ವಾಯು ಮಾಲಿನ್ಯ ನಿಯಂತ್ರಣಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ: ಕೊಪ್ಪಳದಲ್ಲಿ ಜಾಗೃತಿ ಮಾಸಾಚರಣೆ ಸಮಾರೋಪ
ವಾಯು ಮಾಲಿನ್ಯ ನಿಯಂತ್ರಣಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ: ಕೊಪ್ಪಳದಲ್ಲಿ ಜಾಗೃತಿ ಮಾಸಾಚರಣೆ ಸಮಾರೋಪ ಕೊಪ್ಪಳ: ವಾಹನಗಳಿಂದ ಉಂಟಾಗುತ್ತಿರುವ ವಾಯು ಮಾಲಿನ್ಯವು ಮಾನವ ಆರೋಗ್ಯದ ಮೇಲೆ ತನ್ನ ಗಂಭೀರ ಪರಿಣಾಮಗಳನ್ನು ಬೀರುತ್ತಿರುವ ಹಿನ್ನೆಲೆಯಲ್ಲಿ, ಕೊಪ್ಪಳ ಪ್ರಾದೇಶಿಕ ಸಾರಿಗೆ ಇಲಾಖೆ ಆಯೋಜಿಸಿದ್ದ ‘ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ’ಯ ಸಮಾರೋಪ ಸಮಾರಂಭದಲ್ಲಿ ಸಾರ್ವಜನಿಕರಿಗೆ ಮಾಲಿನ್ಯ ನಿಯಂತ್ರಣದ ಅಗತ್ಯತೆಯನ್ನು ತಿಳಿಸುವ ಪ್ರಮುಖ ಸಂದೇಶ ನೀಡಲಾಯಿತು. ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ ಅವರು, “ವಾಹನಗಳಿಂದ ಹೊರಸೂಸುವ ಹೊಗೆಯಿಂದ ಗಾಳಿಯು ವಿಷಕಾರಿಯಾಗುತ್ತದೆ. ಹೆಚ್ಚು ಹೊಗೆ ಬಿಡುವ ವಾಹನಗಳನ್ನು ಬಳಸಿ ಪರಿಸರಕ್ಕೆ ಹಾನಿ ಮಾಡಬಾರದು; ಪರಿಸರ ಸ್ನೇಹಿ ವಾಹನಗಳಿಗೆ ಆದ್ಯತೆ ನೀಡುವುದು ಕಾಲದ ಅವಶ್ಯಕತೆ,” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಧಿಕಾರಿಗಳು ವಾಹನಗಳಿಂದ ಹೊರಬರುವ ಕಾರ್ಬನ್ ಮಾನಾಕ್ಸೈಡ್, ನೈಟ್ರೋಜನ್ ಆಕ್ಸೈಡ್ಸ್, ಸಲ್ಫರ್ ಡೈಆಕ್ಸೈಡ್ ಸೇರಿದಂತೆ ಹಲವು ವಿಷಕಾರಿ…
ಮುಂದೆ ಓದಿ..
