ಅಂಕಣ 

ತಾಯಿ ಚಾಮುಂಡೇಶ್ವರಿ ದೇವಿಯ ಪಾದ ಕಮಲಗಳಿಗೆ ಕೈ ಮುಗಿಯುತ್ತಾ…….

Taluknewsmedia.com

Taluknewsmedia.comತಾಯಿ ಚಾಮುಂಡೇಶ್ವರಿ ದೇವಿಯ ಪಾದ ಕಮಲಗಳಿಗೆ ಕೈ ಮುಗಿಯುತ್ತಾ……. ಸುಮಾರು 415 ವರ್ಷಗಳ ನಂತರ ಮಹಾ ಶಕ್ತಿ ದೇವತೆಶ್ರೀ ಚಾಮುಂಡೇಶ್ವರಿ ತಾಯಿಯು 2025ರ ಸೆಪ್ಟೆಂಬರ್ 22ಕ್ಕೆ ಅಪಾರ ತಾಳ್ಮೆಯಿಂದ ಕಾಯುತ್ತಿದ್ದು, ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಕೊಡಿಸಿದ ಮೇಲೆ, ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಿದ ನಂತರ ಈ ಬಾರಿ ದಸರಾ ಉದ್ಘಾಟಿಸಲು ಶ್ರೀಮತಿ ಭಾನು ಮುಷ್ತಾಕ್ ಅವರನ್ನು ಕರೆಸಿಕೊಂಡಿರುವುದಾಗಿ, ತಮ್ಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿರುವುದಾಗಿ ಸ್ವತಃ ಶ್ರೀಮತಿ ಭಾನು ಮುಷ್ತಾಕ್ ಅವರೇ ನನ್ನನ್ನು ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಂಡರು ಎಂದು ತಮ್ಮ ಉದ್ಘಾಟನಾ ಸಮಾರಂಭದ ಭಾಷಣದಲ್ಲಿ ಹೇಳಿದ್ದಾರೆ. ಸರ್ವಶಕ್ತೇ ಶ್ರೀ ಚಾಮುಂಡಿ ತಾಯಿಯೇ ನಿನಗೆ ನಮೋ ನಮಃ. ಈ ಮಾತನ್ನು ಆಡುವಾಗ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಹಲವಾರು ಗಣ್ಯರು ಸಹ ವೇದಿಕೆಯ ಮೇಲೆಯೇ ಇದ್ದರು. ತಾಯಿ ಚಾಮುಂಡೇಶ್ವರಿಯೇ ತುಂಬಾ ಸಂತೋಷ. ದಸರಾ ಉದ್ಘಾಟನಾ ಕಾರ್ಯಕ್ರಮ…

ಮುಂದೆ ಓದಿ..
ಅಂಕಣ 

ಮಹಾಲಯ ಅಮಾವಾಸ್ಯೆ -ಪಿತೃ ಪಕ್ಷ – ಎಡೆ ಹಬ್ಬ…………..

Taluknewsmedia.com

Taluknewsmedia.comಮಹಾಲಯ ಅಮಾವಾಸ್ಯೆ –ಪಿತೃ ಪಕ್ಷ – ಎಡೆ ಹಬ್ಬ………….. ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಭೇದವಿಲ್ಲದೆ ಬಹುತೇಕರ ಮನೆಯಲ್ಲಿ ಆಚರಿಸುವ ಒಂದು ಹಬ್ಬ…… ತೀರಿಹೋದ ಹಿರಿಯರ ನೆನಪಿನಲ್ಲಿ, ಅವರ ಇಷ್ಟದ ಊಟ, ಬಟ್ಟೆ, ವಸ್ತುಗಳು ಇತ್ಯಾದಿಗಳನ್ನು ಇಟ್ಟು ಅವರಿಗೆ ಅರ್ಪಿಸಿದಂತೆ ಮಾಡಿ ನಾವೇ ಉಪಯೋಗಿಸುವುದು…… ಜ್ಯೋತಿಷಿಗಳಂತು ಟಿವಿಗಳಲ್ಲಿ ಇದರ ಬಗ್ಗೆ ಇಲ್ಲಸಲ್ಲದ ಅನೇಕ ಮೌಢ್ಯಗಳನ್ನು ಹೇಳಿ ಜನರನ್ನು ಮತ್ತಷ್ಟು ದಿಕ್ಕು ತಪ್ಪಿಸುತ್ತಿದ್ದಾರೆ.ಪುನರ್ ಜನ್ಮ, ಆತ್ಮಗಳ ಅಲೆದಾಟ, ಶವಗಳ ಕನಸುಗಳು,.. ಇನ್ನೂ ಮುಂತಾದ ಭಯಂಕರ ವಿಷಯಗಳನ್ನು ಪ್ರಸ್ತಾಪಿಸಿ ಜನರನ್ನು ಭಯಗೊಳಿಸಿ ಹಬ್ಬದ ತೀವ್ರತೆ ಹೆಚ್ಚಿಸುತ್ತಿದ್ದಾರೆ. ‌ಒಂದೇ ಒಂದು ಟಿವಿ ವಾಹಿನಿ ವಿವೇಚನೆಯಿಂದ ಈ ಹಬ್ಬದ ವಿಮರ್ಶೆ ಮಾಡುತ್ತಿಲ್ಲ. ಊಹಾತ್ಮಕ ಮೂಡನಂಬಿಕೆಯನ್ನೇ ಮತ್ತಷ್ಟು ಆಳಕ್ಕೆ ಇಳಿಸುತ್ತಿದ್ದಾರೆ. ಬದಲಾದ ಕಾಲಮಾನದಲ್ಲಿ ಈ ಹಬ್ಬದ ಆಚರಣೆಯನ್ನು ಮತ್ತಷ್ಟು ವಿಶಾಲ, ಸರಳ, ಅರ್ಥಪೂರ್ಣ, ಪ್ರಾಯೋಗಿಕ ಮತ್ತು ಮಾನವೀಯಗೊಳಿಸಬಹುದಾದ ಒಂದು ಸಲಹೆ ಮತ್ತು ಮನವಿ…………

ಮುಂದೆ ಓದಿ..
ಅಂಕಣ 

ಮರು ಜಾತಿ ಜನಗಣತಿಯ ಮೌಲ್ಯವೆಷ್ಟು……

Taluknewsmedia.com

Taluknewsmedia.comಮರು ಜಾತಿ ಜನಗಣತಿಯ ಮೌಲ್ಯವೆಷ್ಟು…… ಮಾನವ ಧರ್ಮ, ನಾಗರಿಕ ನಡವಳಿಕೆ, ಜೀವಪರ ನಿಲುವಿನ ಪ್ರಬುದ್ಧ ಮನಸುಗಳಿಗೆ ಅಸಹ್ಯ ಹುಟ್ಟಿಸುವಷ್ಟು ಜಾತಿ ಜನಗಣತಿಯ ಅನಿವಾರ್ಯತೆಯ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗ ಜಾತಿ ಮುಕ್ತ ಸಮ ಸಮಾಜದ ಕರ್ನಾಟಕ ಮತ್ತು ಭಾರತೀಯತೆಯ ಬಗ್ಗೆ ಕನಸು ಕಾಣುತ್ತಾ……… ಜಾತಿ ಆಧಾರಿತ ಮರು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಜನಗಣತಿಗೆ ಕ್ಷಣಗಣನೆ ಆರಂಭವಾಗಿದೆ. ಇಡೀ ಸಮಾಜದಲ್ಲಿ ರಾಜಕೀಯವಾಗಿ, ಸಾಮಾಜಿಕವಾಗಿ ಒಂದು ರೀತಿಯ ಆತಂಕ, ಉದ್ವೇಗ, ಕುತೂಹಲ, ಅಸಹನೆ, ತಲ್ಲಣಗಳನ್ನು ಸೃಷ್ಟಿಸಿದೆ. ಮುಖ್ಯವಾಗಿ ಒಂದಷ್ಟು ಜಾತಿಗಳ ಜನನಾಯಕರಿಗೆ, ರಾಜಕೀಯ ಹಿತಾಸಕ್ತಿ ಹೊಂದಿರುವವರಿಗೆ ಇದೊಂದು ಬಹುದೊಡ್ಡ ಸವಾಲನ್ನು ಒಡ್ಡಿದೆ ಎಂಬ ರೀತಿಯ ಕ್ರಿಯೆ ಪ್ರತಿಕ್ರಿಯೆಗಳು ಮೂಡಿಬರುತ್ತಿವೆ. ಸಾಮಾಜಿಕ ನ್ಯಾಯಕ್ಕಾಗಿ ಆರ್ಥಿಕ ಮತ್ತು ಶೈಕ್ಷಣಿಕ ಸಮತೋಲನಕ್ಕಾಗಿ ಈ ಮರು ಜಾತಿ ಗಣತಿಯನ್ನು ಮಾಡಲಾಗುತ್ತಿದೆ ಎಂಬುದು ಮುಖ್ಯಮಂತ್ರಿಗಳ ವಿವರಣೆ. ಹಿಂದೆ ನಡೆದ ಕಾಂತರಾಜು ವರದಿಯಲ್ಲಿ ಸಾಕಷ್ಟು ಲೋಪದೋಷಗಳಿದ್ದವು, ಅದು ಅವೈಜ್ಞಾನಿಕವಾಗಿತ್ತು ಎಂದು…

ಮುಂದೆ ಓದಿ..
ಅಂಕಣ 

ಮಾನ್ಯ ಅರಣ್ಯ ಸಚಿವರ ಗಮನಕ್ಕೆ……

Taluknewsmedia.com

Taluknewsmedia.comಒಂದು ಆಗ್ರಹ ಪೂರ್ವಕ ಮನವಿ……… ಮಾನ್ಯ ಅರಣ್ಯ ಸಚಿವರ ಗಮನಕ್ಕೆ…… ಒಂದು ಆಗ್ರಹ ಪೂರ್ವಕ ಮನವಿ……… ಆಗುಂಬೆಯ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರಗಳ ಮೇಲಿನ ಆರೋಪ ಮತ್ತು ಪರಿಸರ ಮತ್ತು ಜೀವ ಸಂಕುಲದ ರಕ್ಷಣಾ ಪ್ರಯತ್ನಗಳು……. ” ಸಕಲ ಜೀವಾತ್ಮಗಳಿಗೆ ಲೇಸನೇ ಬಯಸು ” ಎಂದು 12ನೆಯ ಶತಮಾನದ ವಚನ ಸಾಹಿತ್ಯ ಮತ್ತು ಸಂಸ್ಕೃತಿ ಜನತೆಗೆ ಕರೆ ನೀಡುತ್ತದೆ. ಅಂದರೆ ಈ ಸೃಷ್ಟಿಯಲ್ಲಿ ಅತಿ ಮುಖ್ಯ ಪಾತ್ರವಾದ ಪರಿಸರದಲ್ಲಿರುವ ಪ್ರತಿಜೀವಿಗೂ ಬದುಕುವ ಸ್ವಾತಂತ್ರ್ಯ ಮತ್ತು ಹಕ್ಕು ಇದೆ. ಅದನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಆ ಮೂಲಕ ಸೃಷ್ಟಿಯ ಸಹಜತೆಯನ್ನು ಕಾಪಾಡಬೇಕು. ಉದ್ದೇಶಪೂರ್ವಕವಾಗಿ, ನಮ್ಮ ಅನುಕೂಲಕರ ಸ್ವಾರ್ಥಕ್ಕಾಗಿ ಯಾವುದೇ ಜೀವಿಯನ್ನು ನಾಶಪಡಿಸಿದರೆ ಪ್ರಕೃತಿಯ ಸಮತೋಲನ ತಪ್ಪುತ್ತದೆ. ಆದ್ದರಿಂದ ಯಾವುದೇ ಜೀವರಾಶಿಗಳಿಗೆ ತೊಂದರೆ ಕೊಡದೆ ನಮ್ಮ ಸ್ವಾತಂತ್ರ್ಯವನ್ನು ಅನುಭವಿಸಬೇಕು ಎಂಬುದು ಒಂದು ಅಲಿಖಿತ ಪ್ರಾಕೃತಿಕ ನಿಯಮ. ಆಹಾರದ ದೃಷ್ಟಿಯಿಂದ ಈ ನಿಯಮದಲ್ಲಿ…

ಮುಂದೆ ಓದಿ..
ಅಂಕಣ 

ನೋಟ್ಬುಕ್‌-ಪೆನ್‌ ಬೆಲೆ ಇಳಿಕೆ: ಕೇಂದ್ರದ GST ಕಡಿತ ನಿರ್ಧಾರ ವಿದ್ಯಾರ್ಥಿಗಳಿಗೆ ಶಿಸ್ತು ಪಾಠ.

Taluknewsmedia.com

Taluknewsmedia.comನೋಟ್ಬುಕ್‌-ಪೆನ್‌ ಬೆಲೆ ಇಳಿಕೆ: ಕೇಂದ್ರದ GST ಕಡಿತ ನಿರ್ಧಾರ ವಿದ್ಯಾರ್ಥಿಗಳಿಗೆ ಶಿಸ್ತು ಪಾಠ. ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭಾರವನ್ನು ಕಡಿಮೆ ಮಾಡುವ ಮಹತ್ವದ ಹೆಜ್ಜೆ ಇಟ್ಟಿದೆ. ಪಠ್ಯ ಪುಸ್ತಕ, ನೋಟ್ಬುಕ್‌ಗಳು, ಪೆನ್‌ಗಳು ಹಾಗೂ ಸಾಮಾನ್ಯವಾಗಿ ಬಳಸುವ ಶೈಕ್ಷಣಿಕ ಸಾಮಗ್ರಿಗಳ ಮೇಲೆ ವಿಧಿಸುತ್ತಿದ್ದ GST ದರವನ್ನು ಕಡಿತಗೊಳಿಸುವ ನಿರ್ಧಾರವನ್ನು ಸರ್ಕಾರ ಪ್ರಕಟಿಸಿದೆ. ಇದುವರೆಗೆ ನೋಟ್ಬುಕ್ ಹಾಗೂ ಪೆನ್‌ಗಳ ಮೇಲೆ 12 ಶೇಕಡಾ GST ವಿಧಿಸಲಾಗುತ್ತಿತ್ತು. ಇದೀಗ ಅದನ್ನು 5 ಶೇಕಡಾಕ್ಕೆ ಇಳಿಸಲಾಗಿದೆ. ಈ ಕ್ರಮದಿಂದ ಶೈಕ್ಷಣಿಕ ಸಾಮಗ್ರಿಗಳ ಬೆಲೆಗಳಲ್ಲಿ ಗಮನಾರ್ಹ ಇಳಿಕೆ ಕಂಡುಬರಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಮಧ್ಯಮ ವರ್ಗ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಇದು ದೊಡ್ಡ ನೆರವಿನಂತಾಗಿದೆ. ಪ್ರತಿ ವರ್ಷ ಶಾಲಾ ಆರಂಭದ ಸಮಯದಲ್ಲಿ ಪೋಷಕರು ಅನುಭವಿಸುತ್ತಿದ್ದ ಹೆಚ್ಚುವರಿ ಖರ್ಚು ಈಗ ಕಡಿಮೆಯಾಗಲಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಇದು ಪ್ರೇರಣೆಯಾಗಲಿದೆ. ಸಂಸದ…

ಮುಂದೆ ಓದಿ..
ಅಂಕಣ 

ಪ್ರಧಾನಿ ನರೇಂದ್ರ ದಾಮೋದರ ಮೋದಿ ಅವರಿಗೆ ಜನುಮದಿನದ ಶುಭಾಶಯಗಳನ್ನು ಕೋರುತ್ತಾ…..

Taluknewsmedia.com

Taluknewsmedia.comಪ್ರಧಾನಿ ನರೇಂದ್ರ ದಾಮೋದರ ಮೋದಿ ಅವರಿಗೆ ಜನುಮದಿನದ ಶುಭಾಶಯಗಳನ್ನು ಕೋರುತ್ತಾ….. ನರೇಂದ್ರ ಮೋದಿ ಎಂಬ ಮನುಷ್ಯ ಸಾಮರ್ಥ್ಯದ ಅದ್ಭುತ ಜೀವಿಯ ಉದಾಹರಣೆ, ವೈಯಕ್ತಿಕವಾಗಿ ಎತ್ತರದ ಸಾಧನೆ, ಸಾಮಾಜಿಕ ಮೌಲ್ಯಗಳ ವಿಫಲತೆ, ಒಳಗಿನ ಕ್ರೌರ್ಯ ಎಲ್ಲವುಗಳ ಬಗ್ಗೆ ಒಂದು ಸಂಕ್ಷಿಪ್ತ ಅನಿಸಿಕೆ…… ಅದೃಷ್ಟದ ಬೆಂಬಲದೊಂದಿಗೆ, ಶ್ರಮ, ಕ್ರಿಯಾಶೀಲತೆ, ಆರೋಗ್ಯ, ತಂತ್ರ, ಪ್ರತಿತಂತ್ರ, ಕುಟಿಲ ತಂತ್ರ, ದ್ವೇಷ, ಅಸೂಯೆ, ಕ್ರೌರ್ಯ, ಭಂಡತನ, ಶತ್ರು ನಾಶ, ದೂರದೃಷ್ಟಿ, ಸಂಕುಚಿತತೆ, ಛಲ, ಉತ್ಸಾಹ ಎಲ್ಲವನ್ನು ಒಟ್ಟಿಗೆ ಮೇಳೈಸಿಕೊಂಡು ತನ್ನ ವ್ಯಕ್ತಿತ್ವದಲ್ಲಿ ಅಡಕಗೊಳಿಸಿ, ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ಗುಜರಾತ್ ರಾಜ್ಯದ ಮುಖ್ಯಮಂತ್ರಿ ಆಗಿ ಸುಮಾರು 13 ವರ್ಷಗಳು, ಭಾರತ ದೇಶದ ಪ್ರಧಾನಿಯಾಗಿ 12 ವರ್ಷಗಳ ಒಟ್ಟು ಸುಮಾರು 25 ವರ್ಷಗಳ ಸೋಲರಿಯದ ಸರದಾರನಾಗಿ, ಜಾಗತಿಕವಾಗಿ ಈ ಕ್ಷಣದಲ್ಲಿ ಮಹತ್ವದ ವ್ಯಕ್ತಿಯಾಗಿ ಭಾರತ ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ದಾಮೋದರ ಮೋದಿಯವರಿಗೆ ಹುಟ್ಟು ಹಬ್ಬದ…

ಮುಂದೆ ಓದಿ..
ಅಂಕಣ 

ಅಯ್ಯೋ, ಯಾವುದೀ ಪ್ರವಾಹವು,ಯಾವುದೀ ಮೇಘ ಸ್ಫೋಟಗಳು…..

Taluknewsmedia.com

Taluknewsmedia.comಅಯ್ಯೋ, ಯಾವುದೀ ಪ್ರವಾಹವು,ಯಾವುದೀ ಮೇಘ ಸ್ಫೋಟಗಳು….. ಇತ್ತೀಚೆಗೆ ಪ್ರತಿನಿತ್ಯ ದೇಶದ ಒಂದಲ್ಲಾ ಒಂದು ಭಾಗದಲ್ಲಿ ಈ ರೀತಿಯ ಸುದ್ದಿಗಳನ್ನು ಕೇಳುತ್ತಲೇ ಇದ್ದೇವೆ. ಪ್ರವಾಹ, ಪ್ರಳಯ ಅಥವಾ ಆ ರೀತಿಯ ಪ್ರಾಕೃತಿಕ ವಿಕೋಪಗಳನ್ನು ತಡೆಯುವುದು ಸಾಧ್ಯವೇ ? ಇಲ್ಲ, ಬಹುಶಃ ವಿಶ್ವದ ಯಾವುದೇ ದೇಶ ಮತ್ತು ಮಾನವ ಕುಲ ಇನ್ನೂವರೆಗೆ ಅದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಜಪಾನ್, ಅಮೆರಿಕ, ಆಸ್ಟ್ರೇಲಿಯಾ ಮುಂತಾದ ಮುಂದುವರಿದ ದೇಶಗಳೇ ಅದನ್ನು ಮಾಡಲು ಸಾಧ್ಯವಾಗಿಲ್ಲ. ಭೂಕಂಪ, ಸುನಾಮಿ, ಚಂಡಮಾರುತ, ಮೇಘ ಸ್ಪೋಟ, ಕಾಳ್ಗಿಚ್ಚು ಎಲ್ಲವೂ ಯಾವುದೇ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಅದು ತನ್ನ ಕೆಲಸ ಪೂರೈಸಿದ ನಂತರ ತಾನೇ ಕಡಿಮೆಯಾಗುತ್ತದೆ. ಭಾರತದ ದೇಶದಲ್ಲಿ ಪ್ರಕೃತಿಯ ಜೊತೆ ಮನುಷ್ಯ ಮತ್ತು ಸರ್ಕಾರಗಳಆಸೆಬುರುಕತನ ಸೇರಿ ಇನ್ನೂ ಹೆಚ್ಚುವರಿಯಾಗಿ ಕೆಲವು ಪ್ರಾಕೃತಿಕ ವಿಕೋಪಗಳು ಸೇರುತ್ತವೆ. ಅದು ರಣಭೀಕರ. ರಾತ್ರಿ ಕಳೆದು ಬೆಳಗಾಗುವುದರೊಳಗೆ ಕೆಲವು ಸ್ಥಳಗಳು ಭೂಪಟದಿಂದಲೇ ನಾಶವಾಗಿಬಿಡುತ್ತದೆ. ಜನರ ಬದುಕು ಗಂಜಿ…

ಮುಂದೆ ಓದಿ..
ಅಂಕಣ 

” ನನ್ನ ಜಾತಿ”

Taluknewsmedia.com

Taluknewsmedia.com” ನನ್ನ ಜಾತಿ” ಮರುಜಾತಿ ಜನಗಣತಿ ಪ್ರಾರಂಭವಾಗಿದ್ದೇ ತಡ ಎಲ್ಲಾ ಜಾತಿ ನಾಯಕರ ಮುಖವಾಡಗಳು ಬಯಲಾಗುತ್ತಿದೆ. ತನ್ನ ಜಾತಿ ಜನರ ಸಂಖ್ಯೆ ಹೆಚ್ಚಾಗಿ ದಾಖಲಾಗಬೇಕು, ಆ ಮೂಲಕ ತಮಗೆ ರಾಜಕೀಯವಾಗಿ ಹೆಚ್ಚು ಲಾಭ ಸಿಗಬೇಕು, ತಾವು ಪ್ರಬಲ ಜಾತಿ ಎಂದು, ಅಂದರೆ ಹೆಚ್ಚು ಜನಸಂಖ್ಯೆಯ ಪ್ರಬಲ ಜಾತಿ, ಆರ್ಥಿಕವಾಗಿ ಬಡ ಜಾತಿ ಎಂದು ಅಂಕಿಸಂಖ್ಯೆಗಳ ಮೂಲಕ ತೋರಿಸಿಕೊಳ್ಳಬೇಕು, ತಮ್ಮ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳಬೇಕು ಎಂದು ಪ್ರತಿಯೊಬ್ಬ ಜಾತಿ ನಾಯಕರು ಅದಕ್ಕಾಗಿ ತುಂಬಾ ತುಂಬಾ ಶ್ರಮ ಪಡುತ್ತಿದ್ದಾರೆ. ಎಲ್ಲಾ ಕಡೆ ಜಾತಿ ಜನಗಣತಿಯ ಸಮಯದಲ್ಲಿ ಯಾವ ರೀತಿ ತಮ್ಮ ಜಾತಿಯ ಹೆಸರನ್ನು ದಾಖಲು ಮಾಡಬೇಕು ಎಂಬ ತರಬೇತಿ ಅಥವಾ ಜಾಗೃತ ಶಿಬಿರಗಳನ್ನು ಮತ್ತು ಪತ್ರಿಕಾ ಗೋಷ್ಠಿಗಳನ್ನು ನಡೆಸುತ್ತಿದ್ದಾರೆ. ತಮ್ಮ ಅಸ್ತಿತ್ವ ಈ ಜಾತಿ ಗಣತಿಯಿಂದಲೇ ನಿರ್ಧಾರವಾಗುತ್ತದೆ ಎಂದು ಗಂಭೀರವಾಗಿ ಪರಿಗಣಿಸಿದ್ದಾರೆ. ಮದುವೆ, ಚುನಾವಣೆ ಮುಂತಾದ ಸಂಬಂಧಗಳಲ್ಲಿ ಜಾತಿ, ಉಪಜಾತಿ,…

ಮುಂದೆ ಓದಿ..
ಅಂಕಣ 

ಬದುಕಿನ ಸವಿಯುಣ್ಣಲು ಅನುಭಾವದ ಅಣಿಮುತ್ತುಗಳು…..

Taluknewsmedia.com

Taluknewsmedia.comಬದುಕಿನ ಸವಿಯುಣ್ಣಲು ಅನುಭಾವದ ಅಣಿಮುತ್ತುಗಳು….. ಸಂಕೀರ್ಣ ಜೀವನವನ್ನು ಸರಳಗೊಳಿಸಿಕೊಳ್ಳುವ ಅತ್ಯಂತ ಸಹಜ ಮತ್ತು ಸುಲಭ ವಿಧಾನಗಳು.( ರುಚಿಕರವಾದ ಅಡುಗೆ ಮಾಡುವ ಪಾಕ ಪ್ರಾವಿಣ್ಯ ವಿದ್ಯೆಯಂತೆ. ದಯವಿಟ್ಟು ಪ್ರಯತ್ನಿಸಿ ) ವಿಷಯ ಯಾವುದೇ ಇರಲಿ ಕನಿಷ್ಠ ಒಳ್ಳೆಯ ಮಾತನ್ನಾದರು ಆಡಿದರೆ ಎಷ್ಟೋ ಸಮಸ್ಯೆಗಳ ದುಷ್ಪರಿಣಾಮಗಳು ಕಡಿಮೆಯಾಗುತ್ತದೆ…… ದ್ವೇಷವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ ,ಪ್ರೀತಿಯನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ . ಕೋಪವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ ,ತಾಳ್ಮೆಯನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ . ಸ್ವಾರ್ಥವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ ,ತ್ಯಾಗವನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ. ಗಲಾಟೆಗಳನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳೋಣ ,ಸ್ನೇಹಿತರನ್ನು ಸ್ವಲ್ಪ ಹೆಚ್ಚು ಮಾಡಿಕೊಳ್ಳೋಣ . ಭ್ರಮೆಗಳನ್ನು ಸ್ವಲ್ಪ ದೂರ ಮಾಡೋಣ,ವಾಸ್ತವಕ್ಕೆ ಸ್ವಲ್ಪ ಹತ್ತಿರವಾಗೋಣ. ಬೂಟಾಟಿಕೆ ಸ್ವಲ್ಪ ಕಡಿಮೆ ಮಾಡೋಣ,ನ್ಯೆಜತೆಗೆ ಸ್ವಲ್ಪ ಹೆಚ್ಚು ಒತ್ತು ಕೊಡೋಣ. ಎಲ್ಲವನ್ನೂ ನಿಮ್ಮ ಕುಟುಂಬಕ್ಕಾಗಿ ಮಾಡಿ,ಆದರೆ ಸಮಾಜಕ್ಕಾಗಿ ಸ್ವಲ್ಪವಾದರೂ ಕೊಡಿ. ಎಲ್ಲವೂ ನಿಮಗಾಗಿ,ನೀವು…

ಮುಂದೆ ಓದಿ..
ಅಂಕಣ 

ಮೊಸಳೆ ಹೊಸಹಳ್ಳಿಯ ಭೀಕರ ಅಪಘಾತ……..

Taluknewsmedia.com

Taluknewsmedia.comಮೊಸಳೆ ಹೊಸಹಳ್ಳಿಯ ಭೀಕರ ಅಪಘಾತ…….. ಭಾರತ ದೇಶದಲ್ಲಿ ಅತ್ಯಂತ ತುರ್ತಾಗಿ ಆಗಬೇಕಾಗಿರುವ ಕೆಲಸಗಳಲ್ಲಿ ಈ ಕ್ಷಣದ ಪ್ರಮುಖ ವಿಷಯವೆಂದರೆ ವಾಹನ ಚಾಲನಾ ಪರವಾನಗಿ ನೀಡುವ ರೀತಿ ನೀತಿ ನಿಯಮಗಳನ್ನು ಪುನರ್ ಪರಿಶೀಲಿಸಬೇಕಾಗಿದೆ. ಅದನ್ನು ಕೇವಲ ಆರ್ ಟಿ ಓ ಅಧಿಕಾರಿಗಳು ಮಾತ್ರ ನಿರ್ಧರಿಸುವ ಹಂತ ಮೀರಿ ಹೋಗಿದೆ. ಭಾರತದಲ್ಲಿ ಸರಾಸರಿ ಪ್ರತಿ ಮೂರು ನಿಮಿಷಕ್ಕೆ ಒಬ್ಬರು ಅಪಘಾತದಿಂದ ಸಾಯುತ್ತಿದ್ದಾರೆ. ಇನ್ನೆಷ್ಟೋ ಜನ ಪ್ರತಿ ಕ್ಷಣ ಗಾಯಾಳುವಾಗಿ ಬದುಕನ್ನೇ ದುರಂತಮಯವಾಗಿಸಿಕೊಳ್ಳುತ್ತಿದ್ದಾರೆ. ಇದರ ಪರೋಕ್ಷ ಪರಿಣಾಮ ಅನೇಕ ಕುಟುಂಬಗಳು ತೊಂದರೆಗೆ ಸಿಲುಕಿವೆ. ಹಾಗೆಯೇ ದೇಶದ ಸಾಮಾಜಿಕ ಮತ್ತು ಆರ್ಥಿಕತೆಯ ಮೇಲೆ ಬಹಳ ದೊಡ್ಡ ದುಷ್ಪರಿಣಾಮ ಬೀರುತ್ತಿದೆ. ಜೊತೆಗೆ ರಸ್ತೆಯಲ್ಲಿ ಪ್ರಯಾಣಿಸುವ ವ್ಯಕ್ತಿಯ ಮಾನಸಿಕತೆಯೂ ಕುಸಿಯುತ್ತಿದೆ. ಏಕೆಂದರೆ ಮನೆಯಿಂದ ಆಚೆ ಹೋದ ವ್ಯಕ್ತಿ ಮತ್ತೆ ಮನೆಗೆ ವಾಪಸ್ ಬರುವವರೆಗೆ, ಅದರಲ್ಲೂ ಮುಖ್ಯವಾಗಿ ದೂರದ ಪ್ರಯಾಣವಿದ್ದಾಗ ಮನೆಯವರಿಗೆ ಎದೆ ಡವ ಡವ ಬಡಿದುಕೊಳ್ಳುತ್ತಿರುತ್ತದೆ.…

ಮುಂದೆ ಓದಿ..