ಸುದ್ದಿ 

ಮುಳಬಾಗಿಲು: ’ಯಾವುದೇ ಜಾತಿ, ಧರ್ಮ ಭೇದಭಾವವಿಲ್ಲದೇ ಅತ್ಯಂತ ಕಡು ಬಡತನದ ಹಿನ್ನಲೆ ಹೊಂದಿರುವ ಮಕ್ಕಳನ್ನು ಗುರುತಿಸಿ ಗ್ರಾಮ ಭಾರತಿ ಟ್ರಸ್ಟ್ ವತಿಯಿಂದ ಉಚಿತ ಲ್ಯಾಪ್‌ಟಾಪ್ ವಿತರಿಸಲಾಗುತ್ತಿದೆ’

Taluknewsmedia.com

ಮುಳಬಾಗಿಲು: ’ಯಾವುದೇ ಜಾತಿ, ಧರ್ಮ ಭೇದಭಾವವಿಲ್ಲದೇ ಅತ್ಯಂತ ಕಡು ಬಡತನದ ಹಿನ್ನಲೆ ಹೊಂದಿರುವ ಮಕ್ಕಳನ್ನು ಗುರುತಿಸಿ ಗ್ರಾಮ ಭಾರತಿ ಟ್ರಸ್ಟ್ ವತಿಯಿಂದ ಉಚಿತ ಲ್ಯಾಪ್‌ಟಾಪ್ ವಿತರಿಸಲಾಗುತ್ತಿದೆ’ ಎಂದು ಕೆ ಎಂ ಎಫ಼್ ನಿರ್ದೇಶಕರು ಬಿ ವಿ ಸಾಮೆಗೌಡ ಹೇಳಿದರು.

ಮುಳಬಾಗಿಲು ತಾಲೂಕಿನಲ್ಲಿ ಇದುವರಿಗೆ 5 ಲ್ಯಾಪ್ ಟಾಪ್ 10 ಟ್ಯಾಬ್ ಮತ್ತು ಕಂಪ್ಯೂಟರ್ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ವಿತರಿಸಿ ಅವರು ಮಾತನಾಡಿದರು.

ಶೈಕ್ಷಣಿಕವಾಗಿ ಮುನ್ನಡೆ ಸಾಧಿಸಲು ಲ್ಯಾಪ್‌ಟಾಪ್‌ನಂತಹ ಪರಿಕರಗಳು ಅವಶ್ಯಕವಾಗಿವೆ. ಸಮಾಜದಲ್ಲಿ ಎತ್ತರಕ್ಕೆ ಬೆಳೆಯಬೇಕು ಎಂಬ ಉದ್ದೇಶದೊಂದಿಗೆ ಗ್ರಾಮ ಭಾರತಿ ಟ್ರಸ್ಟ್ ಅಧ್ಯಕ್ಷ ಎಂ ಬಿ ಕೃಷ್ಣಮೂರ್ತಿ ಯುವ ಉದ್ಯಮಿ ಸಿದ್ದಗಟ್ಟ ರಮೇಶ್ ರವರ ಮನವಿಗೆ ಸ್ಪಂದಿಸಿ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಿಸಲಾಗಿದೆ’ ಎಂದು ಹೇಳಿದರು.

2021ರಲ್ಲಿ ಆರಂಭಗೊಂಡ ಉಚಿತ ಲ್ಯಾಪ್‌ಟಾಪ್ ವಿತರಣೆ ಕಾರ್ಯ ಇಲ್ಲಿಯವರೆಗೆ ಬಂದಿದೆ. ಒಟ್ಟು ಒಂದು ಸಾವಿರ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಿಸುವ ಗುರಿ ಇದೆ. ಇಲ್ಲಿಯವರೆಗೆ 20 ಬಡ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಗಿದೆ‘ ಎಂದು ವಿವರಿಸಿದರು.

‘ಗ್ರಾಮೀಣ ಮಕ್ಕಳು, ಪೌರ ಕಾರ್ಮಿಕರು, ಕೂಲಿ ಕಾರ್ಮಿಕರು, ಆಟೊ ಚಾಲಕರ ಮಕ್ಕಳು, ಗಾರ್ಮೆಂಟ್ ಇನ್ನಿತರ ವಲಯಗಳಲ್ಲಿ ಕೆಲಸ ಮಾಡುವ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬದ ಮಕ್ಕಳಿಗೆ ಲ್ಯಾಪ್‌ಟಾಪ್ ನೀಡಿದ್ದೇನೆ. ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೆರವಿಗೆ ಧಾವಿಸಿ ಲ್ಯಾಪ್‌ಟಾಪ್ ವಿತರಿಸಬೇಕು‘ ಎಂದು ಹೇಳಿದರು.

ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಇದ್ದರು.

Related posts