ಅಂಕಣ ರಾಜಕೀಯ ಸುದ್ದಿ 

ಹೆಚ್.ಡಿ. ದೇವೇಗೌಡರು ಹಿಂದಿನ ಪಕ್ಷಕ್ಕೆ ದ್ರೋಹ ಮಾಡಿ ಹೊಸ ಪಕ್ಷ ಕಟ್ಟಿದರು ಎಂಬ ಹೇಳಿಕೆ ಇತಿಹಾಸಕ್ಕೆ ಹೊಂದುವುದಿಲ್ಲ.

Taluknewsmedia.com

Taluknewsmedia.comಹೆಚ್.ಡಿ. ದೇವೇಗೌಡರು ಹಿಂದಿನ ಪಕ್ಷಕ್ಕೆ ದ್ರೋಹ ಮಾಡಿ ಹೊಸ ಪಕ್ಷ ಕಟ್ಟಿದರು ಎಂಬ ಹೇಳಿಕೆ ಇತಿಹಾಸಕ್ಕೆ ಹೊಂದುವುದಿಲ್ಲ. ರಾಜಕೀಯದಲ್ಲಿ ಹೊಸ ಪಕ್ಷಗಳ ಹುಟ್ಟು, ಪಕ್ಷ ಬದಲಾವಣೆ ಸಾಮಾನ್ಯ. ಆದರೆ ಕೆಲವೊಮ್ಮೆ ಇದಕ್ಕೆ “ದ್ರೋಹ” ಎಂಬ ಲೇಬಲ್ ಜೋಡಿಸಲಾಗುತ್ತದೆ. ಮಾಜಿ ಪ್ರಧಾನಿ ಹಾಗೂ ಜನತಾ ದಳ (ಸೆಕ್ಯುಲರ್) ಪಕ್ಷದ ಸಂಸ್ಥಾಪಕರಾದ ಹೆಚ್.ಡಿ. ದೇವೇಗೌಡರ ರಾಜಕೀಯ ಜೀವನದಲ್ಲಿಯೂ ಈ ಪ್ರಶ್ನೆಯನ್ನು ಕೆಲವು ರಾಜಕೀಯ ವಲಯಗಳಲ್ಲಿ ಎತ್ತಲಾಗುತ್ತದೆ. ಆದ್ದರಿಂದ, ಈ ವಿಷಯವನ್ನು ಸ್ಪಷ್ಟ ರೂಪದಲ್ಲಿ ಇತಿಹಾಸಾಧಾರವಾಗಿ ನೋಡೋಣ. ಪ್ರಾರಂಭಿಕ ರಾಜಕೀಯ….. ಹೆಚ್.ಡಿ. ದೇವೇಗೌಡರು ತಮ್ಮ ರಾಜಕೀಯ ಜೀವನವನ್ನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ (ಕಾಂಗ್ರೆಸ್) ಪಕ್ಷದ ಮೂಲಕ ಆರಂಭಿಸಲಿಲ್ಲ ಎಂಬುದು ಗಮನಿಸಬೇಕಾದ ಮಹತ್ವದ ಸಂಗತಿ. ಅವರು ಮೊದಲಿಗೆ ಸ್ವತಂತ್ರ ಅಭ್ಯರ್ಥಿಯಾಗಿ ತಮ್ಮ ವಲಯದಲ್ಲಿ ಜನರಿಂದಲೇ ಬೆಂಬಲ ಪಡೆದು ರಾಜಕೀಯಕ್ಕೆ ಪ್ರವೇಶಿಸಿದರು. ನಂತರ ಜನತಾ ಪಕ್ಷದ ಚಳವಳಿಯ ಸಮಯದಲ್ಲಿ ಅವರು ಜನತಾ ಪರಿವಾರದ ರಾಜಕೀಯಕ್ಕೆ…

ಮುಂದೆ ಓದಿ..
ಅಂಕಣ 

ಒಂದು ಅಪಘಾತ……..

Taluknewsmedia.com

Taluknewsmedia.comಒಂದು ಅಪಘಾತ…….. ನಿನ್ನೆ ಒಂದು ಅಪಘಾತವಾದ ಸುದ್ದಿ ತಿಳಿಯಿತು. ಅದರಲ್ಲಿ 40 ವರ್ಷದ ಗಂಡ ಮತ್ತು ಆತನ 35 ವರ್ಷದ ಹೆಂಡತಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅವರಿಗೆ ಐದು, ಏಳು ಮತ್ತು ಹತ್ತು ವರ್ಷದ ಮೂವರು ಮಕ್ಕಳಿದ್ದಾರೆ. ಬೇರೆ ಊರಿನಿಂದ ಬೆಂಗಳೂರಿಗೆ ಬಂದು ಬಟ್ಟೆ ಅಂಗಡಿ ಇಟ್ಟುಕೊಂಡು ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬವದು. ಒಂದು ಕ್ಷಣ ಕಣ್ಣು ಮುಚ್ಚಿ ಯೋಚಿಸಿ ನೋಡಿ, 5, 7 ಮತ್ತು 10 ವರ್ಷದ ಗಂಡು-ಹೆಣ್ಣು ಮಕ್ಕಳು ಮನೆಯಲ್ಲಿ ಶಾಲಾ ಪುಸ್ತಕ ಓದುತ್ತಲೋ, ಟಿವಿ ನೋಡುತ್ತಲೋ, ಆಟವಾಡುತ್ತಲೋ ತಮ್ಮ ಅಪ್ಪ ಅಮ್ಮ ರಾತ್ರಿ ಮನೆಗೆ ಬರುತ್ತಾರೆ ಎಂದು ನಿರೀಕ್ಷಿಸುತ್ತಾ ಅವರದೇ ಲೋಕದಲ್ಲಿ ಮುಳುಗಿರುತ್ತಾರೆ. ಕೆಲವರು ಮೊಬೈಲಿನಲ್ಲಿ ಆಟವಾಡುತ್ತಿರುತ್ತಾರೆ,ಕೆಲವರು ಟ್ಯೂಷನ್ ಗೂ ಹೋಗಿರಬಹುದು. ಒಟ್ಟಿನಲ್ಲಿ ಅಪ್ಪ-ಅಮ್ಮನನ್ನು ಮೊಬೈಲಿನಲ್ಲಿ ಸಂಪರ್ಕಿಸುತ್ತಾ ಅವರ ನಿರೀಕ್ಷೆಯಲ್ಲಿ ಇರುತ್ತಾರೆ. ಆಗ ಇದ್ದಕ್ಕಿದ್ದಂತೆ ಅವರಿಗೆ ಪೊಲೀಸರು ಮೂಲಕವೋ ಅಥವಾ ಅವರ ನೆಂಟರಿಷ್ಟರ…

ಮುಂದೆ ಓದಿ..
ಅಂಕಣ 

ಒಂದಷ್ಟು ನೆಮ್ಮದಿಗಾಗಿ……….

Taluknewsmedia.com

Taluknewsmedia.comಒಂದಷ್ಟು ನೆಮ್ಮದಿಗಾಗಿ………. ಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ ? ಒಳಗೊಳಗೆ ಹೇಳಿಕೊಳ್ಳಲಾಗದ ಅಸಹನೆ ಉಂಟಾಗುತ್ತಿದೆಯೇ ? ಕೌಟುಂಬಿಕ ಸಂಬಂಧಗಳಲ್ಲಿ ಸಹಿಸಲಾಗದ ಮಾನಸಿಕ ಹಿಂಸೆಯಾಗುತ್ತಿದೆಯೇ ? ಹೊರ ಜಗತ್ತಿನ ನಮ್ಮ ಸುತ್ತಮುತ್ತಲಿನ ಅನೇಕ ಘಟನೆಗಳು ನಮ್ಮ ಇಚ್ಚೆಗೆ ವಿರುದ್ಧವಾಗಿ ಘಟಿಸುತ್ತಿದೆಯೇ ? ಮಾಧ್ಯಮ, ಗೆಳೆತನ, ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ನಂಬಿಕೆಗೆ ವಿರೋಧ ವ್ಯಕ್ತವಾಗುತ್ತಿದೆಯೇ ? ಧರ್ಮ ಜಾತಿ ಭಾಷೆ ಹಣಕಾಸು ಪಕ್ಷ ಸಂಪ್ರದಾಯ ಸಿದ್ದಾಂತಗಳ ವಿಷಯದಲ್ಲಿ ಏನೋ ಒಂತರಾ ಕಸಿವಿಸಿ ಎನಿಸುವಂತೆ ಮನಸ್ಸಿಗೆ ತುಮಲವಾಗುತ್ತಿದೆಯೇ ? ಕೆಲವು ವಿಷಯಗಳ ಬಗ್ಗೆ ಬೇಗ ಕೋಪ ಬಂದು ಪ್ರತಿಕ್ರಿಯಿಸಿ ವಿರೋಧಿಗಳ ಸದ್ದಡಗಿಸಬೇಕು ಎಂಬ ಅಭಿಪ್ರಾಯ ಉಂಟಾಗಿ ಬಿಪಿ ಏರಿಕೆಯಾಗುತ್ತದೆಯೇ ????????? ಈ ರೀತಿಯ ಕೆಲವು ಅಥವಾ ಎಲ್ಲವೂ ನಿಮ್ಮಲ್ಲಿ ಉಂಟಾಗುತ್ತಿದ್ದರೆ ಅದನ್ನು ನಿಯಂತ್ರಿಸಿಕೊಳ್ಳಲು ಕೆಲವು ಸಲಹೆ ರೂಪದ ಕಿವಿಮಾತುಗಳು ನಿಮಗಾಗಿ…….. ನಿಮ್ಮ ಮನಸ್ಸನ್ನು ವಿಶಾಲಗೊಳಿಸಿಕೊಂಡರೆ ಖಂಡಿತವಾಗಿ ಈ ಸಮಸ್ಯೆಗಳಿಗೆ ಸಹಜ ಸ್ವಾಭಾವಿಕವಾಗಿ ಪರಿಹಾರ…

ಮುಂದೆ ಓದಿ..
ಅಂಕಣ 

ತಾಯಿ ಭಾಷೆ…..ಕನ್ನಡ ರಾಜ್ಯೋತ್ಸವ……..

Taluknewsmedia.com

Taluknewsmedia.comತಾಯಿ ಭಾಷೆ….. ಕನ್ನಡ ರಾಜ್ಯೋತ್ಸವ…….. ಕರ್ನಾಟಕ ಎಂಬುದೇನುಹೆಸರೇ ಬರಿಯ ಮಣ್ಣಿಗೆ,ಮಂತ್ರ ಕಣಾ ಶಕ್ತಿ ಕಣಾತಾಯಿ ಕಣಾ ದೇವಿ‌ ಕಣಾಬೆಂಕಿ ಕಣಾ ಸಿಡಿಲು ಕಣಾಕಾವ ಕೊಲುವ ಒಲವ ಬಲವಾಪಡೆದ ಚೆಲುವ ಚೆಂಡಿ ಕಣಾಋಷಿಯ ಕಾಣ್ಬ ಕಣ್ಣಿಗೆ,ರಾಷ್ಟ್ರ ಕವಿ ಕುವೆಂಪು…. ತಾಯಿ ಭಾಷೆ ಉಳಿಯದಿದ್ದರೆ ನಮ್ಮ ಬದುಕು ಸಹಜವಾಗಿ ಉಳಿಯುವುದು ಕಷ್ಟ. ಅದು ಅಸಹಜವಾಗಿ ಬೆಳೆಯುತ್ತದೆ. ಭಾಷೆ ಎಂಬುದು ಭಾವ ಕಡಲು,ಭಾಷೆ ಎಂಬುದು ಒಡಲಾಳದ ಉಸಿರು,ಭಾಷೆ ಎಂಬುದು ಸಂಸ್ಕೃತಿಯ ಬೇರು, ಭಾಷೆ ಎಂಬುದು ಸಂಪರ್ಕ ಮಾಧ್ಯಮ,ಭಾಷೆ ಎಂಬುದು ಸಾಂಸ್ಕೃತಿಕ ವಾಹಕ, ಭಾಷೆ ಎಂಬುದು ಜ್ಞಾನದ ಹೆಬ್ಬಾಗಿಲು, ಭಾಷೆ ಎಂಬುದು ಬದುಕು ರೂಪಿಸುವ ಸಾಧನ,ಒಟ್ಟಾರೆ ಭಾಷೆ ಎಂಬುದು ಸಾಮಾಜಿಕ ಮತ್ತು ವೈಯಕ್ತಿಕ ಬದುಕಿನ ಜೀವದ್ರವ್ಯ……….. ನವಂಬರ್ ೧ ಕನ್ನಡ ರಾಜ್ಯೋತ್ಸವ…. ಭಾರತದ ಗಣರಾಜ್ಯಗಳ ಒಕ್ಕೂಟ ವ್ಯವಸ್ಥೆ ಸ್ಥಾಪಿತವಾಗಿರುವುದೇ ಭಾಷಾವಾರು ಪ್ರಾಂತ್ಯಗಳ ಆಧಾರದಲ್ಲಿ. ಭಾಷೆಯೇ ಇಲ್ಲಿನ ಬಹುತ್ವ ಸಂಸ್ಕೃತಿಯ ಪ್ರತಿಬಿಂಬ. ಕನ್ನಡ ನಮ್ಮ…

ಮುಂದೆ ಓದಿ..
ಅಂಕಣ 

ರೇಷನ್ ಕಾರ್ಡ್ ಬಡವರು ಮತ್ತು ನಿಜ ನಿರ್ಗತಿಕರು ?

Taluknewsmedia.com

Taluknewsmedia.comರೇಷನ್ ಕಾರ್ಡ್ ಬಡವರು ಮತ್ತು ನಿಜ ನಿರ್ಗತಿಕರು ? ಬಡತನ ಎಂದರೇನು ? ಬಡವರು ಎಂದರೆ ಯಾರು ? ತಿನ್ನಲು ಊಟವಿಲ್ಲದೆ ಹಸಿವಿನಿಂದ ನರಳುತ್ತಿರುವವರು ಬಡವರೇ,ಊಟವಿದ್ದೂ ಮೈತುಂಬ ಬಟ್ಟೆ ಇಲ್ಲದೆ ಹರಿದ ಬಟ್ಟೆ ಹಾಕಿರುವ ಜನರು ಬಡವರೇ.ಊಟ, ಬಟ್ಟೆ ಇದ್ದು ವಾಸಿಸಲು ಸರಿಯಾದ ಜಾಗವಿಲ್ಲದ / ವಸತಿ ಇಲ್ಲದ ಜನರು ಬಡವರೇ,ಊಟ, ಬಟ್ಟೆ, ವಸತಿ ಇದ್ದು ಶಿಕ್ಷಣ ಪಡೆಯಲು ಸಾಧ್ಯವಿಲ್ಲದ ಪರಿಸ್ಥಿತಿ ಇರುವವರು ಬಡವರೇ, ಊಟ, ಬಟ್ಟೆ, ವಸತಿ, ಶಿಕ್ಷಣ ಇದ್ದು ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗದ ಜನರನ್ನು ಬಡವರು ಎನ್ನಬೇಕೇ ಅಥವಾ ಊಟ, ಬಟ್ಟೆ, ವಸತಿ, ಶಿಕ್ಷಣ, ಆರೋಗ್ಯ ಇವುಗಳನ್ನು ಪಡೆದೂ ತನ್ನಿಷ್ಟದಂತೆ ಬದುಕಲು ಸಾಧ್ಯವಾಗದೇ ಇರುವವರು ಬಡವರೇ ಅಥವಾ ಇದೆಲ್ಲವೂ ಇದ್ದು ಅಂತ್ಯೋದಯ ಅಥವಾ ಬಿಪಿಎಲ್ ಕಾರ್ಡ್ ಪಡೆದ ಮಾತ್ರಕ್ಕೆ ಅವರು ಬಡವರೇ, ನಿರ್ಧರಿಸಬೇಕಾಗಿರೋದು ಸರ್ಕಾರ, ಸಮಾಜ ಮತ್ತು ನಮ್ಮ ಆತ್ಮಸಾಕ್ಷಿ……. ಹಣ ಇದ್ದು ಗುಣ…

ಮುಂದೆ ಓದಿ..
ಅಂಕಣ 

ಕುರ್ಚಿ………

Taluknewsmedia.com

Taluknewsmedia.comಕುರ್ಚಿ……… ಅಧಿಕಾರವೆಂಬ ಅಮಲು ಮತ್ತೆೇರಿ ವಿಧವಿಧದ ಕುರ್ಚಿಗಾಗಿ ಕೆಲವು ವ್ಯಕ್ತಿಗಳು ಮುಗಿ ಬೀಳುವುದು ನೋಡಿದಾಗ ಅನಿಸಿದ್ದು……… ಕುರ್ಚಿ ಬೇಕೆ ಕುರ್ಚಿ……… ” ಆ ” ಮಾಯಾ ಕುರ್ಚಿ….. ಏರಲು ದೈವ ಬಲ ಬೇಕಂತೆ ” ಆ ” ಕುರ್ಚಿ.ಕೂರಲು ಜನ ಬಲ ಬೇಕಂತೆ ” ಆ ” ಕುರ್ಚಿ.ಪಡೆಯಲು ಹಣ ಬಲ ಬೇಕಂತೆ ” ಆ ” ಕುರ್ಚಿ.ಗಳಿಸಲು ಜಾತಿ ಬಲ ಬೇಕಂತೆ ” ಆ ” ಕುರ್ಚಿ. ಮಾನ ಮರ್ಯಾದೆ ಬಿಡಬೇಕಂತೆ ” ಆ ” ಕುರ್ಚಿ ಸಿಗಲು.ಹೋಮ ಹವನ ಮಾಡ ಬೇಕಂತೆ ” ಆ ” ಕುರ್ಚಿ ಹೊಂದಲು.ತಲೆ ಹಿಡಿಯಲು ತಲೆ ಹೊಡೆಯಲು ಸಿದ್ದರಿರಬೇಕಂತೆ ” ಆ ” ಕುರ್ಚಿ ಗೆಲ್ಲಲು.ಜುಟ್ಟು ಹಿಡಿಯಲು, ಕೈ ಮುಗಿಯಲು, ಕಾಲು ಕಟ್ಟಲು ಗೊತ್ತಿರಬೇಕಂತೆ” ಆ ” ಕುರ್ಚಿ ನಿಮ್ಮದಾಗಲು. ಸಾಮಾನ್ಯರಿಗೆ ಸಿಗದಂತೆ” ಆ ” ಕುರ್ಚಿ.ಏಳು ಜನ್ಮದ…

ಮುಂದೆ ಓದಿ..
ಅಂಕಣ 

ಭಾರತೀಕರಣ………..

Taluknewsmedia.com

Taluknewsmedia.comಭಾರತೀಕರಣ……….. ಇಸ್ಲಾಮೀಕರಣ, ಕೇಸರೀಕರಣ ಎಂಬ ಎರಡು ಸಂಘರ್ಷಗಳ ಪ್ರಸ್ತುತ ಧಾರ್ಮಿಕ, ಸಾಮಾಜಿಕ ಸನ್ನಿವೇಶಗಳಲ್ಲಿ ಭಾರತೀಕರಣ ಎಂಬ ಪರಿಹಾರ ಹೆಚ್ಚು ಸೂಕ್ತವಾದದ್ದು ಮತ್ತು ದೇಶದ ಸಮಗ್ರತೆಯನ್ನು ಕಾಪಾಡಲು ಅತ್ಯವಶ್ಯವಾದದ್ದು. ಭಾರತೀಕರಣವೆಂದರೆ ಸಂವಿಧಾನದ ಶೀರ್ಷಿಕೆಯ ಪ್ರಾರಂಭದಲ್ಲಿ ಹೇಳಿರುವ ” ಭಾರತೀಯರಾದ ನಾವು……” ಎನ್ನುವ ಘೋಷ ವಾಕ್ಯ. ಈ ನಿಟ್ಟಿನಲ್ಲಿ ಆರ್ ಎಸ್ ಎಸ್ ಎಂಬ ಸಂಘಟನೆ ವಾಸ್ತವದಲ್ಲಿ ಏನು ಮತ್ತು ಅದು ನಿಜಕ್ಕೂ ದೇಶದ ಸಮಗ್ರ ಹಿತಾಸಕ್ತಿಯನ್ನು ಬಯಸುವುದಾದರೆ ಏನು ಮಾಡಬಹುದು ಎಂಬ ಚರ್ಚೆಯ ಸುತ್ತ ಒಂದು ಪಕ್ಷಿ ನೋಟ…….. ಆರ್ ಎಸ್ ಎಸ್ ಒಂದು ದೇಶಭಕ್ತ ಸಂಘಟನೆಯೇ : ಹೌದು, ಆರ್ ಎಸ್ ಎಸ್ ಹಿಂದುತ್ವದ ಸಂಘಟನೆಯೇ : ಹೌದು, ಆರ್ ಎಸ್ ಎಸ್ ಸನಾತನ ಧರ್ಮದ ಸಂಘಟನೆಯೇ : ಹೌದು, ಆರ್ ಎಸ್ ಎಸ್ ವರ್ಣಾಶ್ರಮ ವ್ಯವಸ್ಥೆಯನ್ನು ಬೆಂಬಲಿಸುತ್ತದೆಯೇ : ಹೌದು, ಈಗ ಮೇಲ್ನೋಟಕ್ಕೆ ಅದನ್ನು ವಿರೋಧಿಸುತ್ತದೆ,…

ಮುಂದೆ ಓದಿ..
ಅಂಕಣ 

ಕನ್ನಡ ತಾಯಿ ಭಾಷೆಯ ಉಳಿವಿಗಾಗಿ……

Taluknewsmedia.com

Taluknewsmedia.comಕನ್ನಡ ತಾಯಿ ಭಾಷೆಯ ಉಳಿವಿಗಾಗಿ…… ಕನ್ನಡದ ಭಾಷೆಯ ಸೊಗಡನ್ನು ಉಳಿಸಿಕೊಳ್ಳುವ, ಇಲ್ಲಿನ ಮಣ್ಣಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ, ಕನ್ನಡ ಭಾಷೆಯನ್ನು ಮತ್ತಷ್ಟು ವ್ಯಾಪಕವಾಗಿ ಬಳಸುವ ಮತ್ತು ಬೆಳೆಸುವ ದಿಕ್ಕಿನಲ್ಲಿ ವೈಯಕ್ತಿಕವಾಗಿ ನಾವು ಮಾಡಬಹುದಾದ ಕೆಲವು ಕರ್ತವ್ಯಗಳು ನನಗೆ ತಿಳಿದಂತೆ……. ೧) ಇನ್ನು ಮುಂದೆ ಕನ್ನಡದ ಯಾವುದೇ ಪೋಷಕರಿಗೆ ಹುಟ್ಟುವ ಮಕ್ಕಳಿಗೆ ಪರಂಪರಾನುಗತವಾಗಿ ಬೆಳೆದು ಬಂದ ಕನ್ನಡ ನೆಲಕ್ಕೆ ಹೆಚ್ಚು ಹತ್ತಿರದ ಮುದ್ದಾದ” ಹೆಸರುಗಳನ್ನು ” ಆಯ್ಕೆ ಮಾಡಿಕೊಂಡು ನಾಮಕರಣ ಮಾಡುವುದು. ಅದರಿಂದಾಗಿ ಕನ್ನಡದ ಘಮಲು ಸದಾ ಪಸರಿಸುತ್ತಿರುತ್ತದೆ. ೨) ಒಂದು ವೇಳೆ ಅನಿವಾರ್ಯವಾಗಿ ಮತ್ತು ಅವಶ್ಯಕತೆಗಾಗಿ ನಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸಿದ್ದರು ಸಹ ಮನೆಯಲ್ಲಿ ಎಲ್ಲರೂ ಸಂಪೂರ್ಣ ಅಚ್ಚ ಕನ್ನಡದಲ್ಲಿ ಮಾತನಾಡುವುದು. ಏಕೆಂದರೆ ಈಗ ಭಾಷಾ ವಾತಾವರಣ ಬದಲಾಗಿದೆ. ಹೇಗಿದ್ದರು ಆಂಗ್ಲ ಭಾಷೆಯನ್ನು ಎಲ್ಲಾ ಮಕ್ಕಳು ಸಹಜವಾಗಿ ಕಲಿಯುತ್ತಾರೆ. ನಾವು ಕನ್ನಡ ಕಲಿಸಲು…

ಮುಂದೆ ಓದಿ..
ಅಂಕಣ 

ಆತ್ಮೀಯರೆ,……‌‌…..

Taluknewsmedia.com

Taluknewsmedia.comಆತ್ಮೀಯರೆ,……‌‌….. ಜನಪ್ರಿಯತೆಯೇ ಸತ್ಯ ಎಂಬ ಒಂದು ಅಘೋಷಿತ ಮನೋಭಾವ ಇಂದಿನ ಆಧುನಿಕ ಸಮಾಜದಲ್ಲಿ ಬೆಳೆಯುತ್ತಿದೆ. ಸಿನಿಮಾ, ಸಂಗೀತ, ಸಾಹಿತ್ಯ, ರಾಜಕೀಯ, ಸಂಘಟನೆ, ಸಮಾಜ ಸೇವೆ ಮುಂತಾದ ಕ್ಷೇತ್ರಗಳಲ್ಲಿ ಇದು ವ್ಯಾಪಕವಾಗಿ ಹರಡಿದೆ. ಜನಪ್ರಿಯತೆಗೂ – ಸತ್ಯ ಮತ್ತು ವಾಸ್ತವತೆಗೂ ಬಹಳಷ್ಟು ವ್ಯತ್ಯಾಸವಿದೆ. ಎಳನೀರು ಮತ್ತು ಪೆಪ್ಸಿ – ಕೋಲಾ ಪಾನೀಯಗಳ ಉದಾಹರಣೆಗಳೊಂದಿಗೆ ಇದನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬಹುದು. ಎಳನೀರು ಅತ್ಯಂತ ಪೌಷ್ಟಿಕಾಂಶದ ಅತ್ಯುತ್ತಮ ಪಾನೀಯ. ಆದರೆ ಇಂದಿನ ಯುವ ಜನಾಂಗ ಅದನ್ನು ಅನಾರೋಗ್ಯ ಸಮಯದಲ್ಲಿ ಅಥವಾ ತೀರಾ ಅಪರೂಪಕ್ಕೆ ಕುಡಿಯುತ್ತಾರೆ. ಆದರೆ, ಅನಾರೋಗ್ಯಕಾರಿ ವಿಷಕಾರಕ ಅಂಶಗಳುಳ್ಳ ಪೆಪ್ಸಿ ಕೋಲಾಗಳನ್ನು ಎಲ್ಲಾ ಸಂದರ್ಭದಲ್ಲಿಯೂ ಯಥೇಚ್ಛವಾಗಿ ಕುಡಿಯುತ್ತಾರೆ.ಜನಪ್ರಿಯತೆಯ ಮಾನದಂಡದಲ್ಲಿ ಪೆಪ್ಸಿ ಕೋಲಾಗಳೇ ಉತ್ತಮ ಪಾನೀಯ ಎಂದು ಪರಿಗಣಿಸಬೇಕಾಗುತ್ತದೆ. ಇದೇ ಆಧಾರದಲ್ಲಿ ಸಿನಿಮಾ ನಟರು, ರಾಜಕಾರಣಿಗಳು, ಪತ್ರಕರ್ತರು, ಸಾಹಿತಿಗಳು, ಧಾರ್ಮಿಕ ಮುಖಂಡರು ಇತ್ಯಾದಿಗಳು ಗಿಮಿಕ್ ಗಳನ್ನು ಮಾಡುತ್ತಾ ಪ್ರಚಾರ ಪಡೆದು ಜನಪ್ರಿಯರಾಗುತ್ತಾರೆ.…

ಮುಂದೆ ಓದಿ..
ಅಂಕಣ 

ಕನ್ನಡ ರಾಜ್ಯೋತ್ಸವಕ್ಕೆ ಕೆಲವೇ ದಿನಗಳಿರುವಾಗ……..

Taluknewsmedia.com

Taluknewsmedia.comಕನ್ನಡ ರಾಜ್ಯೋತ್ಸವಕ್ಕೆ ಕೆಲವೇ ದಿನಗಳಿರುವಾಗ…….. ಕರ್ನಾಟಕದ ಜನ ಬಹಳ ಬುದ್ದಿವಂತರು – ಒಳ್ಳೆಯವರು,ಕನ್ನಡ ಭಾಷೆ ವಿಶ್ವ ಶ್ರೇಷ್ಠ,ಕನ್ನಡ ಇತಿಹಾಸ ಅದ್ಬುತ,ಕನ್ನಡ ಸಂಸ್ಕೃತಿ ವಿಶ್ವ ಮಾನ್ಯ,ಕನ್ನಡ ನೆಲದಲ್ಲಿ ಬಸವಣ್ಣ, ಕುವೆಂಪು, ಕೆಂಪೇಗೌಡ, ಕನಕ, ಪುರಂದರ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರ ಮದಕರಿ ಮುಂತಾದ ಜಗತ್ ಪ್ರಸಿದ್ದ ನಾಯಕರು ಜನಿಸಿದ್ದಾರೆ,…. ಬೆಳಗಾವಿಯ ಕುಂದ,ಧಾರವಾಡದ ಪೇಡ,ಬಳ್ಳಾರಿ ಖಾರ ಮಂಡಕ್ಕಿ,ಮೈಸೂರು ಪಾಕು,ತುಮಕೂರಿನ ತಟ್ಟೆ ಇಡ್ಲಿ,ದಾವಣಗೆರೆಯ ಬೆಣ್ಣೆ ದೋಸೆ,ಕೋಲಾರದ ಬಂಗಾರ ಪೇಟೆ ಚಾಟ್ಸ್,ಕಲಬುರಗಿಯ ಖಡಕ್ ರೋಟಿ,ಕರಾವಳಿ ಭಾಗದ ಕಾಣೆ ಮೀನಿನ ಸಾರು, ಮಲೆನಾಡಿನ ಹಲಸಿನ ಕಡುಬು, ಶಿವಮೊಗ್ಗದ ಮಾವಿನ ಶೀಕರಣೆ, ಉತ್ತರ ಕನ್ನಡದ ಕೆಸುವಿನ ಪಲ್ಯ, ಹಾಸನದ ಬೈನೇ ಮರದ ಕಳ್ಳು,ಚಾಮರಾಜನಗರದ ಆದಿವಾಸಿಗಳ ಬೊಂಬು ಬಿರಿಯಾನಿ,ಕೊಡಗಿನ ಅಕ್ಕಿ ರೊಟ್ಟಿ ಹಂದಿ ಫ್ರೈ,ಬಿಜಾಪುರದ ಸಿಹಿ ಮಿಶ್ರಿತ ಉಪ್ಪಿನಕಾಯಿ,ಬೀದರಿನ ಗಡಿಗೆ ಮೊಸರು,ಯಾದಗಿರಿಯ ಎಣ್ಣಿ ಬದನೆಯಕಾಯಿ ಪಲ್ಯ, ಮಂಡ್ಯದ ರಾಗಿ ಮುದ್ದೆ, ಬನ್ನೂರು ಕುರಿಯ ತಲೆ ಮಾಂಸ,ಚಿತ್ರದುರ್ಗದ…

ಮುಂದೆ ಓದಿ..