ಸುದ್ದಿ 

ಕನ್ನಡದ ಗೌರವ ಕಾಪಾಡೋಣ, ಬೆಳೆಸೋಣ: ಬಿ.ವೈ. ವಿಜಯೇಂದ್ರ

Taluknewsmedia.com

Taluknewsmedia.comಕನ್ನಡದ ಗೌರವ ಕಾಪಾಡೋಣ, ಬೆಳೆಸೋಣ: ಬಿ.ವೈ. ವಿಜಯೇಂದ್ರ ಶಿಕಾರಿಪುರ, ನ.1: ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಡಳಿತ ಹಾಗೂ ಕನ್ನಡ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಸಾವಿರಾರು ವರ್ಷಗಳ ಪರಂಪರೆ, ಸಂಸ್ಕೃತಿ ಹಾಗೂ ಇತಿಹಾಸವನ್ನು ಹೊತ್ತು ತಂದಿರುವ ಕನ್ನಡ ಭಾಷೆ ನಮ್ಮ ಗೌರವ, ನಮ್ಮ ಗುರುತು. ಪ್ರತಿಯೊಬ್ಬ ಕನ್ನಡಿಗನು ಕನ್ನಡ ಮಾತನಾಡುವುದು, ಬರೆಯುವುದು ಹಾಗೂ ಬಳಸುವುದು ತನ್ನ ಹೆಮ್ಮೆಯ ವಿಷಯವಾಗಿರಬೇಕು,” ಎಂದರು. ಅವರು ಮುಂದುವರೆದು, “ಕನ್ನಡ ಕೇವಲ ಭಾಷೆಯಲ್ಲ — ಅದು ನಮ್ಮ ಆತ್ಮ. ಕನ್ನಡವನ್ನು ಬಳಸುವುದರಿಂದ ನಾವು ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಟ್ಟುಕೊಳ್ಳುತ್ತೇವೆ. ಆದ್ದರಿಂದ ಎಲ್ಲ ಕ್ಷೇತ್ರಗಳಲ್ಲಿಯೂ ಕನ್ನಡದ ಬಳಕೆಯನ್ನು ಹೆಚ್ಚಿಸಬೇಕು, ಅದರ ಬೆಳವಣಿಗೆಗೆ ನಾವು ಹೊಣೆಗಾರರಾಗಬೇಕು,” ಎಂದು ಹೇಳಿದರು.…

ಮುಂದೆ ಓದಿ..
ಸುದ್ದಿ 

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

Taluknewsmedia.com

Taluknewsmedia.comಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ತಿಳಿಸಿದ್ದಾರೆ. ಮೈಸೂರು, ನ.3: ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ‌ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ಹೇಳಿದರು. ಅರಸು…

ಮುಂದೆ ಓದಿ..
ಸುದ್ದಿ 

ಕೆ–ಸೆಟ್ ಪರೀಕ್ಷೆ ವಿವಾದ: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಘಟನೆ – ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶದ ಜ್ವಾಲೆ!

Taluknewsmedia.com

Taluknewsmedia.comಕೆ–ಸೆಟ್ ಪರೀಕ್ಷೆ ವಿವಾದ: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಘಟನೆ – ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶದ ಜ್ವಾಲೆ! ಬಳ್ಳಾರಿ: ರಾಜ್ಯದಾದ್ಯಂತ ನಿನ್ನೆ ನಡೆದ ಕೆ–ಸೆಟ್ (K-SET) ಪರೀಕ್ಷೆ ವೇಳೆ ನಡೆದ ಘಟನೆಯೊಂದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪರೀಕ್ಷಾ ನಿಯಮಗಳ ಹೆಸರಿನಲ್ಲಿ ಕೆಲವು ಕೇಂದ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಮತ್ತು ಕೈಕಡಗಗಳನ್ನು ಬಿಚ್ಚಿಸಲು ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂಬ ಆರೋಪ ಹೊರಬಿದ್ದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಜನರ ಕೋಪ ಉಕ್ಕಿ ಹರಿಯುತ್ತಿದೆ. ಕೆಲವು ತಿಂಗಳ ಹಿಂದೆ ನೀಟ್ (NEET) ಪರೀಕ್ಷೆ ಸಮಯದಲ್ಲೂ ವಿದ್ಯಾರ್ಥಿಗೆ ಜನಿವಾರ ತೆಗೆಯಲು ಒತ್ತಾಯಿಸಿದ ಘಟನೆ ನೆನಪಿನಲ್ಲೇ ಇರುವಾಗ, ಇದೀಗ ಕೆ–ಸೆಟ್ ಪರೀಕ್ಷೆಯಲ್ಲಿಯೂ ಇಂತಹ ಅಸಹ್ಯಕರ ಘಟನೆ ನಡೆದಿರುವುದು ಖೇದಕಾರಿಯಾಗಿದೆ. ರಾಜ್ಯದ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಈ ಬಾರಿ ಕೆ–ಸೆಟ್ ಪರೀಕ್ಷೆ ನಡೆದಿತ್ತು. ಸುಮಾರು…

ಮುಂದೆ ಓದಿ..
ಸುದ್ದಿ 

ಖಾಲಿ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ ಅಗತ್ಯ : ಶಿವಶಂಕರ್‌ಮುಖ್ಯಮಂತ್ರಿ ಬದಲಾದರೆ ದಲಿತರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ

Taluknewsmedia.com

Taluknewsmedia.comಖಾಲಿ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ ಅಗತ್ಯ : ಶಿವಶಂಕರ್‌ಮುಖ್ಯಮಂತ್ರಿ ಬದಲಾದರೆ ದಲಿತರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಖಾಲಿಯಿರುವ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರಗೊಳಿಸಬೇಕು ಎಂದು ಪ.ಜಾತಿ/ವರ್ಗದ ಸರಕಾರಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ. ಶಿವಶಂಕರ್‌ ಅವರು ಆಗ್ರಹಿಸಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ — ಸರ್ಕಾರದ ವಿವಿಧ ಇಲಾಖೆಯಲ್ಲಿ 7.70 ಲಕ್ಷ ಹುದ್ದೆಗಳಿದ್ದರೂ, ಸುಮಾರು 2.80 ಲಕ್ಷ ಹುದ್ದೆಗಳು ಇನ್ನೂ ಖಾಲಿಯಾಗಿವೆ. ಯುವಕರಿಗೆ ಅವಕಾಶ ದೊರಕಬೇಕಾದ ಈ ಹುದ್ದೆಗಳನ್ನು ತುಂಬದೆ ಇರುವುದು ಬೇಸರ ತಂದಿದೆ. ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು. ದಲಿತರ ಹಿತಕ್ಕಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಇನ್ನಷ್ಟು ಪರಿಣಾಮಕಾರಿ ಯೋಜನೆಗಳನ್ನು ರೂಪಿಸಬೇಕು ಎಂದು ಅವರು ಸಲಹೆ ನೀಡಿದರು. ಒಳಮೀಸಲಾತಿ ವಿಷಯದಲ್ಲಿ ಸರಿಯಾದ ನಿರ್ವಹಣೆ ಅಗತ್ಯವಾಗಿತ್ತು, ಆದರೆ ಅದರಿಂದ ದಲಿತರಲ್ಲಿ ಭಿನ್ನಾಭಿಪ್ರಾಯ…

ಮುಂದೆ ಓದಿ..
ಸುದ್ದಿ 

ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರವೇ ಅನುಮತಿ ನೀಡಿದೆ: ಸಚಿವ ಮಂಕಾಳು ವೈದ್ಯ

Taluknewsmedia.com

Taluknewsmedia.comಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರವೇ ಅನುಮತಿ ನೀಡಿದೆ: ಸಚಿವ ಮಂಕಾಳು ವೈದ್ಯ ಕಾರವಾರ: ಶರಾವತಿ ಪಂಪ್ ಸ್ಟೋರೇಜ್ ಯೋಜನೆ (Sharavathi Pump Storage Project) ಕುರಿತು ವಿವಾದ ಮುಂದುವರಿಯುತ್ತಿದ್ದರೂ, ಈ ಯೋಜನೆಗೆ ಅನುಮತಿ ನೀಡಿದವರು ಕೇಂದ್ರ ಸರ್ಕಾರ ಹಾಗೂ ಹಿಂದಿನ ಬಿಜೆಪಿ ಸರ್ಕಾರವೆಂದು ಸಚಿವ ಮಂಕಾಳು ವೈದ್ಯ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾ ಕನ್ನಡ ರಾಜ್ಯೋತ್ಸವದ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,“ಜನರಿಗೆ ತೊಂದರೆ ಉಂಟಾಗುತ್ತಿದ್ದರೆ ನಾನು ವೈಯಕ್ತಿಕವಾಗಿ ಈ ಯೋಜನೆಗೆ ವಿರೋಧಿಯೇ. ಇದನ್ನು ಬಹಳ ಹಿಂದೆಯೇ ಹೇಳಿದ್ದೇನೆ, ಈಗಲೂ ಅದೇ ನಿಲುವು ಇದೆ,” ಎಂದು ಹೇಳಿದರು. ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಎರಡೂ ಜಿಲ್ಲೆಗಳಲ್ಲಿ ವಿಸ್ತರಿಸಿಕೊಳ್ಳುತ್ತಿರುವುದಾಗಿ ಸಚಿವರು ಹೇಳಿದರು.“ಈ ಯೋಜನೆಗೆ ಸಂಬಂಧಿಸಿದಂತೆ ಸ್ಥಳೀಯ ಸಂಸದರು, ಶಾಸಕರ ಅಭಿಪ್ರಾಯ ಮುಖ್ಯ. ತಜ್ಞರಿಂದ ಅಧ್ಯಯನ ಮುಂದುವರಿದಿದೆ. ಸರ್ಕಾರದ ವಿವಿಧ ಇಲಾಖೆಗಳ ತಜ್ಞರು…

ಮುಂದೆ ಓದಿ..
ಸುದ್ದಿ 

ವಿಜಯಪುರ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳಿಗೆ ಎಂ.ಬಿ. ಪಾಟೀಲ್ ಅವರ ಜೀವದಾಯಿ ನೆರವು

Taluknewsmedia.com

Taluknewsmedia.comವಿಜಯಪುರ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳಿಗೆ ಎಂ.ಬಿ. ಪಾಟೀಲ್ ಅವರ ಜೀವದಾಯಿ ನೆರವು ವಿಜಯಪುರದಲ್ಲಿ ಆರ್ಥಿಕ ಅಡಚಣೆಯಿಂದ ವೈದ್ಯಕೀಯ ಶಿಕ್ಷಣ ತೊರೆಯುವ ಸ್ಥಿತಿಗೆ ತಲುಪಿದ್ದ ಆರು ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಆಶಾಕಿರಣವಾಗಿ ಪರಿಣಮಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಮೆರುಗು ತೋರಿಸಿ ಸರ್ಕಾರಿ ಕೋಟಾದಡಿ MBBS ಸೀಟು ಪಡೆದಿದ್ದರೂ, ಶಿಕ್ಷಣ ಶುಲ್ಕ ಪಾವತಿಸಲು ಸಾಧ್ಯವಾಗದೇ ಆತಂಕಗೊಂಡಿದ್ದ ಈ ವಿದ್ಯಾರ್ಥಿಗಳ ವಿಷಯ ತಿಳಿದ ಪಾಟೀಲ್ ಅವರು, ತಮ್ಮ ಕಚೇರಿಯ ಮೂಲಕ ಒಟ್ಟು ₹10,21,380ರ ಸಹಾಯಧನವನ್ನು ಬಿಡುಗಡೆ ಮಾಡಿಸಿದ್ದಾರೆ. ಈ ಮೊತ್ತದಿಂದ ಮೊದಲ ವರ್ಷದ ಕಾಲೇಜು ಫೀಸ್‌, ವಸತಿ ಮತ್ತು ಊಟದ ವೆಚ್ಚಗಳನ್ನು ನಿಭಾಯಿಸಲು ವಿದ್ಯಾರ್ಥಿಗಳಿಗೆ ನೆರವಾಗಲಿದೆ. ಪಾಟೀಲ್ ಅವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, “ನೀವು ಉತ್ತಮ ಅಂಕಗಳೊಂದಿಗೆ ವಿದ್ಯಾಭ್ಯಾಸ ಪೂರ್ಣಗೊಳಿಸಿ ಸಮಾಜಕ್ಕೆ ಸೇವೆ ಸಲ್ಲಿಸುವ ಆದರ್ಶ ವೈದ್ಯರಾಗಬೇಕು” ಎಂದು ಹಾರೈಸಿದರು. ಈ ಸಂದರ್ಭ ಬಿಎಲ್ಡಿಇ ಸಂಸ್ಥೆಯ ಮುಖ್ಯ…

ಮುಂದೆ ಓದಿ..
ಸುದ್ದಿ 

ಕಲಬುರಗಿ ಬ್ಯಾಂಕ್‌ ಚುನಾವಣೆ: ವಿಜಯೇಂದ್ರ ಮಾವನ ನಾಮಪತ್ರ ತಿರಸ್ಕೃತ — ಕಾಂಗ್ರೆಸ್‌ಗೆ ಮೊದಲ ಗೆಲುವಿನ ಸಂಭ್ರಮ

Taluknewsmedia.com

Taluknewsmedia.comಕಲಬುರಗಿ ಬ್ಯಾಂಕ್‌ ಚುನಾವಣೆ: ವಿಜಯೇಂದ್ರ ಮಾವನ ನಾಮಪತ್ರ ತಿರಸ್ಕೃತ — ಕಾಂಗ್ರೆಸ್‌ಗೆ ಮೊದಲ ಗೆಲುವಿನ ಸಂಭ್ರಮ ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (DCC) ಬ್ಯಾಂಕ್‌ ನಿರ್ದೇಶಕರ ಚುನಾವಣೆಗಾಗಿ ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡಿದೆ. ಒಟ್ಟು 34 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರಲ್ಲಿ ಒಂದು ನಾಮಪತ್ರ ತಿರಸ್ಕೃತಗೊಂಡಿದ್ದು, ಉಳಿದ 33 ಅಭ್ಯರ್ಥಿಗಳ ನಾಮಪತ್ರಗಳು ಮಾನ್ಯಗೊಂಡಿವೆ ಎಂದು ಚುನಾವಣಾಧಿಕಾರಿ ಹಾಗೂ ಹಿರಿಯ ಕೆಎಎಸ್ ಅಧಿಕಾರಿ ಪ್ರಕಾಶ್ ಕುದರಿ ತಿಳಿಸಿದ್ದಾರೆ. ವಿಜಯೇಂದ್ರ ಮಾವನ ನಾಮಪತ್ರ ಅನರ್ಹ:ಬ್ಯಾಂಕ್‌ನ ಪ್ರಸ್ತುತ ನಿರ್ದೇಶಕರಾದ ಶಿವಾನಂದ ಅಪ್ಪಾಸಾಬ ಮಾನಕರ ಅವರು ಟಿಎಪಿಸಿಎಂನ ಬಿ ಕ್ಷೇತ್ರದಿಂದ ಪುನರಾಯ್ಕೆಗಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಅಫಜಲಪುರ ಟಿಎಪಿಸಿಎಂ ಪ್ರದೇಶಕ್ಕೆ ಆಡಳಿತಾಧಿಕಾರಿ ನೇಮಕಗೊಂಡಿದ್ದ ಕಾರಣದಿಂದಾಗಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಶಿವಾನಂದ ಮಾನಕರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಮಾವರಾಗಿದ್ದಾರೆ ಎನ್ನುವುದು ವಿಶೇಷ. ಅವಿರೋಧ ಆಯ್ಕೆಗಳ ಸಂಭ್ರಮ:ಬ್ಯಾಂಕ್‌ನ ಅಧ್ಯಕ್ಷರಾಗಿರುವ ಸೋಮಶೇಖರ ಗೋನಾಯಕ (ಪಟ್ಟಣ…

ಮುಂದೆ ಓದಿ..
ಸುದ್ದಿ 

ಅಕ್ಕಾ ಪಡೆ ರಚನೆಗೆ ಪೂರ್ವಭಾವಿ ಸಭೆ: ನವೆಂಬರ್‌ 19ರಂದು ಅಧಿಕೃತ ಚಾಲನೆ

Taluknewsmedia.com

Taluknewsmedia.comಅಕ್ಕಾ ಪಡೆ ರಚನೆಗೆ ಪೂರ್ವಭಾವಿ ಸಭೆ: ನವೆಂಬರ್‌ 19ರಂದು ಅಧಿಕೃತ ಚಾಲನೆ ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿರುವ “ಅಕ್ಕಾ ಪಡೆ” ರಚನೆಗೆ ಸಿದ್ಧತೆಗಳು ಅಂತಿಮ ಹಂತಕ್ಕೆ ಕಾಲಿಟ್ಟಿವೆ. ಈ ಹಿನ್ನೆಲೆಯಲ್ಲಿ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯನ್ನು ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ನಡೆಸಲಾಯಿತು. ನವೆಂಬರ್‌ 19ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ವೇಳೆ ಅಕ್ಕಾ ಪಡೆಗೆ ಅಧಿಕೃತ ಚಾಲನೆ ನೀಡಲಾಗುವ ನಿರೀಕ್ಷೆಯಿದ್ದು, ಅದರ ಪೂರ್ವಸಿದ್ಧತೆ ಕುರಿತಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ವಿನಿಮಯ ನಡೆಯಿತು. ಈ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಾದ ಪಿ. ಹರಿಶೇಖರನ್, ಶರತ್ ಚಂದ್ರ, ಕಲಾ ಕೃಷ್ಣಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್, ನಿರ್ದೇಶಕ ಮಹೇಶ್ ಬಾಬು, ಆಪ್ತ ಕಾರ್ಯದರ್ಶಿ ಡಾ. ಟಿ.ಎಚ್. ವಿಶ್ವನಾಥ್, ವಿಶೇಷ…

ಮುಂದೆ ಓದಿ..
ಸುದ್ದಿ 

ಮಂಟೂರ ಗ್ರಾಮದಲ್ಲಿ ಉನ್ನತೀಕರಿಸಿದ ಪ್ರೌಢಶಾಲೆ ಉದ್ಘಾಟನೆ – ಗ್ರಾಮೀಣ ಶಿಕ್ಷಣದ ಹೊಸ ಅಧ್ಯಾಯಕ್ಕೆ ಚಾಲನೆ

Taluknewsmedia.com

Taluknewsmedia.comಮಂಟೂರ ಗ್ರಾಮದಲ್ಲಿ ಉನ್ನತೀಕರಿಸಿದ ಪ್ರೌಢಶಾಲೆ ಉದ್ಘಾಟನೆ – ಗ್ರಾಮೀಣ ಶಿಕ್ಷಣದ ಹೊಸ ಅಧ್ಯಾಯಕ್ಕೆ ಚಾಲನೆ ರಾಯಬಾಗ ತಾಲೂಕಿನ ಮಂಟೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 9ನೇ ಮತ್ತು 10ನೇ ತರಗತಿಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಯಾಗಿ ಪರಿವರ್ತಿಸಿದ ಹೊಸ ಶಾಖೆಯನ್ನು ಇಂದು ಭವ್ಯವಾಗಿ ಉದ್ಘಾಟಿಸಲಾಯಿತು. ಗ್ರಾಮದ ವಿದ್ಯಾರ್ಥಿಗಳ ಶಿಕ್ಷಣಾಭಿವೃದ್ಧಿಗೆ ಹೊಸ ಆಶಾಕಿರಣವಾಗಿ ಪರಿಣಮಿಸಿರುವ ಈ ಸ್ಮರಣೀಯ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಿದ್ದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಮ.ನಿ.ಪ್ರಸ್ವ. ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮಿಗಳು (ರಕ್ತಮಠ, ಬೆಂಡವಾಡ) ದಿವ್ಯ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯ ಪ್ರಿಯಾಂಕ ಜಾಕಿರೋಳಿ  ಶಾಸಕರಾದ ಶ್ರೀ ದುರ್ಯೋಧನ ಐಹೊಳೆ, ಎಸ್‌.ಡಿ‌.ಎಂ‌.ಸಿ ಅಧ್ಯಕ್ಷರು ಶ್ರೀ ರಾಮಚಂದ್ರ ಉಪ್ಪಾರ, ಮಂಟೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಶೋಭಾ ರಾವಸಾಬ ಮೇಗಾಡ್ಡೆ, ಉಪನಿರ್ದೇಶಕರು (ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕೋಡಿ) ಶ್ರೀ ಸೀತಾರಾಮ್ ಆರ್‌.ಎಸ್‌., ರಾಯಬಾಗ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ…

ಮುಂದೆ ಓದಿ..
ಸುದ್ದಿ 

ಪಿಕೆಪಿಎಸ್ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಭೆ: ರನ್ನಬೆಳಗಲಿಯಲ್ಲಿ ಉದ್ವಿಗ್ನತೆ

Taluknewsmedia.com

Taluknewsmedia.comಪಿಕೆಪಿಎಸ್ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಭೆ: ರನ್ನಬೆಳಗಲಿಯಲ್ಲಿ ಉದ್ವಿಗ್ನತೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನಬೆಳಗಲಿಯಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಪಿಕೆಪಿಎಸ್) ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಗಲಭೆಯಿಂದ ಗ್ರಾಮದಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 29ರಂದು ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗಾಗಿ ನಡೆದ ಚುನಾವಣೆಯಲ್ಲಿ ವಾಗ್ವಾದ ತೀವ್ರಗೊಂಡು, ಅದು ಬಳಿಕ ಕೈಕಾಲು ಬೀಸಿ ಹೊಡೆದಾಟಕ್ಕೆ ತಿರುಗಿದೆ. ಎರಡು ಪಕ್ಷದ ಕಾರ್ಯಕರ್ತರು ಪರಸ್ಪರಕ್ಕೆ ಕೋಲುಗಳಿಂದ ದಾಳಿ ನಡೆಸಿದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪಿಕೆಪಿಎಸ್ ಕಚೇರಿ ಮುಂದೆ ನಡೆದ ಈ ಘಟನೆ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ, ಲಘು ಲಾಠಿ ಪ್ರಹಾರ ನಡೆಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಪೊಲೀಸರ ಸಮಯೋಚಿತ ಕ್ರಮದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಚುನಾವಣೆಯಲ್ಲಿ ಒಟ್ಟು 13 ಸದಸ್ಯರ ಪೈಕಿ 6…

ಮುಂದೆ ಓದಿ..