ಸುದ್ದಿ 

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡುಗು ಮಿಂಚು ಸಹಿತ ಮಳೆ ಆರ್ಭಟ ಮುಂದುವರಿದಿದ್ದು

Taluknewsmedia.com

Taluknewsmedia.comಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡುಗು ಮಿಂಚು ಸಹಿತ ಮಳೆ ಆರ್ಭಟ ಮುಂದುವರಿದಿದ್ದು, ಕಳಸ ಪಟ್ಟಣದಲ್ಲಿ ಸಿಡಿಲು ಬಡಿದ ಪರಿಣಾಮ ಎಲೆಕ್ಟ್ರೀಷಿಯನ್ ಒಬ್ಬರು ದುರ್ಮರಣ ಹೊಂದಿರುವ ಘಟನೆ ವರದಿಯಾಗಿದೆ. ಮೃತರನ್ನು ಮೊಹಮ್ಮದ್ ಇಸ್ಮಾಯಿಲ್ (42) ಎಂದು ಗುರುತಿಸಲಾಗಿದೆ. ಅವರು ಕಳಸ ಪಟ್ಟಣದ ನಿವಾಸಿಯಾಗಿದ್ದು, ನಿರ್ಮಾಣ ಹಂತದಲ್ಲಿದ್ದ ಮನೆಯೊಂದರಲ್ಲಿ ವಿದ್ಯುತ್ ವೈರ್ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಸಂಜೆ ವೇಳೆಯಲ್ಲಿ ಮಳೆ ಜೋರಾಗಿ ಸುರಿಯುತ್ತಿದ್ದ ವೇಳೆ ಅಕಸ್ಮಾತ್ ಸಿಡಿಲು ಬಡಿದು ಇಸ್ಮಾಯಿಲ್ ಅವರಿಗೆ ತೀವ್ರ ಗಾಯಗಳಾಗಿದ್ದು, ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಘಟನೆಯ ನಂತರ ಕಳಸ ಪಟ್ಟಣದ ಜನರು ಬೆಚ್ಚಿಬಿದ್ದಿದ್ದು, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಗುಡುಗು ಮಿಂಚು ಸಹಿತ ಮಳೆ ಸುರಿಯುತ್ತಿದ್ದು, ಅಧಿಕಾರಿಗಳು ಸಾರ್ವಜನಿಕರಿಗೆ ಮಳೆ ಮತ್ತು…

ಮುಂದೆ ಓದಿ..
ಸುದ್ದಿ 

ಚಿತ್ರದುರ್ಗದಲ್ಲಿ ಲೋಕಾಯುಕ್ತ ಸಿಡಿಲಿನ ದಾಳಿ – ಕೃಷಿ ಇಲಾಖೆಯ ಎಡಿ ಚಂದ್ರಕುಮಾರ್ ಮನೆ ಸೇರಿ 3 ಕಡೆ ಶೋಧ

Taluknewsmedia.com

Taluknewsmedia.comಚಿತ್ರದುರ್ಗದಲ್ಲಿ ಲೋಕಾಯುಕ್ತ ಸಿಡಿಲಿನ ದಾಳಿ – ಕೃಷಿ ಇಲಾಖೆಯ ಎಡಿ ಚಂದ್ರಕುಮಾರ್ ಮನೆ ಸೇರಿ 3 ಕಡೆ ಶೋಧ ಬೆಳ್ಳಂ ಬೆಳಿಗ್ಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಸಿಡಿಲಿನ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕೃಷಿ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಚಂದ್ರಕುಮಾರ್ ಎಡಿ ಅವರ ವಿರುದ್ಧ ಲೋಕಾಯುಕ್ತ ತನಿಖೆ ಪ್ರಾರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಮೂರು ಕಡೆ ಏಕಕಾಲದಲ್ಲಿ ಶೋಧ ನಡೆಸಿದೆ. ದಾಳಿ ನಡೆದ ಸ್ಥಳಗಳು: ತರಳಬಾಳು ನಗರದ ಮನೆ, ಹೊಳಲ್ಕೆರೆ ತಾಲೂಕು ಕಚೇರಿ, ಟಿ.ನುಲೇನೂರು ಗ್ರಾಮದ ನಿವಾಸ. ಲೋಕಾಯುಕ್ತ ಅಧಿಕಾರಿಗಳ ಪ್ರಾಥಮಿಕ ಮಾಹಿತಿಯ ಪ್ರಕಾರ, ಚಂದ್ರಕುಮಾರ್ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪಗಳು ಕೇಳಿಬಂದಿದ್ದು, ಅದರ ಆಧಾರದ ಮೇಲೆ ಶೋಧ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಶೋಧ ಕಾರ್ಯಾಚರಣೆಯ ವೇಳೆ ಅಧಿಕಾರಿಗಳು ವಿವಿಧ ದಾಖಲೆಗಳು, ಬ್ಯಾಂಕ್ ಪಾಸ್‌ಬುಕ್‌ಗಳು, ಆಸ್ತಿ ದಾಖಲೆಗಳು,…

ಮುಂದೆ ಓದಿ..
ಸುದ್ದಿ 

ಕೋಲಾರ: ಪೋಕ್ಸೋ ಕೇಸ್ ಹೆಸರಿನಲ್ಲಿ ಹಣ ಸುಲಿಗೆ – ಮಕ್ಕಳ ಸಹಾಯವಾಣಿ ಸಂಯೋಜಕ ಬಂಧನ

Taluknewsmedia.com

Taluknewsmedia.comಕೋಲಾರ: ಪೋಕ್ಸೋ ಕೇಸ್ ಹೆಸರಿನಲ್ಲಿ ಹಣ ಸುಲಿಗೆ – ಮಕ್ಕಳ ಸಹಾಯವಾಣಿ ಸಂಯೋಜಕ ಬಂಧನ ಕೋಲಾರದಲ್ಲಿ ಮಕ್ಕಳ ಸಹಾಯವಾಣಿ ಸಂಯೋಜಕ ಕಲ್ಯಾಣ್ ಕುಮಾರ್ ಪೋಕ್ಸೋ ಕೇಸ್ ಹೆಸರಿನಲ್ಲಿ ಹಣಕ್ಕೆ ಸುಲಿಗೆ ಹಾಕಿದ ಆರೋಪದಲ್ಲಿ ಬಂಧಿತನಾಗಿ ಆತಂಕ ಉಂಟುಮಾಡಿದೆ. ಕ್ಯಾಸಂಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ಈ ಪ್ರಕರಣದಲ್ಲಿ ತ್ವರಿತ ತನಿಖೆ ನಡೆಯುತ್ತಿದೆ. ಪೊಲೀಸರು ತಿಳಿಸಿದ್ದಾರೆ, 17 ವರ್ಷ 7 ತಿಂಗಳ ಬಾಲಕಿ ಗರ್ಭಿಣಿಯಾಗಿದ್ದು, ಬಾಲ್ಯ ವಿವಾಹ ಸಂಬಂಧ ದೂರು ದಾಖಲಾಗಿತ್ತು. ಬಾಲಕಿ ಕುಟುಂಬಸ್ಥರಿಂದ ಸಹಾಯವಾಣಿಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಲ್ಯಾಣ್ ಕುಮಾರ್ ಪೋಕ್ಸೋ ಕೇಸ್ ಹೆಸರಿನಲ್ಲಿ ಮೊತ್ತದ 50,000 ರೂ. ಬೇಡಿಕೆ ಇಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಆರೋಪಿ ಕಲ್ಯಾಣ್ ಕುಮಾರ್ ಮೊದಲ ಹಂತದಲ್ಲಿ 30,000 ರೂ. ಪಡೆಯಲು ಯಶಸ್ವಿಯಾಗಿ ಒತ್ತಡ ಹೇರಿದ, ಉಳಿದ 20,000 ರೂ. ಪಡೆಯಲು ಬೆದರಿಕೆ ನೀಡಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ.…

ಮುಂದೆ ಓದಿ..
ಸುದ್ದಿ 

ಪ್ರಿಯತಮೆಗಾಗಿ ಮನೆಯಲ್ಲಿ ಕಳ್ಳತನ: ಆರೋಪಿ ಬಂಧನ

Taluknewsmedia.com

Taluknewsmedia.comಪ್ರಿಯತಮೆಗಾಗಿ ಮನೆಯಲ್ಲಿ ಕಳ್ಳತನ: ಆರೋಪಿ ಬಂಧನ ಹೆಬ್ಬಗೋಡಿ: ಪ್ರಿಯತಮೆಗಾಗಿ ಮನೆಯಲ್ಲಿ ಕಳ್ಳತನ ಮಾಡುವಲ್ಲಿ ಆರೋಪಿ ಶ್ರೇಯಸ್ (22) ಬಂಧಿತನಾಗಿದ್ದಾನೆ ಎಂದು ಹೆಬ್ಬಗೋಡಿ ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದುದಾಗಿ ತನಿಖೆ ದಾಖಲೆಗಳು ಹೇಳಿವೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ, ಶ್ರೇಯಸ್ ತನ್ನ ಪ್ರಿಯತಮೆಯ ಚಿನ್ನದ ಓಲೆ ಮಾಡಿಸಿಕೊಡುವಂತೆ ಕೇಳಿದ್ದ ಕಾರಣ, ಹರೀಶ್ ಎಂಬವರ ಮನೆಯಲ್ಲಿ ಕಳ್ಳತನ ನಡೆಸಿದ ಬಗ್ಗೆ ವಿಚಾರಣೆ ನಡೆಯುತ್ತಿದೆ. ಪೊಲೀಸರು ಆರೋಪಿ ಶ್ರೇಯಸ್‌ನಿಂದ 415 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ನಿಮ್ಮೆಲ್ಲರಿಗೂ ಎಚ್ಚರಿಕೆ: ಪ್ರಿಯತೆಯಿಗಾಗಿ ಕೂಡ ಕಾನೂನು ತಲೆತಗಿಸುವಂತೆ ಕಳ್ಳತನ ಮಾಡುವುದು ಗಂಭೀರ ಅಪರಾಧ. ಪೊಲೀಸರು ಪ್ರಕರಣದ ಮುಂದಿನ ವಿಚಾರಣೆ ಮುಂದುವರಿಸುತ್ತಿದ್ದಾರೆ.

ಮುಂದೆ ಓದಿ..
ಅಂಕಣ 

ಗೋವಾ, ದಿವ್ಯಾಂಗ ಚೇತನರು ಮತ್ತು ಮಾನವೀಯ ಮೌಲ್ಯಗಳು……

Taluknewsmedia.com

Taluknewsmedia.comಗೋವಾ, ದಿವ್ಯಾಂಗ ಚೇತನರು ಮತ್ತು ಮಾನವೀಯ ಮೌಲ್ಯಗಳು…… ಭಾರತದ ವಿದೇಶ ( ಫಾರಿನ್ ) ಗೋವಾ,ಕಡಲ ತೀರದ ಪರ್ಯಾಯ ದ್ವೀಪ ಗೋವಾ,ಮೋಜು, ಮಸ್ತಿ, ಮನರಂಜನೆ, ಕ್ಯಾಸಿನೋಗಳ ಪ್ರದೇಶ ಗೋವಾ,ದೇಶದ ಅತ್ಯಂತ ದುಬಾರಿ ಬೆಲೆಯ ಪ್ರವಾಸಿ ಕೇಂದ್ರ ಗೋವಾ,ಭ್ರಷ್ಟ, ದುಷ್ಟ ದುಡ್ಡಿನ ಪ್ರದರ್ಶನದ ಮಜಾ ನಗರಿ ಗೋವಾ,ಪ್ರವಾಸಿಗರ ರಜಾ ದಿನಗಳ ಸುಂದರ ತಾಣ ಗೋವಾ,ಭಾರತದ ಸುರಕ್ಷತೆಯ, ಸ್ವಚ್ಛ ನಗರಗಳಲ್ಲಿ ಒಂದು ಗೋವಾ, ಪೋರ್ಚುಗೀಸರಿಂದ ಸುಮಾರು 500 ವರ್ಷಗಳಷ್ಟು ದೀರ್ಘಕಾಲದವರೆಗೆ ಆಡಳಿತಕ್ಕೊಳಪಟ್ಟ ಮತ್ತು ಈಗಲೂ ಅದರ ಕುರುಹುಗಳ ಸಂಕೇತವಾಗಿ ಉಳಿದಿರುವ ಹೆರಿಟೇಜ್ ಸಿಟಿ ಗೋವಾ,ಸಮುದ್ರದ ಜಲಚರಗಳ ಖಾದ್ಯದ, ಮದ್ಯಗಳ ಪಾನಪ್ರಿಯರ ಸ್ವರ್ಗ ಗೋವಾ,ಸಿನಿಮಾ, ಸಾಹಿತ್ಯ, ಸಂಗೀತ ಮುಂತಾದ ಲಲಿತಕಲೆಗಳ ಉತ್ಸವದ ನಗರ ಗೋವಾ. ಇಂತಹ ಗೋವಾದಲ್ಲಿ ಅಂತರಾಷ್ಟ್ರೀಯ ದಿವ್ಯಾಂಗ ಚೇತನರ ಮೂರನೇ ಅಂತರಾಷ್ಟ್ರೀಯ ಸಮ್ಮೇಳನ ಇದೇ ಅಕ್ಟೋಬರ್ ಒಂಬತ್ತರಿಂದ ಹನ್ನೆರಡರವರೆಗೆ ( 9th to 12th ) ಎಂಟರ್ಟೈನ್ಮೆಂಟ್ ಸೊಸೈಟಿ…

ಮುಂದೆ ಓದಿ..
ಸುದ್ದಿ 

ಪ್ರೇಮದ ಹೆಸರಿನಲ್ಲಿ ಸಂಬಂಧ ಕಳೆದುಕೊಂಡ ತಂದೆ – ಮಗಳ ತಿಥಿ ಮಾಡಿದ ಘಟನೆ

Taluknewsmedia.com

Taluknewsmedia.comಪ್ರೇಮದ ಹೆಸರಿನಲ್ಲಿ ಸಂಬಂಧ ಕಳೆದುಕೊಂಡ ತಂದೆ – ಮಗಳ ತಿಥಿ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದ ಒಂದು ಘಟನೆ ಈಗ ಸಮಾಜದ ಚಿಂತನೆಗೆ ಕಾರಣವಾಗಿದೆ. ಪ್ರೇಮ ಸಂಬಂಧದ ಹಿನ್ನೆಲೆಯಿಂದ ಮಗಳು ಮನೆ ಬಿಟ್ಟು ಹೋದ ಕಾರಣಕ್ಕೆ ಆಕ್ರೋಶಗೊಂಡ ತಂದೆ ತನ್ನ ಜೀವಂತ ಮಗಳ ತಿಥಿ ನೆರವೇರಿಸಿದ್ದಾರೆ. ನಾಗರಾಳ ಗ್ರಾಮದ ಯುವತಿ, ಅದೇ ಗ್ರಾಮದ ಯುವಕನೊಂದಿಗೆ ಪ್ರೇಮ ಸಂಬಂಧ ಬೆಳೆಸಿಕೊಂಡಿದ್ದು, ಇತ್ತೀಚೆಗೆ ಆತನೊಂದಿಗೆ ಮನೆ ಬಿಟ್ಟು ಹೋದಳು. ಯುವಕ ಸ್ಥಳೀಯ ತಹಸೀಲ್ದಾರ್ ಕಚೇರಿಯಲ್ಲಿ ಗ್ರಾಮ ಸೇವಕನಾಗಿ ಕೆಲಸ ಮಾಡುತ್ತಿದ್ದಾನೆ. ಯುವತಿಯ ನಾಪತ್ತೆಯ ಕುರಿತು ತಂದೆ ರಾಯಬಾಗ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ತನಿಖೆಯ ವೇಳೆ ಮಗಳು ತನ್ನ ಸ್ವಂತ ಇಚ್ಛೆಯಿಂದ ಯುವಕನೊಂದಿಗೆ ತೆರಳಿರುವುದು ದೃಢಪಟ್ಟಿತು. ಕುಟುಂಬದ ನಾಲ್ಕು ಹೆಣ್ಣುಮಕ್ಕಳ ಪೈಕಿ ಕಿರಿಯಳಾದ ಈ ಮಗಳ ನಡೆ ತಂದೆಗೆ ಭಾರೀ ನೋವನ್ನುಂಟುಮಾಡಿತು.…

ಮುಂದೆ ಓದಿ..
ಸುದ್ದಿ 

ಐಪಿಎಲ್‌ ಮಾದರಿಯಲ್ಲಿ ಕಂಬಳ ಆಯೋಜನೆಗೆ ತಯಾರಿ.

Taluknewsmedia.com

Taluknewsmedia.comಐಪಿಎಲ್‌ ಮಾದರಿಯಲ್ಲಿ ಕಂಬಳ ಆಯೋಜನೆಗೆ ತಯಾರಿ. ಕರ್ನಾಟಕ ಸರ್ಕಾರದಿಂದ ರಾಜ್ಯ ಕ್ರೀಡೆಯ ಮಾನ್ಯತೆ ಪಡೆದಿರುವ ಕರಾವಳಿಯ ಜನಪದ ಕ್ರೀಡೆ ಕಂಬಳ ಇದೀಗ ಜಾಗತಿಕ ಮೇಳೆಗೆ ಕಾಲಿಡಲು ಸಜ್ಜಾಗಿದೆ. ಐಪಿಎಲ್‌ (ಇಂಡಿಯನ್ ಪ್ರೀಮಿಯರ್ ಲೀಗ್) ಮಾದರಿಯಲ್ಲಿಯೇ ಅದ್ಧೂರಿಯಾಗಿ ಕಂಬಳ ಆಯೋಜನೆ ಮಾಡುವ ಯೋಜನೆ ರೂಪುಗೊಂಡಿದೆ. ಈ ನೂತನ ಪ್ರಯತ್ನದ ಹಿಂದಿರುವುದು ರಾಜ್ಯ ಕಂಬಳ ಅಸೋಸಿಯೇಷನ್‌, ಇದರ ಅಧ್ಯಕ್ಷ ಡಾ. ಐಕಳಬಾವ ದೇವಿಪ್ರಸಾದ್‌ ಶೆಟ್ಟಿ ಶನಿವಾರ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಸರ್ಕಾರದ ಅನುದಾನ ಅತ್ಯಲ್ಪ… ಪ್ರಸಕ್ತ ಕರಾವಳಿಯಲ್ಲಿ ಪ್ರತಿ ವರ್ಷ ಸುಮಾರು 25 ಕಂಬಳಗಳು ನಡೆಯುತ್ತಿವೆ. ಆದರೆ ಸರ್ಕಾರದಿಂದ ಸಿಗುವ ಅನುದಾನ ತುಂಬಾ ಅಲ್ಪವಾಗಿದೆ. ಕಳೆದ ವರ್ಷ ₹5 ಲಕ್ಷ ನೀಡಿದ್ದರೆ, ಈ ಬಾರಿ ಕೇವಲ ₹2 ಲಕ್ಷಕ್ಕೆ ಸೀಮಿತವಾಗಿದೆ. ಒಂದು ಕಂಬಳ ನಡೆಸಲು ₹25 ರಿಂದ ₹40 ಲಕ್ಷ ವೆಚ್ಚವಾಗುತ್ತದೆ. ಈ ಮೊತ್ತವನ್ನು…

ಮುಂದೆ ಓದಿ..
ಅಂಕಣ 

ತ್ರಿಭಾಷಾ ಸೂತ್ರ ಎಷ್ಟು ಸರಿ……..ದ್ವಿಭಾಷಾ ಸೂತ್ರ ಉತ್ತಮವೇ……

Taluknewsmedia.com

Taluknewsmedia.comತ್ರಿಭಾಷಾ ಸೂತ್ರ ಎಷ್ಟು ಸರಿ……..ದ್ವಿಭಾಷಾ ಸೂತ್ರ ಉತ್ತಮವೇ…… ಕನ್ನಡ : ರಾಜ್ಯ ಭಾಷೆ….ಹಿಂದಿ : ರಾಷ್ಟ್ರ ಭಾಷೆ….ಇಂಗ್ಲೀಷ್ : ಅಂತರರಾಷ್ಟ್ರೀಯ ಭಾಷೆ….. ಈ ಭಾಷಾ ಸೂತ್ರ ಸರಿಯೇ ?ಇದು ಸಂವಿಧಾನಾತ್ಮಕವೇ ?ಇದು ವಾಸ್ತವವೇ ?ಪ್ರಾಯೋಗಿಕವೇ ?ಕನ್ನಡದ ಹಿತಕ್ಕೆ ಇದು ಒಳ್ಳೆಯದೇ ಅಥವಾ ಮಾರಕವೇ ?ಭಾರತದ ಒಕ್ಕೂಟ ವ್ಯವಸ್ಥೆಗೆ ಇದು ಹಿತವೇ ಅಥವಾ ಅಪಾಯಕಾರಿಯೇ ?ಭಾಷಾ ಅಸ್ಮಿತೆ ಮತ್ತು ದೇಶದ ಅಸ್ಮಿತೆಗೆ ಇದು ಪೂರಕವೇ ವಿರುದ್ಧವೇ ?ಸಾಂಸ್ಕೃತಿಕ, ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಾಮರಸ್ಯಕ್ಕೆ ಉಪಕಾರವೇ ? ವಿನಾಶವೇ ?…. ನೀವು ಅಪ್ಪಟ ಕನ್ನಡ ಅಭಿಮಾನಿಗಳೇ ಆಗಿರಲಿ,ನೀವು ಭಾವುಕ ದೇಶಭಕ್ತರೇ ಆಗಿರಲಿ,ನೀವು ಹಿಂದಿ ಭಾಷೆಯ ಪಂಡಿತರೇ ಆಗಿರಲಿ,ನೀವು ಸಹಜ ಸ್ವಾಭಾವಿಕ ಸಾಮಾನ್ಯ ಪ್ರಜೆಗಳೇ ಆಗಿರಲಿ ಮತ್ತು ಏನೇ ಆಗಿರಲಿ ಈ ವಿಷಯದ ಬಗ್ಗೆ ಸ್ಪಷ್ಟ ಅಭಿಪ್ರಾಯ ರೂಪಿಸಿಕೊಳ್ಳುವ ಮೊದಲು ಕೆಲವು ಪ್ರಶ್ನೆಗಳಿಗೆ ಸೂಕ್ತ ಉತ್ತರ ಹುಡುಕಿಕೊಂಡಾಗ ಮಾತ್ರ ಈ…

ಮುಂದೆ ಓದಿ..
ಸುದ್ದಿ 

ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯದ 9,337 ಶಾಲೆಗಳ ಅಡುಗೆ ಮನೆಗಳಿಗೆ 21.55 ಕೋಟಿ ರೂ. ಅನುದಾನ

Taluknewsmedia.com

Taluknewsmedia.comಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯದ 9,337 ಶಾಲೆಗಳ ಅಡುಗೆ ಮನೆಗಳಿಗೆ 21.55 ಕೋಟಿ ರೂ. ಅನುದಾನ ಬೆಂಗಳೂರು:ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ಯೋಜನೆಯಡಿ ರಾಜ್ಯದ 9,337 ಸರ್ಕಾರಿ ಶಾಲೆಗಳ ಅಡುಗೆ ಮನೆಗಳನ್ನು ಆಧುನೀಕರಿಸಲು ಸರ್ಕಾರ 21.55 ಕೋಟಿ ರೂ. ಅನುದಾನ ಬಿಡುಗಡೆಗೆ ಅನುಮೋದನೆ ನೀಡಿದೆ. ಶಾಲೆಗಳಲ್ಲಿ ಹಾಗೂ ಸ್ವಯಂಸೇವಾ ಸಂಸ್ಥೆಗಳ ಮೂಲಕ ಬಿಸಿಯೂಟ ತಯಾರಿಸಲು ಈವರೆಗೆ ಅಲ್ಯುಮಿನಿಯಂ ಪಾತ್ರೆಗಳನ್ನು ಬಳಸಲಾಗುತ್ತಿತ್ತು. ಆದರೆ ಇವು ದೀರ್ಘಾವಧಿಯಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಅಲ್ಯುಮಿನಿಯಂ ಪಾತ್ರೆಗಳ ಬಳಕೆಯನ್ನು ಹಂತ ಹಂತವಾಗಿ ಕಡಿಮೆ ಮಾಡಲು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 2025-26ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ, ಆಯ್ದ 9,337 ಶಾಲೆಗಳಿಗೆ ಹೊಸ ಸ್ಟೈನ್‌ಲೆಸ್‌ ಸ್ಟೀಲ್‌ ಪಾತ್ರೆಗಳು ಹಾಗೂ ಇತರೆ ಅಡುಗೆ ಪರಿಕರಗಳನ್ನು ಖರೀದಿಸಲು ಕ್ರಮ ಕೈಗೊಂಡಿದೆ.…

ಮುಂದೆ ಓದಿ..
ಸುದ್ದಿ 

ಬಿಜೆಪಿ ಶಾಸಕ ಮುನಿರತ್ನ ಆರೋಪಗಳಿಗೆ ಕುಸುಮಾ ಹನುಮಂತರಾಯಪ್ಪ ತೀವ್ರ ಪ್ರತಿಕ್ರಿಯೆ

Taluknewsmedia.com

Taluknewsmedia.comಬಿಜೆಪಿ ಶಾಸಕ ಮುನಿರತ್ನ ಆರೋಪಗಳಿಗೆ ಕುಸುಮಾ ಹನುಮಂತರಾಯಪ್ಪ ತೀವ್ರ ಪ್ರತಿಕ್ರಿಯೆ ಬಿಜೆಪಿ ಶಾಸಕ ಮುನಿರತ್ನ ಅವರ ಆರೋಪಗಳಿಗೆ ಆರ್‌ಆರ್ ನಗರದ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರು ಮೊದಲ ಬಾರಿಗೆ ಬಾಯ್ಬಿಟ್ಟಿದ್ದಾರೆ. “ಜನರಿಗೆ ಸ್ಪಂದಿಸುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಾರ್ಯಕ್ರಮವನ್ನು ಹಾಳುಮಾಡುವ ನಿಟ್ಟಿನಲ್ಲಿ ಮುನಿರತ್ನ ರಾಜಕೀಯ ಆಟವಾಡುತ್ತಿದ್ದಾರೆ,” ಎಂದು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಪಾರ್ಕ್‌ಗಳಿಗೆ ಭೇಟಿ ನೀಡಿ ನಾಗರಿಕರ ಅಸಮಾಧಾನ, ಬೇಡಿಕೆ ಹಾಗೂ ಸಮಸ್ಯೆಗಳನ್ನು ನೇರವಾಗಿ ತಿಳಿದುಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಈ ಸಾರ್ವಜನಿಕ ಕಾರ್ಯಕ್ರಮದ ಕುರಿತು ಪತ್ರಿಕೆಗಳ ಮೂಲಕ ಜಾಹೀರಾತು ನೀಡಲಾಗಿದ್ದು, ಸ್ಥಳೀಯ ಶಾಸಕರಿಗೂ ಆಹ್ವಾನ ಕಳುಹಿಸಲಾಗಿದೆ ಎಂದು ಅವರು ತಿಳಿಸಿದರು. “ಆದರೆ ಇಲ್ಲಿ ನಡೆಯುತ್ತಿರುವ ಜನಪರ ಕಾರ್ಯಕ್ರಮಕ್ಕೆ ಬೆಂಬಲ ನೀಡುವ ಬದಲು, ಬಿಜೆಪಿ ಶಾಸಕ ಮುನಿರತ್ನ ಅವರು ಕಾರ್ಯಕ್ರಮವನ್ನು ಅವಮಾನಿಸುವ ಕೆಲಸ ಮಾಡಿದ್ದಾರೆ. ಜನರ ಅಭಿವೃದ್ಧಿಗೆ ಅಡ್ಡಿಯಾಗುವ…

ಮುಂದೆ ಓದಿ..