ಸುದ್ದಿ 

ಯುವ ಶಿಕ್ಷಕಿಯ ಶವ ಬಾವಿಯಲ್ಲಿ ಪತ್ತೆ – ಆತ್ಮಹತ್ಯೆಯೋ, ಅಪಘಾತವೋ ಎಂಬ ಅನುಮಾನ

Taluknewsmedia.com

Taluknewsmedia.comಯುವ ಶಿಕ್ಷಕಿಯ ಶವ ಬಾವಿಯಲ್ಲಿ ಪತ್ತೆ – ಆತ್ಮಹತ್ಯೆಯೋ, ಅಪಘಾತವೋ ಎಂಬ ಅನುಮಾನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಗ್ರಾಮದಲ್ಲಿ ನಡೆದ ಹೃದಯವಿದ್ರಾವಕ ಘಟನೆ ಎಲ್ಲರನ್ನು ಬೆಚ್ಚಿಬೀಳಿಸಿದೆ. ಯುವ ಶಿಕ್ಷಕಿಯೊಬ್ಬರ ಶವ ಮನೆಯ ಪಕ್ಕದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂಬ ಅನುಮಾನಕ್ಕೆ ಕಾರಣವಾಗಿದೆ. ಬೂಡುಮುಗೇರು ನಿವಾಸಿ ತೇಜಸ್ವಿನಿ (23) ಮೃತಪಟ್ಟ ಶಿಕ್ಷಕಿ. ತೇಜಸ್ವಿನಿ ಸ್ಥಳೀಯ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆಂದು ಕುಟುಂಬದವರು ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ ಮನೆಯವರು ಕಾಣದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ, ಮನೆಯ ಪಕ್ಕದಲ್ಲಿರುವ ಬಾವಿಯಲ್ಲಿ ಶವ ತೇಲುತ್ತಿರುವುದು ಗಮನಕ್ಕೆ ಬಂದಿದೆ. ತಕ್ಷಣ ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಲು ಜಾರಿ ಬಾವಿಗೆ ಬಿದ್ದರೋ ಅಥವಾ ಆತ್ಮಹತ್ಯೆ ಮಾಡಿಕೊಂಡರೋ ಎಂಬ…

ಮುಂದೆ ಓದಿ..
ಸುದ್ದಿ 

ಮೈಸೂರು : ರೈಲ್ವೆ ನಿಲ್ದಾಣದಲ್ಲಿ ಮಗು ಅಪಹರಣ – ಸಿಸಿಟಿವಿ ದೃಶ್ಯ ಆಧರಿಸಿ ಮಹಿಳೆ ಬಂಧನ!

Taluknewsmedia.com

Taluknewsmedia.comಮೈಸೂರು : ರೈಲ್ವೆ ನಿಲ್ದಾಣದಲ್ಲಿ ಮಗು ಅಪಹರಣ – ಸಿಸಿಟಿವಿ ದೃಶ್ಯ ಆಧರಿಸಿ ಮಹಿಳೆ ಬಂಧನ! ಸಾಂಸ್ಕೃತಿಕ ನಗರಿ ಮೈಸೂರು ರೈಲ್ವೆ ನಿಲ್ದಾಣದಲ್ಲಿ ನಡೆದ ಅಚ್ಚರಿಯ ಘಟನೆಯಲ್ಲಿ, ಮಗುವನ್ನು ಅಪಹರಿಸಿದ 50 ವರ್ಷದ ವೃದ್ಧೆಯನ್ನು ಪೊಲೀಸರು ಬಂಧಿಸಿದ್ದಾರೆ. ತಾಯಿ ಜೊತೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದ ಮಗುವನ್ನು ವೃದ್ಧೆಯೊಬ್ಬಳು ಎತ್ತಿಕೊಂಡು ಹೋಗಿದ್ದು, ತಾಯಿ ಎಚ್ಚರಗೊಂಡಾಗ ಮಗು ಕಾಣೆಯಾದ್ದು ಗಮನಕ್ಕೆ ಬಂದಿದೆ. ತಕ್ಷಣವೇ ಆತಂಕಗೊಂಡ ಕುಟುಂಬಸ್ಥರು ರೈಲ್ವೆ ಪೊಲೀಸರಿಗೆ ದೂರು ನೀಡಿದ ನಂತರ, RPF ಸಿಬ್ಬಂದಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ತುರ್ತು ಕ್ರಮ ಕೈಗೊಂಡರು. ವೀಡಿಯೊ ದೃಶ್ಯಗಳಲ್ಲಿ ವೃದ್ಧೆ ಮಗು ಕೈಯಲ್ಲಿ ಹಿಡಿದು ನಿಲ್ದಾಣದ ಹೊರಗೆ ತೆರಳುತ್ತಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಬಂಧಿತೆಯು ಹಾಸನ ಮೂಲದ ನಂದಿನಿ (50) ಎಂದು ಗುರುತಿಸಲಾಗಿದ್ದು, ಮಗುವನ್ನು ಸುರಕ್ಷಿತವಾಗಿ ಪೋಷಕರ ವಶಕ್ಕೆ ಹಸ್ತಾಂತರಿಸಲಾಗಿದೆ. ಈ…

ಮುಂದೆ ಓದಿ..
ಸುದ್ದಿ 

ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಮೂವರು ಆರೋಪಿಗಳ ಬಂಧನ: ಎಸ್ಪಿ ಸಿ.ಕೆ. ಬಾಬಾ ಮಾಹಿತಿ

Taluknewsmedia.com

Taluknewsmedia.comಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಮೂವರು ಆರೋಪಿಗಳ ಬಂಧನ: ಎಸ್ಪಿ ಸಿ.ಕೆ. ಬಾಬಾ ಮಾಹಿತಿ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಹಿಳೆಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೊಲೀಸರು ತ್ವರಿತ ಕ್ರಮ ಕೈಗೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಾರ್ತಿಕ್, ಗ್ಲೆನ್, ಹಾಗೂ ಸುಯೋಗಾ ಎಂದು ಗುರುತಿಸಲಾಗಿದ್ದು, ಈ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಕೆ. ಬಾಬಾ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಮಾದನಾಯಕನಹಳ್ಳಿ ಸಮೀಪದ ಗಂಗೊಂಡನಹಳ್ಳಿ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ವಾಸಿಸುತ್ತಿದ್ದರು. ಈ ಸಂದರ್ಭದಲ್ಲಿ ಐವರು ಆರೋಪಿಗಳು ಅಲ್ಲಿ ಹಾಜರಿದ್ದು, ಅವರಲ್ಲಿ ಮೂವರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಘಟನೆ ತಿಳಿದ ಕೂಡಲೇ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ…

ಮುಂದೆ ಓದಿ..
ಸುದ್ದಿ 

ಶಿವಮೊಗ್ಗ : ದೀಪಾವಳಿ ಸಂಭ್ರಮದ ಮಧ್ಯೆ ವಡ್ಡಿನಕೊಪ್ಪದಲ್ಲಿ ಕಳ್ಳತನದ ಘಟನೆ ನಡೆದಿದೆ. ಕರಿಯಪ್ಪ ಹಾಗೂ ಯಶೋದಮ್ಮ ಎಂಬುವವರ ಮನೆಗೆ ನುಗ್ಗಿದ ಕಳ್ಳರು ಬಾಗಿಲಿನ ಬೀಗ ಒಡೆದು ನಗದು ಹಾಗೂ ಬಂಗಾರ ಎಗರಿಸಿದ್ದಾರೆ.

Taluknewsmedia.com

Taluknewsmedia.comಶಿವಮೊಗ್ಗ : ದೀಪಾವಳಿ ಸಂಭ್ರಮದ ಮಧ್ಯೆ ವಡ್ಡಿನಕೊಪ್ಪದಲ್ಲಿ ಕಳ್ಳತನದ ಘಟನೆ ನಡೆದಿದೆ. ಕರಿಯಪ್ಪ ಹಾಗೂ ಯಶೋದಮ್ಮ ಎಂಬುವವರ ಮನೆಗೆ ನುಗ್ಗಿದ ಕಳ್ಳರು ಬಾಗಿಲಿನ ಬೀಗ ಒಡೆದು ನಗದು ಹಾಗೂ ಬಂಗಾರ ಎಗರಿಸಿದ್ದಾರೆ. ಮನೆಯವರು ಹಬ್ಬದ ನಿಮಿತ್ತ ಸಂಬಂಧಿಕರ ಮನೆಗೆ ತೆರಳಿದ್ದ ವೇಳೆ ಈ ಕೃತ್ಯ ನಡೆದಿದೆ. ಕಳ್ಳರು ಮನೆಯೊಳಗಿನಿಂದ ₹80,000 ನಗದು ಮತ್ತು ಸುಮಾರು 1 ತೊಲೆ ಬಂಗಾರವನ್ನು ಕಳವು ಮಾಡಿದ್ದಾರೆ. ಘಟನೆ ನಿನ್ನೆ ತಡರಾತ್ರಿ ನಡೆದಿದ್ದು, ಬೆಳಗಿನ ಜಾವ ಬೀಗ ಒಡೆದಿರುವುದನ್ನು ಗಮನಿಸಿದ ನೆರೆಹೊರೆಯವರು ಮಾಲೀಕರಿಗೆ ಮಾಹಿತಿ ನೀಡಿದರು. ಮಾಹಿತಿ ತಿಳಿದ ತಕ್ಷಣ ತುಂಗಾನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ. ಹಬ್ಬದ ಸಮಯದಲ್ಲಿ ಮನೆ ಬೀಗ ಹಾಕಿ ಹೊರಗೆ ಹೋಗುವ ನಾಗರಿಕರು ಎಚ್ಚರಿಕೆ ವಹಿಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.

ಮುಂದೆ ಓದಿ..
ಸುದ್ದಿ 

ಬೆಂಗಳೂರಿನಲ್ಲಿ ವೈದ್ಯನ ಬಂಧನ — ಯುವತಿಗೆ ಅಸಭ್ಯ ವರ್ತನೆ, ಲೈಂಗಿಕ ಬೇಡಿಕೆ ಆರೋಪ

Taluknewsmedia.com

Taluknewsmedia.comಬೆಂಗಳೂರಿನಲ್ಲಿ ವೈದ್ಯನ ಬಂಧನ — ಯುವತಿಗೆ ಅಸಭ್ಯ ವರ್ತನೆ, ಲೈಂಗಿಕ ಬೇಡಿಕೆ ಆರೋಪ ಬೆಂಗಳೂರು ನಗರದ ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಚರ್ಮ ರೋಗ ತಜ್ಞ ವೈದ್ಯನೊಬ್ಬ ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳ ಆರೋಪದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದಾನೆ. ಬಂಧಿತನನ್ನು ಅಸ್ಟೀನ್ ಟೌನ್ ನಿವಾಸಿ ಡಾ. ಪ್ರವೀಣ್ ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಚಿಕಿತ್ಸೆಗೆಂದು ಈ ವೈದ್ಯನ ಕ್ಲಿನಿಕ್‌ಗೆ ಭೇಟಿ ನೀಡಿದ್ದರು. ಚಿಕಿತ್ಸೆಯ ಸಮಯದಲ್ಲಿ ವೈದ್ಯ ಯುವತಿಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಷ್ಟೇ ಅಲ್ಲದೆ, ಲೈಂಗಿಕ ಕ್ರೀಯೆಗೆ ಬೇಡಿಕೆಯೂ ಇಟ್ಟಿದ್ದಾನೆಂದು ಯುವತಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಯಿಂದ ಬೆಚ್ಚಿಬಿದ್ದ ಯುವತಿ ವಿಷಯವನ್ನು ತಕ್ಷಣವೇ ತನ್ನ ಪೋಷಕರಿಗೆ ತಿಳಿಸಿದ್ದಾರೆ. ನಂತರ ಪೋಷಕರು ಕ್ಲಿನಿಕ್‌ಗೆ ಬಂದು ಪ್ರತಿಭಟಿಸಿದ ನಂತರ ಅಶೋಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಪೊಲೀಸರು ವೈದ್ಯ ಪ್ರವೀಣ್…

ಮುಂದೆ ಓದಿ..
ಸುದ್ದಿ 

ಮಂದಿ ಸಜೀವ ದಹನ, 12 ಮಂದಿ ಗಾಯಗೊಂಡರು..

Taluknewsmedia.com

Taluknewsmedia.comಮಂದಿ ಸಜೀವ ದಹನ, 12 ಮಂದಿ ಗಾಯಗೊಂಡರು ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಬಳಿಯಲ್ಲಿ ನಡುರಾತ್ರಿಯಲ್ಲಿ ಸಂಭವಿಸಿದ ಭೀಕರ ಬಸ್‌ ಬೆಂಕಿ ದುರಂತದಲ್ಲಿ ಕನಿಷ್ಠ 20 ಮಂದಿ ಜೀವಂತವಾಗಿ ದಹನಗೊಂಡಿರುವ ಶೋಚನೀಯ ಘಟನೆ ನಡೆದಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಕಾವೇರಿ ಟ್ರಾವೆಲ್ಸ್ ಖಾಸಗಿ ಬಸ್ ಈ ದುರಂತಕ್ಕೀಡಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್‌ನಲ್ಲಿ ಒಟ್ಟು 44 ಪ್ರಯಾಣಿಕರಿದ್ದರು. ಉಳಿಂದಕೊಂಡದ ಸಮೀಪ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಸಿನ ಮುಂಭಾಗ ತಕ್ಷಣವೇ ಬೆಂಕಿಗೆ ಆಹುತಿಯಾಯಿತು. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿ ಪ್ರಯಾಣಿಕರು ಪಾರಾಗಲು ಸಾಧ್ಯವಾಗಲಿಲ್ಲ. ಸುಮಾರು 12 ಮಂದಿ ಕಿಟಕಿಗಳನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಂಡರೆ, ಉಳಿದವರು ಬೆಂಕಿಯಲ್ಲಿ ಸಿಲುಕಿಕೊಂಡು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ರಮೇಶ್ ಹಾಗೂ ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿದಂತೆ…

ಮುಂದೆ ಓದಿ..
ಸುದ್ದಿ 

ಹಾವೇರಿ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮೂವರ ದುರ್ಮರಣ

Taluknewsmedia.com

Taluknewsmedia.comಹಾವೇರಿ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮೂವರ ದುರ್ಮರಣ ದೀಪಾವಳಿ ಸಂಭ್ರಮದಲ್ಲಿ ದುರಂತ — ಹಾವೇರಿ ಜಿಲ್ಲೆಯ ವಿವಿಧೆಡೆ ಹೋರಿ ಹಾವಳಿ ಮೂವರ ಜೀವ ಬಲಿ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆ ಹಾವೇರಿ ಜಿಲ್ಲೆಯ ಹಲವು ಭಾಗಗಳಲ್ಲಿ ದುರಂತಕ್ಕೆ ಕಾರಣವಾಗಿದೆ. ಪ್ರತ್ಯೇಕ ಘಟನೆಗಳಲ್ಲಿ ಯುವಕನೊಬ್ಬನನ್ನು ಸೇರಿಸಿ ಮೂವರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರಾಗಿ ಗುರುತಿಸಲಾದವರು — ಚಂದ್ರಶೇಖರ ಕೋಡಿಹಳ್ಳಿ (75), ಘನಿಸಾಬ್ (75) ಹಾಗೂ ಭರತ್ (22). ಮೃತರ ಪೈಕಿ ಇಬ್ಬರು ನಿನ್ನೆ ಮೃತಪಟ್ಟಿದ್ದು, ಇಂದು ಬೆಳಿಗ್ಗೆ ನಡೆದ ಅಪಘಾತದಲ್ಲಿ ಮತ್ತೊಬ್ಬ ಯುವಕ ಮೃತಪಟ್ಟಿದ್ದಾನೆ. ಹಾವೇರಿ ತಾಲ್ಲೂಕಿನ ದಾನೇಶ್ವರಿ ನಗರದ ನಿವಾಸಿ, ಹೆಸ್ಕಾಂ ನಿವೃತ್ತ ನೌಕರ ಚಂದ್ರಶೇಖರ್ ಕೋಡಿಹಳ್ಳಿ ಅವರು ಮನೆಗೆ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಹೋರಿ ಹಾಯ್ದು ಗಂಭೀರವಾಗಿ ಗಾಯಗೊಳಿಸಿತ್ತು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಪ್ರಾಣ ಕಳೆದುಕೊಂಡರು. ಇನ್ನೊಂದು ಘಟನೆಯಲ್ಲಿ,…

ಮುಂದೆ ಓದಿ..
ಸುದ್ದಿ 

ಪತ್ನಿಯ ಶೀಲದ ಬಗ್ಗೆ ಶಂಕೆ – ಗಂಡನಿಂದ ಪತ್ನಿ ಹತ್ಯೆ!

Taluknewsmedia.com

Taluknewsmedia.comಪತ್ನಿಯ ಶೀಲದ ಬಗ್ಗೆ ಶಂಕೆ – ಗಂಡನಿಂದ ಪತ್ನಿ ಹತ್ಯೆ! ಮಂಡ್ಯದಲ್ಲಿ ನಡೆದ ಕ್ರೂರ ಘಟನೆಯಿಂದ ಸ್ಥಳೀಯರಲ್ಲಿ ಆಕ್ರೋಶ ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ನಡೆದ ನೃಶಂಸ ಘಟನೆ ಒಂದು ಪೂರಾ ಪ್ರದೇಶವನ್ನು ಬೆಚ್ಚಿಬೀಳುವಂತೆ ಮಾಡಿದೆ. ಪತ್ನಿಯ ಶೀಲದ ಬಗ್ಗೆ ಶಂಕೆಗೊಂಡ ಗಂಡ ಕ್ರೂರವಾಗಿ ಆಕೆಯ ಕತ್ತು ಸೀಳಿ ಹತ್ಯೆ ಮಾಡಿದ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮೃತೆಯಾಗಿ ಗುರುತಿಸಲಾದ ಶ್ವೇತಾ ಕಳೆದ 17 ವರ್ಷಗಳಿಂದ ಆರೋಪಿ ಲೋಕೇಶ್‌ನ ಪತ್ನಿಯಾಗಿದ್ದರು. ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳ ಸಂಬಂಧ ಇತ್ತೀಚೆಗೆ ಗಲಭೆಗೆ ತುತ್ತಾಗಿತ್ತು. ಲೋಕೇಶ್ ದಿನವೂ ಮದ್ಯಪಾನ ಮಾಡಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದನೆಂದು ಕುಟುಂಬಸ್ಥರು ತಿಳಿಸಿದ್ದಾರೆ. ಶೀಲ ಶಂಕೆಯಿಂದಾಗಿ ಆಗಾಗ ಶ್ವೇತಾಳ ಮೇಲೆ ಹಿಂಸೆ ತೋರಿಸುತ್ತಿದ್ದ ಲೋಕೇಶ್, ಕೊನೆಗೆ ಆಕೆಯ ಜೀವವನ್ನೇ ತೆತ್ತಿದ್ದಾನೆ. ಘಟನೆ ನಡೆದ ರಾತ್ರಿ ಶ್ವೇತಾಳಿಗೆ ನಿದ್ರಾಮಾತ್ರೆ ನೀಡಿ, ಆಕೆ…

ಮುಂದೆ ಓದಿ..
ಸಿನೆಮಾ ಸುದ್ದಿ 

“ಫಸ್ಟ್ ಸ್ಯಾಲರಿ” – ತಾಯಿಯ ಕನಸುಗಳ ಹಾದಿಯಲ್ಲೊಂದು ಮನಮೋಹಕ ಕಿರುಚಿತ್ರ!

Taluknewsmedia.com

Taluknewsmedia.com“ಫಸ್ಟ್ ಸ್ಯಾಲರಿ” – ತಾಯಿಯ ಕನಸುಗಳ ಹಾದಿಯಲ್ಲೊಂದು ಮನಮೋಹಕ ಕಿರುಚಿತ್ರ! ಕನ್ನಡ ಚಿತ್ರರಂಗದಲ್ಲಿ ಪ್ರಚಾರದ ಕ್ಷೇತ್ರದಲ್ಲಿ ವಿಶಿಷ್ಟ ಹೆಸರು ಗಳಿಸಿರುವ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸ್ಥಾಪಕರಾದ ಡಿ.ವಿ. ಸುಧೀಂದ್ರ ಅವರು ತಮ್ಮದೇ ನಿರ್ಮಾಣ ಸಂಸ್ಥೆಯ ಮೂಲಕ “ಒಲವಿನ ಉಡುಗೊರೆ”, “ಗಣೇಶನ ಮದುವೆ”, “ಗುಂಡನ ಮದುವೆ”, “ಪಟ್ಟಣಕ್ಕೆ ಬಂದ ಪುಟ್ಟ”, “ನಗು ನಗುತಾ ನಲಿ” ಮುಂತಾದ ಅನೇಕ ಹಿಟ್ ಚಿತ್ರಗಳನ್ನು ಕನ್ನಡ ಪ್ರೇಕ್ಷಕರಿಗೆ ನೀಡಿದ್ದರು. ಈಗ ಇದೇ ಸಂಸ್ಥೆಯ ಮುಂದಾಳತ್ವ ವಹಿಸಿರುವ ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಅವರು ಹೊಸ ಪ್ರಯೋಗಕ್ಕೆ ಕೈ ಹಾಕಿದ್ದಾರೆ. ಅವರ ಪುತ್ರ ಪವನ್ ವೆಂಕಟೇಶ್ ನಿರ್ದೇಶನದ “ಫಸ್ಟ್ ಸ್ಯಾಲರಿ” (First Salary) ಎಂಬ ಕಿರುಚಿತ್ರಕ್ಕೆ ಬಂಡವಾಳ ಹೂಡಿ ಆಶೀರ್ವಾದ ನೀಡಿದ್ದಾರೆ. “ಕನಸುಗಳ ಹಾದಿ” ಎಂಬ ಅಡಿಬರಹದೊಂದಿಗೆ ಈ ಚಿತ್ರದ ಪೋಸ್ಟರ್ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಬಿಡುಗಡೆಯಾಗಿದೆ. ಕರೋನ ಸಮಯದಲ್ಲಿ “ಕರಾಳ…

ಮುಂದೆ ಓದಿ..
ಅಂಕಣ 

ಕನ್ನಡ ರಾಜ್ಯೋತ್ಸವಕ್ಕೆ ಕೆಲವೇ ದಿನಗಳಿರುವಾಗ……..

Taluknewsmedia.com

Taluknewsmedia.comಕನ್ನಡ ರಾಜ್ಯೋತ್ಸವಕ್ಕೆ ಕೆಲವೇ ದಿನಗಳಿರುವಾಗ…….. ಕರ್ನಾಟಕದ ಜನ ಬಹಳ ಬುದ್ದಿವಂತರು – ಒಳ್ಳೆಯವರು,ಕನ್ನಡ ಭಾಷೆ ವಿಶ್ವ ಶ್ರೇಷ್ಠ,ಕನ್ನಡ ಇತಿಹಾಸ ಅದ್ಬುತ,ಕನ್ನಡ ಸಂಸ್ಕೃತಿ ವಿಶ್ವ ಮಾನ್ಯ,ಕನ್ನಡ ನೆಲದಲ್ಲಿ ಬಸವಣ್ಣ, ಕುವೆಂಪು, ಕೆಂಪೇಗೌಡ, ಕನಕ, ಪುರಂದರ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರ ಮದಕರಿ ಮುಂತಾದ ಜಗತ್ ಪ್ರಸಿದ್ದ ನಾಯಕರು ಜನಿಸಿದ್ದಾರೆ,…. ಬೆಳಗಾವಿಯ ಕುಂದ,ಧಾರವಾಡದ ಪೇಡ,ಬಳ್ಳಾರಿ ಖಾರ ಮಂಡಕ್ಕಿ,ಮೈಸೂರು ಪಾಕು,ತುಮಕೂರಿನ ತಟ್ಟೆ ಇಡ್ಲಿ,ದಾವಣಗೆರೆಯ ಬೆಣ್ಣೆ ದೋಸೆ,ಕೋಲಾರದ ಬಂಗಾರ ಪೇಟೆ ಚಾಟ್ಸ್,ಕಲಬುರಗಿಯ ಖಡಕ್ ರೋಟಿ,ಕರಾವಳಿ ಭಾಗದ ಕಾಣೆ ಮೀನಿನ ಸಾರು, ಮಲೆನಾಡಿನ ಹಲಸಿನ ಕಡುಬು, ಶಿವಮೊಗ್ಗದ ಮಾವಿನ ಶೀಕರಣೆ, ಉತ್ತರ ಕನ್ನಡದ ಕೆಸುವಿನ ಪಲ್ಯ, ಹಾಸನದ ಬೈನೇ ಮರದ ಕಳ್ಳು,ಚಾಮರಾಜನಗರದ ಆದಿವಾಸಿಗಳ ಬೊಂಬು ಬಿರಿಯಾನಿ,ಕೊಡಗಿನ ಅಕ್ಕಿ ರೊಟ್ಟಿ ಹಂದಿ ಫ್ರೈ,ಬಿಜಾಪುರದ ಸಿಹಿ ಮಿಶ್ರಿತ ಉಪ್ಪಿನಕಾಯಿ,ಬೀದರಿನ ಗಡಿಗೆ ಮೊಸರು,ಯಾದಗಿರಿಯ ಎಣ್ಣಿ ಬದನೆಯಕಾಯಿ ಪಲ್ಯ, ಮಂಡ್ಯದ ರಾಗಿ ಮುದ್ದೆ, ಬನ್ನೂರು ಕುರಿಯ ತಲೆ ಮಾಂಸ,ಚಿತ್ರದುರ್ಗದ…

ಮುಂದೆ ಓದಿ..