ಸಿಎಂ ವಿರುದ್ಧ ಪ್ರತಿಭಟನೆ ನಡೆಸುವವರು ಗ್ಯಾರಂಟಿ ಸೌಲಭ್ಯ ತ್ಯಜಿಸಲಿ: ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸವಾಲು..
ಸಿಎಂ ವಿರುದ್ಧ ಪ್ರತಿಭಟನೆ ನಡೆಸುವವರು ಗ್ಯಾರಂಟಿ ಸೌಲಭ್ಯ ತ್ಯಜಿಸಲಿ: ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸವಾಲು.. ಕಾರವಾರ : ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳುವ ಬಿಜೆಪಿ ನಾಯಕರು ಮೊದಲು ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುವುದಿಲ್ಲ ಎಂದು ಅಫಿಡಾವಿಟ್ ಸಲ್ಲಿಸಬೇಕು. ಆಗ ಮಾತ್ರ ಅವರ ನೈತಿಕತೆ ಬಗ್ಗೆ ಮಾತನಾಡಲು ಹಕ್ಕಿದೆ ಎಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ. ಶಂಭು ಶೆಟ್ಟಿ ಸವಾಲು ಹಾಕಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಕ್ರಿಮ್ಸ್ ಆಸ್ಪತ್ರೆ ಉದ್ಘಾಟನೆ ವಿಚಾರದಲ್ಲಿ ಮಾಜಿ ಶಾಸಕಿ ಹಾಗೂ ಬಿಜೆಪಿ ನಾಯಕಿ ರೂಪಾಲಿ ನಾಯ್ಕ ನೀಡಿರುವ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಗಳ ನೈತಿಕತೆ ಪ್ರಶ್ನಿಸುವ ಮೊದಲು ಬಿಜೆಪಿ ನಾಯಕರು ಕಾಂಗ್ರೆಸ್ ನೀಡಿದ ಗ್ಯಾರಂಟಿ ಸೌಲಭ್ಯಗಳನ್ನು ತ್ಯಜಿಸುವುದಾಗಿ ಲಿಖಿತವಾಗಿ ಘೋಷಿಸಬೇಕು ಎಂದರು. ಕ್ರಿಮ್ಸ್ 450 ಹಾಸಿಗೆಗಳ…
ಮುಂದೆ ಓದಿ..
