ಹೊಸಕೋಟೆ ಪಾಠಶಾಲೆಯಲ್ಲಿ ಮಾದಕ ವ್ಯಸನ ತಡೆ ಜಾಗೃತಿ ಕಾರ್ಯಕ್ರಮ
Taluknewsmedia.comಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹೊಸಕೋಟೆಯಲ್ಲಿ ಜುಲೈ 19, 2025 ರಂದು ‘ಸಂಭ್ರಮ ಶನಿವಾರ’ದ ಅಂಗವಾಗಿ “ಮಾದಕ ವಸ್ತುಗಳ ದುರುಪಯೋಗ ತಡೆಗೆ ಜಾಗೃತಿ ಕಾರ್ಯಕ್ರಮ”ವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ವ್ಯಸನದ ವಿರುದ್ಧ ಚೇತನತ್ಮಕ ಮನೋಭಾವ ಬೆಳೆಸುವ ಉದ್ದೇಶ ಹೊಂದಲಾಗಿತ್ತು. ಕಾರ್ಯಕ್ರಮಕ್ಕೆ ಎಲೆರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಶ್ರೀ ಗಂಗಾಧರ್ ಸಿಎಚ್ಒ ಮತ್ತು ಉಮಾಪತಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಕ್ಕಳಿಗೆ ಮಾದಕ ವಸ್ತುಗಳ ಹಾನಿಕರ ಪರಿಣಾಮಗಳ ಕುರಿತು ಸಮರ್ಪಕವಾದ ಮಾಹಿತಿ ನೀಡಿದರು. ಅವರು ವ್ಯಸನದ ಗೀಳು ಹೇಗೆ ಪ್ರಾರಂಭವಾಗುತ್ತದೆ ಮತ್ತು ಅದು ವ್ಯಕ್ತಿ ಹಾಗೂ ಕುಟುಂಬದ ಮೇಲೆ ಹೇಗೆ ದುಷ್ಪರಿಣಾಮ ಬೀರುತ್ತದೆ ಎಂಬ ಕುರಿತು ಮನ ಮುಟ್ಟುವಂತೆ ವಿವರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತಾದ ಕಿರು ನಾಟಕವನ್ನು ಪ್ರದರ್ಶಿಸಲಾಯಿತು. ನಾಟಕದ ಮೂಲಕ ಮಕ್ಕಳಿಗೆ ನೈಜ ಜೀವನದ ಉದಾಹರಣೆಗಳ ಮೂಲಕ ವ್ಯಸನದ…
ಮುಂದೆ ಓದಿ..
