ಸುದ್ದಿ 

ಯಲಹಂಕದಲ್ಲಿ ಸ್ಕೂಟರ್ ಕಳವು ಪ್ರಕರಣ

Taluknewsmedia.com

Taluknewsmedia.comಯಲಹಂಕ: ಆಗಸ್ಟ್ 11 2025ಬಾಗಲೂರು ಕ್ರಾಸ್ ಸಮೀಪ ಸ್ಕೂಟರ್ ಕಳುವಿನ ಘಟನೆ ವರದಿಯಾಗಿದೆ. ಪೊಲೀಸರ ಪ್ರಕಾರ, ಜೂನ್ 7, 2025ರಂದು ಬೆಳಿಗ್ಗೆ ಸುಮಾರು 9.45ರ ವೇಳೆಗೆ ವಿನಾಯಕನಗರ, 5ನೇ ಮೈನ್ ರಸ್ತೆಯ ಅಪೋಲೋ ಪಾಮಾಣಿ ಮನೆಯ ಎಡಭಾಗದಲ್ಲಿ ಪಾರ್ಕ್ ಮಾಡಲಾಗಿದ್ದ ಸ್ಕೂಟರ್‌ನ್ನು ಅಪರಿಚಿತರು ಕಳವು ಮಾಡಿಕೊಂಡು ಹೋಗಿದ್ದಾರೆ. ಘಟನೆಯ ನಂತರ, ಮಾಲೀಕರು ಯಲಹಂಕ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಿಸಲಾಗಿದೆ. ಕಳುವಾದ ವಾಹನದ ಪತ್ತೆಗಾಗಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯವನ್ನು ಮುಂದುವರೆಸಿದ್ದಾರೆ.

ಮುಂದೆ ಓದಿ..
ಸುದ್ದಿ 

ಮಂಚಪ್ಪನಹಳ್ಳಿಯಲ್ಲಿ 32 ವರ್ಷದ ಮಹಿಳೆ ಕಾಣೆಯಾದ ಘಟನೆ

Taluknewsmedia.com

Taluknewsmedia.comಬೆಂಗಳೂರು ಆಗಸ್ಟ್ 11 2025ಮಂಚಪ್ಪನಹಳ್ಳಿ ಮೂಲದ 32 ವರ್ಷದ ಅರುಣಾ ಎಂಬ ಮಹಿಳೆ ಆಗಸ್ಟ್ 6 ರಂದು ಸಂಜೆ ಕಾಣೆಯಾಗಿರುವ ಘಟನೆ ವರದಿಯಾಗಿದೆ. ಜ್ಯೋತಿ ಅವರ ಪ್ರಕಾರ, ಅರುಣಾ ಕಳೆದ ನಾಲ್ಕು ವರ್ಷಗಳಿಂದ ತಮ್ಮ ತಾಯಿ, ಸಹೋದರಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಅವರ ಗಂಡ ನಾಲ್ಕು ವರ್ಷಗಳ ಹಿಂದೆ ನಿಧನ ಹೊಂದಿದ್ದು, ನಂತರ ಗಾರ ಕೆಲಸ ಮಾಡಿಕೊಂಡು ಕುಟುಂಬದೊಂದಿಗೆ ಜೀವನ ನಡೆಸುತ್ತಿದ್ದರು. ಆಗಸ್ಟ್ 6ರಂದು ಸಂಜೆ ಸುಮಾರು 7.45ಕ್ಕೆ ಮನೆಯಲ್ಲಿದ್ದ ಅರುಣಾ, ರಾತ್ರಿ 8 ಗಂಟೆಗೆ ಕಾಣೆಯಾಗಿದ್ದಾರೆ. ಕುಟುಂಬಸ್ಥರು ಮತ್ತು ಬಂಧುಗಳು ರಾತ್ರಿ ತನಕ ಹಾಗೂ ನಂತರವೂ ಹುಡುಕಾಡಿದರೂ ಪತ್ತೆಯಾಗಲಿಲ್ಲ. ವಿಚಾರಿಸಿದರೂ ಯಾವುದೇ ಮಾಹಿತಿ ದೊರೆಯದ ಕಾರಣ ತಡವಾಗಿ ಬಾಗಲೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಬಾಗಲೂರು ಪೊಲೀಸರು ಕಾಣೆಯಾದ ಮಹಿಳೆಯ ಪತ್ತೆಗೆ ಶೋಧ ಕಾರ್ಯ ಹಾಗೂ ತನಿಖೆ ಮುಂದುವರೆಸಿದ್ದಾರೆ.

ಮುಂದೆ ಓದಿ..
ಸುದ್ದಿ 

ನಿರ್ಮಾಣ ಸ್ಥಳದಲ್ಲಿ ಭೀಕರ ಅವಘಡ – ಕಾರ್ಮಿಕನ ದುರ್ಮರಣ

Taluknewsmedia.com

Taluknewsmedia.comಬೆಂಗಳೂರು:11. 2025ನಗರದಲ್ಲಿನ ಶ್ರೀರಾಮಪುರ ಗ್ರಾಮದಲ್ಲಿರುವ ಉಡುಪಿ ಉಪಚಾರ ಹೋಟೆಲ್ ಎದುರಿನ ಸೊಹೋ ಅಂಡ್ ಸೈ ಪ್ರಾಜೆಕ್ಟ್‌ ನಿರ್ಮಾಣ ಸ್ಥಳದಲ್ಲಿ ಗುರುವಾರ ಬೆಳಿಗ್ಗೆ ಭೀಕರ ಅವಘಡ ಸಂಭವಿಸಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್ ಮಾಹಿತಿ ಪ್ರಕಾರ, ಓಡಿಶಾ ಮೂಲದ ರೋಹಿತ್ ನಾಯಕ್ (ಸೆಂಟ್ರಿಂಗ್ ಕಾರ್ಪೆಂಟರ್ ಅಸಿಸ್ಟೆಂಟ್) ಬೆಳಿಗ್ಗೆ 8ನೇ ಮಹಡಿಯಲ್ಲಿ ಪಿಲ್ಲರ್‌ಗೆ ಸೆಂಟ್ರಿಂಗ್ ಬಾಕ್ಸ್ ಫಿಕ್ಸ್ ಮಾಡುವಾಗ ಕಾಲು ಜಾರಿ ಕೆಳಗೆ ಬಿದ್ದರು. ತೀವ್ರ ಗಾಯಗೊಂಡ ಅವರನ್ನು ತಕ್ಷಣವೇ ಸಹೋದ್ಯೋಗಿಗಳು ಹಾಗೂ ಇಂಜಿನಿಯರ್ ಮಾನಸ ರಂಜನ್ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ವೈದ್ಯರು ಆಗಮಿಸುವ ವೇಳೆಗೆ ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ದೂರುದಾರರ ಪ್ರಕಾರ, ನಿರ್ಮಾಣ ಕಂಪನಿಯ ಸೂಪರ್‌ವೈಸರ್ ನೀಲು ಸೂರೈನ್ ಮತ್ತು ಸೇಪ್ರೀ ಆಫೀಸರ್ ದಕ್ಷಿಣಮೂರ್ತಿ ಅವರು ಕಾರ್ಮಿಕರಿಗೆ ಸುರಕ್ಷತಾ ಬೆಲ್ಟ್ ಹಾಗೂ ನೆಟ್ ಅಳವಡಿಸದೇ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದೆ ಕೆಲಸ ಮಾಡಿಸಿದ್ದರಿಂದ ಈ…

ಮುಂದೆ ಓದಿ..
ಸುದ್ದಿ 

ಮದುವೆ ಸಮಾರಂಭದಲ್ಲಿ ಬಾಲಕನ ಮೇಲೆ ಹಲ್ಲೆ, ಪ್ರಾಣ ಬೆದರಿಕೆ

Taluknewsmedia.com

Taluknewsmedia.comಬೆಂಗಳೂರು:11 2025ನಗರದ ಫಣಿಸಂದ್ರ ಪ್ರದೇಶದಲ್ಲಿರುವ ಕ್ರಿಸ್ಟಲ್ ಪ್ಯಾವೆನ್ ಆವರಣದಲ್ಲಿ ನಡೆದ ಮದುವೆ ಸಮಾರಂಭದಲ್ಲಿ 13 ವರ್ಷದ ಬಾಲಕನ ಮೇಲೆ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ಸಂಪಿಗೆಹಳ್ಳಿ ಪೊಲೀಸರ ಮಾಹಿತಿಯ ಪ್ರಕಾರ, ಜುಲೈ 15ರಂದು ರಾತ್ರಿ ಮದುವೆ ಕಾರ್ಯಕ್ರಮದ ವೇಳೆ ಹಣ್ಣಿನ ಸ್ಟಾಲ್ ಬಳಿ ನಿಂತಿದ್ದ ಬಾಲಕನಿಗೆ ಬಿನ್ ರಷೀದ್ ಖಾನ್ (31) ಎಂಬುವವರು ಅವಾಚ್ಯ ಶಬ್ದಗಳಿಂದ ಬೈದು, ಮುಷ್ಟಿಯಿಂದ ತಲೆಗೆ ಮತ್ತು ಹೊಟ್ಟೆಗೆ ಹೊಡೆದು, ಚಾಕುವಿನಿಂದ ಚುಚ್ಚಲು ಯತ್ನಿಸಿದರೆಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಯ ನಂತರ ಬಾಲಕನನ್ನು ತಕ್ಷಣವೇ ಹತ್ತಿರದ ಡಾ. ಬಿ.ಆರ್. ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ನಂತರ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಯಿತು. ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಮುಂದೆ ಓದಿ..
ಸುದ್ದಿ 

ಟೆಲಿಗ್ರಾಂ ಮೂಲಕ ಆನ್‌ಲೈನ್ ವಂಚನೆ – ₹1.00 ಲಕ್ಷಕ್ಕೂ ಹೆಚ್ಚು ನಷ್ಟ

Taluknewsmedia.com

Taluknewsmedia.comಬೆಂಗಳೂರು ಆಗಸ್ಟ್ 11 2025ಟೆಲಿಗ್ರಾಂ ಆಪ್ ಮೂಲಕ ಪಾರ್ಟ್‌ಟೈಮ್ ಕೆಲಸದ ಆಫರ್ ನೀಡಿ ವ್ಯಕ್ತಿಯಿಂದ ಲಕ್ಷಕ್ಕೂ ಹೆಚ್ಚು ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. 28 ಜುಲೈ 2025ರಂದು ಬೆಳಿಗ್ಗೆ ಸುಮಾರು 10 ಗಂಟೆಯ ಸುಮಾರಿಗೆ paxfun.com ಹೆಸರಿನ ಖಾತೆಯಿಂದ ದೂರುದಾರರಿಗೆ “ಪಾರ್ಟ್‌ಟೈಮ್ ಜಾಬ್” ಕುರಿತು ಸಂದೇಶ ಬಂತು. ಗೂಗಲ್‌ನಲ್ಲಿ ವಿಮರ್ಶೆ (ರಿವ್ಯೂ) ಮಾಡಿದರೆ ಹಣ ನೀಡುವುದಾಗಿ ಭರವಸೆ ನೀಡಲಾಗಿತ್ತು. ಪ್ರಾರಂಭದಲ್ಲಿ 100 ರೂ. ದೂರುದಾರರ ಖಾತೆಗೆ ಜಮಾ ಮಾಡಲಾಯಿತು. ನಂತರ ಹೆಚ್ಚಿನ ಆದಾಯಕ್ಕಾಗಿ ಹಣ ಹಾಕಬೇಕೆಂದು ಒತ್ತಾಯಿಸಿ, hariom1427@axl, akkhankhan1119-2@okicici, yogeshendge@oksbi, bshshsvsgs@upi, ಹಾಗೂ 9951649166@rapl ಖಾತೆಗಳಿಗೆ ಒಟ್ಟು ₹1,00,500 ವರ್ಗಾಯಿಸಲಾಯಿತು. ಮತ್ತೆ ಹಣ ಹಾಕುವಂತೆ ಒತ್ತಾಯಿಸಿದಾಗ ವಂಚನೆ ನಡೆದಿದೆ ಎಂಬುದು ತಿಳಿದುಬಂದಿದ್ದು, ಗಣಪತಿ ಭಟ್ ಅವರು ತಕ್ಷಣವೇ ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ಹಾಜರಾಗಿ ದೂರು ದಾಖಲಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

ಮುಂದೆ ಓದಿ..
ಸುದ್ದಿ 

ರಾತ್ರಿ ಪಾಳಿ ( Night shift ) ತುಂಬಾ ಗಂಭೀರ ವಿಷಯ. ದಯವಿಟ್ಟು ಸಾರ್ವಜನಿಕ ಚರ್ಚೆಗೆ ಒಳಪಡಿಸಿ………

Taluknewsmedia.com

Taluknewsmedia.comರಾತ್ರಿ ಪಾಳಿ ( ನೈಟ್ ಶಿಫ್ಟ್ ) ಎಂಬ ಉದ್ಯೋಗಿಗಳ ಕೆಲಸದ ಅವಧಿಯು ಒಂದು ಯುವ ಪೀಳಿಗೆಯನ್ನೇ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮಸ್ಯೆಗಳಿಗೆ ಸಿಲುಕಿಸಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ತುಂಬಾ ದುಷ್ಪರಿಣಾಮವನ್ನು ಬೀರುತ್ತಿದೆ. ನನಗೆ ಪರಿಚಯದ ಎಲ್ಲಾ ಕ್ಷೇತ್ರಗಳ ಕಂಪನಿ, ಕಾರ್ಖಾನೆ, ಇತ್ಯಾದಿಗಳಲ್ಲಿ  ರಾತ್ರಿ ಪಾಳಿಯಲ್ಲಿ ನಿಯಮಿತವಾಗಿ ಕೆಲಸ ಮಾಡುವ ಉದ್ಯೋಗಿಗಳನ್ನು, ಆತ್ಮೀಯರನ್ನು ಮಾತನಾಡಿಸಿದೆ. ಅವರೆಲ್ಲರ ಅನಿಸಿಕೆ, ಅಭಿಪ್ರಾಯವೇನೆಂದರೆ ರಾತ್ರಿ ಪಾಳಿಯಲ್ಲಿ ಖಂಡಿತವಾಗಲೂ ನಿದ್ರಾಹೀನತೆಯಿಂದ ಕೆಲವಷ್ಟು ಸಾಮಾನ್ಯ ಮತ್ತು ದೀರ್ಘ ಖಾಯಿಲೆಗಳು ನಮ್ಮನ್ನು ಬಾಧಿಸುತ್ತಿವೆ. ಕೆಲವರಂತೂ ರಾತ್ರಿ ಪಾಳಯ ಒಂದು ದುಃಸ್ವಪ್ನ. ಅದರಿಂದಾಗಿ ನಾನು ಖಿನ್ನತೆಗೆ ಒಳಗಾಗಿ ವೈದ್ಯರ ಸಲಹೆ ಪಡೆಯುತ್ತಿದ್ದೇನೆ ಎಂದರು. ಹಲವರು ಕೌಟುಂಬಿಕ ಸಮಸ್ಯೆಗೂ ಇದು ಕಾರಣವಾಗಿದೆ ಎಂದು ಹೇಳಿದರು. ಕೆಲವು  ಕ್ಷೇತ್ರಗಳಲ್ಲಿ ರಾತ್ರಿ ಪಾಳಿಯು ಅನಿವಾರ್ಯವೇನೋ ನಿಜ. ಆದರೆ ಅದಕ್ಕೆ ಕೆಲವೊಂದು ಪರಿಹಾರ ರೂಪದ ಬದಲಾವಣೆಯು ತೀರ ಅಗತ್ಯವಾಗಿದೆ. ಇದು ಅತಿಯಾಗಿ ದೇಹ ಮತ್ತು…

ಮುಂದೆ ಓದಿ..
ಸುದ್ದಿ 

ಹೆಬ್ಬಾಳ ಸೇತುವೆ ಬಳಿ ಕಂಟೈನರ್ ಲಾರಿ ಡಿಕ್ಕಿ – ತಾಯಿ-ಮಗನಿಗೆ ಗಂಭೀರ ಗಾಯ

Taluknewsmedia.com

Taluknewsmedia.comಬೆಂಗಳೂರು: ಅಕ್ಕಿಪೇಟೆಯಿಂದ ಕೋಡಿಗೆಹಳ್ಳಿಯಲ್ಲಿರುವ ಬಂಧುವಿನ ಮನೆಗೆ ತೆರಳುತ್ತಿದ್ದ ತಾಯಿ-ಮಗನ ಸ್ಕೂಟರ್‌ಗೆ ಮಧ್ಯರಾತ್ರಿ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡ ಘಟನೆ ಆಗಸ್ಟ್ 6ರ ಮಧ್ಯರಾತ್ರಿ ನಡೆದಿದೆ. ಪೊಲೀಸರ ಪ್ರಕಾರ, ಗಾಯಗೊಂಡವರು ರಾಜೇಶ್ ಎ. (ಮಗ) ಮತ್ತು ಶಾಂತಿ (ತಾಯಿ). ಇಬ್ಬರೂ ಸ್ಕೂಟರ್ (KA-01-JC-6720) ನಲ್ಲಿ ಬಿಬಿ ರಸ್ತೆ ಮಾರ್ಗವಾಗಿ ಹೆಬ್ಬಾಳ ನ್ಯಾರೋ ಬ್ರಿಡ್ಜ್ ಹತ್ತಿರ ಕೋಡಿಗೆಹಳ್ಳಿಯ ಕಡೆಗೆ ತೆರಳುತ್ತಿದ್ದಾಗ, ಸುಮಾರು 1 ಗಂಟೆಗೆ ಹಿಂಬದಿಯಿಂದ ಬಂದ ಕಂಟೈನರ್ ಲಾರಿ (RJ-14-GG-8561) ಅತಿವೇಗ ಹಾಗೂ ಅಜಾಗರೂಕತೆಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ, ಸ್ಕೂಟರ್ ಸವಾರರು ರಸ್ತೆ ಮೇಲೆ ಬಿದ್ದು, ಲಾರಿಯ ಚಕ್ರ ಕಾಲುಗಳ ಮೇಲೆ ಹರಿದ ಪರಿಣಾಮ ರಾಜೇಶ್ ಎ. ಅವರಿಗೆ ಎರಡೂ ಕಾಲು, ಎಡ ಕೈ ಹಾಗೂ ಹೊಟ್ಟೆ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಎಡ ಕಾಲಿನ ಮಂಡಿಯ ಕೆಳಭಾಗವನ್ನು ಶಸ್ತ್ರಚಿಕಿತ್ಸೆಯಿಂದ ತೆಗೆದುಹಾಕಲಾಗಿದೆ. ಶಾಂತಿ…

ಮುಂದೆ ಓದಿ..
ಸುದ್ದಿ 

ರೂಪೇನ ಅಗ್ರಹಾರದ ಯುವತಿ ನಾಪತ್ತೆ

Taluknewsmedia.com

Taluknewsmedia.comಬೆಂಗಳೂರು, ಆ.09— ನಗರದ ರೂಪೇನ ಅಗ್ರಹಾರ ಪ್ರದೇಶದ 25 ವರ್ಷದ ಯುವತಿ ಸುಶ್ಮಿತಾ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಶ್ರೀನಿವಾಸ್ ಬಿನ್ ವೆಂಕಟರಮಣಪ್ಪ (ತರಕಾರಿ ವ್ಯಾಪಾರಿ) ಅವರು ಪೊಲೀಸರಿಗೆ ನೀಡಿದ ಮಾಹಿತಿಯ ಪ್ರಕಾರ, ಸುಶ್ಮಿತಾ ಪ್ರತಿದಿನ ಬೆಳಿಗ್ಗೆ 8.30ಕ್ಕೆ ಕೆಲಸಕ್ಕೆ ತೆರಳಿ ರಾತ್ರಿ 8 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದಳು. ಆಗಸ್ಟ್ 7 ರಂದು ಬೆಳಿಗ್ಗೆ “ಕೆಲಸಕ್ಕೆ ಹೋಗಿ ಬರುತ್ತೇನೆ” ಎಂದು ಹೇಳಿ ಮನೆಯಿಂದ ಹೊರಟ ಸುಶ್ಮಿತಾ, ರಾತ್ರಿ ಮನೆಗೆ ವಾಪಸ್ಸಾಗಲಿಲ್ಲ. ಕುಟುಂಬಸ್ಥರು ಅವಳ ಮೊಬೈಲ್ ನಂಬರುಗಳಿಗೆ (7904224909, 8884864909) ಕರೆ ಮಾಡಿದರೂ, ಫೋನ್ ಸ್ವಿಚ್ ಆಫ್ ಆಗಿತ್ತು. ಸಂಬಂಧಿಕರು, ಸ್ನೇಹಿತರು ಹಾಗೂ ಕೆಲಸ ಮಾಡುವ ಕಚೇರಿಯಲ್ಲಿ ವಿಚಾರಿಸಿದಾಗಲೂ ಅವಳ ಬಗ್ಗೆ ಯಾವುದೇ ಮಾಹಿತಿ ದೊರಕಲಿಲ್ಲ. ಎಲ್ಲೆಡೆ ಹುಡುಕಾಟ ನಡೆಸಿದರೂ ಸುಳಿವು ಸಿಗದೆ ಹೋದ ಹಿನ್ನೆಲೆಯಲ್ಲಿ ತಡವಾಗಿ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಟ ಆರಂಭಿಸಿದ್ದಾರೆ.

ಮುಂದೆ ಓದಿ..
ಸುದ್ದಿ 

ಸೇಲಂ ಕೈದಿ ಪತ್ನಿಯಿಂದ ಗಂಭೀರ ಆರೋಪ – ಅಪಹರಣ, ಕೊಲೆ ಪ್ರಕರಣದಲ್ಲಿ ಗಂಡನಿಗೆ ಸುಳ್ಳು ಆರೋಪ?

Taluknewsmedia.com

Taluknewsmedia.comಬೆಂಗಳೂರು, ಆಗಸ್ಟ್ 9:ಸೇಲಂ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶ್ರೀನಿವಾಸ್ ಎಂಬುವವರ ಪತ್ನಿ ಯಲ್ಲಮ್ಮ ಅವರು ತಮ್ಮ ಗಂಡನ ವಿರುದ್ಧ ದಾಖಲಾಗಿರುವ ಪ್ರಕರಣ ಸುಳ್ಳು ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಯಲ್ಲಮ್ಮ ಅವರು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ದೂರು (ಪಿ.ಸಿ.ಆರ್ 265/2025) ಪ್ರಕಾರ, 17-09-2024ರ ರಾತ್ರಿ ಸರ್ಜಾಪುರ ರಸ್ತೆ ಚಂಬೇನಹಳ್ಳಿ ಗೇಟ್ ಬಳಿ ಶ್ರೀನಿವಾಸ್ ಅವರ ಟಾಟಾ ಏಸ್ ವಾಹನಕ್ಕೆ ಮತ್ತೊಂದು ಟಾಟಾ ಏಸ್ ಡಿಕ್ಕಿ ಹೊಡೆಸಲಾಗಿದ್ದು, ನಂತರ 4–5 ಜನರು ಅವರನ್ನು ಬಲವಂತವಾಗಿ ಕಾರಿನಲ್ಲಿ ಹತ್ತಿಸಿ ಚಿಕ್ಕ ತಿರುಪತಿ ರಸ್ತೆಯ ವಿಲ್ಲಾಕ್ಕೆ ಕರೆದೊಯ್ದಿದ್ದಾರೆ. ಆರೋಪಿಯರಲ್ಲೊಬ್ಬನಾದ ರೇವ (ರೋಹಿತ್ ಕುಮಾರ್) ಅವರು, “ನಿನ್ನ ಚಿಕ್ಕ ಮಗ ಮನು ನಮ್ಮ ಹಿಡಿತದಲ್ಲಿದ್ದಾನೆ, ನಾನು ಹೇಳಿದಂತೆ ಕೇಳಬೇಕು” ಎಂದು ಬೆದರಿಕೆ ಹಾಕಿ, ಮುಂದಿನ ದಿನ ದೇವಸ್ಥಾನದ ಬಳಿ ಮಾತುಕತೆಯ ವೇಳೆ ರೇವಂತ್ ಎಂಬ ಯುವಕನನ್ನು ಸಹ…

ಮುಂದೆ ಓದಿ..
ಸುದ್ದಿ 

ಕೆ.ಜಿ.ಹಳ್ಳಿಯಲ್ಲಿ ಮನೆಯ ಬೀಗ ಒಡೆದು ₹1.4 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಕಳ್ಳತನ

Taluknewsmedia.com

Taluknewsmedia.comಬೆಂಗಳೂರು: ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ, ಸುಮಾರು ₹1.4 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳನ್ನು ಕಳ್ಳರು ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ಶಕ್ತಿ ನಾರಾಯಣರವರ ತಮ್ಮ ಮಾವ ತಿರುಪತಿ ಅವರ ಮನೆಯಿಂದ ಕೆಲ ಅಂತರದಲ್ಲಿ ವಾಸವಾಗಿದ್ದು, ಇಬ್ಬರೂ ಒಂದೇ ರಸ್ತೆಯಲ್ಲಿದ್ದರು. ಜುಲೈ 29ರಂದು ಮಾವನವರು ತಿರುಪತಿಯಲ್ಲಿ ನಿಧನರಾಗಿದ್ದರಿಂದ, ಅವರ ಕುಟುಂಬದವರು ತಮಿಳುನಾಡಿಗೆ ಅಂತ್ಯಕ್ರಿಯೆಗೆ ತೆರಳಿ, ಮನೆಗೆ ಬೀಗ ಹಾಕಿ ಹೋಗಿದ್ದರು. ಕುಟುಂಬವೂ ಅಂತ್ಯಕ್ರಿಯೆಗೆ ತೆರಳಿತ್ತು. ಆಗಸ್ಟ್ 8ರಂದು ಸಂಜೆ 4 ಗಂಟೆ ವೇಳೆಗೆ, ಪತ್ನಿ ಮಾವನ ಮನೆಗೆ ತೆರಳಿದಾಗ, ಬಾಗಿಲಿನ ಬೀಗ ಒಡೆದು ಒಳ ನುಗ್ಗಿರುವುದು ಗಮನಕ್ಕೆ ಬಂದಿದೆ. ಮನೆಯ ಒಳಭಾಗ ಪರಿಶೀಲಿಸಿದಾಗ, ಲಕ್ಷ್ಮೀ ಕಾಯಿನ್ಮಳ, ಎರಡು ಜೊಡಿ ಮಕ್ಕಳ ಚಿನ್ನದ ಓಲೆಗಳು (ಒಟ್ಟು 20 ಗ್ರಾಂ), ಬೆಳ್ಳಿಯ ಕಾಲು ಚೈನ್‌ಗಳು 4 ಜೊಡಿ ಹಾಗೂ 500…

ಮುಂದೆ ಓದಿ..