ಗ್ಯಾಸ್ ಸಬ್ಸಿಡಿ ಬಂದ್ ಆಗುತ್ತೆ ಎಚ್ಚರ! ತಕ್ಷಣ ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಹಣ ಬರುವುದಿಲ್ಲ
ಗ್ಯಾಸ್ ಸಬ್ಸಿಡಿ ಬಂದ್ ಆಗುತ್ತೆ ಎಚ್ಚರ! ತಕ್ಷಣ ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಹಣ ಬರುವುದಿಲ್ಲ
ಕೇಂದ್ರ ಸರ್ಕಾರದ ಹೊಸ ಎಚ್ಚರಿಕೆ..
ದೇಶದಾದ್ಯಂತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಸಿ ಸಬ್ಸಿಡಿ ಪಡೆಯುತ್ತಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಹೊಸ ಎಚ್ಚರಿಕೆ ನೀಡಲಾಗಿದೆ. ಸರ್ಕಾರದಿಂದ ನಿಮ್ಮ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಣ ನೇರವಾಗಿ ಜಮೆಯಾಗುತ್ತಿದ್ದರೆ, ಈಗ ನೀವು ಒಂದು ಅಗತ್ಯ ಕಾರ್ಯವನ್ನು ತಕ್ಷಣ ಪೂರ್ಣಗೊಳಿಸಲೇಬೇಕು. ಇಲ್ಲದಿದ್ದರೆ ನಿಮ್ಮ ಸಬ್ಸಿಡಿ ಸೌಲಭ್ಯ ಸಂಪೂರ್ಣವಾಗಿ ನಿಂತು ಹೋಗಲಿದೆ.
ಹೊಸ ನಿಯಮ ಏನು?..
ಭಾರತದ ಮೂರು ಪ್ರಮುಖ ತೈಲ ಕಂಪನಿಗಳಾದ..
ಇಂಡಿಯನ್ ಆಯಿಲ್ (IOC)
ಹಿಂದೂಸ್ತಾನ್ ಪೆಟ್ರೋಲಿಯಂ (HPCL)
ಭಾರತ್ ಪೆಟ್ರೋಲಿಯಂ (BPCL)
ಇವುಗಳು ಪೆಟ್ರೋಲಿಯಂ ಸಚಿವಾಲಯದ ನಿರ್ದೇಶನದಂತೆ ಎಲ್ಲ ಎಲ್ಪಿಜಿ ಗ್ರಾಹಕರಿಗೂ ಇ-ಕೆವೈಸಿ (e-KYC) ಮಾಡಿಸುವುದನ್ನು ಕಡ್ಡಾಯಗೊಳಿಸಿವೆ. ಪ್ರಧಾನಮಂತ್ರಿ ಉಜ್ವಲ ಯೋಜನೆ (PMUY) ಫಲಾನುಭವಿಗಳು ಸೇರಿದಂತೆ ಸಬ್ಸಿಡಿ ಪಡೆಯುವ ಪ್ರತಿಯೊಬ್ಬರೂ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗಿದೆ.
ಏಕೆ ಇ-ಕೆವೈಸಿ ಕಡ್ಡಾಯ?..
ಗ್ಯಾಸ್ ಸಬ್ಸಿಡಿ ಹಣದ ದುರ್ಬಳಕೆ ಮತ್ತು ನಕಲಿ ಖಾತೆಗಳಿಗೆ ಸೋರಿಕೆಯನ್ನು ತಡೆಯುವುದು ಈ ಕ್ರಮದ ಉದ್ದೇಶವಾಗಿದೆ. ನಿಜವಾದ ಮತ್ತು ಅರ್ಹ ಗ್ರಾಹಕರಿಗೆ ಮಾತ್ರ ಸಬ್ಸಿಡಿ ತಲುಪಬೇಕೆಂಬ ಉದ್ದೇಶದಿಂದ ಸರ್ಕಾರ ಬಯೋಮೆಟ್ರಿಕ್ ಆಧಾರ್ ದೃಢೀಕರಣದ ಮೂಲಕ ಇ-ಕೆವೈಸಿ ವ್ಯವಸ್ಥೆಯನ್ನು ಅನಿವಾರ್ಯಗೊಳಿಸಿದೆ.
ಇ-ಕೆವೈಸಿ ಮಾಡುವುದು ಹೇಗೆ?..
ಗ್ಯಾಸ್ ಏಜೆನ್ಸಿಯಲ್ಲಿ…
ನಿಮ್ಮ ಆಧಾರ್ ಕಾರ್ಡ್ ತೆಗೆದುಕೊಂಡು ಹತ್ತಿರದ ಗ್ಯಾಸ್ ವಿತರಕರ ಕಚೇರಿಗೆ ಹೋಗಿ.
ಅಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿ ಬೆರಳಚ್ಚು ನೀಡಿ ಇ-ಕೆವೈಸಿ ಮಾಡಿಸಬಹುದು.
ಮೊಬೈಲ್ ಆ್ಯಪ್ ಮೂಲಕ..
ನಿಮ್ಮ ಗ್ಯಾಸ್ ಕಂಪನಿಯ ಅಧಿಕೃತ ಮೊಬೈಲ್ ಆ್ಯಪ್ಗೆ ಲಾಗಿನ್ ಆಗಿ. ಅಲ್ಲಿ ಸೂಚನೆಯಂತೆ ಆನ್ಲೈನ್ ಮೂಲಕ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.
ಕೊನೆಯ ದಿನಾಂಕ..
ಪ್ರತಿ ಹಣಕಾಸು ವರ್ಷಕ್ಕೆ ಇ-ಕೆವೈಸಿ ಕಡ್ಡಾಯವಾಗಿದೆ.
ಈ ಬಾರಿ ಮಾರ್ಚ್ 31ರೊಳಗೆ ಪ್ರಕ್ರಿಯೆ ಮುಗಿಸಬೇಕು. ಈ ಗಡುವಿನೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ, ಆ ವರ್ಷದ ಸಬ್ಸಿಡಿ ಹಣ ಶಾಶ್ವತವಾಗಿ ನಿಲ್ಲುತ್ತದೆ ಎಂದು ಕಂಪನಿಗಳು ಎಚ್ಚರಿಸಿವೆ.
ಸಬ್ಸಿಡಿ ಸೌಲಭ್ಯ ಮುಂದುವರಿಯಲು…
ಸದ್ಯ ಸರ್ಕಾರವು ವರ್ಷಕ್ಕೆ ಗರಿಷ್ಠ 9 ಸಿಲಿಂಡರ್ಗಳಿಗೆ ಮಾತ್ರ ಸಬ್ಸಿಡಿ ನೀಡುತ್ತಿದೆ. ನಿಮ್ಮ ಇ-ಕೆವೈಸಿ ಪರಿಶೀಲನೆ ಮುಗಿದ ನಂತರವೇ ಈ ಸೌಲಭ್ಯ ಮುಂದುವರಿಯುತ್ತದೆ. ಆದ್ದರಿಂದ, ಯಾವುದೇ ಅಸೌಕರ್ಯ ತಪ್ಪಿಸಲು ತಕ್ಷಣವೇ ಇ-ಕೆವೈಸಿ ಪ್ರಕ್ರಿಯೆ ಮುಗಿಸಿ, ಸಬ್ಸಿಡಿ ಹಣವನ್ನು ನಿರಂತರವಾಗಿ ಪಡೆಯಿರಿ.
ಹೆಚ್ಚಿನ ಮಾಹಿತಿಗಾಗಿ
ಅಧಿಕೃತ ವೆಬ್ಸೈಟ್: pmuy.gov.in

