ಅಂಕಣ 

೭೭ ರ ಹರೆಯದ ಕೂಲಿಕಾರ ಚೆನ್ನಪ್ಪನ ಸ್ವಗತ…..

Taluknewsmedia.com

Taluknewsmedia.comಇಂದಿಗೆ ಸರಿಯಾಗಿ ನಾನು ಕೂಲಿ ಕೆಲಸ ಮಾಡಲು ಆರಂಭಿಸಿ ೭೦ ವರ್ಷವಾಯಿತು.೭ ನೇ ವಯಸ್ಸಿನಲ್ಲಿ ಪ್ರಾರಂಭವಾದ ನನ್ನ ಕೂಲಿ ಕೆಲಸ ಈಗಿನ ನನ್ನ ೭೭ ನೆಯ ಈ ವಯಸ್ಸಿನಲ್ಲೂ ನಿರಂತರವಾಗಿ ನಡೆಯುತ್ತಿದೆ…………….ಕೂಲಿ ಎಂದರೆ ಪೇಟೆ ಅಂಗಡಿಗಳಲ್ಲಿ ತರಕಾರಿ ಮೂಟೆ ಹೊರುವುದು. ಲಾರಿಗಳಿಗೆ ಮೂಟೆ ತುಂಬುವುದು ಮತ್ತು ಇಳಿಸುವುದು.ಈಗಿನ ಯುವ ಜನಾಂಗಕ್ಕೆ ತುಂಬಾ ಆಶ್ಚರ್ಯವಾಗಬಹುದು ಅಥವಾ ಕೆಲವರು ನಂಬದೇ ಇರಬಹುದು. ಇಲ್ಲಿಯವರೆಗೂ ನಾನು ಒಮ್ಮೆಯೂ ಯಾವುದೇ ಗಾಯ ಅಥವಾ ಖಾಯಿಲೆಯಿಂದ ಆಸ್ಪತ್ರೆಗೆ ಹೋಗಿಲ್ಲ. ೬೫ ನೆಯ ವಯಸ್ಸಿನಲ್ಲಿ ಒಮ್ಮೆ ಹೊಟ್ಟೆ ನೋವು ಮತ್ತು ೭೩ ನೆಯ ವಯಸ್ಸಿನಲ್ಲಿ ಹಲ್ಲು ನೋವು ಬಂದಾಗ ಔಷಧಿ ಅಂಗಡಿಯಿಂದ ಎರಡೆರಡು ಮಾತ್ರೆ ತೆಗೆದುಕೊಂಡಿದ್ದು ಬಿಟ್ಟರೆ ಆಕಡೆ ತಲೆಯೇ ಹಾಕಿಲ್ಲ. ನನಗೆ ೬ ಜನ ಮಕ್ಕಳು. ೪ ಗಂಡು ೨ ಹೆಣ್ಣು. ಎಲ್ಲಾ ಹೆರಿಗೆಗಳು ಸಹಜವಾಗಿ ಮತ್ತು ಮನೆಯಲ್ಲಿಯೇ ಆಗಿದೆ.ಎರಡು ದಿನಕ್ಕೆ ಒಮ್ಮೆ ಹಲ್ಲುಜ್ಜುವ…

ಮುಂದೆ ಓದಿ..
ಅಂಕಣ 

ಯೋಗ ಮತ್ತು ಧ್ಯಾನ,ಧೀರ್ಘ ಲೇಖನ ಓದುವ ತಾಳ್ಮೆಯೂ ಇರಲಿ….

Taluknewsmedia.com

Taluknewsmedia.comಜೂನ್ 21, ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಯೋಗ ಮತ್ತು ಧ್ಯಾನದ ಪರಿಕಲ್ಪನೆಯ ಸುತ್ತ ಒಂದಷ್ಟು ಅನಿಸಿಕೆಗಳು……..ಕಾಯಕವೇ ಕೈಲಾಸ ಎಂದು ತನ್ನ ಶ್ರಮದಿಂದಲೇ ತನ್ನ ಅಗತ್ಯಗಳನ್ನು ಪೂರೈಸಿಕೊಂಡು ಬದುಕನ್ನು ಸರಳವಾಗಿ, ಸಹಜವಾಗಿ, ಪ್ರಕೃತಿಯ ನಿಷ್ಠೆಯಿಂದ ಬದುಕು ಸಾಗಿಸುತ್ತಿದ್ದರೆ ಅದೇ ಖಂಡಿತವಾಗಲೂ ಅತ್ಯುತ್ತಮ ಜೀವನ ಶೈಲಿ. ಬಹುಶಃ ನಾಗರಿಕತೆಯ ಪ್ರಾರಂಭದಲ್ಲಿ ಮನುಷ್ಯ ಹೀಗೆ ಇತರ ಎಲ್ಲಾ ಪ್ರಾಣಿಗಳಂತೆ ಜೀವಿಸುತ್ತಿದ್ದನು. ಅಂದರೆ ಹೆಚ್ಚು ದೈಹಿಕ ಶ್ರಮ, ಕಡಿಮೆ ಮಾನಸಿಕ ಒತ್ತಡ, ಹಸಿವಾದಾಗ ತಿನ್ನುವುದು, ನಿದ್ದೆ ಬಂದಾಗ ನಿದ್ದೆ ಮಾಡುವುದು, ಅಗತ್ಯಕ್ಕೆ ಅನುಗುಣವಾಗಿ ದೈಹಿಕ ಕಾಮನೆಗಳನ್ನು ಪೂರೈಸಿಕೊಳ್ಳುವುದು, ಎಲ್ಲಿಂದ ಎಲ್ಲಿಗೋ ಪಯಣ, ನಾಳೆಯ ಚಿಂತೆ ಇಲ್ಲ, ಹಿಂದಿನ ನೆನಪುಗಳಿಲ್ಲ, ಇಂದಿನ ಬದುಕಷ್ಟೇ ಮುಖ್ಯ ಎಂಬ ಸನ್ನಿವೇಶದಲ್ಲಿ ಯೋಗ ಧ್ಯಾನಗಳ ಅವಶ್ಯಕತೆ ಅಷ್ಟಾಗಿ ಇರಲಿಲ್ಲ….. ಆದರೆ ಸಮಾಜ ಮುಂದುವರಿದಷ್ಟು ಮನುಷ್ಯನ ಅಗತ್ಯಗಳು ಹೆಚ್ಚಾಗಿ, ಕುಟುಂಬ ವ್ಯವಸ್ಥೆ ಸಂಕೀರ್ಣವಾದಷ್ಟು ಮನುಷ್ಯನ ದೇಹ ಮತ್ತು ಮನಸ್ಸಿನ…

ಮುಂದೆ ಓದಿ..
ಅಂಕಣ 

ಲೋಕಾಯುಕ್ತ ಭ್ರಷ್ಟಾಚಾರ……

Taluknewsmedia.com

Taluknewsmedia.comತಾಯ ಎದೆ ಹಾಲೆ ವಿಷವಾದರೆ, ಬೇಲಿಯೇ ಎದ್ದು ಹೊಲ ಮೇಯ್ದರೆ,ರಕ್ಷಕರೇ ಭಕ್ಷಕರಾದರೇ,ಕಾಯುವವರೇ ಕೊಲ್ಲುವವರಾದರೇ,ಲೋಕಾಯುಕ್ತವೇ ಭ್ರಷ್ಠವಾದರೆ, ಶಿವ ಶಿವ ಶಿವಾ…….. ಭ್ರಷ್ಟಾಚಾರವೆಂಬುದು ಎಷ್ಟು ವ್ಯಾಪಕವಾಗಿದೆ ಎಂದರೆ ಮನುಷ್ಯನ ದೇಹದ ನರ ನಾಡಿಗಳಲ್ಲೂ ಭ್ರಷ್ಟಾಚಾರದ ವಿಷ ತುಂಬಿಕೊಂಡಿರುವಂತಿದೆ. ಅಂದರೆ ಕೆಟ್ಟ, ಭ್ರಷ್ಟ ಹಣದ ಪ್ರಭಾವ ಇಡೀ ಸಮಾಜವನ್ನು ಆವರಿಸಿಕೊಂಡಿದೆ. ಹಣ ಹೇಗಾದರೂ ಇರಲಿ, ಹೇಗಾದರೂ ಬರಲಿ ಹಣದಿಂದ ಎಲ್ಲವನ್ನೂ ಪಡೆಯಬಹುದು ಎನ್ನುವ ಮನೋಭಾವನೆಯ ವಾತಾವರಣ ಎಲ್ಲರಲ್ಲೂ ನಿರ್ಮಾಣವಾಗಿದೆ. ಈ ಪರಿಸ್ಥಿತಿಯಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತ್ರ ಮಾತನಾಡುವುದು ಮೂರ್ಖತನವಾಗುತ್ತದೆ. ಬಹುತೇಕ ಪ್ರತಿಯೊಬ್ಬರು ಹಣದ ಹಿಂದೆಯೇ ಬಿದ್ದಿದ್ದಾರೆ. ಶಿಕ್ಷಣಕ್ಕೆ ಹಣ, ಆರೋಗ್ಯಕ್ಕೆ ಹಣ, ಊಟಕ್ಕೆ ಹಣ, ಪ್ರವಾಸಕ್ಕೆ ಹಣ, ಬಟ್ಟೆಗೆ ಹಣ, ವಸತಿಗೆ ಹಣ, ಮನೆಯ ಗೃಹೋಪಯೋಗಿ ವಸ್ತುಗಳಿಗೆ ಹಣ, ಸಂಪರ್ಕ ಸಾಧನಗಳಿಗೆ ಹಣ, ಮದುವೆಗೆ ಹಣ, ನಾಮಕರಣಕ್ಕೆ ಹಣ, ಹುಟ್ಟುಹಬ್ಬಕ್ಕೆ ಹಣ, ವಾರ್ಷಿಕೋತ್ಸವಕ್ಕೆ ಹಣ, ಜೀವ ವಿಮೆಗೆ ಹಣ, ವಿದ್ಯುತ್ ಬಿಲ್ಲಿಗೆ…

ಮುಂದೆ ಓದಿ..
ಅಂಕಣ 

ಹುಚ್ಚು ಯೋಚನೆ ಮತ್ತು ಯೋಜನೆ…….

Taluknewsmedia.com

Taluknewsmedia.comಕಾವೇರಿ ಆರತಿ ಮತ್ತು ಕೆಆರ್‌ಎಸ್ ಜಲಾಶಯದ ಬಳಿ ಬೃಹತ್ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸುವ ಸರ್ಕಾರದ ತೀರ್ಮಾನ……….. ಯಾಕ್ರೀ ಸ್ವಾಮಿ, ನದಿಯನ್ನು ಇಟ್ಕೊಂಡು ರಾಜಕೀಯನೋ, ದುಡ್ಡು ಮಾಡಲಿಕ್ಕೋ, ಪ್ರಚಾರ ಪಡೆಯಲಿಕ್ಕೋ ಪ್ರಯತ್ನ ಪಡ್ತೀರಿ. ಅದೊಂದು ಜೀವ ಜಲ. ಅದನ್ನು ಅದರ ಪಾಡಿಗೆ ಬಿಟ್ಟು ಬಿಡಿ……ಕೃಷಿಗಾಗಿಯೋ, ಕುಡಿಯುವ ನೀರಿಗಾಗಿಯೋ ಎಷ್ಟು ಸಾಧ್ಯವೋ ಅಷ್ಟು ಅದನ್ನ ಸಹಜ ರೀತಿಯಲ್ಲೇ ಉಪಯೋಗಿಸಿಕೊಳ್ಳಿ ಅಷ್ಟೇ. ಅದು ನದಿಗೆ ನೀವು ಕೊಡಬಹುದಾದ ಬಹುದೊಡ್ಡ ಕೊಡುಗೆ. ಅದು ಬಿಟ್ಟು ಅನಾವಶ್ಯಕವಾಗಿ ಕಾವೇರಿ ಆರತಿ ಎನ್ನುವ ಕಾರ್ಯಕ್ರಮ ಮಾಡಿ ಆ ನದಿಯನ್ನು ಕಲ್ಮಶ ಮಾಡುವುದಲ್ಲದೆ, ಮೌಢ್ಯವನ್ನು ಬಿತ್ತುತ್ತಿದ್ದೀರಿ………. ಗಂಗಾರತಿ ಎಂಬ ಕಾರ್ಯಕ್ರಮ ಇದೇ ರೀತಿಯ ಮೌಢ್ಯ. ಇದು ಅದರ ನಕಲು. ಜನರನ್ನು ಭಾವನಾತ್ಮಕವಾಗಿ ಸೆಳೆಯುವ ರಾಜಕೀಯ ಕುತಂತ್ರ. ಜನರಲ್ಲಿ ಗುಲಾಮಿ ಮನಸ್ಥಿತಿ ಬೆಳೆಸುವ ಹುನ್ನಾರ……… ನದಿ ನೀರಿಗೆ ಒಂದಷ್ಟು ಗೌರವ, ಒಂದಷ್ಟು ಪ್ರೀತಿ ಕೊಡಬೇಕೆಂಬುದು ನಿಜ, ಅದು ಸಹಜವಾಗಿಯೇ…

ಮುಂದೆ ಓದಿ..
ಅಂಕಣ 

ಸಾವಿನ ಮಾರ್ಗಗಳ ಹುಡುಕಾಟದಲ್ಲಿ ಮಾನವ ಜನಾಂಗ……….

Taluknewsmedia.com

Taluknewsmedia.comಬಟ್ಟೆ ಇಲ್ಲದೆ, ಊಟವಿಲ್ಲದೆ, ವಸತಿ ಇಲ್ಲದೆ, ಕುಟುಂಬಗಳಿಲ್ಲದೆ, ವಾಹನಗಳಿಲ್ಲದೆ, ಶಾಲಾ-ಕಾಲೇಜುಗಳಿಲ್ಲದೆ, ಆಸ್ಪತ್ರೆ, ಸರ್ಕಾರಗಳಿಲ್ಲದೆ ಹೇಗೋ ಬದುಕುತ್ತಿದ್ದ ಮಾನವ ಅತ್ಯಂತ ವೇಗವಾಗಿ ತನ್ನ ಸುಖ ಭೋಗಕ್ಕೆ ಎಷ್ಟೆಲ್ಲಾ ಸಾಧ್ಯವೋ ಅಷ್ಟೆಲ್ಲಾ ಅನುಕೂಲಗಳನ್ನು ಮಾಡಿಕೊಳ್ಳುತ್ತಾ ಇಂದಿನ ಪರಿಸ್ಥಿತಿ ತಲುಪಿದ್ದಾನೆ……ಗಂಟೆಗೆ ನಾಲ್ಕು ಸಾವಿರಕ್ಕೂ ಹೆಚ್ಚು ಕಿಲೋಮೀಟರ್ ವೇಗದಲ್ಲಿ ಸಂಚರಿಸಬಹುದಾದ ಯುದ್ಧ ವಿಮಾನಗಳು, ಚಂದ್ರಗ್ರಹ, ಮಂಗಳ ಲೋಕಕ್ಕೆ ಹೋಗಬಹುದಾದ ರಾಕೆಟ್ ಗಳು, ವಿಶ್ವದ ಯಾವ ಜಾಗವನ್ನು ಬೇಕಾದರೂ ಮನೆಯಲ್ಲಿ ಕುಳಿತು ನೋಡಬಹುದಾದ ಸಂಪರ್ಕ ಸಾಧನಗಳು, ಯಾರೊಂದಿಗೆ ಬೇಕಾದರೂ ಸಂವಹನ ನಡೆಸಬಹುದಾದ ಮಾಧ್ಯಮಗಳು, ಇನ್ನೂ ಮುಂದುವರೆದು ಇತ್ತೀಚೆಗೆ ಬೆಳವಣಿಗೆ ಆಗುತ್ತಿರುವ ಎಐ ತಂತ್ರಜ್ಞಾನ, ಜೊತೆಗೆ ವಿಧವಿಧದ ಭಕ್ಷ್ಯ ಭೋಜನಗಳನ್ನು, ಬಣ್ಣ ಬಣ್ಣದ ಬಟ್ಟೆಗಳನ್ನು, ಮಾದಕ ಪಾನೀಯಗಳನ್ನು, ಅತ್ಯುತ್ತಮ ಸಂಬಂಧಗಳನ್ನು, ವೈಭವೋಪೇತ ಮನೆಗಳು ಎಲ್ಲವನ್ನು ಇಟ್ಟುಕೊಂಡು, ಸುಖಪಡಬೇಕಾದ ಕಾಲದಲ್ಲಿ ಮನುಷ್ಯ ಸಾವಿನ ಮಾರ್ಗಗಳ ಹುಡುಕಾಟದಲ್ಲಿರುವುದು ” ನಗೆಯು ಬರುತಿದೆ ಎನಗೆ ನಗೆಯು ಬರುತಿದೆ ” ಎಂಬ…

ಮುಂದೆ ಓದಿ..
ಅಂಕಣ 

ವಿಚಿತ್ರ ಸ್ವಾರ್ಥದ ನ್ಯಾಯ ನೀತಿ…..

Taluknewsmedia.com

Taluknewsmedia.comನನ್ನ ತಾಯಿ ದೈವೀ ಸ್ವರೂಪಿ,ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ,ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು,ನನ್ನ ಹೆಂಡತಿ ಪ್ರೀತಿಯ ಸಾಗರ,ನನ್ನ ಅಣ್ಣ ಮಮತೆಯ ಸಾಕಾರ ಮೂರ್ತಿ,ನನ್ನ ಅತ್ತಿಗೆ ಮಮತಾಮಯಿ,ನನ್ನ ತಂಗಿ ಕರುಣಾಮಯಿ,ನನ್ನ ಗಂಡ ದಕ್ಷ ಪ್ರಾಮಾಣಿಕ,ನನ್ನ ಮಗ ಮಗಳು ಅತ್ಯಂತ ಸಹೃದಯಿಗಳು,………..ಹೀಗೆ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮವರ ಬಗ್ಗೆ ಅದರಲ್ಲೂ ರಕ್ತ ಸಂಬಂಧಿಗಳ ಬಗ್ಗೆ ಹೇಳುತ್ತಿರುತ್ತಾರೆ.( ಕೆಲವು ಅಪರೂಪದ ಅಪವಾದಗಳು ಇರಬಹುದು )ಆದರೆ ಬಹುತೇಕ ಜನರ ಅಭಿಪ್ರಾಯ ಇದೇ ಆಗಿರುತ್ತದೆ.ಹಾಗಾದರೆ ಇಷ್ಟೊಂದು ಒಳ್ಳೆಯವರಿಂದ ಕೂಡಿರುವ ನಮ್ಮ ಸಮಾಜ ಅತ್ಯಂತ ಆದರ್ಶ ನಾಗರಿಕ ಸಮಾಜವಾಗಿರಬೇಕಿತ್ತಲ್ಲವೇ ?ಈ ಭ್ರಷ್ಟಾಚಾರ, ಮೋಸ, ವಂಚನೆ, ನಂಬಿಕೆ ದ್ರೋಹ, ಡಾಕ್ಟರ್, ಲಾಯರ್, ಪೋಲೀಸ್, ರಾಜಕಾರಣಿ, ಕಂಟ್ರಾಕ್ಟರ್ ಮುಂತಾದ ಸಮಾಜದ ಎಲ್ಲಾ ಕ್ಷೇತ್ರದ ಜನರ ಮೇಲೆ ಅನುಮಾನ ಏಕೆ. ಇವರೆಲ್ಲರೂ ನಮ್ಮ ತಾಯಿ, ತಂಗಿ, ಅಣ್ಣ, ಅಕ್ಕ, ಅಪ್ಪ, ಅಮ್ಮ, ಮಕ್ಕಳಲ್ಲಿ…

ಮುಂದೆ ಓದಿ..
ಅಂಕಣ 

ಶೋಷಿತರ ಧ್ವನಿಯನ್ನು ನೆನೆಯುತ್ತಾ…….

Taluknewsmedia.com

Taluknewsmedia.comಇಸಂಗಳನ್ನು ಮೀರಿ ಯೋಚಿಸುವ ಶಕ್ತಿ ಬೆಳೆಸಿಕೊಳ್ಳಬೇಕಾದ ಸನ್ನಿವೇಶದಲ್ಲಿ…..ಕಮ್ಯುನಿಸ್ಟ್ ಜಗತ್ತಿನ ಗ್ಲಾಮರಸ್ ಹೀರೋ ಆರ್ನೆಸ್ಟ್ ಚೆಗುವಾರ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳುತ್ತಾ,ಜೂನ್ 14………ಬಂಡವಾಳ ಶಾಹಿ ವ್ಯವಸ್ಥೆಯ ಕಾರ್ಪೊರೇಟ್ ಸಂಸ್ಕೃತಿ ಬಹುತೇಕ ಇಡೀ ಜಗತ್ತನ್ನು ಆಕ್ರಮಿಸಿರುವಾಗ, ಜಾಗತೀಕರಣದ ಮುಕ್ತ ಮಾರುಕಟ್ಟೆಯ ಹೊಸ ಪೀಳಿಗೆ ಮುಖ್ಯವಾಹಿನಿಯಲ್ಲಿ ಮಹತ್ವ ಪಡೆದಿರುವಾಗ ಕಾರ್ಲ್ ಮಾರ್ಕ್ಸ್, ಮಾವೋ, ಸ್ಟಾಲಿನ್, ಕ್ಯಾಸ್ಟ್ರೋ ಮುಂತಾದವರು ಈ ಕೊಳ್ಳುಬಾಕ ಸಂಸ್ಕೃತಿಯ ಜನರ ನಡುವೆ ವಿಲನ್ ರೀತಿಯಲ್ಲಿ ಬಿಂಬಿತವಾಗುತ್ತಿರುವಾಗ, ಬಹುತೇಕ ಯುವ ಸಮೂಹ ಸಂಪರ್ಕ ಕ್ರಾಂತಿಯ ಪರಿಣಾಮವಾಗಿ ಸೂಕ್ಷ್ಮತೆ ಕಳೆದುಕೊಂಡಿರುವಾಗ, ಈಗಲೂ ಈ ವ್ಯವಸ್ಥೆಯ ಬಂಡಾಯಗಾರರಿಗೆ ” ಚೆ ” ಅತ್ಯಂತ ಆಕರ್ಷಕ ಮತ್ತು ಸ್ಪೂರ್ತಿದಾಯಕವಾಗಿದ್ದಾರೆ.ಚೆಗುವಾರ ಅವರ ಹೋರಾಟದ ಹಾದಿಯನ್ನು ಮೆಚ್ಚುತ್ತಲೇ ಅವರ ಅಭಿಮಾನಿಗಳಾಗಿ ಈಗಲೂ ಸಾಮಾಜಿಕ ಜಾಲತಾಣಗಳ ಪ್ರೊಫೈಲ್ ಪಿಕ್ಚರ್ ಚೆಗುವಾರ ಆಗಿರುವುದನ್ನು ಕಾಣಬಹುದು.ಆಧುನಿಕ ಸಂಕೀರ್ಣ ಜೀವನಶೈಲಿಯ ಮೋಹಕ್ಕೆ ಒಳಗಾಗಿ ವಸ್ತು ಸಂಸ್ಕೃತಿ ಮಾನವೀಯ ಮೌಲ್ಯಗಳನ್ನು ವ್ಯಾಪಾರವಾಗಿಸಿರುವಾಗ ಪ್ರತಿಯೊಬ್ಬರು…

ಮುಂದೆ ಓದಿ..
ಅಂಕಣ 

ಅಪ್ಪನ ದಿನ……..ತಂದೆ ಎಂಬ ಪಾತ್ರವ ಕುರಿತು……ಅಪ್ಪಾ…………ಸ್ವಲ್ಪ ಇಲ್ಲಿ ನೋಡಪ್ಪಾ…….

Taluknewsmedia.com

Taluknewsmedia.comಅಪ್ಪನ ಬಗ್ಗೆ ಬರೆಯುವುದು ಏನೂ ಉಳಿದಿಲ್ಲ. ಎಲ್ಲವೂ ಬಟಾಬಯಲು. ಏಕೆಂದರೆ ಭಾರತೀಯ ಸಮಾಜ ಪುರುಷ ಪ್ರಧಾನ ಕೌಟುಂಬಿಕ ವ್ಯವಸ್ಥೆ ಹೊಂದಿದೆ. ( ಜಾಗತೀಕರಣದ ನಂತರ ಮಹಿಳಾ ಉದ್ಯೋಗಿಗಳ ಸಂಖ್ಯೆ ಹೆಚ್ಚಾದ ನಂತರ ಸ್ವಾತಂತ್ರ್ಯ, ಸಮಾನತೆ ಮತ್ತು ಸ್ವಾವಲಂಬನೆ ಸಾಧ್ಯವಾದ ನಂತರ ಸ್ವಲ್ಪ ಬದಲಾವಣೆ ಕಾಣುತ್ತಿದೆ. )ಈ ದೇಶದ ಇಂದಿನ ಎಲ್ಲಾ ಪರಿಸ್ಥಿತಿಗಳ ಬಹುಮುಖ್ಯ ಪಾತ್ರದಾರಿ ಅಪ್ಪ, ಅಮ್ಮ ಪೋಷಕ ಪಾತ್ರದಾರಿ ಮಾತ್ರ.ಇವತ್ತಿನ ಸಂದರ್ಭದಲ್ಲಿ ನಿಮಗೆ ನಮ್ಮ ಒಟ್ಟು ವ್ಯವಸ್ಥೆಯ ಬಗ್ಗೆ ಹೆಮ್ಮೆಯಿದ್ದರೆ ಅದಕ್ಕೆ ಅಪ್ಪ ಕಾರಣ ಅಥವಾ ಇದರ ಬಗ್ಗೆ ಅತೃಪ್ತಿ, ಅಸಹನೆ ಇದ್ದರೆ ಅದಕ್ಕೂ ಅಪ್ಪನೇ ಕಾರಣ.ಅಪ್ಪ, ಈ ಸಂಬಂಧವನ್ನು ಅರ್ಥೈಸುವುದು ಹೇಗೆ.ಸ್ವಂತ ಮಕ್ಕಳು ಅಪ್ಪನನ್ನು ಆಕಾಶಕ್ಕೆ ಏರಿಸುತ್ತವೆ, ನನ್ನ ಅಪ್ಪನಂತ ಅಪ್ಪ ಯಾರೂ ಇಲ್ಲ, ಆತನೇ ಪ್ರತ್ಯಕ್ಷ ದೇವರು, ನನ್ನ ಸ್ಪೂರ್ತಿ, ನನ್ನ ಮಾರ್ಗದರ್ಶಕ, ನನ್ನ ಬದುಕು ಕಲಿಸಿದವ ಮುಂತಾಗಿ ವರ್ಣಿಸುತ್ತಾರೆ. ( ಕೆಲವು…

ಮುಂದೆ ಓದಿ..
ಅಂಕಣ 

ಮರಣವೇ ಮಹಾ ನವಮಿ…….ಮೊನ್ನೆ ಅಹಮದಾಬಾದಿನ ವಿಮಾನ ನಿಲ್ದಾಣದ ಬಳಿ..

Taluknewsmedia.com

Taluknewsmedia.comಮರಣವೇ ಮಹಾ ನವಮಿ…….ಮೊನ್ನೆ ಅಹಮದಾಬಾದಿನ ವಿಮಾನ ನಿಲ್ದಾಣದ ಬಳಿ ನಡೆದ ಬೋಯಿಂಗ್ ಡ್ರೀಮ್ ಲೈನರ್ 787 ವಿಮಾನದ 265 ಕ್ಕೂ ಹೆಚ್ಚು ಜನರ ಸಾವಿನ ದುರ್ಘಟನೆ ನಮ್ಮ ಬದುಕಿಗೆ ಹೇಗೆಲ್ಲಾ ಪಾಠವಾಗಬಹುದು…….. ಏಕೆಂದರೆ ಆಧುನಿಕ ಕಾಲದಲ್ಲಿ ಅಪಘಾತಗಳೆಂಬುದು ಬಹುತೇಕ ಸಾಮಾನ್ಯ ಸಹಜ. ಅದರಿಂದ ತಪ್ಪಿಸಿಕೊಳ್ಳುವುದು ಕಷ್ಟ. ಹೇಗೆ ನಾವು ಸುರಕ್ಷಿತೆಗಾಗಿ, ಅಧೀಕೃತವಾಗಿ ಜೀವವಿಮೆ ಮತ್ತು ಆರೋಗ್ಯ ವಿಮೆ ಮಾಡಿಸಿಟ್ಟುಕೊಳ್ಳುತ್ತೇವೆಯೋ ಹಾಗೆಯೇ ಅನಧೀಕೃತವಾಗಿ ನಮ್ಮ ಬೆನ್ನ ಹಿಂದೆಯೇ ನೆರಳಿನಂತೆ ಸಾವು ಎಂಬ ಅಂತಿಮ ಸತ್ಯವೂ ಹಿಂಬಾಲಿಸುತ್ತಿರುತ್ತದೆ. ಬದುಕಿನ ಪ್ರಯಾಣದಲ್ಲಿ ಅದೂ ಸಹ ಜೊತೆಗಾರ…….ಅದರಲ್ಲೂ ನಾವು ವಿದೇಶಕ್ಕೆ ಹೋಗಬೇಕಾದರೆ ಸಧ್ಯದಲ್ಲಿ ಇರುವ ಅತ್ಯಂತ ಸುಲಭ, ಸುರಕ್ಷಿತ ಪ್ರಯಾಣದ ಮಾರ್ಗವೆಂದರೆ ವಾಯುಯಾನ ಮಾತ್ರ. ಸಮುದ್ರ ಮತ್ತು ರಸ್ತೆ ತೀರಾ ಅವಾಸ್ತವಿಕ. ನೀವು ಅನಿವಾರ್ಯವಾಗಿ ವಿಮಾನದಲ್ಲಿ ಅದರಲ್ಲಿ ಸಂಚರಿಸಲೇಬೇಕು ಅಂತಹ ಸಂದರ್ಭದಲ್ಲಿ ಅಪರೂಪಕ್ಕೊಮ್ಮೆ ಈ ರೀತಿಯ ಅಪಘಾತವು ಕೂಡ ಆಕಸ್ಮಿಕ ಮತ್ತು ಅನಿರೀಕ್ಷಿತವೇ…

ಮುಂದೆ ಓದಿ..
ಅಂಕಣ 

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ ಜೂನ್ 12..

Taluknewsmedia.com

Taluknewsmedia.comಹೊಟ್ಟೆ ಪಾಡಿನ ವೇಶ್ಯೆಯರ ನಂತರ ನನ್ನನ್ನು ಅತಿಹೆಚ್ಚು ಕಾಡುವುದು ಬಾಲ ಕಾರ್ಮಿಕರು. ಪುಟ್ಟ ಮಕ್ಕಳು ಆ ಎಳೆಯ ವಯಸ್ಸಿನಲ್ಲಿ ಅತ್ಯಂತ ಕಠಿಣ ಕೆಲಸಗಳನ್ನು ಮಾಡುವುದು ಮತ್ತು ಅದೇ ಸಮಯದಲ್ಲಿ ಕೆಲವು ಶ್ರೀಮಂತರ ಮಕ್ಕಳು ಮಾಡಬಾರದ ಮೋಜು ಮಸ್ತಿ ಮಾಡುವುದನ್ನು ನೋಡಲು ಹಿಂಸೆಯಾಗುತ್ತದೆ…..ನಾವೇ ಹುಟ್ಟಿಸಿದ ನಮ್ಮದೇ ಅತ್ಯಂತ ಮುದ್ದಾದ ಮಕ್ಕಳು ಹೊಟ್ಟೆ ಪಾಡಿಗಾಗಿ ಇನ್ನೊಬ್ಬರ ಬಳಿ ದೈನೇಸಿಯಾಗಿ ದುಡಿಯುವ ದೃಶ್ಯಗಳನ್ನು ಒಮ್ಮೆ ಸುಮ್ಮನೆ ಕಲ್ಪಿಸಿಕೊಳ್ಳಿ, ದು:ಖದ ಕಟ್ಟೆ ಒಡೆಯುತ್ತದೆ…….ಅಂತಹ ಒಂದು ನೈಜ ಘಟನೆ…..ಅದು ಮಧ್ಯಮ ವರ್ಗದವರೇ ಹೆಚ್ಚಾಗಿ ಹೋಗುವ ಆಂಧ್ರ ಶೈಲಿಯ ಊಟದ ಹೋಟೆಲ್‌. ಅಂದು ಶೂಟಿಂಗ್ ಕೆಲಸ ಮುಗಿಸಿ ಜೊತೆಗಾರರೊಂದಿಗೆ ರಾತ್ರಿ ೧೧ ಗಂಟೆಗೆ ಹೋಟೆಲ್ ಒಳಗೆ ಪ್ರವೇಶಿಸಿದೆ. ಮ್ಯಾನೇಜರ್ ನನಗೆ ಬಹಳ ಪರಿಚಯದವರು. ಹೋಟೆಲ್ ಮುಚ್ಚುವ ಸಮಯ ೧೦/೪೫ . ಆದರೂ ನಾನು ಒಳಗೆ ಹೋದೆ. ಕೇವಲ ಒಂದು ಕುಟುಂಬದವರು ಮಾತ್ರವೇ ಊಟ ಮುಗಿಸಿ ಬಿಲ್…

ಮುಂದೆ ಓದಿ..