ಮೇಕೆದಾಟು ಯೋಜನೆಯಲ್ಲಿ ಮಹತ್ವದ ಬೆಳವಣಿಗೆ : ರಾಮನಗರದಲ್ಲಿ ಆರಂಭವಾಗಲಿದೆ ಯೋಜನಾ ಕಚೇರಿ
ಮೇಕೆದಾಟು ಯೋಜನೆಯಲ್ಲಿ ಮಹತ್ವದ ಬೆಳವಣಿಗೆ : ರಾಮನಗರದಲ್ಲಿ ಆರಂಭವಾಗಲಿದೆ ಯೋಜನಾ ಕಚೇರಿ ರಾಮನಗರ: ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಹಾಗೂ ವಿದ್ಯುತ್ ಉತ್ಪಾದನೆಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಕೈಗೊಂಡಿರುವ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಪ್ರಮುಖ ಬೆಳವಣಿಗೆ ನಡೆದಿದೆ. ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ರಾಮನಗರದಲ್ಲಿ ಮೇಕೆದಾಟು ಯೋಜನಾ ಕಚೇರಿ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಎಂಜಿನಿಯರಿಂಗ್ ಸಂಶೋಧನಾ ಕೇಂದ್ರ (ಕೆಇಆರ್ಎಸ್) ನಿರ್ದೇಶಕರ ಮಾರ್ಗದರ್ಶನದಲ್ಲಿ ವಿಶೇಷ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಈ ತಂಡ ರಾಮನಗರವನ್ನೇ ಕೇಂದ್ರ ಸ್ಥಾನವಾಗಿಟ್ಟುಕೊಂಡು ಕಾರ್ಯನಿರ್ವಹಿಸಲಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ, ಯೋಜನೆಗೆ ಇದ್ದ ಪ್ರಮುಖ ಕಾನೂನು ಅಡ್ಡಿ ನಿವಾರಣೆಯಾಗಿದೆ. ನವೆಂಬರ್ 18ರಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೇಕೆದಾಟು…
ಮುಂದೆ ಓದಿ..
