ಬುದ್ದಿವಂತಿಕೆ ಮತ್ತು ಹೃದಯವಂತಿಕೆ……
Taluknewsmedia.comಬುದ್ದಿವಂತಿಕೆ ಮತ್ತು ಹೃದಯವಂತಿಕೆ…… ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ……..……ಒಂದು X ಸಾಮಾಜಿಕ ಜಾಲತಾಣದ ಟ್ವೀಟ್… ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ ತಿಳಿಯುವ ಒಂದು ವಿಧಾನ ಅಥವಾ ಜೀವನ ಕೌಶಲ್ಯದ ಸಾಧನವೇ ಹೊರತು ಅದೇ ಜ್ಞಾನವಲ್ಲ, ಅರಿವಲ್ಲ, ಮೌಲ್ಯವಲ್ಲ, ಬದುಕಲ್ಲ. ಅಕ್ಷರ ಕಲಿಕೆ ಎಂಬುದು ಅಡುಗೆ ಮಾಡುವ, ಹೊಲಿಗೆ ಮಾಡುವ, ವಾಹನ ಚಾಲನೆ ಮಾಡುವ, ಮನೆ ಕಟ್ಟುವ, ಭೇಟೆಯಾಡುವ ರೀತಿಯ ಒಂದು ಕೌಶಲವೇ ಹೊರತು ಅದು ಎಲ್ಲವನ್ನೂ ಒಳಗೊಂಡ ವಿಶೇಷ ಅತಿಮಾನುಷ ಶಕ್ತಿಯೇನು ಅಲ್ಲ. ಅಕ್ಷರ ಕಲಿಯದೆಯೂ ವ್ಯಕ್ತಿತ್ವವಿದೆ, ಜ್ಞಾನವಿದೆ, ನಾಗರೀಕತೆಯಿದೆ ಬದುಕಿದೆ, ಹಾಗೆಯೇ ಅಕ್ಷರ ಕಲಿತೂ ಅಜ಼್ಞಾನವಿದೆ, ಮೋಸವಿದೆ, ಅಮಾನವೀಯತೆಯಿದೆ, ಅನಾಗರಿಕತೆ ಇದೆ…… ಅಕ್ಷರಸ್ಥರ ಈಗಿನ ಮೋಸ, ವಂಚನೆ, ದುಷ್ಟತನ, ಭ್ರಷ್ಟಾಚಾರ, ಜಾತಿವಾದ, ಶೋಷಣೆ, ಅಪನಂಬಿಕೆ ಎಲ್ಲವನ್ನೂ ಗಮನಿಸಿದಾಗ ಅನಕ್ಷರಸ್ಥರ ಕೈ, ಬಾಯಿ, ಮೆದುಳು, ಮನಸ್ಸು, ಹೃದಯ, ನಾಲಿಗೆ, ನಂಬಿಕೆ,…
ಮುಂದೆ ಓದಿ..
