ಮೆಕ್ಕೆಜೋಳ ಖರೀದಿ ಮಿತಿಯನ್ನು 50 ಕ್ವಿಂಟಲ್ಗೆ ಹೆಚ್ಚಿಸಿದ ರಾಜ್ಯ ಸರ್ಕಾರ – ಹಾವೇರಿಯಲ್ಲಿ ರೈತರ ಹರ್ಷೋದ್ಗಾರ..
ಮೆಕ್ಕೆಜೋಳ ಖರೀದಿ ಮಿತಿಯನ್ನು 50 ಕ್ವಿಂಟಲ್ಗೆ ಹೆಚ್ಚಿಸಿದ ರಾಜ್ಯ ಸರ್ಕಾರ – ಹಾವೇರಿಯಲ್ಲಿ ರೈತರ ಹರ್ಷೋದ್ಗಾರ ಹಾವೇರಿ: ರಾಜ್ಯ ಸರ್ಕಾರ ಮೆಕ್ಕೆಜೋಳ ಬೆಳೆಗಾರರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿ, ಬೆಂಬಲ ಬೆಲೆಯಡಿ (MSP) ಪ್ರತಿ ರೈತನಿಂದ ಖರೀದಿಸುವ ಮೆಕ್ಕೆಜೋಳ ಪ್ರಮಾಣವನ್ನು 20 ಕ್ವಿಂಟಲ್ನಿಂದ 50 ಕ್ವಿಂಟಲ್ಗೆ ಹೆಚ್ಚಿಸುವ ಆದೇಶವನ್ನು ಭಾನುವಾರ ಹೊರಡಿಸಿದೆ. ಈ ನಿರ್ಧಾರದಿಂದ ಹಾವೇರಿಯನ್ನು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಹಾವೇರಿ ಜಿಲ್ಲೆಯಲ್ಲಿ ಮಾತ್ರವೇ ಈ ವರ್ಷ 2 ಲಕ್ಷ ಹೆಕ್ಟೇರ್ಗಿಂತ ಹೆಚ್ಚಾದ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಆಗಿತ್ತು. ಅತಿವೃಷ್ಟಿ ಹಾಗೂ ಹವಾಮಾನ ವೈಪರೀತ್ಯಗಳಿಂದ ಹಾನಿಯಾದರೂ ಸುಮಾರು 15 ಲಕ್ಷ ಟನ್ಗಿಂತ ಹೆಚ್ಚು ಮೆಕ್ಕೆಜೋಳ ಉತ್ಪಾದನೆ ದಾಖಲಾಗಿತ್ತು. ಆದರೆ ಮಾರುಕಟ್ಟೆಯಲ್ಲಿ ಆಕಸ್ಮಿಕ ದರ ಕುಸಿತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ, ರೈತ ಸಂಘಟನೆಗಳ ನೇತೃತ್ವದಲ್ಲಿ ಹಾವೇರಿ ಡಿಸಿ ಕಚೇರಿ…
ಮುಂದೆ ಓದಿ..
