ಸುದ್ದಿ 

ಅನಧಿಕೃತ ಹೋರ್ಡಿಂಗ್‌ಗಳಿಗೆ ಬ್ರೇಕ್‌! ಮಂಗಳೂರು ಪಾಲಿಕೆಯಲ್ಲಿ ಹೊಸ ಡಿಜಿಟಲ್ ವ್ಯವಸ್ಥೆ – ತೆರಿಗೆ ಆದಾಯ ದ್ವಿಗುಣ ಸಾಧ್ಯತೆ

ಅನಧಿಕೃತ ಹೋರ್ಡಿಂಗ್‌ಗಳಿಗೆ ಬ್ರೇಕ್‌! ಮಂಗಳೂರು ಪಾಲಿಕೆಯಲ್ಲಿ ಹೊಸ ಡಿಜಿಟಲ್ ವ್ಯವಸ್ಥೆ – ತೆರಿಗೆ ಆದಾಯ ದ್ವಿಗುಣ ಸಾಧ್ಯತೆ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅನಧಿಕೃತ ಹೋರ್ಡಿಂಗ್‌ಗಳ ಸಮಸ್ಯೆಗೆ ಅಂತ್ಯ ಹಾಡಲು ಪಾಲಿಕೆ ಮಹತ್ವದ ಹೆಜ್ಜೆ ಇಟ್ಟಿದೆ. ಜಾಹೀರಾತು ಫಲಕಗಳ ನಿಯಂತ್ರಣ ಮತ್ತು ತೆರಿಗೆ ಸಂಗ್ರಹವನ್ನು ಸುಧಾರಿಸುವ ಉದ್ದೇಶದಿಂದ ಎಎಚ್‌ಎಂಎಸ್‌ (Advertisement Hoarding Management System) ಎಂಬ ನೂತನ ಸಾಫ್ಟ್‌ವೇರ್‌ ಸಿದ್ಧಗೊಂಡಿದ್ದು, ವಾರದೊಳಗೆ ಅನುಷ್ಠಾನಕ್ಕೆ ಬರಲಿದೆ. ನಗರದಲ್ಲಿ ಅಳವಡಿಸಿರುವ ಹೋರ್ಡಿಂಗ್‌ಗಳ ಪೈಕಿ ಶೇ.40ಕ್ಕೂ ಹೆಚ್ಚು ಫಲಕಗಳು ಪರವಾನಗಿ ಇಲ್ಲದೇ ಅಕ್ರಮವಾಗಿ ಸ್ಥಾಪನೆಯಾಗಿರುವುದು ಪಾಲಿಕೆಯ ಸರ್ವೇಗಳಿಂದಲೇ ಸ್ಪಷ್ಟವಾಗಿದೆ. ಇದರ ಪರಿಣಾಮವಾಗಿ ಪಾಲಿಕೆಗೆ ವರ್ಷದಿಂದ ವರ್ಷಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ನಷ್ಟವಾಗುತ್ತಿತ್ತು. ಸಿಬ್ಬಂದಿ ಕೊರತೆಗೆ ಡಿಜಿಟಲ್ ಪರಿಹಾರ ಹೋರ್ಡಿಂಗ್‌ಗಳ ಪರಿಶೀಲನೆ, ದಾಖಲೆ ಸಂಗ್ರಹ ಮತ್ತು ತೆರಿಗೆ ಲೆಕ್ಕಾಚಾರಕ್ಕೆ ಬೇಕಾದಷ್ಟು ಸಿಬ್ಬಂದಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ, ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಜಾರಿಗೆ…

ಮುಂದೆ ಓದಿ..
ಸುದ್ದಿ 

ಬೀಡಿ ಕಾರ್ಮಿಕರಿಗೆ ತಿಂಗಳೊಳಗೆ ಕನಿಷ್ಠ ವೇತನ ಜಾರಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ

ಬೀಡಿ ಕಾರ್ಮಿಕರಿಗೆ ತಿಂಗಳೊಳಗೆ ಕನಿಷ್ಠ ವೇತನ ಜಾರಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ ಸಾವಿರ ಬೀಡಿಗೆ ₹301.91 ಕೂಲಿ ಜಾರಿಯಾದರೆ ಕಾರ್ಮಿಕರಿಗೆ ಲಾಭ ಬೆಳಗಾವಿ: ರಾಜ್ಯದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿರುವ ಲಕ್ಷಾಂತರ ಬೀಡಿ ಕಾರ್ಮಿಕರಿಗೆ ಸಂಬಂಧಿಸಿದಂತೆ ಕನಿಷ್ಠ ವೇತನ ನಿಗದಿ ಮಾಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಸ್ಪಷ್ಟ ಭರವಸೆ ನೀಡಿದೆ. ಮುಂದಿನ ಒಂದು ತಿಂಗಳೊಳಗೆ ಬೀಡಿ ಕಾರ್ಮಿಕರಿಗೆ ಕಾನೂನುಬದ್ಧ ಕನಿಷ್ಠ ಕೂಲಿ ಜಾರಿಗೊಳಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಸೋಮವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ, ಸದಸ್ಯ ಐವನ್ ಡಿಸೋಜಾ ಅವರು ಈ ವಿಷಯವನ್ನು ಪ್ರಸ್ತಾಪಿಸಿದರು. ಬೀಡಿ ಕಾರ್ಮಿಕರು ಸಂಪೂರ್ಣವಾಗಿ ಈ ಉದ್ಯೋಗವನ್ನೇ ಅವಲಂಬಿಸಿಕೊಂಡಿದ್ದು, ಸರ್ಕಾರ ಈಗಾಗಲೇ ನಿಗದಿಪಡಿಸಿರುವ ಕೂಲಿಯನ್ನು ಬೀಡಿ ಮಾಲೀಕರು ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು. ರಾಜ್ಯ ಸರ್ಕಾರ 2018ರ…

ಮುಂದೆ ಓದಿ..
ಸುದ್ದಿ 

ಹಾವೇರಿಯಲ್ಲಿ ಹೋರಿ ಹಬ್ಬಕ್ಕೆ ಹೈಕೋರ್ಟ್ ಹಸಿರು ನಿಶಾನೆ

ಹಾವೇರಿಯಲ್ಲಿ ಹೋರಿ ಹಬ್ಬಕ್ಕೆ ಹೈಕೋರ್ಟ್ ಹಸಿರು ನಿಶಾನೆ ಸುಪ್ರೀಂ ಕೋರ್ಟ್‌ ಷರತ್ತು ಕಟ್ಟುನಿಟ್ಟಾಗಿ ಪಾಲನೆಗೆ ಸರ್ಕಾರಕ್ಕೆ ನಿರ್ದೇಶನ ಹಾವೇರಿ ಜಿಲ್ಲೆಯಲ್ಲಿ ಸಾಂಪ್ರದಾಯಿಕವಾಗಿ ಆಚರಿಸಲಾಗುವ ಗೂಳಿ ಪಳಗಿಸುವ ‘ಹೋರಿ ಹಬ್ಬ’ಕ್ಕೆ ಕರ್ನಾಟಕ ಹೈಕೋರ್ಟ್‌ ಅನುಮತಿ ನೀಡಿದೆ. ಆದರೆ, ಈ ಉತ್ಸವವು ಜಲ್ಲಿಕಟ್ಟು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ವಿಧಿಸಿರುವ ಎಲ್ಲಾ ಷರತ್ತುಗಳಿಗೆ ಒಳಪಟ್ಟಿರಬೇಕು ಎಂದು ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸ್ಪಷ್ಟ ಸೂಚನೆ ನೀಡಿದೆ. ಹಾವೇರಿ ಜಿಲ್ಲೆಯ ಇಜಾರಿ ಲಕ್ಮಾಪುರ ಗ್ರಾಮದ ಅಖಿಲ ಕರ್ನಾಟಕ ರೈತರ ಜಾನಪದ ಕ್ರೀಡೆಯ ಹೋರಿ ಹಬ್ಬ ಹೋರಾಟ ಸಮಿತಿ ಅಧ್ಯಕ್ಷ ಬಸವರಾಜ ದ್ಯಾಮಣ್ಣ ಬಂಡಿವಡ್ಡರ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್‌ ಪೀಠದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ಬಳಿಕ ನ್ಯಾಯಾಲಯ ಈ ಆದೇಶ ನೀಡಿದೆ. ಉತ್ಸವದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಜವಾಬ್ದಾರಿ ಪೊಲೀಸ್…

ಮುಂದೆ ಓದಿ..
ಸುದ್ದಿ 

ಬೆಳಗಾವಿ ಜಿಲ್ಲೆ ವಿಭಜನೆಗೆ ಸರ್ಕಾರ ಚಿಂತನೆ: ಚಿಕ್ಕೋಡಿ–ಗೋಕಾಕ ನೂತನ ಜಿಲ್ಲೆಗಳ ಕುರಿತು ಅಭಿಪ್ರಾಯ ಸಂಗ್ರಹ

ಬೆಳಗಾವಿ ಜಿಲ್ಲೆ ವಿಭಜನೆಗೆ ಸರ್ಕಾರ ಚಿಂತನೆ: ಚಿಕ್ಕೋಡಿ–ಗೋಕಾಕ ನೂತನ ಜಿಲ್ಲೆಗಳ ಕುರಿತು ಅಭಿಪ್ರಾಯ ಸಂಗ್ರಹ ಬೆಳಗಾವಿ:ರಾಜ್ಯದ ಅತಿ ದೊಡ್ಡ ಜಿಲ್ಲೆಗಳಲ್ಲೊಂದಾದ ಬೆಳಗಾವಿಯನ್ನು ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕವನ್ನು ನೂತನ ಜಿಲ್ಲೆಗಳಾಗಿ ಘೋಷಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಸಂಬಂಧ ಸಾರ್ವಜನಿಕರು, ಶಾಸಕರು ಹಾಗೂ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆ ಕಲಾಪದ ವೇಳೆ ಶಾಸಕ ದುರ್ಯೋಧನ ಐಹೊಳೆ ಅವರ ಗಮನ ಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಸಚಿವರು,“ದೊಡ್ಡ ಜಿಲ್ಲೆಗಳ ಆಡಳಿತಾತ್ಮಕ ನಿರ್ವಹಣೆ ಕಷ್ಟಕರವಾಗುತ್ತಿದೆ. ಬೆಳಗಾವಿಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ ವಿಭಜಿಸಬೇಕೆಂಬ ಬೇಡಿಕೆಗಳು ಸರ್ಕಾರದ ಮುಂದೆ ಬಂದಿವೆ. ಈ ವಿಷಯವನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಅಭಿಪ್ರಾಯ ಸಂಗ್ರಹದ ಬಳಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು,” ಎಂದು ತಿಳಿಸಿದರು. ಈ ವೇಳೆ ಬಿಜೆಪಿ ಶಾಸಕಿ…

ಮುಂದೆ ಓದಿ..
ಸುದ್ದಿ 

ಕಂಪ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕಂಪ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಕಂಪ್ಲಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಂಪ್ಲಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಸೋಮವಾರ ಅತಿಥಿಗೃಹದ ಆವರಣದಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎನ್. ವೀರಭದ್ರಗೌಡ, ಸಮಾಜದ ಧ್ವನಿಯಾಗಿ ಪತ್ರಕರ್ತರು ಮಹತ್ವದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ ಎಂದು ಹೇಳಿದರು. ರಾಜ್ಯದ ಅನೇಕ ಪತ್ರಕರ್ತರು ಜೀವನ ಭದ್ರತೆಯ ಕೊರತೆಯ ನಡುವೆಯೂ ಸಂಕಷ್ಟಗಳನ್ನು ಎದುರಿಸಿ ಕರ್ತವ್ಯ ನಿರ್ವಹಿಸುತ್ತಿರುವುದು ಆತಂಕಕಾರಿ ವಿಷಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಸಮಾಜದಲ್ಲಿನ ಅಸಮಾನತೆಗಳು, ಅಕ್ರಮಗಳು ಹಾಗೂ ಸರ್ಕಾರ ಮತ್ತು ಜನಪ್ರತಿನಿಧಿಗಳ ಕಾರ್ಯವೈಖರಿಯ ಕುರಿತು ಜನಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಬರಹಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಹೇಳಿದರು. ಚುನಾವಣೆಯಲ್ಲಿ ತಾಲೂಕು ಘಟಕದ ಅಧ್ಯಕ್ಷರಾಗಿ ಬಂಗಿ ದೊಡ್ಡ ಮಂಜುನಾಥ, ಉಪಾಧ್ಯಕ್ಷರಾಗಿ ಕರಿ ವಿರುಪಾಕ್ಷಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ. ವೀರೇಶ್, ಕಾರ್ಯದರ್ಶಿಯಾಗಿ ಎಸ್.…

ಮುಂದೆ ಓದಿ..
ಸುದ್ದಿ 

ಕಾಳಗಿ ಅಭಿವೃದ್ಧಿಗೆ ಶಾಸಕ ಅವಿನಾಶ್ ಜಾಧವ್ ಕೊಡುಗೆ ಶೂನ್ಯ ಎನ್ನುವ ಆರೋಪ ಅಸಂಬದ್ಧ

ಕಾಳಗಿ ಅಭಿವೃದ್ಧಿಗೆ ಶಾಸಕ ಅವಿನಾಶ್ ಜಾಧವ್ ಕೊಡುಗೆ ಶೂನ್ಯ ಎನ್ನುವ ಆರೋಪ ಅಸಂಬದ್ಧ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಆಹ್ವಾನ ಕಾಳಗಿ:ಕಾಳಗಿ ಪಟ್ಟಣದ ಅಭಿವೃದ್ಧಿಗೆ ಶಾಸಕ ಡಾ. ಅವಿನಾಶ್ ಜಾಧವ್ ಅವರ ಕೊಡುಗೆ ಶೂನ್ಯವೆಂಬ ಕಾಂಗ್ರೆಸ್ ಕಾರ್ಯಕರ್ತರ ಆರೋಪಗಳಿಗೆ ಬಿಜೆಪಿ ತೀವ್ರ ಪ್ರತಿಕ್ರಿಯೆ ನೀಡಿದೆ. ಕಾಂಗ್ರೆಸ್ ನಾಯಕರು ದಾಖಲೆಗಳೊಂದಿಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ್ ಕದಂ ಸವಾಲು ಹಾಕಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಡಾ. ಅವಿನಾಶ್ ಜಾಧವ್ ಅವರ ಅವಧಿಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ದಾಖಲೆಗಳನ್ನು ಬಿಡುಗಡೆ ಮಾಡಿದರು. ಕಾಳಗಿ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ನಾಯಕರ ಪಾತ್ರವಿದ್ದರೆ ಕನಿಷ್ಠ ಒಂದಾದರೂ ದಾಖಲೆ ಜನರ ಮುಂದೆ ತೋರಿಸಲಿ. ಸುಳ್ಳು ಆರೋಪಗಳ ಮೂಲಕ ಜನರನ್ನು ದಾರಿ ತಪ್ಪಿಸುವುದು ಸರಿಯಲ್ಲ…

ಮುಂದೆ ಓದಿ..
ಸುದ್ದಿ 

ನಕಲಿ ಮತದಾರರ ಗುರುತಿನ ಚೀಟಿ ಆರೋಪ ಪ್ರಕರಣ: ಬಿಜೆಪಿ ವಿರುದ್ಧದ ಮಾನಹಾನಿ ದಾವೆ ವಾಪಸ್ ಪಡೆದ ರಿಝ್ವಾನ್ ಅರ್ಷದ್

ನಕಲಿ ಮತದಾರರ ಗುರುತಿನ ಚೀಟಿ ಆರೋಪ ಪ್ರಕರಣ: ಬಿಜೆಪಿ ವಿರುದ್ಧದ ಮಾನಹಾನಿ ದಾವೆ ವಾಪಸ್ ಪಡೆದ ರಿಝ್ವಾನ್ ಅರ್ಷದ್ ಬೆಂಗಳೂರು: 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಕಲಿ ಮತದಾರರ ಗುರುತಿನ ಚೀಟಿಗಳನ್ನು ತಯಾರಿಸಲಾಗುತ್ತಿದೆ ಎಂಬ ಆರೋಪದಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗಿದ್ದ ಟ್ವೀಟ್‌ಗಳನ್ನು ಅಳಿಸಲಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಬಿಜೆಪಿ ವಿರುದ್ಧ ಸಲ್ಲಿಸಿದ್ದ ಮಾನಹಾನಿ ಮೊಕದ್ದಮೆಯನ್ನು ಶಿವಾಜಿನಗರ ಶಾಸಕ ರಿಝ್ವಾನ್ ಅರ್ಷದ್ ಹಿಂಪಡೆದಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಐಟಿ ಸೆಲ್ ಅಧ್ಯಕ್ಷರ ವಿರುದ್ಧ ರಿಝ್ವಾನ್ ಅರ್ಷದ್ ಅವರು ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆಯನ್ನು ನಗರದ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸಿಜೆಎಂ) ಕೆ.ಎನ್. ಶಿವಕುಮಾರ್ ಅವರು ಶುಕ್ರವಾರ ನಡೆಸಿದರು. ವಿಚಾರಣೆಯಲ್ಲಿ ದೂರುದಾರರ ಪರ ವಕೀಲರಾದ ಸೂರ್ಯ ಮುಕುಂದರಾಜ್ ಹಾಗೂ ಸಂಜಯ್ ಯಾದವ್ ಹಾಜರಾಗಿ ವಾದ ಮಂಡಿಸಿದರು. ಆಧಾರವಿಲ್ಲದ ಆರೋಪಗಳನ್ನು ಮಾಡುತ್ತಾ ಟ್ವಿಟರ್‌ನಲ್ಲಿ ಪೋಸ್ಟ್‌ಗಳನ್ನು ಪ್ರಕಟಿಸಲಾಗಿದ್ದ ಕಾರಣ…

ಮುಂದೆ ಓದಿ..

1064 ಎಕರೆ ಭೂಮಿ ಭೂಹೀನರಿಗೆ ಹಂಚಿಕೆಗೆ ಸಿಪಿಐ(ಎಂಎಲ್) ಒತ್ತಾಯ

1064 ಎಕರೆ ಭೂಮಿ ಭೂಹೀನರಿಗೆ ಹಂಚಿಕೆಗೆ ಸಿಪಿಐ(ಎಂಎಲ್) ಒತ್ತಾಯ ರಾಯಚೂರು: ಸಿಂಧನೂರು ತಾಲೂಕಿನ ಜವಳಗೇರ ಗ್ರಾಮದಲ್ಲಿ ನಾಡಗೌಡರ ಕುಟುಂಬ ಕಳೆದ ನಾಲ್ಕೂವರೆ ದಶಕಗಳಿಂದ ಅಕ್ರಮವಾಗಿ ವಶದಲ್ಲಿಟ್ಟಿರುವ 1064 ಎಕರೆ ಭೂಮಿಯನ್ನು ತಕ್ಷಣವೇ ಭೂಹೀನ ರೈತರಿಗೆ ವಿತರಿಸಬೇಕೆಂದು ಸಿಪಿಐ(ಎಂಎಲ್) ರೆಡ್ ಸ್ಟಾರ್ ಪಕ್ಷವು ಒತ್ತಾಯಿಸಿದೆ. ಸಹಾಯಕ ಆಯುಕ್ತ ಬಸವಣ್ಣಪ್ಪ ಕಲಶೆಟ್ಟಿ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಪಕ್ಷದ ಪಾಲಿಟ್ ಬ್ಯುರೋ ಸದಸ್ಯ ಮಾನಸಯ್ಯ ಅವರು ಭೂ ಸುಧಾರಣೆ ಕಾಯ್ದೆಯ 74 ಮತ್ತು 75ನೇ ಕಲಂಗಳ ಅಡಿಯಲ್ಲಿ ಸಿಂಧನೂರು ತಾಲೂಕಿನ ಸರ್ವೇ ನಂ.48ಕ್ಕೆ ಸಂಬಂಧಿಸಿದ ಅಕ್ರಮ ಭೂ ವಹಿವಾಟಿನ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಕ್ರಮವಾಗಿ ಭೂಮಿ ವಶಪಡಿಸಿಕೊಂಡವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಬೇಕೆಂದು ಮನವಿಯಲ್ಲಿ ತಿಳಿಸಿದರು. ಇದೇ ವೇಳೆ ಲಿಂಗಸುಗೂರು ತಾಲೂಕಿನಲ್ಲಿ 25ರಿಂದ 30 ವರ್ಷಗಳಿಂದ ಕೃಷಿ ಮಾಡುತ್ತಿರುವ 998 ಭೂಹೀನ ರೈತರ ಅಕ್ರಮ ಸಕ್ರಮ ಅರ್ಜಿಗಳನ್ನು…

ಮುಂದೆ ಓದಿ..
ಸುದ್ದಿ 

ಮಂಡ್ಯ: ಮದುವೆ ಕನಸು ಕೈ ತಪ್ಪಿದ ಯುವಕರಿಂದ ಮಠ ನಿರ್ಮಾಣಕ್ಕೆ ಗ್ರಾ.ಪಂ.ಗೆ ಮನವಿ!

ಮಂಡ್ಯ: ಮದುವೆ ಕನಸು ಕೈ ತಪ್ಪಿದ ಯುವಕರಿಂದ ಮಠ ನಿರ್ಮಾಣಕ್ಕೆ ಗ್ರಾ.ಪಂ.ಗೆ ಮನವಿ! ಮದುವೆಯಾಗಲು ವಧು ದೊರಕದೆ ನಿರಾಸೆಯಲ್ಲಿರುವ ಅವಿವಾಹಿತ ಯುವಕರ ಗುಂಪೊಂದು, ಸಂಸಾರ ಬಿಟ್ಟು ಧಾರ್ಮಿಕ ಜೀವನ ನಡೆಸಲು ನಿರ್ಧರಿಸಿ ಮಠ ನಿರ್ಮಿಸಿ ಕೊಡಬೇಕೆಂದು ಗ್ರಾಮ ಪಂಚಾಯತ್‌ಗೆ ಮನವಿ ಸಲ್ಲಿಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮ ಪಂಚಾಯತ್‌ನಲ್ಲಿ ಇತ್ತೀಚೆಗೆ ನಡೆದ ಗ್ರಾಮಸಭೆಯಲ್ಲಿ ಸುಮಾರು 30 ಯುವಕರು ಏಕಕಾಲದಲ್ಲಿ ಹಾಜರಾಗಿ, ಪಂಚಾಯತ್ ವತಿಯಿಂದ ಮಠ ನಿರ್ಮಿಸಿ ಕೊಡಬೇಕೆಂದು ಲಿಖಿತ ಮನವಿ ಸಲ್ಲಿಸಿ ಎಲ್ಲರ ಗಮನ ಸೆಳೆದರು. ಗ್ರಾಮಸಭೆಯಲ್ಲಿ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಮಾತು ಪಡೆದ ಯುವಕರು, ಮದುವೆಗೆ ಸಾಕಷ್ಟು ಪ್ರಯತ್ನ ಮಾಡಿದರೂ ಹೆಣ್ಣು ಸಿಗುತ್ತಿಲ್ಲ. ಬದುಕಿನ ಮೇಲೆ ಬೇಸರ ಮೂಡಿದೆ. ಹೀಗಾಗಿ ಮಠವೊಂದರಲ್ಲಿ ದೇವರ ಭಜನೆ ಮಾಡುತ್ತಾ ಜೀವನ ಸಾಗಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ತಮ್ಮ ಮನವಿಯಲ್ಲಿ…

ಮುಂದೆ ಓದಿ..
ಸುದ್ದಿ 

ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ 106ನೇ ಸಂಸ್ಥಾಪನಾ ವಾರ್ಷಿಕೋತ್ಸವ

ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ 106ನೇ ಸಂಸ್ಥಾಪನಾ ವಾರ್ಷಿಕೋತ್ಸವ ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 106ನೇ ಸಂಸ್ಥಾಪನಾ ವಾರ್ಷಿಕೋತ್ಸವವನ್ನು ನಗರದ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷ ತಿಪ್ಪೇಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಅಧ್ಯಕ್ಷರು, ಸಂಸ್ಥೆಯ 106ನೇ ವರ್ಷಾಚರಣೆಯನ್ನು ಕೇಂದ್ರ ಕಚೇರಿ ಸೇರಿದಂತೆ ಜಿಲ್ಲೆಯಾದ್ಯಂತ ಇರುವ 33 ಶಾಖೆಗಳಲ್ಲಿ ಸಂಭ್ರಮದಿಂದ ಆಚರಿಸುವಂತೆ ಸೂಚನೆ ನೀಡಲಾಗಿತ್ತು ಎಂದು ಹೇಳಿದರು. ಬ್ಯಾಂಕ್ ಈ ಮಟ್ಟಿಗೆ ಬೆಳೆಯಲು ಕಾರಣವಾದ ಹಿಂದಿನ ಎಲ್ಲ ಅಧ್ಯಕ್ಷರ ದೂರದೃಷ್ಟಿ, ಆಡಳಿತ ಮಂಡಳಿಗಳ ಸಮರ್ಪಿತ ಸೇವೆ ಹಾಗೂ ಸಿಬ್ಬಂದಿಯ ನಿಸ್ವಾರ್ಥ ಪರಿಶ್ರಮವನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಬಿ, ಕೇಂದ್ರ ಕಚೇರಿಯ ವಿವಿಧ ವಿಭಾಗಗಳ ಉಪ ಪ್ರಧಾನ ವ್ಯವಸ್ಥಾಪಕರು, ಬ್ಯಾಂಕ್ ನೌಕರರು, ಸ್ಥಳೀಯ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ಹಾಜರಿದ್ದರು.

ಮುಂದೆ ಓದಿ..