ, ಡಿಎಸ್‌ಇಆರ್‌ಟಿ…

ಮುಂದೆ ಓದಿ..
ಸುದ್ದಿ 

ಪದವೀಧರರ ಧ್ವನಿಯಾಗಿ ಸೇವೆ ಸಲ್ಲಿಸಲು ಬಯಸುತ್ತೇನೆ: ಬಿಜೆಪಿ ಮುಖಂಡ ವಸಂತಕುಮಾರ್..

Taluknewsmedia.com

Taluknewsmedia.comಪದವೀಧರರ ಧ್ವನಿಯಾಗಿ ಸೇವೆ ಸಲ್ಲಿಸಲು ಬಯಸುತ್ತೇನೆ: ಬಿಜೆಪಿ ಮುಖಂಡ ವಸಂತಕುಮಾರ್ “ನಾನು ಪದವೀಧರರು ಹಾಗೂ ಶಿಕ್ಷಕರ ನಿಜವಾದ ಧ್ವನಿಯಾಗಿ ವಿಧಾನ ಪರಿಷತ್ತಿನಲ್ಲಿ ಕಾರ್ಯನಿರ್ವಹಿಸಲು ಬಯಸುತ್ತೇನೆ. ಇದು ಕೇವಲ ರಾಜಕೀಯ ಆಸೆಗಾಗಿ ಅಲ್ಲ, ಬದಲಾಗಿ ಜನರ ಹಿತಕ್ಕಾಗಿ,” ಎಂದು ಹಿರಿಯ ವಕೀಲ ಹಾಗೂ ಬಿಜೆಪಿ ನಾಯಕ ವಸಂತಕುಮಾರ್ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕಳೆದ ಎರಡು ದಶಕಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಹಾಗೂ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷದ ಬೆಳವಣಿಗೆಯ ಹಾದಿಯಲ್ಲಿ ನನ್ನ ಶ್ರಮ ಮತ್ತು ಬದ್ಧತೆಯನ್ನು ಪರಿಗಣಿಸಿ, ಆಗ್ನೇಯ ಪದವೀಧರ ಕ್ಷೇತ್ರದ ವ್ಯಾಪ್ತಿಯಲ್ಲಿ ಸಂಘಟನಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಂದ ಮಾರ್ಗದರ್ಶನ ಸಿಕ್ಕಿದೆ,” ಎಂದು ವಿವರಿಸಿದರು. ಅವರು ಮುಂದುವರೆದು, “ಪಕ್ಷದ ಹಿರಿಯರಿಂದ ನನಗೆ ಅಭ್ಯರ್ಥಿತ್ವದ ಬಗ್ಗೆ ಪ್ರೋತ್ಸಾಹ ಹಾಗೂ ಭರವಸೆ ದೊರೆತಿದೆ. ಜನರ ಹಿತಾಸಕ್ತಿ ಕಾಪಾಡುವುದು ನನ್ನ ಮೊದಲ ಗುರಿ,” ಎಂದು ಹೇಳಿದರು.…

ಮುಂದೆ ಓದಿ..
ಸುದ್ದಿ 

ಕನ್ನಡದ ಗೌರವ ಕಾಪಾಡೋಣ, ಬೆಳೆಸೋಣ: ಬಿ.ವೈ. ವಿಜಯೇಂದ್ರ

Taluknewsmedia.com

Taluknewsmedia.comಕನ್ನಡದ ಗೌರವ ಕಾಪಾಡೋಣ, ಬೆಳೆಸೋಣ: ಬಿ.ವೈ. ವಿಜಯೇಂದ್ರ ಶಿಕಾರಿಪುರ, ನ.1: ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಡಳಿತ ಹಾಗೂ ಕನ್ನಡ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಸಾವಿರಾರು ವರ್ಷಗಳ ಪರಂಪರೆ, ಸಂಸ್ಕೃತಿ ಹಾಗೂ ಇತಿಹಾಸವನ್ನು ಹೊತ್ತು ತಂದಿರುವ ಕನ್ನಡ ಭಾಷೆ ನಮ್ಮ ಗೌರವ, ನಮ್ಮ ಗುರುತು. ಪ್ರತಿಯೊಬ್ಬ ಕನ್ನಡಿಗನು ಕನ್ನಡ ಮಾತನಾಡುವುದು, ಬರೆಯುವುದು ಹಾಗೂ ಬಳಸುವುದು ತನ್ನ ಹೆಮ್ಮೆಯ ವಿಷಯವಾಗಿರಬೇಕು,” ಎಂದರು. ಅವರು ಮುಂದುವರೆದು, “ಕನ್ನಡ ಕೇವಲ ಭಾಷೆಯಲ್ಲ — ಅದು ನಮ್ಮ ಆತ್ಮ. ಕನ್ನಡವನ್ನು ಬಳಸುವುದರಿಂದ ನಾವು ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಟ್ಟುಕೊಳ್ಳುತ್ತೇವೆ. ಆದ್ದರಿಂದ ಎಲ್ಲ ಕ್ಷೇತ್ರಗಳಲ್ಲಿಯೂ ಕನ್ನಡದ ಬಳಕೆಯನ್ನು ಹೆಚ್ಚಿಸಬೇಕು, ಅದರ ಬೆಳವಣಿಗೆಗೆ ನಾವು ಹೊಣೆಗಾರರಾಗಬೇಕು,” ಎಂದು ಹೇಳಿದರು.…

ಮುಂದೆ ಓದಿ..
ಸುದ್ದಿ 

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

Taluknewsmedia.com

Taluknewsmedia.comಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ತಿಳಿಸಿದ್ದಾರೆ. ಮೈಸೂರು, ನ.3: ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ‌ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ಹೇಳಿದರು. ಅರಸು…

ಮುಂದೆ ಓದಿ..
ಸುದ್ದಿ 

ಕೆ–ಸೆಟ್ ಪರೀಕ್ಷೆ ವಿವಾದ: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಘಟನೆ – ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶದ ಜ್ವಾಲೆ!

Taluknewsmedia.com

Taluknewsmedia.comಕೆ–ಸೆಟ್ ಪರೀಕ್ಷೆ ವಿವಾದ: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಘಟನೆ – ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶದ ಜ್ವಾಲೆ! ಬಳ್ಳಾರಿ: ರಾಜ್ಯದಾದ್ಯಂತ ನಿನ್ನೆ ನಡೆದ ಕೆ–ಸೆಟ್ (K-SET) ಪರೀಕ್ಷೆ ವೇಳೆ ನಡೆದ ಘಟನೆಯೊಂದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪರೀಕ್ಷಾ ನಿಯಮಗಳ ಹೆಸರಿನಲ್ಲಿ ಕೆಲವು ಕೇಂದ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಮತ್ತು ಕೈಕಡಗಗಳನ್ನು ಬಿಚ್ಚಿಸಲು ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂಬ ಆರೋಪ ಹೊರಬಿದ್ದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಜನರ ಕೋಪ ಉಕ್ಕಿ ಹರಿಯುತ್ತಿದೆ. ಕೆಲವು ತಿಂಗಳ ಹಿಂದೆ ನೀಟ್ (NEET) ಪರೀಕ್ಷೆ ಸಮಯದಲ್ಲೂ ವಿದ್ಯಾರ್ಥಿಗೆ ಜನಿವಾರ ತೆಗೆಯಲು ಒತ್ತಾಯಿಸಿದ ಘಟನೆ ನೆನಪಿನಲ್ಲೇ ಇರುವಾಗ, ಇದೀಗ ಕೆ–ಸೆಟ್ ಪರೀಕ್ಷೆಯಲ್ಲಿಯೂ ಇಂತಹ ಅಸಹ್ಯಕರ ಘಟನೆ ನಡೆದಿರುವುದು ಖೇದಕಾರಿಯಾಗಿದೆ. ರಾಜ್ಯದ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಈ ಬಾರಿ ಕೆ–ಸೆಟ್ ಪರೀಕ್ಷೆ ನಡೆದಿತ್ತು. ಸುಮಾರು…

ಮುಂದೆ ಓದಿ..
ಸುದ್ದಿ 

ಖಾಲಿ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ ಅಗತ್ಯ : ಶಿವಶಂಕರ್‌ಮುಖ್ಯಮಂತ್ರಿ ಬದಲಾದರೆ ದಲಿತರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ

Taluknewsmedia.com

Taluknewsmedia.comಖಾಲಿ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ ಅಗತ್ಯ : ಶಿವಶಂಕರ್‌ಮುಖ್ಯಮಂತ್ರಿ ಬದಲಾದರೆ ದಲಿತರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಖಾಲಿಯಿರುವ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರಗೊಳಿಸಬೇಕು ಎಂದು ಪ.ಜಾತಿ/ವರ್ಗದ ಸರಕಾರಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ. ಶಿವಶಂಕರ್‌ ಅವರು ಆಗ್ರಹಿಸಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ — ಸರ್ಕಾರದ ವಿವಿಧ ಇಲಾಖೆಯಲ್ಲಿ 7.70 ಲಕ್ಷ ಹುದ್ದೆಗಳಿದ್ದರೂ, ಸುಮಾರು 2.80 ಲಕ್ಷ ಹುದ್ದೆಗಳು ಇನ್ನೂ ಖಾಲಿಯಾಗಿವೆ. ಯುವಕರಿಗೆ ಅವಕಾಶ ದೊರಕಬೇಕಾದ ಈ ಹುದ್ದೆಗಳನ್ನು ತುಂಬದೆ ಇರುವುದು ಬೇಸರ ತಂದಿದೆ. ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು. ದಲಿತರ ಹಿತಕ್ಕಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಇನ್ನಷ್ಟು ಪರಿಣಾಮಕಾರಿ ಯೋಜನೆಗಳನ್ನು ರೂಪಿಸಬೇಕು ಎಂದು ಅವರು ಸಲಹೆ ನೀಡಿದರು. ಒಳಮೀಸಲಾತಿ ವಿಷಯದಲ್ಲಿ ಸರಿಯಾದ ನಿರ್ವಹಣೆ ಅಗತ್ಯವಾಗಿತ್ತು, ಆದರೆ ಅದರಿಂದ ದಲಿತರಲ್ಲಿ ಭಿನ್ನಾಭಿಪ್ರಾಯ…

ಮುಂದೆ ಓದಿ..
ಸುದ್ದಿ 

ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರವೇ ಅನುಮತಿ ನೀಡಿದೆ: ಸಚಿವ ಮಂಕಾಳು ವೈದ್ಯ

Taluknewsmedia.com

Taluknewsmedia.comಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರವೇ ಅನುಮತಿ ನೀಡಿದೆ: ಸಚಿವ ಮಂಕಾಳು ವೈದ್ಯ ಕಾರವಾರ: ಶರಾವತಿ ಪಂಪ್ ಸ್ಟೋರೇಜ್ ಯೋಜನೆ (Sharavathi Pump Storage Project) ಕುರಿತು ವಿವಾದ ಮುಂದುವರಿಯುತ್ತಿದ್ದರೂ, ಈ ಯೋಜನೆಗೆ ಅನುಮತಿ ನೀಡಿದವರು ಕೇಂದ್ರ ಸರ್ಕಾರ ಹಾಗೂ ಹಿಂದಿನ ಬಿಜೆಪಿ ಸರ್ಕಾರವೆಂದು ಸಚಿವ ಮಂಕಾಳು ವೈದ್ಯ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾ ಕನ್ನಡ ರಾಜ್ಯೋತ್ಸವದ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,“ಜನರಿಗೆ ತೊಂದರೆ ಉಂಟಾಗುತ್ತಿದ್ದರೆ ನಾನು ವೈಯಕ್ತಿಕವಾಗಿ ಈ ಯೋಜನೆಗೆ ವಿರೋಧಿಯೇ. ಇದನ್ನು ಬಹಳ ಹಿಂದೆಯೇ ಹೇಳಿದ್ದೇನೆ, ಈಗಲೂ ಅದೇ ನಿಲುವು ಇದೆ,” ಎಂದು ಹೇಳಿದರು. ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಎರಡೂ ಜಿಲ್ಲೆಗಳಲ್ಲಿ ವಿಸ್ತರಿಸಿಕೊಳ್ಳುತ್ತಿರುವುದಾಗಿ ಸಚಿವರು ಹೇಳಿದರು.“ಈ ಯೋಜನೆಗೆ ಸಂಬಂಧಿಸಿದಂತೆ ಸ್ಥಳೀಯ ಸಂಸದರು, ಶಾಸಕರ ಅಭಿಪ್ರಾಯ ಮುಖ್ಯ. ತಜ್ಞರಿಂದ ಅಧ್ಯಯನ ಮುಂದುವರಿದಿದೆ. ಸರ್ಕಾರದ ವಿವಿಧ ಇಲಾಖೆಗಳ ತಜ್ಞರು…

ಮುಂದೆ ಓದಿ..
ಸುದ್ದಿ 

ವಿಜಯಪುರ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳಿಗೆ ಎಂ.ಬಿ. ಪಾಟೀಲ್ ಅವರ ಜೀವದಾಯಿ ನೆರವು

Taluknewsmedia.com

Taluknewsmedia.comವಿಜಯಪುರ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳಿಗೆ ಎಂ.ಬಿ. ಪಾಟೀಲ್ ಅವರ ಜೀವದಾಯಿ ನೆರವು ವಿಜಯಪುರದಲ್ಲಿ ಆರ್ಥಿಕ ಅಡಚಣೆಯಿಂದ ವೈದ್ಯಕೀಯ ಶಿಕ್ಷಣ ತೊರೆಯುವ ಸ್ಥಿತಿಗೆ ತಲುಪಿದ್ದ ಆರು ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಆಶಾಕಿರಣವಾಗಿ ಪರಿಣಮಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಮೆರುಗು ತೋರಿಸಿ ಸರ್ಕಾರಿ ಕೋಟಾದಡಿ MBBS ಸೀಟು ಪಡೆದಿದ್ದರೂ, ಶಿಕ್ಷಣ ಶುಲ್ಕ ಪಾವತಿಸಲು ಸಾಧ್ಯವಾಗದೇ ಆತಂಕಗೊಂಡಿದ್ದ ಈ ವಿದ್ಯಾರ್ಥಿಗಳ ವಿಷಯ ತಿಳಿದ ಪಾಟೀಲ್ ಅವರು, ತಮ್ಮ ಕಚೇರಿಯ ಮೂಲಕ ಒಟ್ಟು ₹10,21,380ರ ಸಹಾಯಧನವನ್ನು ಬಿಡುಗಡೆ ಮಾಡಿಸಿದ್ದಾರೆ. ಈ ಮೊತ್ತದಿಂದ ಮೊದಲ ವರ್ಷದ ಕಾಲೇಜು ಫೀಸ್‌, ವಸತಿ ಮತ್ತು ಊಟದ ವೆಚ್ಚಗಳನ್ನು ನಿಭಾಯಿಸಲು ವಿದ್ಯಾರ್ಥಿಗಳಿಗೆ ನೆರವಾಗಲಿದೆ. ಪಾಟೀಲ್ ಅವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, “ನೀವು ಉತ್ತಮ ಅಂಕಗಳೊಂದಿಗೆ ವಿದ್ಯಾಭ್ಯಾಸ ಪೂರ್ಣಗೊಳಿಸಿ ಸಮಾಜಕ್ಕೆ ಸೇವೆ ಸಲ್ಲಿಸುವ ಆದರ್ಶ ವೈದ್ಯರಾಗಬೇಕು” ಎಂದು ಹಾರೈಸಿದರು. ಈ ಸಂದರ್ಭ ಬಿಎಲ್ಡಿಇ ಸಂಸ್ಥೆಯ ಮುಖ್ಯ…

ಮುಂದೆ ಓದಿ..