ಸುದ್ದಿ 

ಎಸ್‌ಸಿಎಸ್‌ಪಿ–ಟಿಎಸ್‌ಪಿ ಅನುದಾನ ದುರ್ಬಳಕೆಯ ಆರೋಪ ನಿರಾಧಾರ: ಡಾ. ಮಹಾದೇವಪ್ಪ

Taluknewsmedia.com

Taluknewsmedia.comಎಸ್‌ಸಿಎಸ್‌ಪಿ–ಟಿಎಸ್‌ಪಿ ಅನುದಾನ ದುರ್ಬಳಕೆಯ ಆರೋಪ ನಿರಾಧಾರ: ಡಾ. ಮಹಾದೇವಪ್ಪ ಬೆಳಗಾವಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಫಲಾನುಭವಿಗಳ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಬಳಸಲಾಗಿದೆ. ಈ ಅನುದಾನದಲ್ಲಿ ಯಾವುದೇ ರೀತಿಯ ದುರ್ಬಳಕೆ ನಡೆದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಅವರು ವಿಧಾನ ಪರಿಷತ್‌ನಲ್ಲಿ ಸ್ಪಷ್ಟಪಡಿಸಿದರು. ಶುಕ್ರವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಸ್‌ಸಿಎಸ್‌ಪಿ–ಟಿಎಸ್‌ಪಿ ಕಾಯ್ದೆಯ ಸೆಕ್ಷನ್ 7(ಸಿ) ಅಡಿಯಲ್ಲಿ ಸಾಮಾನ್ಯ ಸಾಮಾಜಿಕ ವಲಯದ ಯೋಜನೆಗಳಲ್ಲಿ ಫಲಾನುಭವಿಗಳ ಪ್ರಮಾಣಕ್ಕೆ ತಕ್ಕಂತೆ ಅನುದಾನ ಹಂಚಿಕೆ ಮಾಡಲು ಅವಕಾಶವಿದೆ ಎಂದು ತಿಳಿಸಿದರು. ಅದೇ ವಿಧಾನದನ್ವಯ ಗ್ಯಾರಂಟಿ ಯೋಜನೆಗಳಿಗೆ ಅನುದಾನವನ್ನು ಮೀಸಲಿಟ್ಟು ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳಿಗೆ ಬಳಸಲಾಗುತ್ತಿದೆ ಎಂದರು. ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ನೀರಾವರಿ, ಮಹಿಳಾ…

ಮುಂದೆ ಓದಿ..
ಸುದ್ದಿ 

ಇಲಕಲ್ ಬಸ್ ನಿಲ್ದಾಣದಲ್ಲಿ ಆತಂಕ – ಸಾರ್ವಜನಿಕರಲ್ಲಿ ಭದ್ರತೆ ಕುರಿತ ಪ್ರಶ್ನೆಗಳು

Taluknewsmedia.com

Taluknewsmedia.comಬಸ್ ಹತ್ತುವ ವೇಳೆ ಮಹಿಳೆಯ ಮಾಂಗಲ್ಯ ಸರ ಕಳವು ಇಲಕಲ್ ಬಸ್ ನಿಲ್ದಾಣದಲ್ಲಿ ಆತಂಕ – ಸಾರ್ವಜನಿಕರಲ್ಲಿ ಭದ್ರತೆ ಕುರಿತ ಪ್ರಶ್ನೆಗಳು ಬಾಗಲಕೋಟೆ : ಸಾರ್ವಜನಿಕ ಸಾರಿಗೆ ಕೇಂದ್ರಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಮತ್ತೊಂದು ಉದಾಹರಣೆಯಾಗಿ, ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಬಂಗಾರದ ಮಾಂಗಲ್ಯ ಸರ ಕಳುವಾದ ಘಟನೆ ಬಾಗಲಕೋಟೆ ಜಿಲ್ಲೆಯ ಇಲಕಲ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಲ್ಲಾಪೂರ ಗ್ರಾಮದ ಬಸಮ್ಮ ರಾಜನಾಳ ಅವರು ಗಜೇಂದ್ರಗಡಕ್ಕೆ ಪ್ರಯಾಣ ಬೆಳೆಸಲು ಇಲಕಲ್ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ಸಂದರ್ಭದಲ್ಲಿ, ಅಜಾಗರೂಕತೆಯನ್ನು ಪ್ರಯೋಜನ ಮಾಡಿಕೊಂಡ ಕಳ್ಳರು ಬ್ಯಾಗಿನ ಚೀಪ್ ಅನ್ನು ಮೌನವಾಗಿ ತೆರೆದು, ಬ್ಯಾಗ್‌ನಲ್ಲಿ ಇರಿಸಲಾಗಿದ್ದ ಸುಮಾರು 40 ಗ್ರಾಂ ಬಂಗಾರದ ಮಾಂಗಲ್ಯ ಸರವನ್ನು ಅಪಹರಿಸಿರುವುದು ಬೆಳಕಿಗೆ ಬಂದಿದೆ. ಬಸ್ ಹತ್ತಿ ಸೀಟ್‌ನಲ್ಲಿ ಕುಳಿತ ನಂತರ, ಸಂಬಂಧಿಕರು ಬ್ಯಾಗಿನ ಚೀಪ್ ತೆರೆದಿರುವುದನ್ನು ಗಮನಿಸಿ ವಿಷಯ ತಿಳಿಸಿದಾಗ ಮಹಿಳೆ ಆತಂಕಗೊಂಡು…

ಮುಂದೆ ಓದಿ..
ಸುದ್ದಿ 

ವಿರಾಜಪೇಟೆ: ನಾಲ್ವರ ಕ್ರೂರ ಹತ್ಯೆ ಪ್ರಕರಣ : ಆರೋಪಿಗೆ ಗಲ್ಲುಶಿಕ್ಷೆ ವಿಧಿಸಿದ ನ್ಯಾಯಾಲಯ

Taluknewsmedia.com

Taluknewsmedia.comವಿರಾಜಪೇಟೆ: ನಾಲ್ವರ ಕ್ರೂರ ಹತ್ಯೆ ಪ್ರಕರಣ : ಆರೋಪಿಗೆ ಗಲ್ಲುಶಿಕ್ಷೆ ವಿಧಿಸಿದ ನ್ಯಾಯಾಲಯ ಮಡಿಕೇರಿ: ಪತ್ನಿ, ಆಕೆಯ ಐದು ವರ್ಷದ ಮಗಳು, ಪತ್ನಿಯ ಅಜ್ಜ–ಅಜ್ಜಿ ಸೇರಿ ನಾಲ್ವರನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಪ್ರಕರಣದಲ್ಲಿ ಆರೋಪಿಗೆ ಗಲ್ಲುಶಿಕ್ಷೆ ವಿಧಿಸಿ ವಿರಾಜಪೇಟೆ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ 2025ರ ಮಾರ್ಚ್ 27ರ ರಾತ್ರಿ ನಡೆದ ಈ ಭೀಕರ ಕೊಲೆ ಪ್ರಕರಣದಲ್ಲಿ ಕೇರಳ ಮೂಲದ ಗಿರೀಶ್ (35) ಅಪರಾಧಿ ಎಂದು ಸಾಬೀತಾಗಿದ್ದು, ನ್ಯಾಯಾಲಯವು ಗಲ್ಲುಶಿಕ್ಷೆ ಘೋಷಿಸಿದೆ. ಈ ಕೃತ್ಯದಲ್ಲಿ ಪತ್ನಿ ನಾಗಿ (30), ಆಕೆಯ ಮೊದಲ ಪತಿಯಿಂದ ಜನಿಸಿದ ಮಗಳು ಕಾವೇರಿ (5), ಪತ್ನಿಯ ಅಜ್ಜ ಕರಿಯ (75) ಹಾಗೂ ಅಜ್ಜಿ ಗೌರಿ (70) ಪ್ರಾಣ ಕಳೆದುಕೊಂಡಿದ್ದರು. ನಾಗಿ ಮೊದಲ ಪತಿಯನ್ನು ತೊರೆದು 2024ರಲ್ಲಿ ಗಿರೀಶ್‌ನೊಂದಿಗೆ ವಿವಾಹವಾಗಿದ್ದಳು ಎನ್ನಲಾಗಿದೆ.…

ಮುಂದೆ ಓದಿ..
ಸುದ್ದಿ 

ಪ್ರೇಮ ಜೋಡಿಗೆ ನೆರವು ನೀಡಿದ ಆರೋಪ: ಚಾಕು ದಾಳಿ; ಇಬ್ಬರು ಮೃತ್ಯು

Taluknewsmedia.com

Taluknewsmedia.comಪ್ರೇಮ ಜೋಡಿಗೆ ನೆರವು ನೀಡಿದ ಆರೋಪ: ಚಾಕು ದಾಳಿ; ಇಬ್ಬರು ಮೃತ್ಯು ಶಿವಮೊಗ್ಗ: ಪ್ರೇಮ ಸಂಬಂಧಕ್ಕೆ ಸಹಾಯ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆ ಚಾಕುವಿನಿಂದ ದಾಳಿ ನಡೆಸಿ ಇಬ್ಬರನ್ನು ಕೊಲೆ ಮಾಡಿರುವ ದುರ್ಘಟನೆ ಭದ್ರಾವತಿ ಪಟ್ಟಣದ ಜೈಭೀಮ್ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಕಿರಣ್ (25) ಹಾಗೂ ಮಂಜುನಾಥ್ (65) ಮೃತಪಟ್ಟಿದ್ದಾರೆ. ಜೈಭೀಮ್ ನಗರದ ಶೃತಿ ಮತ್ತು ನಂದೀಶ್ ಪರಸ್ಪರ ಪ್ರೀತಿಸುತ್ತಿದ್ದು, ಎರಡು ದಿನಗಳ ಹಿಂದೆ ಇಬ್ಬರೂ ನಾಪತ್ತೆಯಾಗಿದ್ದರು ಎನ್ನಲಾಗಿದೆ. ಶುಕ್ರವಾರ ಭದ್ರಾವತಿಗೆ ಮರಳಿದ ಜೋಡಿ ನೇರವಾಗಿ ಹಳೇನಗರ ಪೊಲೀಸ್ ಠಾಣೆಗೆ ತೆರಳಿದ್ದು, ಈ ವೇಳೆ ಯುವತಿ ನಂದೀಶ್ ಜೊತೆಗೆ ಹೋಗುವುದಾಗಿ ಹೇಳಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಜೋಡಿಗೆ ಮನೆ ಬಿಟ್ಟು ಹೋಗಲು ನೆರವು ನೀಡಿದ್ದಾರೆಂದು ಆರೋಪಿಸಿ ಯುವತಿಯ ಸಹೋದರ ಹಾಗೂ ಆತನ ಸ್ನೇಹಿತರು ನಂದೀಶ್‌ನ ಸ್ನೇಹಿತ ಕಿರಣ್ ಜೊತೆ ವಾಗ್ವಾದ…

ಮುಂದೆ ಓದಿ..
ಸುದ್ದಿ 

ಆಡಳಿತಾತ್ಮಕ ಸುಧಾರಣೆಗೆ ಬೆಳಗಾವಿ ಜಿಲ್ಲೆ ವಿಭಜನೆ: ಸ್ಥಳೀಯ ಶಾಸಕರ ಒಮ್ಮತ ಅಗತ್ಯ – ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್

Taluknewsmedia.com

Taluknewsmedia.comಆಡಳಿತಾತ್ಮಕ ಸುಧಾರಣೆಗೆ ಬೆಳಗಾವಿ ಜಿಲ್ಲೆ ವಿಭಜನೆ: ಸ್ಥಳೀಯ ಶಾಸಕರ ಒಮ್ಮತ ಅಗತ್ಯ – ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಬೆಳಗಾವಿ: ರಾಜ್ಯದ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಬೆಳಗಾವಿ ಜಿಲ್ಲೆಯನ್ನು ವಿಭಜಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದ್ದಾರೆ. ಈ ಕುರಿತಾಗಿ ಸ್ಥಳೀಯ ಶಾಸಕರು ಒಗ್ಗಟ್ಟಿನಿಂದ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಬೆಳಗಾವಿ ಜಿಲ್ಲೆಯನ್ನು ಬೆಳಗಾವಿ ಮತ್ತು ಚಿಕ್ಕೋಡಿ ಎಂದು ಎರಡು ಜಿಲ್ಲೆಗಳಾಗಿ ರೂಪಿಸುವ ಪ್ರಸ್ತಾವನೆ ಕುರಿತು ಮಾತನಾಡಿದರು. ಮಂಗಳೂರಿಗೆ ತೆರಳುವ ವೇಳೆ ತಾವು ಮತ್ತು ಸಚಿವ ಸತೀಶ್ ಜಾರಕಿಹೋಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ವಿಷಯವಾಗಿ ಚರ್ಚೆ ನಡೆಸಿದ್ದು, ಹೊಸ ಜಿಲ್ಲೆಗಳ ರಚನೆಗೆ ಸಿಎಂ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿಸಿದರು. ಆಡಳಿತಾತ್ಮಕ ಅನುಕೂಲ ಮತ್ತು…

ಮುಂದೆ ಓದಿ..
ಸುದ್ದಿ 

ಬೆಂಗಳೂರಿನ ವಾಯು ಮಾಲಿನ್ಯ ತೀವ್ರತೆ: ತುರ್ತು ಕ್ರಮಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ..

Taluknewsmedia.com

Taluknewsmedia.comಬೆಂಗಳೂರಿನ ವಾಯು ಮಾಲಿನ್ಯ ತೀವ್ರತೆ: ತುರ್ತು ಕ್ರಮಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ.. ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಯು ಮಾಲಿನ್ಯ ಜನ ಆರೋಗ್ಯಕ್ಕೆ ಗಂಭೀರ ಅಪಾಯವಾಗಿ ಪರಿಣಮಿಸುತ್ತಿರುವ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರ ಮನವಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣ ಸ್ಪಂದಿಸಿದ್ದಾರೆ. ಭವಿಷ್ಯದಲ್ಲಿ ದೆಹಲಿಯಂತೆಯೇ ಬೆಂಗಳೂರು ಕೂಡ ತೀವ್ರ ಮಾಲಿನ್ಯ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತಪಡಿಸಿ ದಿನೇಶ್ ಗೂಳಿಗೌಡ ಅವರು ಡಿಸಿಎಂ ಅವರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಧನಾತ್ಮಕ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್ ಅವರು, ವಿಷಯದ ಗಂಭೀರತೆಯನ್ನು ಗಮನಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿಗಳ ಮೂಲಕ ಸಂಬಂಧಪಟ್ಟ ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ,…

ಮುಂದೆ ಓದಿ..
ಸುದ್ದಿ 

ಶಾರದಾ ವಿದ್ಯಾಸಂಸ್ಥೆಯಲ್ಲಿ ಸಂಸ್ಕೃತಿ–ಧರ್ಮ–ಕ್ರೀಡೆಗೆ ಸಮನ್ವಯಿತ ಒತ್ತು: ಯದುವೀರ್ ಒಡೆಯರ್ ಪ್ರಶಂಸೆ

Taluknewsmedia.com

Taluknewsmedia.comಶಾರದಾ ವಿದ್ಯಾಸಂಸ್ಥೆಯಲ್ಲಿ ಸಂಸ್ಕೃತಿ–ಧರ್ಮ–ಕ್ರೀಡೆಗೆ ಸಮನ್ವಯಿತ ಒತ್ತು: ಯದುವೀರ್ ಒಡೆಯರ್ ಪ್ರಶಂಸೆ ಮಂಗಳೂರು: ಶಾರದಾ ವಿದ್ಯಾಸಂಸ್ಥೆಯಲ್ಲಿ ಶಿಸ್ತಿನ ಶಿಕ್ಷಣ ವ್ಯವಸ್ಥೆಯೊಂದಿಗೆ ಧರ್ಮ ಪಾಲನೆ, ಸಂಸ್ಕೃತಿ ಸಂರಕ್ಷಣೆ ಹಾಗೂ ದೇಸಿ ಕ್ರೀಡೆಗಳಿಗೆ ಉತ್ತೇಜನ ನೀಡುವ ಮೂಲಕ ಮಕ್ಕಳಲ್ಲಿ ಜಾಗೃತಿ ಮತ್ತು ರಾಷ್ಟ್ರಭಕ್ತಿ ಬೆಳೆಸುವ ಮಹತ್ವದ ಕಾರ್ಯ ನಡೆಯುತ್ತಿದೆ ಎಂದು ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ನಗರದ ಕೊಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಪರಂಪರೆಯ ಹೃದಯಭಾಗ ಮೈಸೂರಾದರೆ, ಅದರ ಬೆನ್ನೆಲುಬು ಕರಾವಳಿ ಪ್ರದೇಶವಾಗಿದೆ ಎಂದು ಅಭಿಪ್ರಾಯಪಟ್ಟರು. ಕರಾವಳಿಯಲ್ಲಿ ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಯ ಕಾರ್ಯ ನಿರಂತರವಾಗಿ ನಡೆಯುತ್ತಿರುವುದು ಸಂತಸದ ಸಂಗತಿ ಎಂದರು. ತಮ್ಮ ಸಾಮರ್ಥ್ಯ ಮೀರಿಯೂ ಸಮಾಜಕ್ಕಾಗಿ ದುಡಿಯುವ ಮನೋಭಾವವೇ ರಾಷ್ಟ್ರ ನಿರ್ಮಾಣಕ್ಕೆ ಮಹತ್ವದ…

ಮುಂದೆ ಓದಿ..
ಸುದ್ದಿ 

ಸಿಎಂ ವಿರುದ್ಧ ಪ್ರತಿಭಟನೆ ನಡೆಸುವವರು ಗ್ಯಾರಂಟಿ ಸೌಲಭ್ಯ ತ್ಯಜಿಸಲಿ: ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ಸವಾಲು..

Taluknewsmedia.com

Taluknewsmedia.comಸಿಎಂ ವಿರುದ್ಧ ಪ್ರತಿಭಟನೆ ನಡೆಸುವವರು ಗ್ಯಾರಂಟಿ ಸೌಲಭ್ಯ ತ್ಯಜಿಸಲಿ: ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ಸವಾಲು.. ಕಾರವಾರ : ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳುವ ಬಿಜೆಪಿ ನಾಯಕರು ಮೊದಲು ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುವುದಿಲ್ಲ ಎಂದು ಅಫಿಡಾವಿಟ್ ಸಲ್ಲಿಸಬೇಕು. ಆಗ ಮಾತ್ರ ಅವರ ನೈತಿಕತೆ ಬಗ್ಗೆ ಮಾತನಾಡಲು ಹಕ್ಕಿದೆ ಎಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ. ಶಂಭು ಶೆಟ್ಟಿ ಸವಾಲು ಹಾಕಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಕ್ರಿಮ್ಸ್ ಆಸ್ಪತ್ರೆ ಉದ್ಘಾಟನೆ ವಿಚಾರದಲ್ಲಿ ಮಾಜಿ ಶಾಸಕಿ ಹಾಗೂ ಬಿಜೆಪಿ ನಾಯಕಿ ರೂಪಾಲಿ ನಾಯ್ಕ ನೀಡಿರುವ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಗಳ ನೈತಿಕತೆ ಪ್ರಶ್ನಿಸುವ ಮೊದಲು ಬಿಜೆಪಿ ನಾಯಕರು ಕಾಂಗ್ರೆಸ್ ನೀಡಿದ ಗ್ಯಾರಂಟಿ ಸೌಲಭ್ಯಗಳನ್ನು ತ್ಯಜಿಸುವುದಾಗಿ ಲಿಖಿತವಾಗಿ ಘೋಷಿಸಬೇಕು ಎಂದರು. ಕ್ರಿಮ್ಸ್ 450 ಹಾಸಿಗೆಗಳ…

ಮುಂದೆ ಓದಿ..

ಮೈಸೂರು–ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275: ಪ್ಯಾಕೇಜ್–2 ಕಾಮಗಾರಿಗೆ ಚಾಲನೆ

Taluknewsmedia.com

Taluknewsmedia.comಮೈಸೂರು–ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275: ಪ್ಯಾಕೇಜ್–2 ಕಾಮಗಾರಿಗೆ ಚಾಲನೆ ₹4,126 ಕೋಟಿ ವೆಚ್ಚದ 4-ಲೇನ್ ರಸ್ತೆ ಯೋಜನೆಗೆ ಅರಣ್ಯ ಇಲಾಖೆಯ ಅನುಮತಿ ಮೈಸೂರು: ಮೈಸೂರು–ಕುಶಾಲನಗರ ನಡುವಿನ ರಾಷ್ಟ್ರೀಯ ಹೆದ್ದಾರಿ 275ರ ಎರಡನೇ ಹಂತದ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅಂತಿಮ ಅನುಮೋದನೆ ಲಭಿಸಿದ್ದು, ಡಿಸೆಂಬರ್ 8ರಿಂದ ಪ್ಯಾಕೇಜ್–2ರ ಕಾಮಗಾರಿ ಅಧಿಕೃತವಾಗಿ ಆರಂಭವಾಗಲಿದೆ. ಒಟ್ಟು 92.3 ಕಿಲೋಮೀಟರ್ ಉದ್ದದ ಈ ಹೆದ್ದಾರಿಯನ್ನು ನಾಲ್ಕು ಲೇನ್‌ಗಳಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದಕ್ಕಾಗಿ ₹4,126 ಕೋಟಿ ಮೊತ್ತವನ್ನು ಮೀಸಲಿರಿಸಲಾಗಿದೆ. ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಮೈಸೂರು–ಮಡಿಕೇರಿ ರಸ್ತೆಯಲ್ಲಿ ಉಂಟಾಗುತ್ತಿರುವ ತೀವ್ರ ಸಂಚಾರ ದಟ್ಟಣೆ ಕಡಿಮೆಯಾಗಲಿದ್ದು, ಮೈಸೂರು ಹಾಗೂ ಕೊಡಗು ಜಿಲ್ಲೆಗಳ ಪ್ರವಾಸೋದ್ಯಮ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಮಹತ್ವದ ಉತ್ತೇಜನ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 12, 2023ರಂದು ಮಂಡ್ಯದಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದರು. ಮೈಸೂರು–ಕೊಡಗು ಸಂಸದ…

ಮುಂದೆ ಓದಿ..
ಸುದ್ದಿ 

ರ‍್ಯಾಂಡಮ್‌ ಪರೀಕ್ಷೆ: 77 ಶಿಕ್ಷಣ ಸಂಸ್ಥೆಗಳ ಪೈಕಿ 20 ವಿದ್ಯಾರ್ಥಿಗಳಲ್ಲಿ ಮಾದಕ ಸೇವನೆ ಪತ್ತೆ

Taluknewsmedia.com

Taluknewsmedia.comಕಾಲೇಜು ಕ್ಯಾಂಪಸ್‌ಗಳಲ್ಲಿ ಡ್ರಗ್ಸ್‌ ವಿರುದ್ಧ ಪೊಲೀಸ್‌ ದಾಳಿ ರ‍್ಯಾಂಡಮ್‌ ಪರೀಕ್ಷೆ: 77 ಶಿಕ್ಷಣ ಸಂಸ್ಥೆಗಳ ಪೈಕಿ 20 ವಿದ್ಯಾರ್ಥಿಗಳಲ್ಲಿ ಮಾದಕ ಸೇವನೆ ಪತ್ತೆ ಮಂಗಳೂರು: ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಶಾಲಾ ಹಾಗೂ ಕಾಲೇಜು ಕ್ಯಾಂಪಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ವಹಿವಾಟಿಗೆ ಕಡಿವಾಣ ಹಾಕುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಜಾಗೃತಿ ಮತ್ತು ಡ್ರಗ್ಸ್‌ ತಪಾಸಣಾ ಅಭಿಯಾನದ ಮೊದಲ ಹಂತ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಅವಧಿಯಲ್ಲಿ 77 ಶಾಲಾ–ಕಾಲೇಜುಗಳಲ್ಲಿ ನಡೆಸಿದ ರ‍್ಯಾಂಡಮ್‌ ಪರೀಕ್ಷೆಯಲ್ಲಿ 20 ವಿದ್ಯಾರ್ಥಿಗಳಲ್ಲಿ ಮಾದಕ ಸೇವನೆ ಪತ್ತೆಯಾಗಿದೆ. ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್‌ ರೆಡ್ಡಿ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮಾದಕ ಜಾಲದ ವಿರುದ್ಧ ಕಠಿಣ ನಿಲುವು ತಳೆದಿದ್ದು, ವಿಶೇಷವಾಗಿ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ಗಳಲ್ಲಿ ಹೆಚ್ಚುತ್ತಿರುವ ಡ್ರಗ್ಸ್‌ ಬಳಕೆಯನ್ನು ನಿಯಂತ್ರಿಸಲು ಈ ಕಾರ್ಯಾಚರಣೆಗೆ ಚಾಲನೆ ನೀಡಲಾಗಿತ್ತು. ಕೆಲ ಕಾಲೇಜು ಆಡಳಿತ ಮಂಡಳಿಗಳಿಂದ…

ಮುಂದೆ ಓದಿ..