ಎಸ್ಸಿಎಸ್ಪಿ–ಟಿಎಸ್ಪಿ ಅನುದಾನ ದುರ್ಬಳಕೆಯ ಆರೋಪ ನಿರಾಧಾರ: ಡಾ. ಮಹಾದೇವಪ್ಪ
ಎಸ್ಸಿಎಸ್ಪಿ–ಟಿಎಸ್ಪಿ ಅನುದಾನ ದುರ್ಬಳಕೆಯ ಆರೋಪ ನಿರಾಧಾರ: ಡಾ. ಮಹಾದೇವಪ್ಪ ಬೆಳಗಾವಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಫಲಾನುಭವಿಗಳ ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನವನ್ನು ಬಳಸಲಾಗಿದೆ. ಈ ಅನುದಾನದಲ್ಲಿ ಯಾವುದೇ ರೀತಿಯ ದುರ್ಬಳಕೆ ನಡೆದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಅವರು ವಿಧಾನ ಪರಿಷತ್ನಲ್ಲಿ ಸ್ಪಷ್ಟಪಡಿಸಿದರು. ಶುಕ್ರವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಸ್ಸಿಎಸ್ಪಿ–ಟಿಎಸ್ಪಿ ಕಾಯ್ದೆಯ ಸೆಕ್ಷನ್ 7(ಸಿ) ಅಡಿಯಲ್ಲಿ ಸಾಮಾನ್ಯ ಸಾಮಾಜಿಕ ವಲಯದ ಯೋಜನೆಗಳಲ್ಲಿ ಫಲಾನುಭವಿಗಳ ಪ್ರಮಾಣಕ್ಕೆ ತಕ್ಕಂತೆ ಅನುದಾನ ಹಂಚಿಕೆ ಮಾಡಲು ಅವಕಾಶವಿದೆ ಎಂದು ತಿಳಿಸಿದರು. ಅದೇ ವಿಧಾನದನ್ವಯ ಗ್ಯಾರಂಟಿ ಯೋಜನೆಗಳಿಗೆ ಅನುದಾನವನ್ನು ಮೀಸಲಿಟ್ಟು ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳಿಗೆ ಬಳಸಲಾಗುತ್ತಿದೆ ಎಂದರು. ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ನೀರಾವರಿ, ಮಹಿಳಾ…
ಮುಂದೆ ಓದಿ..
