1064 ಎಕರೆ ಭೂಮಿ ಭೂಹೀನರಿಗೆ ಹಂಚಿಕೆಗೆ ಸಿಪಿಐ(ಎಂಎಲ್) ಒತ್ತಾಯ

1064 ಎಕರೆ ಭೂಮಿ ಭೂಹೀನರಿಗೆ ಹಂಚಿಕೆಗೆ ಸಿಪಿಐ(ಎಂಎಲ್) ಒತ್ತಾಯ ರಾಯಚೂರು: ಸಿಂಧನೂರು ತಾಲೂಕಿನ ಜವಳಗೇರ ಗ್ರಾಮದಲ್ಲಿ ನಾಡಗೌಡರ ಕುಟುಂಬ ಕಳೆದ ನಾಲ್ಕೂವರೆ ದಶಕಗಳಿಂದ ಅಕ್ರಮವಾಗಿ ವಶದಲ್ಲಿಟ್ಟಿರುವ 1064 ಎಕರೆ ಭೂಮಿಯನ್ನು ತಕ್ಷಣವೇ ಭೂಹೀನ ರೈತರಿಗೆ ವಿತರಿಸಬೇಕೆಂದು ಸಿಪಿಐ(ಎಂಎಲ್) ರೆಡ್ ಸ್ಟಾರ್ ಪಕ್ಷವು ಒತ್ತಾಯಿಸಿದೆ. ಸಹಾಯಕ ಆಯುಕ್ತ ಬಸವಣ್ಣಪ್ಪ ಕಲಶೆಟ್ಟಿ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಪಕ್ಷದ ಪಾಲಿಟ್ ಬ್ಯುರೋ ಸದಸ್ಯ ಮಾನಸಯ್ಯ ಅವರು ಭೂ ಸುಧಾರಣೆ ಕಾಯ್ದೆಯ 74 ಮತ್ತು 75ನೇ ಕಲಂಗಳ ಅಡಿಯಲ್ಲಿ ಸಿಂಧನೂರು ತಾಲೂಕಿನ ಸರ್ವೇ ನಂ.48ಕ್ಕೆ ಸಂಬಂಧಿಸಿದ ಅಕ್ರಮ ಭೂ ವಹಿವಾಟಿನ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಕ್ರಮವಾಗಿ ಭೂಮಿ ವಶಪಡಿಸಿಕೊಂಡವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಬೇಕೆಂದು ಮನವಿಯಲ್ಲಿ ತಿಳಿಸಿದರು. ಇದೇ ವೇಳೆ ಲಿಂಗಸುಗೂರು ತಾಲೂಕಿನಲ್ಲಿ 25ರಿಂದ 30 ವರ್ಷಗಳಿಂದ ಕೃಷಿ ಮಾಡುತ್ತಿರುವ 998 ಭೂಹೀನ ರೈತರ ಅಕ್ರಮ ಸಕ್ರಮ ಅರ್ಜಿಗಳನ್ನು…

ಮುಂದೆ ಓದಿ..
ಸುದ್ದಿ 

ಮಂಡ್ಯ: ಮದುವೆ ಕನಸು ಕೈ ತಪ್ಪಿದ ಯುವಕರಿಂದ ಮಠ ನಿರ್ಮಾಣಕ್ಕೆ ಗ್ರಾ.ಪಂ.ಗೆ ಮನವಿ!

ಮಂಡ್ಯ: ಮದುವೆ ಕನಸು ಕೈ ತಪ್ಪಿದ ಯುವಕರಿಂದ ಮಠ ನಿರ್ಮಾಣಕ್ಕೆ ಗ್ರಾ.ಪಂ.ಗೆ ಮನವಿ! ಮದುವೆಯಾಗಲು ವಧು ದೊರಕದೆ ನಿರಾಸೆಯಲ್ಲಿರುವ ಅವಿವಾಹಿತ ಯುವಕರ ಗುಂಪೊಂದು, ಸಂಸಾರ ಬಿಟ್ಟು ಧಾರ್ಮಿಕ ಜೀವನ ನಡೆಸಲು ನಿರ್ಧರಿಸಿ ಮಠ ನಿರ್ಮಿಸಿ ಕೊಡಬೇಕೆಂದು ಗ್ರಾಮ ಪಂಚಾಯತ್‌ಗೆ ಮನವಿ ಸಲ್ಲಿಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮ ಪಂಚಾಯತ್‌ನಲ್ಲಿ ಇತ್ತೀಚೆಗೆ ನಡೆದ ಗ್ರಾಮಸಭೆಯಲ್ಲಿ ಸುಮಾರು 30 ಯುವಕರು ಏಕಕಾಲದಲ್ಲಿ ಹಾಜರಾಗಿ, ಪಂಚಾಯತ್ ವತಿಯಿಂದ ಮಠ ನಿರ್ಮಿಸಿ ಕೊಡಬೇಕೆಂದು ಲಿಖಿತ ಮನವಿ ಸಲ್ಲಿಸಿ ಎಲ್ಲರ ಗಮನ ಸೆಳೆದರು. ಗ್ರಾಮಸಭೆಯಲ್ಲಿ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಮಾತು ಪಡೆದ ಯುವಕರು, ಮದುವೆಗೆ ಸಾಕಷ್ಟು ಪ್ರಯತ್ನ ಮಾಡಿದರೂ ಹೆಣ್ಣು ಸಿಗುತ್ತಿಲ್ಲ. ಬದುಕಿನ ಮೇಲೆ ಬೇಸರ ಮೂಡಿದೆ. ಹೀಗಾಗಿ ಮಠವೊಂದರಲ್ಲಿ ದೇವರ ಭಜನೆ ಮಾಡುತ್ತಾ ಜೀವನ ಸಾಗಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ತಮ್ಮ ಮನವಿಯಲ್ಲಿ…

ಮುಂದೆ ಓದಿ..
ಸುದ್ದಿ 

ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ 106ನೇ ಸಂಸ್ಥಾಪನಾ ವಾರ್ಷಿಕೋತ್ಸವ

ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ 106ನೇ ಸಂಸ್ಥಾಪನಾ ವಾರ್ಷಿಕೋತ್ಸವ ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 106ನೇ ಸಂಸ್ಥಾಪನಾ ವಾರ್ಷಿಕೋತ್ಸವವನ್ನು ನಗರದ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷ ತಿಪ್ಪೇಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಅಧ್ಯಕ್ಷರು, ಸಂಸ್ಥೆಯ 106ನೇ ವರ್ಷಾಚರಣೆಯನ್ನು ಕೇಂದ್ರ ಕಚೇರಿ ಸೇರಿದಂತೆ ಜಿಲ್ಲೆಯಾದ್ಯಂತ ಇರುವ 33 ಶಾಖೆಗಳಲ್ಲಿ ಸಂಭ್ರಮದಿಂದ ಆಚರಿಸುವಂತೆ ಸೂಚನೆ ನೀಡಲಾಗಿತ್ತು ಎಂದು ಹೇಳಿದರು. ಬ್ಯಾಂಕ್ ಈ ಮಟ್ಟಿಗೆ ಬೆಳೆಯಲು ಕಾರಣವಾದ ಹಿಂದಿನ ಎಲ್ಲ ಅಧ್ಯಕ್ಷರ ದೂರದೃಷ್ಟಿ, ಆಡಳಿತ ಮಂಡಳಿಗಳ ಸಮರ್ಪಿತ ಸೇವೆ ಹಾಗೂ ಸಿಬ್ಬಂದಿಯ ನಿಸ್ವಾರ್ಥ ಪರಿಶ್ರಮವನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಬಿ, ಕೇಂದ್ರ ಕಚೇರಿಯ ವಿವಿಧ ವಿಭಾಗಗಳ ಉಪ ಪ್ರಧಾನ ವ್ಯವಸ್ಥಾಪಕರು, ಬ್ಯಾಂಕ್ ನೌಕರರು, ಸ್ಥಳೀಯ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ಹಾಜರಿದ್ದರು.

ಮುಂದೆ ಓದಿ..
ಸುದ್ದಿ 

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಸಚಿವಾಲಯ ಅಗತ್ಯ: ಶಾಸಕ ಬಿ.ಆರ್. ಪಾಟೀಲ್

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಸಚಿವಾಲಯ ಅಗತ್ಯ: ಶಾಸಕ ಬಿ.ಆರ್. ಪಾಟೀಲ್ ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಬೇಕೆಂದು ಶಾಸಕ ಬಿ.ಆರ್. ಪಾಟೀಲ್ ಅವರು ವಿಧಾನಸಭೆಯಲ್ಲಿ ಒತ್ತಾಯಿಸಿದರು. ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತ ವಿಶೇಷ ಚರ್ಚೆಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕಕ್ಕಾಗಿ ರಚಿಸಲಿರುವ ಸಚಿವಾಲಯದ ಕೇಂದ್ರ ಕಚೇರಿಯನ್ನು ಬೆಂಗಳೂರಿನಲ್ಲಿ ಅಲ್ಲದೆ ಕಲಬುರಗಿಯಲ್ಲಿ ಸ್ಥಾಪಿಸಬೇಕು. ಇದರಿಂದ ಆಡಳಿತ ಕಾರ್ಯಗಳು ಸ್ಥಳೀಯವಾಗಿ ನಡೆಯಲು ಸಾಧ್ಯವಾಗಿದ್ದು, ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ವೇಗ ಸಿಗಲಿದೆ ಎಂದು ಅಭಿಪ್ರಾಯಪಟ್ಟರು. ರಾಜ್ಯ ಸರ್ಕಾರವು ಪ್ರತಿ ಲೀಟರ್ ಹಾಲಿಗೆ 5 ರೂ. ಪ್ರೋತ್ಸಾಹ ಧನ ನೀಡುತ್ತಿರುವುದು ಸ್ವಾಗತಾರ್ಹವಾದ ಕ್ರಮವಾಗಿದೆ. ಆದರೆ ಕಲಬುರಗಿ ಭಾಗದಲ್ಲಿ ಹೈನುಗಾರಿಕೆಗೆ ಇನ್ನಷ್ಟು ಉತ್ತೇಜನ ನೀಡಬೇಕಿದೆ. ಹಾಲು ಉತ್ಪಾದನೆ ಹೆಚ್ಚಿದರೆ ರೈತರು ಹಾಗೂ ಹೈನುಗಾರಿಕೆ ಅವಲಂಬಿತರ ಆದಾಯ ಹೆಚ್ಚಾಗಲಿದೆ. ಜೊತೆಗೆ ಕುರಿ ಮತ್ತು…

ಮುಂದೆ ಓದಿ..
ಸುದ್ದಿ 

ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಗೌರವ ಸಮರ್ಪಣೆ

ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಗೌರವ ಸಮರ್ಪಣೆ ಮಂಗಳೂರು: ಬಹರೈನ್ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಯಿಂದ ಮೊದಲ ಬಾರಿಗೆ ಪ್ರದಾನಗೊಂಡ ಪ್ರತಿಷ್ಠಿತ ‘ಸಹಕಾರಿ ಸಾರ್ವಭೌಮ’ ಪ್ರಶಸ್ತಿ ಹಾಗೂ ಕರ್ನಾಟಕ ಮಾಧ್ಯಮ ಸಹಕಾರ ಮತ್ತು ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ, ಬೆಂಗಳೂರು ವತಿಯಿಂದ ನೀಡಲಾದ ‘ವಿಶ್ವ ಜಾಗತಿಕ ಪ್ರಭಾವಿ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ’ಗಳನ್ನು ಸ್ವೀಕರಿಸಿದ ಎಸ್‌ಸಿಡಿಸಿಸಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಶುಕ್ರವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಅಡ್ಯಂತಾಯ, ಸಂಘದ ಸಮಗ್ರ ಅಭಿವೃದ್ಧಿಗೆ ಡಾ. ರಾಜೇಂದ್ರ ಕುಮಾರ್ ನೀಡುತ್ತಿರುವ…

ಮುಂದೆ ಓದಿ..
ಸುದ್ದಿ 

ಆಳಂದ ಮತಕಳ್ಳತನ: ಮಾಜಿ ಶಾಸಕನ ವಿರುದ್ಧ 22,000 ಪುಟಗಳ ಚಾರ್ಜ್‌ಶೀಟ್! ಕಾಲ್ ಸೆಂಟರ್ ಬಳಸಿ ಸಾವಿರಾರು ಮತಗಳ ಅಳಿಸುವಿಕೆ!

ಆಳಂದ ಮತಕಳ್ಳತನ: ಮಾಜಿ ಶಾಸಕನ ವಿರುದ್ಧ 22,000 ಪುಟಗಳ ಚಾರ್ಜ್‌ಶೀಟ್! ಕಾಲ್ ಸೆಂಟರ್ ಬಳಸಿ ಸಾವಿರಾರು ಮತಗಳ ಅಳಿಸುವಿಕೆ! 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದು ಒಂದು ವರ್ಷವೇ ಕಳೆದರೂ, ಅದರ ಕೆಲವು ವಿವಾದಗಳು ಇನ್ನೂ ಜೀವಂತವಾಗಿವೆ. ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ಮತಕಳ್ಳತನ ಪ್ರಕರಣ ಇದೀಗ ಮತ್ತೊಂದು ಸ್ಫೋಟಕ ತಿರುವು ಪಡೆದುಕೊಂಡಿದೆ. ರಾಜ್ಯ ಸರ್ಕಾರದ ಆದೇಶದ ಮೇರೆಗೆ ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್ ಅವರ ನೇತೃತ್ವದಲ್ಲಿ ತನಿಖೆ ನಡೆಸಿದ ಸಿಐಡಿಯ ವಿಶೇಷ ತನಿಖಾ ತಂಡ (SIT), ನ್ಯಾಯಾಲಯಕ್ಕೆ ಬೃಹತ್ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದು, ಇದರಲ್ಲಿ ಹಲವು ಆಘಾತಕಾರಿ ವಿವರಗಳು ಬೆಳಕಿಗೆ ಬಂದಿವೆ. 22,000 ಪುಟಗಳ ದೈತ್ಯ ದೋಷಾರೋಪ ಪಟ್ಟಿ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಎಸ್‌ಐಟಿ, ಬೆಂಗಳೂರಿನ ಎಪಿಎಂಎಂ ನ್ಯಾಯಾಲಯಕ್ಕೆ ಬರೋಬ್ಬರಿ 22,000 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ಈ ದೈತ್ಯ ದಾಖಲೆಯ ಗಾತ್ರವೇ ಪ್ರಕರಣದ…

ಮುಂದೆ ಓದಿ..

ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ವಿತರಣೆ

ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ವಿತರಣೆ ಕಡಬ: ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ಕ್ಲಾಸ್ ಆನ್ ವ್ಹೀಲ್ಸ್ ಯೋಜನೆಯಡಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ ಪ್ರಮಾಣಪತ್ರ ವಿತರಣೆ ಹಾಗೂ ಶಾಲೆಗೆ ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮ ಅಲಂಕಾರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಖಾಸಗಿ ಶಾಲೆಗಳಂತೆ ಕಂಪ್ಯೂಟರ್ ಪ್ರಯೋಗಾಲಯಗಳನ್ನು ಸ್ಥಾಪಿಸುವುದು ಗ್ರಾಮೀಣ ಸರ್ಕಾರಿ ಶಾಲೆಗಳಿಗೆ ಸವಾಲಾಗಿರುವುದನ್ನು ಮನಗಂಡು, ಬಸ್ ಮೂಲಕವೇ ಶಾಲೆಗಳ ಅಂಗಳಕ್ಕೆ ಬಂದು ಮೂಲಭೂತ ಕಂಪ್ಯೂಟರ್ ಶಿಕ್ಷಣ ನೀಡುತ್ತಿರುವ ಈ ಯೋಜನೆ ಮಾದರಿಯೂ ವಿಶಿಷ್ಟವೂ ಆಗಿದೆ ಎಂದು ಅವರು ಪ್ರಶಂಸಿಸಿದರು. ತಾವು ವಿದ್ಯಾಭ್ಯಾಸ ಮಾಡಿದ ಶಾಲೆಗೆ ಕಂಪ್ಯೂಟರ್ ಕೊಡುಗೆ ನೀಡಿರುವ ಸುಜಾಹ್ ಮುಹಮ್ಮದ್ ಅವರ ನಡೆ ಅನುಕರಣೀಯವಾಗಿದ್ದು, ಇಂತಹ ಮನೋಭಾವ ಹೆಚ್ಚಾದರೆ ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ…

ಮುಂದೆ ಓದಿ..
ಸುದ್ದಿ 

ಬೆಳೆ ವಿಮೆ ಪರಿಹಾರ ಅಪೂರ್ತಿ: ಮರುಪರಿಶೀಲನೆಗೆ ರೈತ ಮುಖಂಡರ ಒತ್ತಾಯ

ಬೆಳೆ ವಿಮೆ ಪರಿಹಾರ ಅಪೂರ್ತಿ: ಮರುಪರಿಶೀಲನೆಗೆ ರೈತ ಮುಖಂಡರ ಒತ್ತಾಯ ಮಂಗಳೂರು: ಬೆಳೆ ವಿಮೆ ಯೋಜನೆಯಡಿ ರೈತರಿಗೆ ಲಭಿಸುತ್ತಿರುವ ಪರಿಹಾರ ಮೊತ್ತ ಸಮಸ್ಯೆ ಇದು, ಇದನ್ನು ತಕ್ಷಣ ಮರುಪರಿಶೀಲಿಸಿ ಪರಿಷ್ಕರಿಸಬೇಕು ಎಂದು ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಒತ್ತಾಯಿಸಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸಭೆಗೆ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ಡಾ. ರಾಜೇಂದ್ರ ಕುಮಾರ್, ಬೆಳೆ ವಿಮೆಯ ಪರಿಹಾರವನ್ನು ಸಹಕಾರಿ ಬ್ಯಾಂಕುಗಳ ಮೂಲಕವೇ ರೈತರಿಗೆ ವಿತರಿಸಿದರೆ ಪ್ರಕ್ರಿಯೆ ಸರಳವಾಗುತ್ತದೆ ಹಾಗೂ ಪಾರದರ್ಶಕತೆ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ತೋಟಗಾರಿಕೆ ಅಧಿಕಾರಿ ದರ್ಶನ್ ಮಾಹಿತಿ ನೀಡುತ್ತಾ, ಕಳೆದ ವರ್ಷ 215 ಕೋಟಿ ರೂ. ಪ್ರೀಮಿಯಂ ಸಂಗ್ರಹವಾಗಿದ್ದು, 270 ಕೋಟಿ ರೂ. ಪರಿಹಾರ ಪಾವತಿಯಾಗಿದೆ. ಈ ವರ್ಷ 277 ಕೋಟಿ ರೂ. ವಿಮಾ ಕಂತು…

ಮುಂದೆ ಓದಿ..
ಸುದ್ದಿ 

ಬೆಳ್ತಂಗಡಿ | ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿವಾದ – ಸೌಹಾರ್ದ ಮಾತುಕತೆಯಿಂದ ಅಂತ್ಯ

ಬೆಳ್ತಂಗಡಿ | ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿವಾದ – ಸೌಹಾರ್ದ ಮಾತುಕತೆಯಿಂದ ಅಂತ್ಯ ಬೆಳ್ತಂಗಡಿ, : ಅಳದಂಗಡಿಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ಮುಸ್ಲಿಮ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಶಾಲಾ ಆಡಳಿತ ಮಂಡಳಿ ಹಾಗೂ ಸಮುದಾಯದ ಮುಖಂಡರ ನಡುವೆ ನಡೆದ ಚರ್ಚೆಯಿಂದ ವಿವಾದಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳಲಾಗಿದೆ. ಅಳದಂಗಡಿಯ ಸೈಂಟ್ ಪೀಟರ್ ಇಂಗ್ಲಿಷ್ ಮೀಡಿಯಂ ಶಾಲೆಯ ವಾರ್ಷಿಕೋತ್ಸವದಲ್ಲಿ ಪ್ರದರ್ಶಿಸಲಾದ ನೃತ್ಯ ರೂಪಕದಲ್ಲಿ ಪಹಲ್ಗಾಮ್ ದಾಳಿಯನ್ನು ಆಧಾರವಾಗಿಟ್ಟುಕೊಂಡ ದೃಶ್ಯಾವಳಿಗಳಲ್ಲಿ ಮುಸ್ಲಿಮರ ಧಾರ್ಮಿಕ ಉಡುಪುಗಳ ಬಳಕೆ ಮಾಡಿರುವುದು ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ ಹಾಗೂ ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆ ಇದೆ ಎಂದು ಮುಸ್ಲಿಮ್ ಸಮುದಾಯದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಶಾಲೆಯ ಸಂಚಾಲಕ ಫಾ. ಎಲ್ಯಾಸ್ ಡಿಸೋಜಾ ಅವರ ಅಧ್ಯಕ್ಷತೆಯಲ್ಲಿ ಮುಸ್ಲಿಮ್ ಸಮುದಾಯದ ಮುಖಂಡರು, ಧರ್ಮಗುರುಗಳು ಮತ್ತು…

ಮುಂದೆ ಓದಿ..
ಸುದ್ದಿ 

ಮೈಸೂರಿನಲ್ಲಿ ರಸ್ತೆ ಅಪಘಾತ: ಸುಳ್ಯದ ಯುವಕ ಮೃತ್ಯು

ಮೈಸೂರಿನಲ್ಲಿ ರಸ್ತೆ ಅಪಘಾತ: ಸುಳ್ಯದ ಯುವಕ ಮೃತ್ಯು ಮೈಸೂರಿನ ಮಳವಳ್ಳಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸುಳ್ಯ ತಾಲ್ಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪನಾಯ್ಕ ಅವರ ಪುತ್ರ ದೀಕ್ಷಿತ್ (25) ಮೃತ ಯುವಕನಾಗಿದ್ದಾರೆ. ದೀಕ್ಷಿತ್ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು, ಬೆಂಗಳೂರಿನಿಂದ ತನ್ನ ಸ್ವಗ್ರಾಮ ಕಂದಡ್ಕದ ಕಲ್ಟಾರಿನ ಮನೆಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಮೈಸೂರು ಸಮೀಪದ ಮಳವಳ್ಳಿ ಪ್ರದೇಶದಲ್ಲಿ ಅಪರಿಚಿತ ವಾಹನವೊಂದು ದೀಕ್ಷಿತ್ ಅವರ ಬೈಕ್‌ಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರೂ, ಮಾರ್ಗಮಧ್ಯೆ ದೀಕ್ಷಿತ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ದುರ್ಘಟನೆಯಿಂದ ಕುಟುಂಬಸ್ಥರು ಹಾಗೂ ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ. ಮೃತ ದೀಕ್ಷಿತ್ ತಂದೆ, ತಾಯಿ ಹಾಗೂ ಅಪಾರ ಬಂಧು…

ಮುಂದೆ ಓದಿ..