ಸುದ್ದಿ 

ಗ್ರಾಮ ಭಾರತಿ ಟ್ರಸ್ಟ್ ವತಿಯಿಂದ ವಿಶ್ವ ಆತ್ಮ ಹತ್ಯ ತಡೆ ದಿನ

Taluknewsmedia.com

Taluknewsmedia.comಗ್ರಾಮ ಭಾರತಿ ಟ್ರಸ್ಟ್ ವತಿಯಿಂದ ವಿಶ್ವ ಆತ್ಮ ಹತ್ಯ ತಡೆ ದಿನ ನಗರದ ಗುರುಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಆಡಳಿತ ಸಹಕಾರದೊಂದಿಗೆ ಗ್ರಾಮಭಾರತಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾ. ಶ್ರೀ ನಟೇಶ್ ಜಿಲ್ಲಾ ಸದಸ್ಯ ಕಾರ್ಯದರ್ಶಿಗಳು ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ ಪ್ರತಿ ವರ್ಷ ಸುಮಾರು 9 ಲಕ್ಷ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿದ್ದು ಇದೊಂದು ಆತಂಕಕಾರಿ ವಿಷಯ ಇದನ್ನು ತಡೆಗಟ್ಟಲು ಪ್ರತಿಯೊಬ್ಬ ನಾಗರಿಕನು ಸಂವಿಧಾನ ಬದ್ಧ ಕರ್ತವ್ಯಗಳಲ್ಲೂ ಒಂದಾಗಿದ್ದು ಇದಕ್ಕೆ ಪ್ರತಿಯೊಬ್ಬನಾಗರಿಕನು ಕೈಜೋಡಿಸಬೇಕೆಂದು ತಿಳಿಸಿದರು. ತಮ್ಮ ಸುತ್ತು ಮುತ್ತಲ ಪ್ರದೇಶದಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳು, ಮಾದಕ ವಸ್ತುಗಳು ಸಂಗ್ರಹಣೆ ಮತ್ತು ಮಾರಾಟ, ಪರಿಸರದ ಮೇಲೆ ಆಗುತ್ತಿರುವ ಅಕ್ರಮಗಳ ಬಗ್ಗೆ ಜಾಗೃತಿ ವಹಿಸಿ ಆರೋಗ್ಯವಂತ ಸಮಾಜ ನಿರ್ಮಾಣದ ರೂವಾರಿಗಳಾಗಬೇಕು ಆಗಲೇ ಸುಸಂಸ್ಕೃತ ಸಮಾಜ ತಲೆಯೆತ್ತಲು…

ಮುಂದೆ ಓದಿ..
ಸುದ್ದಿ 

ಹಾನಗಲ್ ನ ಜಾನಗುಂಡಿಕೊಪ್ಪದಲ್ಲಿ ಯುವಕ ಕಾಣೆ

Taluknewsmedia.com

Taluknewsmedia.comಹಾನಗಲ್ ನ ಜಾನಗುಂಡಿಕೊಪ್ಪದಲ್ಲಿ ಯುವಕ ಕಾಣೆ:ಹಾವೇರಿ ಜಿಲ್ಲೆ ಹಾನಗಲ್ ತಾಲುಕು ಜಾನಗುಂಡಿಕೊಪ್ಪ ಗ್ರಾಮದಲ್ಲಿ 17 ವರ್ಷದ ಯುವಕ ದಿಢೀರ್ ಕಾಣೆಯಾಗಿರುವ ಘಟನೆ ನಡೆದಿದೆದಿನಾಂಕ:-01/09/2025 ರಂದು ಮುಂಜಾನೆ 09-00 ಗಂಟೆ ಸುಮಾರಿಗೆ ಹಾನಗಲ್ಲ ತಾಲೂಕಿನ ಜಾನಗುಂಡಿಕೊಪ್ಪ ಗ್ರಾಮದ ಗುಡ್ಡಪ್ಪ ಮಾಲತೇಶ ಅಕ್ಕಿ ವಯಾ:-17 ವರ್ಷ ಜಾತಿ:-ಹಿಂದೂ ಲಿಂಗಾವಾತ ಈತ ವಿದ್ಯಾರ್ಥಿಯಾಗಿದ್ದುಸಾ||ಜಾನಗುಂಡಿಕೊಪ್ಪ ತಾ||ಹಾನಗಲ್ಲ ಜಿ||ಹಾವೇರಿ ಈತನು ತನ್ನ ಮನೆಯಲ್ಲಿ ಕಾಲೇಜಿಗೆ ಹೋಗಿ ಬರುತ್ತೆನೆ ಅಂತಾ ಹೇಳಿ ಹೋದವನು ಮನೆಗೆ ವಾಪಸ ಬಂದಿರುವುದಿಲ್ಲಾ, ಸದರಿಯವನು ಎಲ್ಲಿಯಾದರೂ ಕಾಣೆಯಾಗಿರಬಹುದು ಅಥವಾ ಸದರಿಯವನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿಕೊಂಡು ಹೋಗಿರಬಹದು ಅಂತಾ ಅವರ ಆಪ್ತರಾದ ರವಿ ನಿಂಗಪ್ಪ ಅಕ್ಕಿ ಎನ್ನುವವರು ಹಾನಗಲ್ ನಗರದ ಪೊಲೀಸ ಠಾಣೆಗೆ ದೂರು ನೀಡಿದ್ದಾರೆ.: ವರದಿಪ್ರಮೋದ್ ಜನಗೇರಿಹಾನಗಲ್ ತಾಲೂಕ್ ಆಲದಕಟ್ಟಿತಾಲೂಕ್ ನ್ಯೂಸ್ .ಹಾವೇರಿ6360821691https://taluknewsmedia.com/PRAMODJANAGERI.html

ಮುಂದೆ ಓದಿ..
ಸುದ್ದಿ 

ಸವಣೂರಿನಲ್ಲಿ ಹೆಚ್ಚಿದ ಅಂದರ್ ಬಾಹರ್ ಜೂಜಾಟ

Taluknewsmedia.com

Taluknewsmedia.comಸವಣೂರಿನಲ್ಲಿ ಹೆಚ್ಚಿದ ಅಂದರ್ ಬಾಹರ್ ಜೂಜಾಟ: ಹಾವೇರಿ ಜಿಲ್ಲೆ ಸವಣೂರು ತಾಲುಕು ಸಿದ್ದಾಪುರ ಗ್ರಾಮದಲ್ಲಿ ಸಾರ್ವಜನಿಕ ಜೂಜಾಟ ಕಂಡುಬಂದಿದೆ ಸಾರ್ವಜನಿಕರಿಗೆ ಕುಟುಂಬಸ್ಥರಿಗೆ ಬಿತಿ ಹೆಚ್ಚಾಗಿದೆ ದಿನಾಂಕ: 09-09-2025 ರಂದು ಬೆಳಗಿನ ಜಾವ 07-15 ಗಂಟೆಯ ಸುಮಾರಿಗೆ ಸವಣೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಪೊಲೀಸರು ಪೆಟ್ರೋಲಿಂಗ್ ಕರ್ತವ್ಯದಲ್ಲಿದ್ದಾಗ ಒಬ್ಬರು ಮಾಹಿತಿ ನೀಡಿದ್ದು ಅದರಲ್ಲಿ ಸವಣೂರ ತಾಲ್ಲೂಕ ಸಿದ್ದಾಪೂರ ಗ್ರಾಮದ ಬಸ್ಸನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸುಮಾರು 3-4 ಜನರು ಗುಂಪಾಗಿ ಕುಳಿತುಕೊಂಡು ಇಸ್ಪೀಟು ಎಲೆ ಹಚ್ಚಿ ಹಣವನ್ನು ಪಣಕ್ಕೆ ಹಚ್ಚಿ ಅಂದರ ಬಾಹರ ಜೂಜಾಟ ಆಡುತ್ತಿದ್ದಾರೆ ಮತ್ತು ನೀವು ಬಂದು ರೇಡ ಮಾಡಿದರೆ ಸಿಗುತ್ತಾರೆ ಅಂತಾ ಮಾಹಿತಿ ಬಂದಿದ್ದು ಕಾರಣ ಪೊಲೀಸರು ಸ್ಥಳದಲ್ಲಿ ಇಸ್ಪೀಟು ಎಲೆ ಆಡುತ್ತಿದ್ದವರ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ ಸದರಿ ವ್ಯಕ್ತಿಗಳ ಮೇಲೆ ಸರಕಾರಿ ತರಪಿಯಾಗಿ ಸವಣೂರು ಪೊಲೀಸರೇದೂರನ್ನು ಸ್ವೀಕರಿಸಿಕೊಂಡು ಸವಣೂರ…

ಮುಂದೆ ಓದಿ..
ಸುದ್ದಿ 

ಶಿಗ್ಗಾಂವ ತಾಲೂಕು ತಡಸ್ ರಸ್ತೆ ಬಳಿ ಕಾರ್ ಬ್ಯಾರಿಕೇಡ್ ಗೆ ಡಿಕ್ಕಿ ಬಿಕರ ಗಾಯ:

Taluknewsmedia.com

Taluknewsmedia.com ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹುಬ್ಬಳ್ಳಿ ಸಮೀಪದ ತಡಸ್ ರಸ್ತೆ ಬಳಿ ಬಿಕರ ಕಾರು ಅಪಘಾತ ಘಟನೆ ನಡೆದಿದೆ ದಿನಾಂಕ:06/09/2025 ರಂದು ಮುಂಜಾನೆ 04-30 ಗಂಟೆಯಿಂದ 04-45 ಗಂಟೆಯ ನಡುವಿನ ಅವಧಿಯಲ್ಲಿ ಮುತ್ತಳ್ಳಿ ಗ್ರಾಮದ ಲೇ ಬೈ ಹತ್ತಿರ ಶಿಗ್ಗಾಂವ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೋದ ಎನ್ ಹೆಚ್-48 ರಸ್ತೆಯಲ್ಲಿ ಕೆಎ-22/ಪಿ-7687 ನೇದ್ದರ ಚಾಲಕನಾದ ವೇದಾಂತ ಅಮೃತರಾವ ಜನ್ಮಣ್ಣವರ ಈತನು ತಾನು ಚಲಾಯಿಸುತ್ತಿದ್ದ ಕಾರನ್ನು ಅತೀವೇಗವಾಗಿ ಹಾಗೂ ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಬಂದು ಕಾರಿನ ವೇಗವನ್ನು ನಿಯಂತ್ರಿಸದೇ ರಸ್ತೆಯ ಮಧ್ಯದಲ್ಲಿರುವ ಡಿವೈಡರ್ ಬ್ಯಾರಿಕೇಡ್ ಗೆ ಡಿಕ್ಕಿ ಪಡಿಸಿ ಇದರಲ್ಲಿಯ ಗಾಯಾಳುವಿಗೆ ತೀವ್ರ ಸ್ವರೂಪದ ಗಾಯನೋವು ಪಡಿಸಿ ಕಾರನ್ನು ಜಖಂಗೊಳಿಸಿದ್ದಲ್ಲದೇ ತಾನು ಸಹ ತೀವ್ರ ಸ್ವರೂಪದ ಗಾಯಕ್ಕೆ ತುತ್ತಾಗಿದ್ದಾನೆ ಇವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ ಈ ಮಾಹಿತಿ ತಿಳಿದ ತಡಸ್ ಪೊಲೀಸರು ತಕ್ಷಣ ಆಕ್ಸಿಡೆಂಟ್ ಆದ ಸ್ಥಳಕ್ಕೆ…

ಮುಂದೆ ಓದಿ..
ಅಂಕಣ ಸುದ್ದಿ 

ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ……

Taluknewsmedia.com

Taluknewsmedia.comಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ…… ಒಂದು ವೇಳೆ ಶ್ರೀಮತಿ ಭಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸಿದರೆ ಏನಾಗಬಹುದು ಅಥವಾ ಅವರು ಉದ್ಘಾಟಿಸದಿದ್ದರೆ ಏನಾಗಬಹುದು…….. ತುಂಬಾ ತುಂಬಾ ತಲೆಕೆಡಿಸಿಕೊಂಡು ವಾದ ವಿವಾದ ಮಾಡುತ್ತಿರುವವರಿಗಾಗಿ…. ಉದ್ಘಾಟಿಸಿದರೆ ವೈಯಕ್ತಿಕ ಮಟ್ಟದಲ್ಲಿ ಭಾನು ಮುಷ್ತಾಕ್ ಅವರಿಗೆ ಪ್ರಖ್ಯಾತಿಯ ಸಂತೋಷ ಮತ್ತು ಬದುಕಿನ ಸಾರ್ಥಕತೆಯ ಭಾವ ಉಂಟಾಗಬಹುದು. ಹಾಗೆಯೇ ರಾಜಕೀಯ ಪಕ್ಷಗಳಿಗೆ ಒಂದಷ್ಟು ಜನಾಭಿಪ್ರಾಯದ ಲಾಭ – ನಷ್ಟ ಆಗಬಹುದು. ಅದನ್ನು ಹೊರತುಪಡಿಸಿ ಯಾವುದೇ ರೀತಿಯ ಸಾಮಾನ್ಯ ವ್ಯಕ್ತಿಯ ಬದುಕಿನಲ್ಲಿ ಯಾವ ವ್ಯತ್ಯಾಸವೂ ಆಗುವುದಿಲ್ಲ. ಏಕೆಂದರೆ ಭಾನು ಮುಷ್ತಾಕ್ ಎನ್ನುವ ಮಹಿಳೆ ನಿಸರ್ಗದ ಒಂದು ಜೀವಿ. ನಿಸರ್ಗಕ್ಕೆ ಆಕೆ ಹಿಂದು, ಮುಸ್ಲಿಮ, ಹೆಣ್ಣು, ಗಂಡು ಎಂಬ ಯಾವ ಅರಿವೂ ಇರುವುದಿಲ್ಲ. ಉದ್ಘಾಟನೆಯ ವಿಧಾನ ಮತ್ತು ಅದಕ್ಕೆ ಬಳಸಬಹುದಾದ ಹೂವು, ಹಣ್ಣು, ಅರಿಶಿನ, ಕುಂಕುಮ, ಪೂಜೆ, ಮಂತ್ರ, ಅಜಾನ್, ಖುರಾನ್ ಪಠಣ,…

ಮುಂದೆ ಓದಿ..
ಸುದ್ದಿ 

ಆರ್.ಟಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಮಾಡಿದ ಗೂಡ್ಸ್ ವಾಹನ ಚಾಲಕನ ವಿರುದ್ಧ ಪ್ರಕರಣ

Taluknewsmedia.com

Taluknewsmedia.comಬೆಂಗಳೂರು :ನಗರದ ಆರ್.ಟಿ ನಗರದ ಮುಖ್ಯರಸ್ತೆಯಲ್ಲಿ ಸಂಚಾರಕ್ಕೆ ತೊಂದರೆ ಉಂಟುಮಾಡಿದ ಗೂಡ್ಸ್ ವಾಹನ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಾಹಿತಿಯ ಪ್ರಕಾರ, ಸೆಪ್ಟಂಬರ 4 ರಂದು ಬೆಳಗ್ಗೆ 8.00 ಗಂಟೆಯಿಂದ ರಾತ್ರಿ 8.00 ಗಂಟೆಯವರೆಗೆ ಕೋಬ್ರಾ–01 ಗಸ್ತು ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟಿದ್ದ ಪೊಲೀಸರು ಸಿ.ಬಿ.ಐ ಮುಖ್ಯರಸ್ತೆಯಲ್ಲಿ ಸಂಚಾರ ನಿರ್ವಹಣೆಯಲ್ಲಿದ್ದರು. ಸಂಜೆ ಸುಮಾರು 6.00 ಗಂಟೆಯ ಸಮಯದಲ್ಲಿ ಪ್ಲಾರೆನ್ಸ್ ಶಾಲೆಯ ಎದುರು KA-05-AM-5926 ಸಂಖ್ಯೆಯ ಗೂಡ್ಸ್ ವಾಹನವನ್ನು ಚಾಲಕನು ಮುಖ್ಯರಸ್ತೆಯಲ್ಲೇ ನಿಲ್ಲಿಸಿ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟುಮಾಡಿದ್ದಾನೆ. ಪೊಲೀಸರು ವಾಹನದ ಹತ್ತಿರ ತೆರಳಿ ಚಾಲಕನ ವಿವರಗಳನ್ನು ವಿಚಾರಿಸಿದಾಗ ಆತನು ಶಿವಕುಮಾರ್ (20), ಉಮೇಶ್ ಕುಮಾರ್ ಪುತ್ರ, ರಂಜಿತಪುರ, ಸೀತಾಮಹಿ ಜಿಲ್ಲೆ, ಬಿಹಾರ್ ರಾಜ್ಯ ನಿವಾಸಿ ಎಂದು ತಿಳಿದುಬಂದಿದೆ. ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಆ ವಾಹನ ಚಾಲಕನ ವಿರುದ್ಧ ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸರು ಪ್ರಕರಣ…

ಮುಂದೆ ಓದಿ..
ಸುದ್ದಿ 

20 ವರ್ಷದ ಯುವಕ ಕಾಣೆಯಾಗಿದ್ದಾನೆ – ಪೋಷಕರಲ್ಲಿ ಆತಂಕ

Taluknewsmedia.com

Taluknewsmedia.comಬೆಂಗಳೂರು,ನಗರದ ವಿಕಾಸ್ ಎನ್.ಜಿ (20) ಎಂಬ ಯುವಕ ಕಳೆದ ಸೆಪ್ಟೆಂಬರ್ 2ರ ರಾತ್ರಿ ಮನೆಯಿಂದ ಹೊರಟ ಬಳಿಕ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ತಿಳಿಸಿದಂತೆ, ವಿಕಾಸ್ ರಾತ್ರಿ 8 ಗಂಟೆಯ ಸುಮಾರಿಗೆ ಮನೆಯಿಂದ ಪಲ್ಸರ್ ಬೈಕ್ (ನಂಬರ: KA-41-EW-9470) ತೆಗೆದುಕೊಂಡು ಹೋದನು. ಆದರೆ ನಂತರ ಮನೆಗೆ ವಾಪಸಾಗದೆ ಕಾಣೆಯಾಗಿದ್ದಾನೆ. ಕುಟುಂಬಸ್ಥರು ಮತ್ತು ಬಂಧುಗಳು ಆತುರದಿಂದ ತಮ್ಮ ಮಟ್ಟಿಗೆ ಎಲ್ಲೆಡೆ ಹುಡುಕಾಟ ನಡೆಸಿದರೂ, ವಿಕಾಸ್‌ನ ಸುಳಿವು ಸಿಕ್ಕಿಲ್ಲ. ಹೀಗಾಗಿ ಪೋಷಕರಾದ ಗಿರೀಶ್ (48) ಅವರು ಈ ಕುರಿತು ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದು– ವಿಕಾಸ್ ಎನ್.ಜಿ ಕುರಿತಾಗಿ ಯಾರಿಗಾದರೂ ಮಾಹಿತಿ ದೊರೆತಲ್ಲಿ ತಕ್ಷಣವೇ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಮುಂದೆ ಓದಿ..
ಸುದ್ದಿ 

ಜಗತ್ತಿನ ಶಿಕ್ಷಕ……. ಒಂದು ಪಾಠ……

Taluknewsmedia.com

Taluknewsmedia.comಜಗತ್ತಿನ ಶಿಕ್ಷಕ…….ಒಂದು ಪಾಠ…… ಶಿಕ್ಷಕರ ದಿನದಂದು ಜಗತ್ತಿನ ಅತಿ ಬುದ್ಧಿವಂತ ಆಲ್ಬರ್ಟ್ ಐನ್ ಸ್ಟೈನ್ ಅವರನ್ನು ನೆನೆಯುತ್ತಾ ಒಂದು ಸಂಕಲ್ಪ. ” ಮೂರು ಮಹಾನ್ ಶಕ್ತಿಗಳು ಜಗತ್ತನ್ನು ಆಳುತ್ತವೆ. ಅವೆಂದರೆ,ಮೂರ್ಖತನ – ಭಯ – ದುರಾಸೆ…..* ಆಲ್ಬರ್ಟ್ ಐನ್ಸ್ಟೈನ್…ಜಗತ್ತಿನ ಅತ್ಯಂತ ಬುದ್ದಿವಂತ ಎಂದು ಕರೆಯಲ್ಪಡುವ ವಿಜ್ಞಾನಿ…. ಇದಕ್ಕೆ ವಿರುದ್ಧ ಪದಗಳು. ಮೂರ್ಖತನ × ಬುದ್ದಿವಂತಿಕೆ,ಭಯ × ಧೈರ್ಯ,ದುರಾಸೆ × ಆಸೆ,……. ಚಿಂತನೆಗೆ ಹಚ್ಚುವ ಬಹುಮುಖ್ಯ ವಿಷಯವಿದು. ಒಂದು ರೀತಿಯಲ್ಲಿ ನಮ್ಮೊಳಗೆ ಒಂದು ಆತ್ಮಾವಲೋಕನ ಪ್ರಕ್ರಿಯೆಗೆ ಚಾಲನೆ ನೀಡಬಹುದಾದ ವಿಷಯವಿದು. ವ್ಯಕ್ತಿಗತವಾಗಿ ಇದನ್ನು ಹೇಳಿರುವುದು ಜಗತ್ತಿನ ಅತ್ಯಂತ ಬುದ್ದಿವಂತ ವ್ಯಕ್ತಿ. ಆದ್ದರಿಂದ ಇದು ಪರಿಶೀಲನೆಗೆ ಅರ್ಹ ಎಂದು ಭಾವಿಸುತ್ತೇನೆ….. ಭಾರತದ ಮಟ್ಟಿಗೆ ಈ ಮೂರು ಅಂಶಗಳು ಬಹುತೇಕ ಸತ್ಯ ಮತ್ತು ವಾಸ್ತವ. ನೇರವಾಗಿ ಹೇಳಬೇಕೆಂದರೆ ಈ ಸಮಾಜದೊಂದಿಗಿನ ನನ್ನ ಅನುಭವದಲ್ಲಿ ರೂಪಗೊಂಡಿರುವ ಅಭಿಪ್ರಾಯವೆಂದರೆ ಭಾರತದ ಮಧ್ಯಮ ವರ್ಗದ ಜನ…

ಮುಂದೆ ಓದಿ..
ಸುದ್ದಿ 

ಸವಿ ನೆನಪುಗಳು ಬೇಕು ಸವಿಯಲೀ ಬದುಕು……

Taluknewsmedia.com

Taluknewsmedia.comಸವಿ ನೆನಪುಗಳು ಬೇಕು ಸವಿಯಲೀ ಬದುಕು…… ಶಬ್ದ ಅಥವಾ ಧ್ವನಿ ಕ್ರಮಬದ್ಧತೆಯ – ಶಿಸ್ತುಬದ್ಧತೆಯ ತರಂಗಗಳನ್ನು ಸಂಗೀತ ಎಂದು ಗ್ರಹಿಸಬಹುದೇ ? ಅಥವಾ, ಆ ಶಬ್ದಗಳ ಸುಶ್ರಾವ್ಯತೆ ಮಾತ್ರ ಸಂಗೀತವೇ ? ಅಥವಾ, ಧ್ವನಿ ಮತ್ತು ವಾದ್ಯಗಳ ಸಮ್ಮಿಲನದ ಭಾಷೆಗೆ ಸಂಗೀತ ಎನ್ನಬಹುದೇ…… ಅಥವಾ, ಸಾಹಿತ್ಯ ಧ್ವನಿ ವಾದ್ಯಗಳ ಮಿಲನದ ಪ್ರಕ್ರಿಯೆಯೇ ಸಂಗೀತವೇ…… ಅಥವಾ, ಧ್ವನಿಯ ಸ್ವರ ಲಯ ತಾಳಗಳ ರೂಪವೇ ಸಂಗೀತ ಸೃಷ್ಟಿಸುತ್ತದೆಯೇ….. ಅದರ ನಿಜವಾದ ಅರ್ಥ ಏನೇ ಇರಲಿ ಮನುಷ್ಯ ಜೀವಿಯ ಬದುಕಿನಲ್ಲಿ ಅತಿಹೆಚ್ಚು ಆಕರ್ಷಕ ಧ್ವನಿ ಎಂದರೆ ಅದು ಸಾಮಾನ್ಯವಾಗಿ ಹಾಡುಗಳು ಎಂದು ಕರೆಯಲ್ಪಡುವ ಧ್ವನಿ ತರಂಗಗಳು……. ಬಹುಶಃ ಹುಟ್ಟಿದ ಮಗುವಿನಿಂದ ವೃದ್ದರವರೆಗೆ ಒಂದಲ್ಲ ಒಂದು ರೀತಿಯ ಹಾಡುಗಳ ಮೋಹ ಅವರ ಮನಸ್ಸುಗಳ ಮೇಲೆ ಪ್ರಭಾವ ಬೀರುವುದನ್ನು ಕಾಣಬಹುದು…… ಕೇವಲ ಭಾರತ ದೇಶ ಮಾತ್ರವಲ್ಲ ಇಡೀ ಸೃಷ್ಟಿಯ ಮನುಷ್ಯ ಪ್ರಾಣಿಯ ಎಲ್ಲರಿಗೂ ಇದು…

ಮುಂದೆ ಓದಿ..
ಸುದ್ದಿ 

ಕೋಡಿಮಠದ ಸ್ವಾಮಿಗಳ ಭವಿಷ್ಯವಾಣಿ…..

Taluknewsmedia.com

Taluknewsmedia.comಕೋಡಿಮಠದ ಸ್ವಾಮಿಗಳ ಭವಿಷ್ಯವಾಣಿ….. ಕೋಡಿಹಳ್ಳಿ ಮಠದ ಸ್ವಾಮಿಗಳ ಭವಿಷ್ಯವಾಣಿ ರಾಜ್ಯದ ಮಾಧ್ಯಮಗಳಲ್ಲಿ ಹಲವಾರು ವರ್ಷಗಳಿಂದ ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಕಳೆದ 40/50 ವರ್ಷಗಳಿಂದ ಅವರ ಭವಿಷ್ಯ ವಾಣಿ ಗಮನಿಸಿದಾಗ ಒಂದಷ್ಟು ನಿಜವಾಗಿರುವುದು ಸಹ ವಾಸ್ತವ. ಅದರಲ್ಲೂ ಪ್ರಾಕೃತಿಕ, ರಾಜಕೀಯ ಮತ್ತು ಕೆಲವು ದುರಂತ ಘಟನೆಗಳ ಬಗ್ಗೆ ಅವರು ನುಡಿದ ಭವಿಷ್ಯಗಳು ಸಾಮಾನ್ಯವಾಗಿ ನಿಜವಾಗುತ್ತದೆ….. ಹಾಗಾದರೆ ಸ್ವಾಮೀಜಿಗಳ ಭವಿಷ್ಯ ನಿಜವೇ, ಅವರಿಗೆ ಆ ಶಕ್ತಿ ಇದೆಯೇ ಅಥವಾ ಅದೊಂದು ಅನುಭವದ ಮಾತುಗಳೇ, ಆಳ ಅಧ್ಯಯನದ ಚಿಂತನೆಯೇ, ದೂರ ದೃಷ್ಟಿಯೇ ಅಥವಾ ಅವರೊಳಗಿನ, ಪ್ರತಿಭೆಯೇ, ಅವರು ವಿಶೇಷ ಸಾಮರ್ಥ್ಯವೇ,ವೈಚಾರಿಕತೆಯೇ, ವೈಜ್ಞಾನಿಕವೇ, ಮೂಡನಂಬಿಕೆಯೇ ಹೀಗೆ ಪ್ರಶ್ನೆಗಳು ಸಾಮಾನ್ಯ ಜನರಲ್ಲಿ ಉದ್ಭವವಾಗುತ್ತದೆ….. ಪ್ರಾಕೃತಿಕವಾಗಿ, ಸಹಜವಾಗಿ ಹೇಳುವುದಾದರೆ ಭವಿಷ್ಯವನ್ನು ಊಹಿಸಿ ಖಚಿತವಾಗಿ ಹೇಳುವುದು ಯಾರಿಂದಲೂ ಸಾಧ್ಯವಿಲ್ಲ. ವಿಜ್ಞಾನವು ಕೂಡ ಆ ವಿಷಯದಲ್ಲಿ ಸಂಪೂರ್ಣ ಸತ್ಯ ಎಂದು ಹೇಳಲು ಆಗುವುದಿಲ್ಲ. ಏಕೆಂದರೆ ಭವಿಷ್ಯದ ಘಟನೆಗಳು ಎಲ್ಲಾ…

ಮುಂದೆ ಓದಿ..