ಸುದ್ದಿ 

ಖಾಲಿ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ ಅಗತ್ಯ : ಶಿವಶಂಕರ್‌ಮುಖ್ಯಮಂತ್ರಿ ಬದಲಾದರೆ ದಲಿತರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ

Taluknewsmedia.com

Taluknewsmedia.comಖಾಲಿ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ ಅಗತ್ಯ : ಶಿವಶಂಕರ್‌ಮುಖ್ಯಮಂತ್ರಿ ಬದಲಾದರೆ ದಲಿತರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಖಾಲಿಯಿರುವ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರಗೊಳಿಸಬೇಕು ಎಂದು ಪ.ಜಾತಿ/ವರ್ಗದ ಸರಕಾರಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ. ಶಿವಶಂಕರ್‌ ಅವರು ಆಗ್ರಹಿಸಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ — ಸರ್ಕಾರದ ವಿವಿಧ ಇಲಾಖೆಯಲ್ಲಿ 7.70 ಲಕ್ಷ ಹುದ್ದೆಗಳಿದ್ದರೂ, ಸುಮಾರು 2.80 ಲಕ್ಷ ಹುದ್ದೆಗಳು ಇನ್ನೂ ಖಾಲಿಯಾಗಿವೆ. ಯುವಕರಿಗೆ ಅವಕಾಶ ದೊರಕಬೇಕಾದ ಈ ಹುದ್ದೆಗಳನ್ನು ತುಂಬದೆ ಇರುವುದು ಬೇಸರ ತಂದಿದೆ. ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು. ದಲಿತರ ಹಿತಕ್ಕಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಇನ್ನಷ್ಟು ಪರಿಣಾಮಕಾರಿ ಯೋಜನೆಗಳನ್ನು ರೂಪಿಸಬೇಕು ಎಂದು ಅವರು ಸಲಹೆ ನೀಡಿದರು. ಒಳಮೀಸಲಾತಿ ವಿಷಯದಲ್ಲಿ ಸರಿಯಾದ ನಿರ್ವಹಣೆ ಅಗತ್ಯವಾಗಿತ್ತು, ಆದರೆ ಅದರಿಂದ ದಲಿತರಲ್ಲಿ ಭಿನ್ನಾಭಿಪ್ರಾಯ…

ಮುಂದೆ ಓದಿ..
ಸುದ್ದಿ 

ಬೀದರ್: ಭಾಲ್ಕಿ ಬಳಿ ಭೀಕರ ರಸ್ತೆ ಅಪಘಾತ — ಮೂವರಿಗೆ ಸ್ಥಳದಲ್ಲೇ ಸಾವು

Taluknewsmedia.com

Taluknewsmedia.comಬೀದರ್: ಭಾಲ್ಕಿ ಬಳಿ ಭೀಕರ ರಸ್ತೆ ಅಪಘಾತ — ಮೂವರಿಗೆ ಸ್ಥಳದಲ್ಲೇ ಸಾವು ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಇಂದು (ಬುಧವಾರ) ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ವ್ಯಕ್ತಿಗಳು ದುರ್ಮರಣ ಹೊಂದಿದ್ದಾರೆ. ಕಾರು ಮತ್ತು ಕೊರಿಯರ್ ವಾಹನದ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದ ಈ ದುರಂತ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, ಐವರು ಪ್ರಯಾಣಿಸುತ್ತಿದ್ದ ಕಾರು ಹುಮ್ನಾಬಾದ್ ಮಾರ್ಗವಾಗಿ ಬೀದರ್–ಕಲಬುರಗಿ ಹೆದ್ದಾರಿಯತ್ತ ತಿರುಗುತ್ತಿದ್ದಾಗ ಕೊರಿಯರ್ ಸೇವೆಗೆ ಬಳಸುತ್ತಿದ್ದ ಲೋಡ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಯಿಂದ ಕಾರಿನಲ್ಲಿದ್ದ ನವೀನ್‌ (25), ರಾಚಪ್ಪ (45) ಮತ್ತು ನಾಗರಾಜ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಇಬ್ಬರು — ಕಾಶಿನಾಥ ಮತ್ತು ಪ್ರತಾಪ — ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ತೆಲಂಗಾಣದ ಸಂಗಾರೆಡ್ಡಿ…

ಮುಂದೆ ಓದಿ..
ಸುದ್ದಿ 

ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರವೇ ಅನುಮತಿ ನೀಡಿದೆ: ಸಚಿವ ಮಂಕಾಳು ವೈದ್ಯ

Taluknewsmedia.com

Taluknewsmedia.comಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರವೇ ಅನುಮತಿ ನೀಡಿದೆ: ಸಚಿವ ಮಂಕಾಳು ವೈದ್ಯ ಕಾರವಾರ: ಶರಾವತಿ ಪಂಪ್ ಸ್ಟೋರೇಜ್ ಯೋಜನೆ (Sharavathi Pump Storage Project) ಕುರಿತು ವಿವಾದ ಮುಂದುವರಿಯುತ್ತಿದ್ದರೂ, ಈ ಯೋಜನೆಗೆ ಅನುಮತಿ ನೀಡಿದವರು ಕೇಂದ್ರ ಸರ್ಕಾರ ಹಾಗೂ ಹಿಂದಿನ ಬಿಜೆಪಿ ಸರ್ಕಾರವೆಂದು ಸಚಿವ ಮಂಕಾಳು ವೈದ್ಯ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾ ಕನ್ನಡ ರಾಜ್ಯೋತ್ಸವದ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,“ಜನರಿಗೆ ತೊಂದರೆ ಉಂಟಾಗುತ್ತಿದ್ದರೆ ನಾನು ವೈಯಕ್ತಿಕವಾಗಿ ಈ ಯೋಜನೆಗೆ ವಿರೋಧಿಯೇ. ಇದನ್ನು ಬಹಳ ಹಿಂದೆಯೇ ಹೇಳಿದ್ದೇನೆ, ಈಗಲೂ ಅದೇ ನಿಲುವು ಇದೆ,” ಎಂದು ಹೇಳಿದರು. ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಎರಡೂ ಜಿಲ್ಲೆಗಳಲ್ಲಿ ವಿಸ್ತರಿಸಿಕೊಳ್ಳುತ್ತಿರುವುದಾಗಿ ಸಚಿವರು ಹೇಳಿದರು.“ಈ ಯೋಜನೆಗೆ ಸಂಬಂಧಿಸಿದಂತೆ ಸ್ಥಳೀಯ ಸಂಸದರು, ಶಾಸಕರ ಅಭಿಪ್ರಾಯ ಮುಖ್ಯ. ತಜ್ಞರಿಂದ ಅಧ್ಯಯನ ಮುಂದುವರಿದಿದೆ. ಸರ್ಕಾರದ ವಿವಿಧ ಇಲಾಖೆಗಳ ತಜ್ಞರು…

ಮುಂದೆ ಓದಿ..
ಸುದ್ದಿ 

ವಿಜಯಪುರ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳಿಗೆ ಎಂ.ಬಿ. ಪಾಟೀಲ್ ಅವರ ಜೀವದಾಯಿ ನೆರವು

Taluknewsmedia.com

Taluknewsmedia.comವಿಜಯಪುರ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳಿಗೆ ಎಂ.ಬಿ. ಪಾಟೀಲ್ ಅವರ ಜೀವದಾಯಿ ನೆರವು ವಿಜಯಪುರದಲ್ಲಿ ಆರ್ಥಿಕ ಅಡಚಣೆಯಿಂದ ವೈದ್ಯಕೀಯ ಶಿಕ್ಷಣ ತೊರೆಯುವ ಸ್ಥಿತಿಗೆ ತಲುಪಿದ್ದ ಆರು ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಆಶಾಕಿರಣವಾಗಿ ಪರಿಣಮಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಮೆರುಗು ತೋರಿಸಿ ಸರ್ಕಾರಿ ಕೋಟಾದಡಿ MBBS ಸೀಟು ಪಡೆದಿದ್ದರೂ, ಶಿಕ್ಷಣ ಶುಲ್ಕ ಪಾವತಿಸಲು ಸಾಧ್ಯವಾಗದೇ ಆತಂಕಗೊಂಡಿದ್ದ ಈ ವಿದ್ಯಾರ್ಥಿಗಳ ವಿಷಯ ತಿಳಿದ ಪಾಟೀಲ್ ಅವರು, ತಮ್ಮ ಕಚೇರಿಯ ಮೂಲಕ ಒಟ್ಟು ₹10,21,380ರ ಸಹಾಯಧನವನ್ನು ಬಿಡುಗಡೆ ಮಾಡಿಸಿದ್ದಾರೆ. ಈ ಮೊತ್ತದಿಂದ ಮೊದಲ ವರ್ಷದ ಕಾಲೇಜು ಫೀಸ್‌, ವಸತಿ ಮತ್ತು ಊಟದ ವೆಚ್ಚಗಳನ್ನು ನಿಭಾಯಿಸಲು ವಿದ್ಯಾರ್ಥಿಗಳಿಗೆ ನೆರವಾಗಲಿದೆ. ಪಾಟೀಲ್ ಅವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, “ನೀವು ಉತ್ತಮ ಅಂಕಗಳೊಂದಿಗೆ ವಿದ್ಯಾಭ್ಯಾಸ ಪೂರ್ಣಗೊಳಿಸಿ ಸಮಾಜಕ್ಕೆ ಸೇವೆ ಸಲ್ಲಿಸುವ ಆದರ್ಶ ವೈದ್ಯರಾಗಬೇಕು” ಎಂದು ಹಾರೈಸಿದರು. ಈ ಸಂದರ್ಭ ಬಿಎಲ್ಡಿಇ ಸಂಸ್ಥೆಯ ಮುಖ್ಯ…

ಮುಂದೆ ಓದಿ..
ಸುದ್ದಿ 

ಕಬ್ಬಿನ ಎಂಆರ್‌ಪಿ ನಿಗದಿ ಕೇಂದ್ರದ ವ್ಯಾಪ್ತಿ – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Taluknewsmedia.com

Taluknewsmedia.comಕಬ್ಬಿನ ಎಂಆರ್‌ಪಿ ನಿಗದಿ ಕೇಂದ್ರದ ವ್ಯಾಪ್ತಿ – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೋಲಾರ: ರಾಜ್ಯದಲ್ಲಿ ಕಬ್ಬು ದರ ಹೆಚ್ಚಿಸಬೇಕೆಂಬ ಬೇಡಿಕೆಯಿಂದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ. ಕಬ್ಬಿನ ಕನಿಷ್ಠ ಬೆಲೆ ನಿಗದಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ, ಇದು ಕೇಂದ್ರ ಸರ್ಕಾರದ ಅಧೀನ ಎಂದು ಅವರು ಹೇಳಿದರು. ಕೋಲಾರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ಕಬ್ಬಿಗೆ ನೀಡಬೇಕಾದ ಎಂಆರ್‌ಪಿ ಅಥವಾ ಕನಿಷ್ಠ ಬೆಲೆಯನ್ನು ಕೇಂದ್ರ ಸರ್ಕಾರವೇ ನಿರ್ಧರಿಸುತ್ತದೆ. ಮಹಾರಾಷ್ಟ್ರದಲ್ಲಿ ಹೆಚ್ಚಿನ ಪಾವತಿ ನೀಡಲಾಗುತ್ತಿದೆ ಎನ್ನುವ ಕಾರಣದಿಂದ ಕೃಷಿಕರು ಅದೇ ಮಟ್ಟದ ದರ ರಾಜ್ಯದಲ್ಲೂ ಜಾರಿಗೆ ತರಬೇಕು ಎಂದು ಒತ್ತಾಯಿಸುತ್ತಿದ್ದಾರೆ” ಎಂದು ಹೇಳಿದರು. ಈ ಕುರಿತಂತೆ ರೈತರ ಬೇಡಿಕೆಗಳನ್ನು ಕೇಳಿ ಪರಿಹಾರ ಕಂಡುಕೊಳ್ಳಲು ಸತೀಶ್ ಜಾರಕಿಹೊಳಿ, ಶಿವಾನಂದ ಪಾಟೀಲ್, ತಿಮ್ಮಾಪುರ್, ಮತ್ತು ಎಂ.ಬಿ. ಪಾಟೀಲ್ ಸೇರಿದಂತೆ ಸಂಬಂಧಿತ…

ಮುಂದೆ ಓದಿ..
ಸುದ್ದಿ 

ಕೆಎಂಎಫ್ ಮತ್ತೆ ಜನರನ್ನು ‘ತುಪ್ಪ’ದಲ್ಲಿ ಜಾರಿಸಿದೆ!

Taluknewsmedia.com

Taluknewsmedia.comಕೆಎಂಎಫ್ ಮತ್ತೆ ಜನರನ್ನು ‘ತುಪ್ಪ’ದಲ್ಲಿ ಜಾರಿಸಿದೆ! ನಂದಿನಿ ತುಪ್ಪದ ದರಕ್ಕೆ ಗಗನಕ್ಕೇ ಏರಿಕೆ – ಸಾಮಾನ್ಯ ಜನರ ಮೇಲೆ ಮತ್ತೋಮ್ಮೆ ಹೊಡೆತ ರಾಜ್ಯದ ಜನತೆಗೆ ಕೆಎಂಎಫ್ ಮತ್ತೊಂದು ‘ಶಾಕ್’ ಗಿಫ್ಟ್ ನೀಡಿದೆ. ಇತ್ತೀಚೆಗೆ ದರ ಇಳಿಕೆ ಮಾಡಿ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ್ದ ನಂದಿನಿ, ಈಗ ಹಠಾತ್ ಆಗಿ ತುಪ್ಪದ ದರಕ್ಕೆ ಗಗನಕ್ಕೇ ಏರಿಕೆ ಮಾಡಿ ಮತ್ತೊಮ್ಮೆ ಹೊಡೆತ ನೀಡಿದೆ.ಸಾಮಾನ್ಯ ಜನರು ಪದ್ದತಿ ಬದಲಿಸಿ ಅಚ್ಚುಕಟ್ಟಾಗಿ ಖರ್ಚು ನಡೆಸುತ್ತಿದ್ದಾ ಕ್ಷಣ… ಮತ್ತೆ ಕೆಎಂಎಫ್ “ಇಲ್ಲ್ರಿ! ನೀವು ಸಂತೋಷವಾಗಬಾರದು” ಎಂದು ದರ ಏರಿಕೆ ಮಾಡಿ ಬಿಡಿದೆ. ಹೆಚ್ಚಿದ ದರ ಎಷ್ಟು? ಒಂದು ಲೀಟರ್ ನಂದಿನಿ ತುಪ್ಪಕ್ಕೆ 610 ರೂ. ಇದ್ದ ದರವನ್ನು ಸೋಲು–ಮಾತಿಲ್ಲದೆ 700 ರೂ. ಗೆ ಏರಿಸಲಾಗಿದೆ.ಇದೂ ಸಾಕ್ಕಿಲ್ಲವೆಂಬಂತೆ, ಕೆಲವು ಪ್ರದೇಶಗಳಲ್ಲಿ 720 ರೂ.ಗೂ ಮಾರಾಟದ ಸಾಧ್ಯತೆ! ಕೆಲವೇ ವಾರಗಳ ಹಿಂದೆ, ಜಿಎಸ್‍ಟಿ ಇಳಿಕೆ ನಂತರ 40…

ಮುಂದೆ ಓದಿ..
ಸುದ್ದಿ 

ಶಿವಮೊಗ್ಗ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

Taluknewsmedia.com

Taluknewsmedia.comಶಿವಮೊಗ್ಗ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಶಿವಮೊಗ್ಗ ನಗರದಲ್ಲಿ ಮತ್ತೊಂದು ದುಃಖಕರ ಘಟನೆ ಬೆಳಕಿಗೆ ಬಂದಿದೆ. ನಗರದ ಕೋಟೆ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‌ನಲ್ಲಿ ಓದುತ್ತಿದ್ದ 21 ವರ್ಷದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವಿದ್ಯಾರ್ಥಿನಿ ಭದ್ರಾವತಿ ತಾಲೂಕು ದೊಡ್ಡೇರಿ ಗಂಗೂರು ಗ್ರಾಮದ ಮನೀಷಾ. ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಎಸ್.ಸಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಬೆಳಗ್ಗೆ ಸುಮಾರು 10:15ರ ವೇಳೆಯಲ್ಲಿ ಹಾಸ್ಟೆಲ್‌ನ ಟೆರೇಸ್‌ಗೆ ತೆರಳಿದ್ದ ಮನೀಷಾ, ಅಲ್ಲಿರುವ ಆ್ಯಂಗ್ಲರ್‌ಗೆ ಬೇಣ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ. ವಿಶೇಷವಾಗಿ ಆತ್ಮಹತ್ಯೆಯ ಮೊದಲು ಮನೀಷಾ ಬೆಳಗ್ಗೆಯ ತಿಂಡಿ ಸೇವಿಸಿದ್ದಾಳೆ ಎನ್ನುವುದು ಪ್ರಾಥಮಿಕ ಮಾಹಿತಿ. ಘಟನೆಯ ಸುದ್ದಿಯ ತಿಳಿಯುತ್ತಿದ್ದಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ನಿಖರ ಕಾರಣ…

ಮುಂದೆ ಓದಿ..
ಸುದ್ದಿ 

ಲಿಫ್ಟ್‌ನಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಕೊಲೆ ಮಾಡಿದ ಮಹಿಳೆ ಬಂಧನ

Taluknewsmedia.com

Taluknewsmedia.comಲಿಫ್ಟ್‌ನಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಕೊಲೆ ಮಾಡಿದ ಮಹಿಳೆ ಬಂಧನ ಅಪಾರ್ಟ್‌ಮೆಂಟ್‌ನ ಲಿಫ್ಟ್ ಒಳಗೆ ನಾಯಿಮರಿಯನ್ನು ಕ್ರೂರಿಯಾಗಿ ಬಡಿದು ಕೊಂದ ಆರೋಪದ ಮೇರೆಗೆ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನವೆಂಬರ್ 1ರಂದು ನಡೆದಿದ್ದು, ಲಿಫ್ಟ್‌ನಲ್ಲಿದ್ದ ಸಿಸಿಟಿವಿ ದೃಶ್ಯದಲ್ಲಿ ಸಂಪೂರ್ಣ ಘಟನೆ ದಾಖಲಾಗಿದೆ. ವೀಡಿಯೊ ದೃಶ್ಯಾವಳಿಯಲ್ಲಿ ಪುಷ್ಪಲತಾ ಎನ್ನುವ ಮಹಿಳೆ ನಾಯಿಯೊಂದಿಗೆ ಲಿಫ್ಟ್ ಒಳಗೆ ಪ್ರವೇಶಿಸುವುದು ಕಂಡುಬರುತ್ತದೆ. ಆದರೆ ಲಿಫ್ಟ್ ಬಾಗಿಲು ಮುಚ್ಚುತ್ತಿದ್ದಂತೆಯೇ ಆಕೆ ನಾಯಿಯನ್ನು ನೆಲಕ್ಕೆ ಬಡಿದು ಕೊಂದಿರುವುದು ಸ್ಪಷ್ಟವಾಗಿ ಕಾಣುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ನಾಯಿ ಮಾಲಕಿ, 23 ವರ್ಷದ ಯುವತಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ಪ್ರಕಾರ, ತಾನು ತನ್ನ ನಾಲ್ಕು ವರ್ಷದ ಪೆಟ್ ನಾಯಿ ‘ಗೋಫಿ’ಯನ್ನು ನೋಡಿಕೊಳ್ಳಲು ಪುಷ್ಪಲತಾಳನ್ನು ಸೆಪ್ಟೆಂಬರ್ 11ರಿಂದ ತಿಂಗಳಿಗೆ ರೂ.23,000 ಸಂಬಳಕ್ಕೆ ನೇಮಿಸಿದ್ದರು. ನವೆಂಬರ್ 1ರಂದು ನಾಯಿ ಅಕಸ್ಮಿಕವಾಗಿ ಸಾವನ್ನಪ್ಪಿದ್ದರಿಂದ ಕಾರಣ ವಿಚಾರಿಸಿದಾಗ,…

ಮುಂದೆ ಓದಿ..
ಸುದ್ದಿ 

ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಗೆ ಹತ್ಯೆ ಪ್ರಕರಣದಲ್ಲಿ ಕೋರ್ಟ್ ಆರೋಪ

Taluknewsmedia.com

Taluknewsmedia.comದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಗೆ ಹತ್ಯೆ ಪ್ರಕರಣದಲ್ಲಿ ಕೋರ್ಟ್ ಆರೋಪ ಬೆಂಗಳೂರು: ಚಿತ್ರದುರ್ಗದ ಯುವ ಅಭಿಮಾನಿ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ 15 ಆರೋಪಿಗಳ ವಿರುದ್ಧ ಬೆಂಗಳೂರಿನ 64ನೇ ಸೆಷನ್ಸ್ ಕೋರ್ಟ್ ಗಂಭೀರ ಆರೋಪಗಳನ್ನು ಹೊರಿಸಿದೆ. ಕೋರ್ಟ್ ದಾಖಲಿಸಿದ ಪ್ರಕಾರ, ಆರೋಪಿಗಳ ವಿರುದ್ಧ ಹತ್ಯೆ, ಅಪಹರಣ, ಕ್ರಿಮಿನಲ್ ಪಿತೂರಿ ಹಾಗೂ ಕಾನೂನುಬಾಹಿರ ಸಭೆ ಆರೋಪಗಳು ದಾಖಲಾಗಿವೆ. ಆದರೆ ಎಲ್ಲಾ ಆರೋಪಿಗಳು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಆರೋಪಿಗಳನ್ನು ಕೋರ್ಟ್‌ಗೆ ತರಲಾಯಿತು. ವಿಚಾರಣೆಯ ಸಮಯದಲ್ಲಿ ನ್ಯಾಯಾಲಯದ ಸಭಾಂಗಣ ವಕೀಲರು ಹಾಗೂ ಸಾರ್ವಜನಿಕರಿಂದ ತುಂಬಿ ಹೋಗಿತ್ತು. ಜನಸಂದಣಿಯನ್ನು ನೋಡಿ ನ್ಯಾಯಾಧೀಶ ಐ.ಪಿ. ನಾಯಕ್ ಅವರು ಸವಿನಯವಾಗಿ, “ಈ ರೀತಿ ಜನ ತುಂಬಿರುವಾಗ ವಿಚಾರಣೆ ನಡೆಸುವುದು…

ಮುಂದೆ ಓದಿ..
ಸುದ್ದಿ 

ಕಲಬುರಗಿ ಬ್ಯಾಂಕ್‌ ಚುನಾವಣೆ: ವಿಜಯೇಂದ್ರ ಮಾವನ ನಾಮಪತ್ರ ತಿರಸ್ಕೃತ — ಕಾಂಗ್ರೆಸ್‌ಗೆ ಮೊದಲ ಗೆಲುವಿನ ಸಂಭ್ರಮ

Taluknewsmedia.com

Taluknewsmedia.comಕಲಬುರಗಿ ಬ್ಯಾಂಕ್‌ ಚುನಾವಣೆ: ವಿಜಯೇಂದ್ರ ಮಾವನ ನಾಮಪತ್ರ ತಿರಸ್ಕೃತ — ಕಾಂಗ್ರೆಸ್‌ಗೆ ಮೊದಲ ಗೆಲುವಿನ ಸಂಭ್ರಮ ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (DCC) ಬ್ಯಾಂಕ್‌ ನಿರ್ದೇಶಕರ ಚುನಾವಣೆಗಾಗಿ ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡಿದೆ. ಒಟ್ಟು 34 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರಲ್ಲಿ ಒಂದು ನಾಮಪತ್ರ ತಿರಸ್ಕೃತಗೊಂಡಿದ್ದು, ಉಳಿದ 33 ಅಭ್ಯರ್ಥಿಗಳ ನಾಮಪತ್ರಗಳು ಮಾನ್ಯಗೊಂಡಿವೆ ಎಂದು ಚುನಾವಣಾಧಿಕಾರಿ ಹಾಗೂ ಹಿರಿಯ ಕೆಎಎಸ್ ಅಧಿಕಾರಿ ಪ್ರಕಾಶ್ ಕುದರಿ ತಿಳಿಸಿದ್ದಾರೆ. ವಿಜಯೇಂದ್ರ ಮಾವನ ನಾಮಪತ್ರ ಅನರ್ಹ:ಬ್ಯಾಂಕ್‌ನ ಪ್ರಸ್ತುತ ನಿರ್ದೇಶಕರಾದ ಶಿವಾನಂದ ಅಪ್ಪಾಸಾಬ ಮಾನಕರ ಅವರು ಟಿಎಪಿಸಿಎಂನ ಬಿ ಕ್ಷೇತ್ರದಿಂದ ಪುನರಾಯ್ಕೆಗಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಅಫಜಲಪುರ ಟಿಎಪಿಸಿಎಂ ಪ್ರದೇಶಕ್ಕೆ ಆಡಳಿತಾಧಿಕಾರಿ ನೇಮಕಗೊಂಡಿದ್ದ ಕಾರಣದಿಂದಾಗಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಶಿವಾನಂದ ಮಾನಕರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಮಾವರಾಗಿದ್ದಾರೆ ಎನ್ನುವುದು ವಿಶೇಷ. ಅವಿರೋಧ ಆಯ್ಕೆಗಳ ಸಂಭ್ರಮ:ಬ್ಯಾಂಕ್‌ನ ಅಧ್ಯಕ್ಷರಾಗಿರುವ ಸೋಮಶೇಖರ ಗೋನಾಯಕ (ಪಟ್ಟಣ…

ಮುಂದೆ ಓದಿ..