ಸುದ್ದಿ 

ಚಿಕ್ಕಮಗಳೂರು : ಹೋಂಸ್ಟೇ ಬಾತ್‌ರೂಮ್‌ನಲ್ಲಿ ಯುವತಿಯ ಅನುಮಾನಾಸ್ಪದ ಸಾವು – ಪೊಲೀಸರ ತನಿಖೆ ಮುಂದುವರಿಕೆ

Taluknewsmedia.com

Taluknewsmedia.comಚಿಕ್ಕಮಗಳೂರು : ಹೋಂಸ್ಟೇ ಬಾತ್‌ರೂಮ್‌ನಲ್ಲಿ ಯುವತಿಯ ಅನುಮಾನಾಸ್ಪದ ಸಾವು – ಪೊಲೀಸರ ತನಿಖೆ ಮುಂದುವರಿಕೆ ಸ್ನೇಹಿತೆಯ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬಂದಿದ್ದ ಯುವತಿ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ರಂಜಿತಾ (27) ಎಂದು ಗುರುತಿಸಲಾಗಿದ್ದು, ಅವರು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ದೇವಲಾಪುರ ಗ್ರಾಮದ ನಿವಾಸಿಯಾಗಿದ್ದಾರೆ. ರಂಜಿತಾ ಎಂಎಸ್ಸಿ ಪದವೀಧರರಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಅಕ್ಟೋಬರ್ 25ರಂದು ನಡೆದ ಈ ಘಟನೆ ಕುರಿತಂತೆ ಪೊಲೀಸರು ಪ್ರಾಥಮಿಕ ತನಿಖೆ ಕೈಗೊಂಡಿದ್ದಾರೆ. ರಂಜಿತಾ ತಮ್ಮ ಸ್ನೇಹಿತೆ ರೇಖಾ ಅವರೊಂದಿಗೆ ಸ್ನೇಹಿತೆಯ ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಹಾಂದಿ ಗ್ರಾಮದ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದರು. ಭಾನುವಾರ ಬೆಳಗ್ಗೆ ಸ್ನಾನಕ್ಕೆ ಹೋದ ರಂಜಿತಾ ಬಹಳ ಹೊತ್ತಾದರೂ ಹೊರಬರದೇ ಇದ್ದ ಕಾರಣ ಅನುಮಾನಗೊಂಡ ರೇಖಾ ಬಾಗಿಲು ತೆರೆದು ನೋಡಿದಾಗ,…

ಮುಂದೆ ಓದಿ..
ಸುದ್ದಿ 

ಹಾವೇರಿ: ಬಕೆಟ್ ಗೆ ಬಿದ್ದು ಮಗು ದಾರುಣ ಸಾವು

Taluknewsmedia.com

Taluknewsmedia.comಹಾವೇರಿ: ಬಕೆಟ್ ಗೆ ಬಿದ್ದು ಮಗು ದಾರುಣ ಸಾವು ಹಾವೇರಿ ಜಿಲ್ಲೆಯ ಶಿವಬಸವನಗರದಲ್ಲಿ ನಡೆದ ದಾರುಣ ಘಟನೆ ಎಲ್ಲರ ಮನಸ್ಸನ್ನೂ ಬೆಚ್ಚಿಬೀಳಿಸಿದೆ. ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಬಕೆಟ್‌ನಲ್ಲಿ ನೀರು ಇದ್ದುದನ್ನು ಗಮನಿಸದೇ, ಒಂದು ವರ್ಷದ ದಕ್ಷಿತ್ ಯಳಂಬಲ್ಲಿಮಠ ಬಕೆಟ್‌ಗೆ ತಲೆ ಕೆಳಗಾಗಿ ಬಿದ್ದಿದ್ದಾನೆ. ಆಟದ ಮಧ್ಯೆ ಸಂಭವಿಸಿದ ಈ ಘಟನೆ ಗಮನಿಸಿದ ಹೆತ್ತವರು ಗಾಬರಿಗೊಂಡು ಓಡಿ ಬಂದಿದ್ದಾರೆ. ಆದರೆ, ಆಗಲೇ ದಕ್ಷಿತ್ ಪ್ರಜ್ಞೆ ತಪ್ಪಿದ್ದ. ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರು ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಈ ದುಃಖದ ಘಟನೆಯ ಹಿನ್ನೆಲೆಯಲ್ಲಿ ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಎಚ್ಚರಿಕೆ ನೀಡುವಂತ ಘಟನೆ ಇದು. ಬಕೆಟ್, ಟಬ್, ನೀರಿನ ಟ್ಯಾಂಕ್ ಮುಂತಾದವುಗಳಲ್ಲಿ ಅಲ್ಪ ಪ್ರಮಾಣದ ನೀರು ಅಪಾಯಕಾರಿಯಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಮುಂದೆ ಓದಿ..
ಸುದ್ದಿ 

ಕುಂಬಳಗೋಡು: ತಂದೆಯಿಂದಲೇ ಮಗಳ ಹತ್ಯೆ – ದಾರುಣ ಘಟನೆ

Taluknewsmedia.com

Taluknewsmedia.comಕುಂಬಳಗೋಡು: ತಂದೆಯಿಂದಲೇ ಮಗಳ ಹತ್ಯೆ – ದಾರುಣ ಘಟನೆ ಪಿತೃತ್ವದ ಹೆಸರಿನಲ್ಲಿ ಜೀವ ಕಳೆದುಕೊಂಡಿದೆ ಬಾಲಕಿ ಸಿರಿ (7). ತಂದೆಯ ಕೈಯಿಂದಲೇ ಮಗಳು ಬಲಿಯಾದ ಹೃದಯವಿದ್ರಾವಕ ಘಟನೆ ನಗರ ಉಪನಗರ ಕುಂಬಳಗೋಡು ಬಳಿಯ ಕನ್ನಿಕಾ ಬಡಾವಣೆಯಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ದರ್ಶನ್ ಎಂಬಾತನಿಗೆ ಶಿಲ್ಪ ಎಂಬ ಮಹಿಳೆಯೊಂದಿಗೆ ಎರಡನೇ ಮದುವೆಯಾಗಿದ್ದು, ಇವರ ಜೊತೆಗೆ ಶಿಲ್ಪಾಳ ಮೊದಲ ಮದುವೆಯಿಂದ ಜನಿಸಿದ ಮಗಳು ಸಿರಿ ವಾಸಿಸುತ್ತಿದ್ದರು. ಶನಿವಾರ ಸಂಜೆ ಪತಿ-ಪತ್ನಿಯರ ನಡುವೆ ಗಲಾಟೆ ನಡೆದಿದ್ದು, ಅದರ ಆಕ್ರೋಶದಲ್ಲಿ ದರ್ಶನ್, ಮಗು ಸಿರಿಯ ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಮಾಹಿತಿ ಪಡೆದ ಕುಂಬಳಗೋಡು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿಯ ಶವವನ್ನು ಪೋಸ್ಟ್‌ಮಾರ್ಟಂಗೆ ಕಳುಹಿಸಲಾಗಿದ್ದು, ಆರೋಪಿ ದರ್ಶನ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಪೊಲೀಸರು ಶೋಧ ಕಾರ್ಯಾರಂಭಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಭಾರೀ…

ಮುಂದೆ ಓದಿ..
ಸುದ್ದಿ 

ಮೂರು ಕೋಟಿ ಇನ್ಶುರೆನ್ಸ್ ಹಣಕ್ಕಾಗಿ ಪತಿಯನ್ನೇ ಕೊಂದ ಪತ್ನಿ? — ಸಿ.ಆರ್.ಪಿ.ಎಫ್ ಯೋಧನ ಸಾವು ಸುತ್ತ ಹೊಸ ಅನುಮಾನಗಳು

Taluknewsmedia.com

Taluknewsmedia.comಮೂರು ಕೋಟಿ ಇನ್ಶುರೆನ್ಸ್ ಹಣಕ್ಕಾಗಿ ಪತಿಯನ್ನೇ ಕೊಂದ ಪತ್ನಿ? — ಸಿ.ಆರ್.ಪಿ.ಎಫ್ ಯೋಧನ ಸಾವು ಸುತ್ತ ಹೊಸ ಅನುಮಾನಗಳು ಮೂರು ಕೋಟಿ ರೂಪಾಯಿ ಇನ್ಶುರೆನ್ಸ್ ಹಣಕ್ಕಾಗಿ ಪತಿಯನ್ನೇ ಕೊಲೆಗೈದಿರುವ ಆರೋಪದಿಂದ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣ ಮತ್ತೆ ಸುದ್ದಿಯಲ್ಲಿದೆ. ಸಿ.ಆರ್.ಪಿ.ಎಫ್ ಯೋಧ ತಾರೇಶ್ (37) ಅವರ ಸಾವು ಆತ್ಮಹತ್ಯೆ ಅಲ್ಲ, ಕೊಲೆ ಎಂದು ಈಗ ಕುಟುಂಬದವರು ಆರೋಪಿಸಿದ್ದಾರೆ. ತಾರೇಶ್ ಅವರ ತಂದೆ ಬಸವರಾಜ್ ಮತ್ತು ತಾಯಿ ಮಂಜುಳಾ ಅವರು ಸೊಸೆ ದಿವ್ಯಾ ಹಾಗೂ ಆಕೆಯ ಸಹೋದರನ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಇವರ ಪ್ರಕಾರ, ತಾರೇಶ್ ಅವರ ಹೆಸರಿನಲ್ಲಿ ಸುಮಾರು ₹3 ಕೋಟಿ ಮೌಲ್ಯದ ಇನ್ಶುರೆನ್ಸ್ ಪಾಲಿಸಿಯನ್ನು, ಅವರ ಸಾವಿನ ಕೇವಲ ಮೂರು ತಿಂಗಳ ಮುಂಚೆಯೇ ತೆಗೆದುಕೊಳ್ಳಲಾಗಿತ್ತು. ಘಟನೆ ಹಿನ್ನೆಲೆ.. ತಾರೇಶ್ ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ಪಟ್ಟಣದವರು. ಸುಮಾರು 7 ವರ್ಷಗಳ ಹಿಂದೆ ದಿವ್ಯಾಳೊಂದಿಗೆ ವಿವಾಹವಾಗಿದ್ದರು.ದಂಪತಿಗಳು…

ಮುಂದೆ ಓದಿ..
ಸುದ್ದಿ 

ಕೊಪ್ಪಳ ಗಣಿ ವಿಭಾಗದಲ್ಲಿ ಭ್ರಷ್ಟಾಚಾರ ಆರೋಪ: ಶಾಸಕ ಬಸವರಾಜ ರಾಯರಡ್ಡಿ ಕಠಿಣ ಕ್ರಮಕ್ಕೆ ಆಗ್ರಹ

Taluknewsmedia.com

Taluknewsmedia.comಕೊಪ್ಪಳ ಗಣಿ ವಿಭಾಗದಲ್ಲಿ ಭ್ರಷ್ಟಾಚಾರ ಆರೋಪ: ಶಾಸಕ ಬಸವರಾಜ ರಾಯರಡ್ಡಿ ಕಠಿಣ ಕ್ರಮಕ್ಕೆ ಆಗ್ರಹ ಕೊಪ್ಪಳ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ಸಾರ್ವಜನಿಕರಿಂದ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ, ಇಲಾಖೆಯ ಅಧಿಕಾರಿಗಳನ್ನು ತಕ್ಷಣ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಬಸವರಾಜ ರಾಯರಡ್ಡಿ ಪತ್ರ ಬರೆದಿದ್ದಾರೆ. ಯಲಬುರ್ಗಾ ಶಾಸಕ ಹಾಗೂ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾದ ರಾಯರಡ್ಡಿ ಅವರು, “ಕೆಲವರು ಅಧಿಕಾರಿಗಳು ಹತ್ತಾರು ವರ್ಷಗಳಿಂದ ಇದೇ ಜಿಲ್ಲೆಯಲ್ಲೇ ಕೆಲಸ ಮಾಡುತ್ತಿದ್ದಾರೆ. ಕಾನೂನು ತಿಳಿವಳಿಕೆ ಇಲ್ಲದೇ ಕೆಳ ಹಂತದ ಸಿಬ್ಬಂದಿಯ ಪ್ರಭಾವಕ್ಕೆ ಒಳಗಾಗಿದ್ದಾರೆ. ಈ ಕ್ರಮದಿಂದ ಸರ್ಕಾರದ ಗೌರವ ಹಾಳಾಗಿದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಅವರು ಇಲಾಖೆಯ ಕನಿಷ್ಠ 10ಕ್ಕೂ ಹೆಚ್ಚು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿಶೇಷ ಕಾರ್ಯಪಡೆ ರಚಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.…

ಮುಂದೆ ಓದಿ..
ಸುದ್ದಿ 

ಹರಳೂರು ಕೆರೆಯಲ್ಲಿ ವೃದ್ಧೆ ಆತ್ಮಹತ್ಯೆ: ಅನಾರೋಗ್ಯದಿಂದ ಬೇಸತ್ತ ಮಹಿಳೆಯ ದಾರುಣ ಅಂತ್ಯ

Taluknewsmedia.com

Taluknewsmedia.comಹರಳೂರು ಕೆರೆಯಲ್ಲಿ ವೃದ್ಧೆ ಆತ್ಮಹತ್ಯೆ: ಅನಾರೋಗ್ಯದಿಂದ ಬೇಸತ್ತ ಮಹಿಳೆಯ ದಾರುಣ ಅಂತ್ಯ ನಗರದ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಹರಳೂರು ಕೆರೆಯಲ್ಲಿ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಜಾರ್ಖಂಡ್‌ನ ರಾಂಚಿ ಮೂಲದ ರಾಣಿ ಸಿನ್ಹಾ (68) ಎಂದು ಗುರುತಿಸಲಾಗಿದೆ. ಅವರು ತಮ್ಮ ಪತಿ ಅಜಿತ್ ಕುಮಾರ್ ಸಿನ್ಹಾ ಜೊತೆ ಹೂಸ್ಕೂರಿನ ಚೂಡಸಂದ್ರ ಗ್ರಾಮದಲ್ಲಿ ವಾಸಿಸುತ್ತಿದ್ದರು. ಕಳೆದ 7 ವರ್ಷಗಳಿಂದ ಬೆಂಗಳೂರು ನಗರದಲ್ಲಿ ನೆಲೆಸಿದ್ದ ದಂಪತಿ, ಕಳೆದ ಎರಡು ವರ್ಷಗಳಿಂದ ರಾಣಿ ಸಿನ್ಹಾ ಅನಾರೋಗ್ಯಕ್ಕೆ ತುತ್ತಾಗಿದ್ದರು ಎನ್ನಲಾಗಿದೆ. ಅನಾರೋಗ್ಯದಿಂದಾಗಿ ಅವರು ನಗರದ ಓಲ್ಡ್ ಏರ್ಪೋರ್ಟ್ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯರು ಡಯಾಲಿಸಿಸ್ ಚಿಕಿತ್ಸೆ ನೀಡಲು ಸೂಚಿಸಿದ್ದರಿಂದ ಹೆದರಿ, ಅಕ್ಟೋಬರ್ 23ರಂದು ಮಧ್ಯಾಹ್ನ ಮನೆ ತೊರೆದಿದ್ದರು. ಅದೇ ದಿನ ಸಂಜೆ 6 ಗಂಟೆ ಸುಮಾರಿಗೆ ಹರಳೂರು ಕೆರೆಯಲ್ಲಿ ಅವರ ಶವ ಪತ್ತೆಯಾಯಿತು.…

ಮುಂದೆ ಓದಿ..
ಸುದ್ದಿ 

ದಾವಣಗೆರೆ : ಅಮಲು ಸಿರಪ್ ಅಕ್ರಮ ಮಾರಾಟ — ಐದು ಮಂದಿ ಬಂಧನ!

Taluknewsmedia.com

Taluknewsmedia.comದಾವಣಗೆರೆ : ಅಮಲು ಸಿರಪ್ ಅಕ್ರಮ ಮಾರಾಟ — ಐದು ಮಂದಿ ಬಂಧನ! ದಾವಣಗೆರೆ : ಅಮಲು ಬರುವ ಸಿರಪ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಐದು ಮಂದಿ ಆರೋಪಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶಿವಕುಮಾರ, ಅಜಿಮುದ್ದೀನ್, ಮುಹಮದ್ ಶಾರೀಕ್, ಸೈಯದ್ ಬಾಬು ಹಾಗೂ ಅಬ್ದುಲ್ ಗಫರ್ ಎಂದು ಗುರುತಿಸಲಾಗಿದೆ. ಬಸವನಗರ ಠಾಣಾ ವ್ಯಾಪ್ತಿಯ ದೇವರಾಜ ಅರಸ್ ಬಡಾವಣೆಯ ಫ್ಲೈಓವರ್ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಯಾವುದೇ ಪರವಾನಗಿ ಇಲ್ಲದೇ ಅಮಲು ಬರುವ ಸಿರಪ್ ಬಾಟಲಿಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ಮಾದಕ ದ್ರವ್ಯ ನಿಗ್ರಹ ಪಡೆಯ ಪಿ.ಎಸ್.ಐ ಸಾಗರ್ ಅತ್ತರವಾಲ್ ಹಾಗೂ ತಂಡವು ಎಸ್ಪಿ ಉಮಾಪ್ರಶಾಂತ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಬಂಧಿತರ ವಿರುದ್ಧ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ. ಸ್ಥಳೀಯರು ಪೊಲೀಸರು ತಕ್ಷಣ ಕ್ರಮ ಕೈಗೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯುವಜನರಲ್ಲಿ…

ಮುಂದೆ ಓದಿ..
ಸುದ್ದಿ 

ಯೋಗ ಸಾಧನೆ: ತನುಶ್ರೀ ಪಿತ್ರೋಡಿ 50 ನಿಮಿಷದಲ್ಲಿ 333 ಆಸನಗಳು, ಹತ್ತನೇ ವಿಶ್ವದಾಖಲೆ!

Taluknewsmedia.com

Taluknewsmedia.comಯೋಗ ಸಾಧನೆ: ತನುಶ್ರೀ ಪಿತ್ರೋಡಿ 50 ನಿಮಿಷದಲ್ಲಿ 333 ಆಸನಗಳು, ಹತ್ತನೇ ವಿಶ್ವದಾಖಲೆ! ಯೋಗ ಕ್ಷೇತ್ರದಲ್ಲಿ ಮತ್ತೊಂದು ಅಸಾಧಾರಣ ಸಾಧನೆ ಮಾಡಿದ ತನುಶ್ರೀ ಪಿತ್ರೋಡಿ, ಕೇವಲ 50 ನಿಮಿಷಗಳಲ್ಲಿ 333 ಯೋಗಾಸನಗಳನ್ನು ಪೂರೈಸಿ ತಮ್ಮ ಹತ್ತನೇ ವಿಶ್ವದಾಖಲೆಯನ್ನು ನಿರ್ಮಿಸಿದ್ದಾರೆ. ಈ ಸಾಧನೆಯು ಬಹರೈನ್ ಕನ್ನಡ ಸಂಘದ ಸಭಾಂಗಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಅವರು ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ಗೆ ಅಧಿಕೃತವಾಗಿ ಸೇರ್ಪಡೆಯಾದರು. ಹಿಂದಿನ ಬಾರಿ ಅವರು ಅದಮಾರು ಪರ್ಯಾಯದ ಸಂದರ್ಭದಲ್ಲಿ 45 ನಿಮಿಷಗಳಲ್ಲಿ 245 ಯೋಗಾಸನಗಳನ್ನು ಮಾಡಿ ವಿಶ್ವದಾಖಲೆ ಬರೆದಿದ್ದರು. ಇದೀಗ, ತಮ್ಮದೇ ಹಿಂದಿನ ದಾಖಲೆಯನ್ನು ಮುರಿದು ಹೊಸ ಮೈಲುಗಲ್ಲು ನಿರ್ಮಿಸಿದ್ದಾರೆ. ಕಾರ್ಯಕ್ರಮದಲ್ಲಿ ಬಹರೈನ್ ಕನ್ನಡ ಸಂಘದ ಅಧ್ಯಕ್ಷ ಅಜಿತ್ ಬಂಗೇರ, ಬಹರೈನ್ ಯೋಗ ಅಸೋಸಿಯೇಶನ್ ಅಧ್ಯಕ್ಷೆ ಫಾತಿಮಾ ಅಲ್ ಮನ್ಸೂರಿ, ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್‌ನ ಮನೀಶ್ ಬಿಷ್ಣೋಯಿ, ಬಹರೈನ್ ಇಂಡಿಯನ್…

ಮುಂದೆ ಓದಿ..
ಸುದ್ದಿ 

ಸುರತ್ಕಲ್: ಚೂರಿಕೇಟಿನಿಂದ ಯುವಕರಿಗೆ ಹಲ್ಲೆ – ನಾಲ್ವರು ಆರೋಪಿಗಳ ಬಂಧನ

Taluknewsmedia.com

Taluknewsmedia.comಸುರತ್ಕಲ್: ಚೂರಿಕೇಟಿನಿಂದ ಯುವಕರಿಗೆ ಹಲ್ಲೆ – ನಾಲ್ವರು ಆರೋಪಿಗಳ ಬಂಧನ ಸುರತ್ಕಲ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ಕಟ್ಲ ಪ್ರದೇಶದ ಸುಶಾಂತ್ ಅಲಿಯಾಸ್ ಕಡವಿ (29), ಕೆ.ವಿ. ಅಲೆಕ್ಸ್ (27), ಇಂದಿರಾ ಕಟ್ಟೆ ನಿವಾಸಿ ನಿತಿನ್ (26) ಹಾಗೂ ಆರೋಪಿಗಳಿಗೆ ಆಶ್ರಯ ನೀಡಿದ ಕುಳಾಯಿ ಹೊನ್ನಕಟ್ಟೆಯ ಅರುಣ್ ಶೆಟ್ಟಿ (56) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಪ್ರಮುಖ ಆರೋಪಿ, ರೌಡಿ ಶೀಟರ್ ಹಾಗೂ ಸಂಘಪರಿವಾರದ ಕಾರ್ಯಕರ್ತನಾದ ಗುರುರಾಜ್ ಮತ್ತು ಆಶ್ರಯ ಒದಗಿಸಿದ್ದ ಅಶೋಕ್ ಪರಾರಿಯಾಗಿದ್ದು, ಇವರಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಗುರುವಾರ ರಾತ್ರಿ ಸುರತ್ಕಲ್ ಸಮೀಪದ ದೀಪಕ್ ಬಾರ್ ಬಳಿ ನಡೆದ ಈ ಘಟನೆ ವೇಳೆ ಹಸನ್ ಮುಕ್ಷಿತ್ ಮತ್ತು ನಿಝಾಮ್ ಎಂಬ ಯುವಕರು ಗಂಭೀರವಾಗಿ…

ಮುಂದೆ ಓದಿ..
ಅಂಕಣ 

ಆತ್ಮೀಯರೆ,……‌‌…..

Taluknewsmedia.com

Taluknewsmedia.comಆತ್ಮೀಯರೆ,……‌‌….. ಜನಪ್ರಿಯತೆಯೇ ಸತ್ಯ ಎಂಬ ಒಂದು ಅಘೋಷಿತ ಮನೋಭಾವ ಇಂದಿನ ಆಧುನಿಕ ಸಮಾಜದಲ್ಲಿ ಬೆಳೆಯುತ್ತಿದೆ. ಸಿನಿಮಾ, ಸಂಗೀತ, ಸಾಹಿತ್ಯ, ರಾಜಕೀಯ, ಸಂಘಟನೆ, ಸಮಾಜ ಸೇವೆ ಮುಂತಾದ ಕ್ಷೇತ್ರಗಳಲ್ಲಿ ಇದು ವ್ಯಾಪಕವಾಗಿ ಹರಡಿದೆ. ಜನಪ್ರಿಯತೆಗೂ – ಸತ್ಯ ಮತ್ತು ವಾಸ್ತವತೆಗೂ ಬಹಳಷ್ಟು ವ್ಯತ್ಯಾಸವಿದೆ. ಎಳನೀರು ಮತ್ತು ಪೆಪ್ಸಿ – ಕೋಲಾ ಪಾನೀಯಗಳ ಉದಾಹರಣೆಗಳೊಂದಿಗೆ ಇದನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬಹುದು. ಎಳನೀರು ಅತ್ಯಂತ ಪೌಷ್ಟಿಕಾಂಶದ ಅತ್ಯುತ್ತಮ ಪಾನೀಯ. ಆದರೆ ಇಂದಿನ ಯುವ ಜನಾಂಗ ಅದನ್ನು ಅನಾರೋಗ್ಯ ಸಮಯದಲ್ಲಿ ಅಥವಾ ತೀರಾ ಅಪರೂಪಕ್ಕೆ ಕುಡಿಯುತ್ತಾರೆ. ಆದರೆ, ಅನಾರೋಗ್ಯಕಾರಿ ವಿಷಕಾರಕ ಅಂಶಗಳುಳ್ಳ ಪೆಪ್ಸಿ ಕೋಲಾಗಳನ್ನು ಎಲ್ಲಾ ಸಂದರ್ಭದಲ್ಲಿಯೂ ಯಥೇಚ್ಛವಾಗಿ ಕುಡಿಯುತ್ತಾರೆ.ಜನಪ್ರಿಯತೆಯ ಮಾನದಂಡದಲ್ಲಿ ಪೆಪ್ಸಿ ಕೋಲಾಗಳೇ ಉತ್ತಮ ಪಾನೀಯ ಎಂದು ಪರಿಗಣಿಸಬೇಕಾಗುತ್ತದೆ. ಇದೇ ಆಧಾರದಲ್ಲಿ ಸಿನಿಮಾ ನಟರು, ರಾಜಕಾರಣಿಗಳು, ಪತ್ರಕರ್ತರು, ಸಾಹಿತಿಗಳು, ಧಾರ್ಮಿಕ ಮುಖಂಡರು ಇತ್ಯಾದಿಗಳು ಗಿಮಿಕ್ ಗಳನ್ನು ಮಾಡುತ್ತಾ ಪ್ರಚಾರ ಪಡೆದು ಜನಪ್ರಿಯರಾಗುತ್ತಾರೆ.…

ಮುಂದೆ ಓದಿ..