ಬೆಂಗಳೂರಿನ ವಾಯು ಮಾಲಿನ್ಯ ತೀವ್ರತೆ: ತುರ್ತು ಕ್ರಮಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ..
Taluknewsmedia.comಬೆಂಗಳೂರಿನ ವಾಯು ಮಾಲಿನ್ಯ ತೀವ್ರತೆ: ತುರ್ತು ಕ್ರಮಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ.. ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಯು ಮಾಲಿನ್ಯ ಜನ ಆರೋಗ್ಯಕ್ಕೆ ಗಂಭೀರ ಅಪಾಯವಾಗಿ ಪರಿಣಮಿಸುತ್ತಿರುವ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರ ಮನವಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣ ಸ್ಪಂದಿಸಿದ್ದಾರೆ. ಭವಿಷ್ಯದಲ್ಲಿ ದೆಹಲಿಯಂತೆಯೇ ಬೆಂಗಳೂರು ಕೂಡ ತೀವ್ರ ಮಾಲಿನ್ಯ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತಪಡಿಸಿ ದಿನೇಶ್ ಗೂಳಿಗೌಡ ಅವರು ಡಿಸಿಎಂ ಅವರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಧನಾತ್ಮಕ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್ ಅವರು, ವಿಷಯದ ಗಂಭೀರತೆಯನ್ನು ಗಮನಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿಗಳ ಮೂಲಕ ಸಂಬಂಧಪಟ್ಟ ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ,…
ಮುಂದೆ ಓದಿ..
