ಅಂಕಣ ಸುದ್ದಿ 

ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ……

Taluknewsmedia.com

Taluknewsmedia.comಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ…… ಒಂದು ವೇಳೆ ಶ್ರೀಮತಿ ಭಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸಿದರೆ ಏನಾಗಬಹುದು ಅಥವಾ ಅವರು ಉದ್ಘಾಟಿಸದಿದ್ದರೆ ಏನಾಗಬಹುದು…….. ತುಂಬಾ ತುಂಬಾ ತಲೆಕೆಡಿಸಿಕೊಂಡು ವಾದ ವಿವಾದ ಮಾಡುತ್ತಿರುವವರಿಗಾಗಿ…. ಉದ್ಘಾಟಿಸಿದರೆ ವೈಯಕ್ತಿಕ ಮಟ್ಟದಲ್ಲಿ ಭಾನು ಮುಷ್ತಾಕ್ ಅವರಿಗೆ ಪ್ರಖ್ಯಾತಿಯ ಸಂತೋಷ ಮತ್ತು ಬದುಕಿನ ಸಾರ್ಥಕತೆಯ ಭಾವ ಉಂಟಾಗಬಹುದು. ಹಾಗೆಯೇ ರಾಜಕೀಯ ಪಕ್ಷಗಳಿಗೆ ಒಂದಷ್ಟು ಜನಾಭಿಪ್ರಾಯದ ಲಾಭ – ನಷ್ಟ ಆಗಬಹುದು. ಅದನ್ನು ಹೊರತುಪಡಿಸಿ ಯಾವುದೇ ರೀತಿಯ ಸಾಮಾನ್ಯ ವ್ಯಕ್ತಿಯ ಬದುಕಿನಲ್ಲಿ ಯಾವ ವ್ಯತ್ಯಾಸವೂ ಆಗುವುದಿಲ್ಲ. ಏಕೆಂದರೆ ಭಾನು ಮುಷ್ತಾಕ್ ಎನ್ನುವ ಮಹಿಳೆ ನಿಸರ್ಗದ ಒಂದು ಜೀವಿ. ನಿಸರ್ಗಕ್ಕೆ ಆಕೆ ಹಿಂದು, ಮುಸ್ಲಿಮ, ಹೆಣ್ಣು, ಗಂಡು ಎಂಬ ಯಾವ ಅರಿವೂ ಇರುವುದಿಲ್ಲ. ಉದ್ಘಾಟನೆಯ ವಿಧಾನ ಮತ್ತು ಅದಕ್ಕೆ ಬಳಸಬಹುದಾದ ಹೂವು, ಹಣ್ಣು, ಅರಿಶಿನ, ಕುಂಕುಮ, ಪೂಜೆ, ಮಂತ್ರ, ಅಜಾನ್, ಖುರಾನ್ ಪಠಣ,…

ಮುಂದೆ ಓದಿ..
ಅಂಕಣ 

ಜೈನ ಧರ್ಮದ ಮೂಲ ತಿಳಿವಳಿಕೆ ಮತ್ತು ನಡವಳಿಕೆಗಳು……

Taluknewsmedia.com

Taluknewsmedia.comಜೈನ ಧರ್ಮದ ಮೂಲ ತಿಳಿವಳಿಕೆ ಮತ್ತು ನಡವಳಿಕೆಗಳು…… ” ಜಾತಿ ಧರ್ಮದ ಭೇದವಿಲ್ಲದೆ ಸೇವೆ ಮಾಡುತ್ತಿರುವ ವೀರೇಂದ್ರ ಹೆಗ್ಗಡೆಯವರ ಮನಸ್ಸು ನೋಯಿಸಿದರೆ ಸಮಾಜವೇ ನಾಶವಾಗಲಿದೆ “ದವಳ ಕೀರ್ತಿ ಭಟ್ಟಾರಕ ಸ್ವಾಮೀಜಿ ಅರಿಹಂತಗಿರಿಜೈನ ಮಠ ಚೆನ್ನೈ. ” ದುಃಖ ದುಮ್ಮಾನ ಮರೆಯಲು ಬರುವ ಪವಿತ್ರವಾದ ಜಾಗ ಧರ್ಮಸ್ಥಳವನ್ನು ಅಗೆದಾಗಲೇ ಕುತಂತ್ರಿಗಳಿಗೆ ಕೇಡುಗಾಲ ಶುರುವಾಗಿದೆ “ಭುವನ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಕನಕಗಿರಿ. ” ಹೆಗ್ಗಡೆಯವರು ದೊಡ್ಡ ಪರೀಕ್ಷೆ ಎದುರಿಸಿ ಅದರಲ್ಲಿ ರ್ಯಾಂಕ್ ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಇನ್ನು ಆತಂಕ ಪಡುವಂತಹುದು ಏನು ಇಲ್ಲ “ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಶ್ರವಣಬೆಳಗೊಳ ಜೈನ ಮಠ. ಭಾರತದ ನೆಲದಲ್ಲಿ ಸೃಷ್ಟಿಯಾದ ಪುರಾತನ ಧರ್ಮಗಳಲ್ಲಿ ಜೈನ ಧರ್ಮವೂ ಒಂದು. ಸತ್ಯ, ಅಹಿಂಸೆ, ತ್ಯಾಗ, ಮೋಕ್ಷ, ಸಹಿಷ್ಣುತೆ ಈ ಧರ್ಮದ ಮೂಲ ಮತ್ತು ಮುಖ್ಯ ಆಶಯಗಳು. ಅದರಲ್ಲೂ ಪ್ರಾಣಿ ಹಿಂಸೆಯನ್ನು ಅತ್ಯುಘ್ರವಾಗಿ ಖಂಡಿಸುವ, ಸಂಪೂರ್ಣ ಸಸ್ಯಾಹಾರವನ್ನೇ…

ಮುಂದೆ ಓದಿ..
ಅಂಕಣ 

ಶಿಕ್ಷಕರ ಆತ್ಮಾವಲೋಕನ……

Taluknewsmedia.com

Taluknewsmedia.comಶಿಕ್ಷಕರ ಆತ್ಮಾವಲೋಕನ…… ಶಿಕ್ಷಕರ ದಿನಾಚರಣೆಸೆಪ್ಟೆಂಬರ್ 5………… ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆ –ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ –ಇಡೀ ಶಿಕ್ಷಕ ಸಮೂಹ ಎಲ್ಲರನ್ನೂ ಗೌರವ ಮತ್ತು ಪ್ರೀತಿ ಪೂರ್ವಕವಾಗಿ ನೆನೆಯುತ್ತಾ…….. ಮಾತನಾಡಬೇಕಿದೆ ಶಿಕ್ಷಕರೇ ನೀವು ಧ್ವನಿ ಎತ್ತಿ – ಮನ ಬಿಚ್ಚಿ – ಮುಂದಿನ 25 ವರ್ಷಗಳಲ್ಲಿ ಮೌಲ್ಯಯುತ ಬಲಿಷ್ಠ ಭಾರತ ನಿರ್ಮಾಣವಾಗಲು…….. ಅಕ್ಷರ ಕಲಿಸುವವರು ನೀವಲ್ಲವೇ – ಅಧ್ಯಯನ ಮಾಡಲು ಮಾರ್ಗ ಸೂಚಿಸುವವರು ನೀವಲ್ಲವೇ –ಚಿಂತಿಸಲು ಪ್ರೇರೇಪಿಸುವವರು ನೀವಲ್ಲವೇ –ಅನ್ಯಾಯದ ವಿರುದ್ಧ ಸಿಡಿದೇಳಲು ಪ್ರೋತ್ಸಾಹಿಸುವವರು ನೀವಲ್ಲವೇ –ಬದುಕು ರೂಪಿಸಿಕೊಳ್ಳಲು ಸಹಾಯ ಮಾಡುವವರು ನೀವಲ್ಲವೇ…… ಭ್ರಷ್ಟ ವ್ಯವಸ್ಥೆಯ ವಿರುದ್ಧ ನೀವೇ ಮೌನವಾದರೆ,ಮೌಢ್ಯಗಳ ವಿರುದ್ಧ ನೀವೇ ಮೌನವಾದರೆ,ಜಾತಿ ಪದ್ದತಿಯ ವಿರುದ್ಧ ನೀವೇ ಮೌನವಾದರೆ,ಚುನಾವಣಾ ಅಕ್ರಮಗಳ ವಿರುದ್ಧ ನೀವೇ ಮೌನವಾದರೆ ಸಮಾಜದ ಭವಿಷ್ಯವೇನು…… ಸತ್ಯದ ಪರವಾಗಿ ಮಾತನಾಡಲು ಹೇಳಿ ಕೊಟ್ಟವರು ನೀವು,ದೇಶ ಭಕ್ತಿಯ ಪಾಠ ಮಾಡಿದವರು ನೀವು,ಮಾನವೀಯ ಮೌಲ್ಯಗಳನ್ನು ಬಿತ್ತಿದವರು ನೀವು,ಸಂವಿಧಾನ…

ಮುಂದೆ ಓದಿ..
ಅಂಕಣ 

ಎರಡು ಮುಖ್ಯವಾದ ಜಾಗತಿಕ ವಿದ್ಯಮಾನಗಳು……

Taluknewsmedia.com

Taluknewsmedia.comಎರಡು ಮುಖ್ಯವಾದ ಜಾಗತಿಕ ವಿದ್ಯಮಾನಗಳು…… ಇಸ್ರೇಲ್ ಎಂಬ ದೇಶದ ಅದ್ಭುತ ಸಾಮರ್ಥ್ಯ ಮತ್ತು ಅಮಾನವೀಯ ಕ್ರೌರ್ಯ, ಹಾಗೆಯೇ ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟ ಹಾಗೂ ಚೀನಾ ಮತ್ತು ರಷ್ಯಾ ಇವುಗಳ ನಡುವೆ ಯಾರು ಹಿತವರು ಭಾರತಕ್ಕೆ ಎಂಬ ಎರಡು ಬಹುಮುಖ್ಯ ಅಂತಾರಾಷ್ಟ್ರೀಯ ಸುದ್ದಿಗಳ ಸುತ್ತಾ ಒಂದು ಸುತ್ತು….. ಇಡೀ ವಿಶ್ವದಲ್ಲಿ ಇಸ್ರೇಲ್ ಎಂಬ ಯಹೂದಿ ಸಮುದಾಯದ ದೇಶ ತನ್ನ ಬುದ್ಧಿಶಕ್ತಿ, ದೂರ ದೃಷ್ಟಿ, ಅದ್ಭುತ ಪ್ರಗತಿ, ಬಲಾಢ್ಯ ಸೈನಿಕ ಶಕ್ತಿ, ಆಧುನಿಕ ತಂತ್ರಜ್ಞಾನ ಮುಂತಾದ ವಿಷಯಗಳಲ್ಲಿ ಜಗತ್ತಿಗೆ ಒಂದು ಮಾದರಿಯಾಗಿ ನಿಲ್ಲುತ್ತದೆ. ದೇಶವೆಂದರೆ ಹೀಗಿರಬೇಕು ಎನಿಸುವಷ್ಟು ಇಸ್ರೇಲಿನ ಬಗ್ಗೆ ವಿವಿಧ ಕ್ಷೇತ್ರದಲ್ಲಿ ಸಾಕಷ್ಟು ಒಳ್ಳೆಯ ಮಾಹಿತಿಗಳು ಸಿಗುತ್ತವೆ. ಹಾಗೆಯೇ ಬಹುಶಃ ಜಗತ್ತಿನ ಕೆಲವೇ ಕೆಲವು ಐತಿಹಾಸಿಕ ಹಿಂಸಾತ್ಮಕ ಘಟನೆಗಳನ್ನು ಹೊರತುಪಡಿಸಿದರೆ, ಜರ್ಮನಿಯ ಹಿಟ್ಲರ್ ನಿಂದ ತಮ್ಮ ಸಮುದಾಯಕ್ಕೆ ಆದ ಅಮಾನುಷ ದೌರ್ಜನ್ಯದ ಪ್ರತಿಫಲವೋ ಏನೋ ಇಸ್ರೇಲಿನ ಇತ್ತೀಚಿನ…

ಮುಂದೆ ಓದಿ..
ಅಂಕಣ 

ಸರ್ಕಾರಿ ( ತೆರಿಗೆ ) ಹಣದ ದುಂದು ವೆಚ್ಚ……..

Taluknewsmedia.com

Taluknewsmedia.comಸರ್ಕಾರಿ ( ತೆರಿಗೆ ) ಹಣದ ದುಂದು ವೆಚ್ಚ…….. ಕೆಲವು ಸಾಮಾನ್ಯ ಉದಾಹರಣೆಗಳು…….. ಒಂದು ಆಶ್ಚರ್ಯಕರ ವಿಷಯ ಸಾಮಾನ್ಯ ಜನರ ಅರಿವಿಗೆ ಇನ್ನೂ ಬಂದಿಲ್ಲವೆನಿಸುತ್ತದೆ. ಸರ್ಕಾರ ಖರ್ಚು ಮಾಡುವ ವೆಚ್ಚದಲ್ಲಿ ಶೇಕಡಾ 20/30% ವ್ಯರ್ಥ ಅಥವಾ ದುಂದು ವೆಚ್ಚ ಆಗಿರುತ್ತದೆ. ದಯವಿಟ್ಟು ಗಮನಿಸಿ. ಇದರಲ್ಲಿ ಭ್ರಷ್ಟಾಚಾರ ಸೇರಿಲ್ಲ. ಅದು ಪ್ರತ್ಯೇಕ. ಹಾಗಾದರೆ ಈ ದುಂದು ವೆಚ್ಚ ಹೇಗಾಗುತ್ತದೆ……. ಮೊದಲನೆಯ ಅತಿಹೆಚ್ಚು ದುಂದು ವೆಚ್ಚ ಸರ್ಕಾರಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಲ್ಲಿ ನಮ್ಮ ತೆರಿಗೆಯ ಹಣ ಪೋಲಾಗುತ್ತದೆ. ಸರ್ಕಾರದ ವತಿಯಿಂದ ಆಗುವ ಯಾವುದೇ ಹೊಸ ಕಟ್ಟಡ, ರಸ್ತೆ, ಭವನ, ಯೋಜನೆ, ಕಾರ್ಯಾಲಯ, ಉದ್ಘಾಟನಾ ಸಭೆ ಸಮಾರಂಭಗಳು ಅದು ಸರ್ಕಾರದ ಕರ್ತವ್ಯದ ಒಂದು ಭಾಗವಾಗಿದ್ದರೂ, ಅದನ್ನು ಸ್ಥಳೀಯವಾಗಿ ಒಂದು ಸಣ್ಣ ಹಣದಲ್ಲಿ ಅವಶ್ಯಕತೆ ಇದ್ದಲ್ಲಿ ಪೂಜೆ ಮಾಡಿ ಮುಗಿಸಬಹುದು. ಆದರೆ ಅದಕ್ಕಾಗಿ ಸರ್ಕಾರ ಲಕ್ಷಗಟ್ಟಲೆ ಹಣ ಖರ್ಚು ಮಾಡುತ್ತದೆ. ಸರ್ಕಾರದಲ್ಲಿ…

ಮುಂದೆ ಓದಿ..
ಅಂಕಣ 

ಅಲೆಮಾರಿ ಬುಡಕಟ್ಟು ಜನಾಂಗ ಮತ್ತು ಒಳ ಮೀಸಲಾತಿ……..

Taluknewsmedia.com

Taluknewsmedia.comಅಲೆಮಾರಿ ಬುಡಕಟ್ಟು ಜನಾಂಗ ಮತ್ತು ಒಳ ಮೀಸಲಾತಿ…….. ಅಲೆಮಾರಿಗಳ ಅಲೆದಾಟಕ್ಕೆ ಪೂರ್ಣವಿರಾಮ ನೀಡಬೇಕಾದ ಸಮಯ ಬಂದಿದೆ. ಮನುಷ್ಯನ ಮೂಲಭೂತ ಅವಶ್ಯಕತೆಗಳಲ್ಲಿ ಊಟ, ಬಟ್ಟೆ ಮತ್ತು ವಸತಿ ಬಹಳ ಮುಖ್ಯವಾದದ್ದು. ಆಧುನಿಕ ನಾಗರಿಕ ಸಮಾಜ ಅಭಿವೃದ್ಧಿ ಹೊಂದಿದಂತೆ ಊಟ, ಬಟ್ಟೆಗಿಂತ ಮನೆ ಎಂಬ ವಾಸ ಸ್ಥಳವೇ ಬಹುಮುಖ್ಯವಾಯಿತು. ಪ್ರತಿಯೊಬ್ಬರೂ ಮುಖ್ಯವಾಗಿ ಮಧ್ಯಮ ವರ್ಗದವರು ಮತ್ತು ಬಡವರ ಜೀವನದ ಬಹುದೊಡ್ಡ ಆಸೆ ಸ್ವಂತ ಮನೆ ಹೊಂದುವುದು. ಆದರೆ ಇಲ್ಲಿ ನೆಲೆಯೇ ಇಲ್ಲದ ಅಲೆಮಾರಿ ಬುಡಕಟ್ಟು ಜನಾಂಗದ ಈಗ ಮುಖ್ಯ ವಾಹಿನಿಯ ಗಮನ ಸೆಳೆಯುತ್ತಿದೆ. ಇಂತಹ ಸನ್ನಿವೇಶದಲ್ಲಿ ಒಳ ಮೀಸಲಾತಿಯ ವಿಷಯ ವಿವಾದವಾಗಿ, ಕೊನೆಗೆ ಪರಿಹಾರ ರೂಪದಲ್ಲಿ ಒಂದು ಸೂತ್ರ ಸಿದ್ಧವಾಗಿದೆ. ಆ ಸೂತ್ರದ ಪ್ರಕಾರ ಅಲೆಮಾರಿ ಜನಾಂಗವನ್ನು ಮೂರನೇ ವರ್ಗಕ್ಕೆ ಸೇರಿಸಿ ಅಲ್ಲಿಯ ಬಲಿಷ್ಠರೊಂದಿಗೆ ಸ್ಪರ್ಧಿಸಲು ಹೇಳಿರುವುದರಿಂದ ಅಲೆಮಾರಿ ಸಮುದಾಯದ ಹಿತಾಸಕ್ತಿಗೆ ಧಕ್ಕೆಯಾಗಿದೆ ಎಂಬ ಕೂಗು ಎಲ್ಲೆಡೆಯೂ ಕೇಳಿ ಬರುತ್ತಿದೆ…

ಮುಂದೆ ಓದಿ..
ಅಂಕಣ 

ಭತ್ತದ ರಾಶಿಯ ರೈತ,ಚಿನ್ನದ ಅಂಬಾರಿಯ ರಾಜ,ದಸರಾ ಉದ್ಘಾಟನೆಯ ರಾಜಕೀಯ……..

Taluknewsmedia.com

Taluknewsmedia.comಭತ್ತದ ರಾಶಿಯ ರೈತ,ಚಿನ್ನದ ಅಂಬಾರಿಯ ರಾಜ,ದಸರಾ ಉದ್ಘಾಟನೆಯ ರಾಜಕೀಯ…….. ದಸರಾ ಉದ್ಘಾಟನೆ ಮಾಡುವವರ ಬಗ್ಗೆ ವಾದ ವಿವಾದಗಳು ಸಾಕಷ್ಟು ಕಾವೇರಿ ಇರುವಾಗ,ಕಾವೇರಿಯ ತಟದ ಕಾಯಕ ಜೀವಿ, ಉಳುವ ಯೋಗಿ ಮಣ್ಣಿನ ಮಗನೊಬ್ಬನ ಸ್ವಗತ……. ನಾನು ರಾಜನಲ್ಲ,ನಾನೊಬ್ಬ ಸಾಮಾನ್ಯ ಕೃಷಿಕ, ನನಗೆ ಅರಮನೆ ಇಲ್ಲ,ನನಗಿರುವುದು ಹೆಂಚಿನ ಮನೆ, ನಾನು ಆನೆಯ ಮೇಲೆ ಕುಳಿತು ಓಡಾಡುವವನಲ್ಲ,ಎತ್ತಿನ ಗಾಡಿಯಲ್ಲಿ ಕಬ್ಬು ಸಾಗಿಸುವವನು ನಾನು, ಸಿಂಹಾಸನ ಮೇಲೆ ಕುಳಿತುಕೊಳ್ಳುವವ ನಾನಲ್ಲ,ಹುಲ್ಲು ಹಾಸಿನ ಮೇಲೆ ಮಲಗುವವ ನಾನು, ಛತ್ರ ಚಾಮರ ಬೀಸಣಿಕೆಯ ತಂಪು ಗಾಳಿ ನನಗಿಲ್ಲ,ಬಿಸಿಲಿನ ಝಳದಲ್ಲಿ, ಗಾಳಿಯ ರಭಸಕ್ಕೆ ಭತ್ತದ ರಾಶಿಯ ಹೊಟ್ಟು ತೂರುವವನು ನಾನು, ಭಕ್ಷ್ಯ ಭೋಜನ ತಿನ್ನುವವನಲ್ಲ,ರಾಗಿ, ರೊಟ್ಟಿ, ಜೋಳ, ಮೆಣಸಿನಕಾಯಿ, ಸೊಪ್ಪು, ಗೊಜ್ಜು ತಿನ್ನುವವನು ನಾನು, ಆಳು ಕಾಳು, ಸೇವಕ, ಸೈನಿಕರು ನನಗಿಲ್ಲ,ನನಗೆ ನಾನೇ ಕಾಲಾಳು, ಮೈತುಂಬ ವೈಭವೋಪೇತ ಬಟ್ಟೆ ತೊಡಲು ನಾನು ಅರಸನಲ್ಲ,ಪಂಚೆ, ಜುಬ್ಬ ಕೆಲವೊಮ್ಮೆ ಬರಿಮೈ…

ಮುಂದೆ ಓದಿ..
ಅಂಕಣ 

ಪಂಥಗಳಾಚೆಯ ಬದುಕು,ಇಸಂ ಮುಕ್ತ ಜೀವನ..

Taluknewsmedia.com

Taluknewsmedia.comಪಂಥಗಳಾಚೆಯ ಬದುಕು, ಇಸಂ ಮುಕ್ತ ಜೀವನ, ದೀರ್ಘವಾದರೂ ಗಂಭೀರ ವಿಷಯ, ದಯವಿಟ್ಟು ಗೌರಿ ಹಬ್ಬದ ವಿರಾಮದಲ್ಲಿ ಸ್ವಲ್ಪ ಸಮಯ ನೀಡಿ… ಸಮಾಜ ಮಾನಸಿಕ ವಿಭಜನೆ ಆಗುವ ಮುನ್ನ ಎಚ್ಚರವಿರಲಿ, ನಾವೆಲ್ಲರೂ ಒಂದೇ ಬಳ್ಳಿಯ ಹೂಗಳು, ಒಂದೇ ದೋಣಿಯ ಪಯಣಿಗರು, ನಮ್ಮ ಅಜ್ಞಾನದಿಂದ ದೋಣಿ ಮುಳುಗದಿರಲಿ……. ಎಡಪಂಥೀಯರು, ಎಡಚರರು, ಅರ್ಬನ್ ನಕ್ಸಲರು ಇತ್ಯಾದಿ ಮಾತುಗಳು ಇತ್ತೀಚಿನ ವರ್ಷಗಳಲ್ಲಿ ಪದೇ ಪದೇ ಕೇಳಿ ಬರುತ್ತಿವೆ. ಇವರು ಧರ್ಮ ವಿರೋಧಿಗಳು, ದೇಶದ್ರೋಹಿಗಳು, ಹಿಂಸಾವಾದಿಗಳು ಎಂಬ ಅರ್ಥದಲ್ಲಿ ಇದರ ವಿರುದ್ಧ ಚಿಂತನೆಯವರು ಮಾತನಾಡುತ್ತಿದ್ದಾರೆ. ಹಾಗೆಯೇ, ಬಲಪಂಥೀಯರು, ರೈಟ್ ವಿಂಗ್ ನವರು, ರಾಷ್ಟ್ರೀಯ ವಾದಿಗಳು, ಧರ್ಮ ರಕ್ಷಕರು ಮುಂತಾದ ಹೆಸರುಗಳಿಂದ ಕೆಲವರನ್ನು ಕರೆಯಲಾಗುತ್ತದೆ. ಇವರು ಕೋಮುವಾದಿಗಳು, ಗಲಭೆಕೋರರು, ವಿಭಜಕ ಮನಸ್ಥಿತಿಯವರು, ಮಾನವ ವಿರೋಧಿಗಳು, ಅಸಮಾನತೆಯ ಜನಕರು ಎಂದು ಅವರ ವಿರೋಧಿಗಳು ಹೇಳುತ್ತಾರೆ. ಇದು ಖಂಡಿತ ತಪ್ಪು ಮತ್ತು ವಿಭಜನಾತ್ಮಕ ಮನಸ್ಥಿತಿ. ಈ ರೀತಿ ಯಾವುದೋ…

ಮುಂದೆ ಓದಿ..
ಅಂಕಣ 

ಘರ್ಷಣೆ ಮತ್ತು ಸೌಹಾರ್ದತೆ,ಆಯ್ಕೆ ನಿಮ್ಮದು, ನಮ್ಮದು……

Taluknewsmedia.com

Taluknewsmedia.comಘರ್ಷಣೆ ಮತ್ತು ಸೌಹಾರ್ದತೆ,ಆಯ್ಕೆ ನಿಮ್ಮದು, ನಮ್ಮದು…… ಗೌರಿ ಗಣೇಶ ಹಬ್ಬ ಸಂಭ್ರಮದ ‌ಸಾಂಸ್ಕೃತಿಕ ಉತ್ಸವವಾಗಲಿ – ಅದು ಕೋಮು ದ್ವೇಷದ ಗಲಭೆಕೋರ ಮನಸ್ಥಿತಿ ಆಗದಿರಲಿ…… ಇದು ಹಿಂದು – ಮುಸ್ಲಿಮ್ ಎಂದಾಗದೆ ಭಾರತೀಯ ಹಬ್ಬವಾಗಲಿ ಎಂದು ಮನವಿ ಮಾಡಿಕೊಳ್ಳುತ್ತಾ…… ಸಾಮಾನ್ಯವಾಗಿ ಗಣೇಶ ಹಬ್ಬವು ವೈಯಕ್ತಿಕತೆಯ ಜೊತೆಗೆ ಅನೇಕ ಸಂಘ ಸಂಸ್ಥೆಗಳು ಗುಂಪು ಗುಂಪಾಗಿ ಸಾರ್ವಜನಿಕ ಸ್ಥಳಗಳಲ್ಲಿ ಒಂದು ಉತ್ಸವವಾಗಿ ಆಚರಿಸಲ್ಪಡುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಇದು ರಾಜಕೀಯ ಕಾರಣದಿಂದಾಗಿ ಒಂದು ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಮಾಡಿದೆ. ಎರಡು ಬಹುಮುಖ್ಯ ಕಾರಣಗಳಿಗಾಗಿ ಈ ಸಂದರ್ಭದಲ್ಲಿ ಘರ್ಷಣೆ ಉಂಟಾಗುವ ಸಾಧ್ಯತೆ ಇದೆ. ಗಣೇಶನನ್ನು ಪ್ರತಿಷ್ಠಾಪಿಸುವ ಜಾಗ ಮತ್ತು ಮೆರವಣಿಗೆಯ ಹಾದಿ ಇಲ್ಲಿ ಪರಿಸ್ಥಿತಿಯನ್ನು ಉದ್ವಿಗ್ನ ಗೊಳಿಸುತ್ತದೆ. ಮುಖ್ಯವಾಗಿ ಹಿಂದೂ ಮುಸ್ಲಿಮರ ನಡುವೆ…. ವಿಶ್ವದ ಬೃಹತ್ ಭೌಗೋಳಿಕ ಪ್ರದೇಶ ಹೊಂದಿರುವ ದೇಶಗಳಲ್ಲಿ ಭಾರತವೂ ಒಂದು. ಬಹುಶಃ ಏಳನೆಯ ಸ್ಥಾನ ಇರಬೇಕು. ಒಂದು…

ಮುಂದೆ ಓದಿ..
ಅಂಕಣ 

ಅಂತರಂಗದ ಗೆಳೆಯ ಗಣೇಶನಿಗೆ ಆತ್ಮೀಯ ಪತ್ರ………

Taluknewsmedia.com

Taluknewsmedia.comಅಂತರಂಗದ ಗೆಳೆಯ ಗಣೇಶನಿಗೆ ಆತ್ಮೀಯ ಪತ್ರ……… ಗೆಳೆಯ ಗಣೇಶ ನಿನಗೆ ಹಬ್ಬದ ಶುಭಾಶಯಗಳು……….‌‌ ಹೃದಯದ ಸ್ನೇಹಿತ ಗಣೇಶ, ಹೇಗಿದ್ದೀಯಾ ?ನಿನ್ನ ಹೊಟ್ಟೆ ನೋಡಿದರೆ ತುಂಬಾ ಆರಾಮವಾಗಿ ಇರಲೇಬೇಕು ಅನಿಸುತ್ತಿದೆ. ನಿನಗೇನು ಕಡಿಮೆ ಗೆಳೆಯ,100 ಕೋಟಿಗೂ ಹೆಚ್ಚು ಜನ ಪ್ರತಿನಿತ್ಯ ಭಕ್ಷ್ಯಬೋಜನಗಳನ್ನು ಉಣಬಡಿಸುತ್ತಾರೆ. ವರ್ಷಕ್ಕೊಮ್ಮೆ ನಿನ್ನನ್ನು ಹಾಡಿ ಹೊಗಳಿ ಬೀದಿಬೀದಿಗಳಲ್ಲಿ ಕುಣಿದು ಕುಪ್ಪಳಿಸುತ್ತಾರೆ.ನೀನು ಅದರಲ್ಲಿ ಮೈಮರೆತು ನಮ್ಮನ್ನು ಮರೆತಿರಬಹುದು. ಅದನ್ನು ನೆನಪಿಸುವ ಸಲುವಾಗಿಯೇ ಮತ್ತು ಇಲ್ಲಿನ ನಿಜ ಸ್ಥಿತಿ ನಿನಗೆ ತಿಳಿಸಲು ಈ ಪತ್ರ ಬರೆಯುತ್ತಿದ್ದೇನೆ. ಗೆಳೆಯ,ನಮ್ಮ ಜನ ನಿನ್ನನ್ನು ತುಂಬಾ ಪ್ರೀತಿಸುತ್ತಾರೆ. ನಿನ್ನನ್ನು ಕಂಡರೆ ಅವರಿಗೆ ಅಪಾರ ಅಭಿಮಾನ – ಬಹಳ ಭಕ್ತಿ. ನಮ್ಮ ಗಣೇಶ ನಮ್ಮೆಲ್ಲಾ ಕಷ್ಟ ಪರಿಹರಿಸುವ ವಿಘ್ನ ವಿನಾಯಕ ಎಂದು ನಂಬಿದ್ದಾರೆ.ಅನೇಕ ಹೆಸರುಗಳಿಂದ ನಿನ್ನನ್ನು ಕರೆಯುತ್ತಾರೆ. ಎಲ್ಲಾ ಶುಭ ಕಾರ್ಯಗಳಲ್ಲಿ ನಿನಗೇ ಅಗ್ರ ಪೂಜೆ. ಒಂಥರಾ ಎಲ್ಲರಿಗೂ ನೀನೇ ಬಾಸ್. ಆದರೆ ಗೆಳೆಯ,ನನ್ನ…

ಮುಂದೆ ಓದಿ..