ಸುದ್ದಿ 

ಜಮೀನಿನ ಖಾತೆ ಬದಲಾವಣೆಗೆ ಲಂಚ ಬೇಡಿಕೆ: ಮಂಜುನಾಥ ಲೋಕಾಯುಕ್ತ ಬಲೆಗೆ

Taluknewsmedia.com

ಜಮೀನಿನ ಖಾತೆ ಬದಲಾವಣೆಗೆ ಲಂಚ ಬೇಡಿಕೆ: ಮಂಜುನಾಥ ಲೋಕಾಯುಕ್ತ ಬಲೆಗೆ

ತುಮಕೂರು: ಜಮೀನು ಖಾತೆ ಹಸ್ತಾಂತರಕ್ಕೆ ಲಂಚ ಬೇಡಿಕೆ ಇಟ್ಟಿದ್ದ ಕ್ಯಾತ್ಸಂದ್ರ ವೃತ್ತದ ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಂಧಿಸಿದ್ದಾರೆ.

ತಾಲ್ಲೂಕಿನ ಊರ್ಡಿಗೆರೆ ಹೋಬಳಿ ಮಾಚನಹಳ್ಳಿ ಗ್ರಾಮದ ಬಿ. ಯೋಗೀಶ್ ಅವರ ತಾತನ ಹೆಸರಿನಲ್ಲಿದ್ದ 38 ಗುಂಟೆ ಜಮೀನನ್ನು ಅವರ ತಂದೆಯ ಹೆಸರಿಗೆ ವರ್ಗಾಯಿಸಲು ಮಂಜುನಾಥ ಬಳಿ ಕಾರ್ಯಾಚರಣೆಗಾಗಿ ಸಂಪರ್ಕಿಸಿದ್ದರು. ಈ ವೇಳೆ ಮಂಜುನಾಥ ಅವರು ಮೊದಲಿಗೆ ₹10 ಸಾವಿರ ಲಂಚವನ್ನು ವಸೂಲಿ ಮಾಡಿಕೊಂಡು, ಇನ್ನೂ ₹10 ಸಾವಿರ ನೀಡಬೇಕೆಂದು ಒತ್ತಡಹಾಕಿದಿದ್ದಾರೆಂದು ತಿಳಿದುಬಂದಿದೆ. ಹೆಚ್ಚುವರಿ ಹಣ ನೀಡಲು ಯೋಗೀಶ್ ಸಮ್ಮತಿಸದೆ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು.

ಅದರಂತೆ, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಊರ್ಡಿಗೆರೆ ಹೋಬಳಿ ಕಂದಾಯ ನಿರೀಕ್ಷಕರ ಕಚೇರಿ ಬಳಿ ಲಂಚದ ಹಣ ಸ್ವೀಕರಿಸುವ ಕ್ಷಣದಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಕೆ.ಎಂ. ಸಂತೋಷ್ ಅವರು ನೇತೃತ್ವದ ತಂಡ ತಕ್ಷಣ ದಾಳಿ ನಡೆಸಿ ಮಂಜುನಾಥ ಅವರನ್ನು ಸ್ಥಳದಲ್ಲೇ ತಡೆದು ವಶಕ್ಕೆ ಪಡೆದಿದೆ.

ಕಾರ್ಯಾಚರಣೆಯಲ್ಲಿ ಇನ್‌ಸ್ಪೆಕ್ಟರ್‌ಗಳು ಬಿ. ಮಹಮ್ಮದ್ ಸಲೀಂ, ಕೆ. ಸುರೇಶ್, ಶಿವರುದ್ರಪ್ಪ ಮೇಟಿ ಹಾಗೂ ಟಿ. ರಾಜು ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ಸಕ್ರಿಯವಾಗಿ ಪಾಲ್ಗೊಂಡಿದ್ದರು ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎ.ವಿ. ಲಕ್ಷ್ಮಿನಾರಾಯಣ ತಿಳಿಸಿದ್ದಾರೆ.

Related posts