ಮೈಸೂರು–ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275: ಪ್ಯಾಕೇಜ್–2 ಕಾಮಗಾರಿಗೆ ಚಾಲನೆ

ಮೈಸೂರು–ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275: ಪ್ಯಾಕೇಜ್–2 ಕಾಮಗಾರಿಗೆ ಚಾಲನೆ ₹4,126 ಕೋಟಿ ವೆಚ್ಚದ 4-ಲೇನ್ ರಸ್ತೆ ಯೋಜನೆಗೆ ಅರಣ್ಯ ಇಲಾಖೆಯ ಅನುಮತಿ ಮೈಸೂರು: ಮೈಸೂರು–ಕುಶಾಲನಗರ ನಡುವಿನ ರಾಷ್ಟ್ರೀಯ ಹೆದ್ದಾರಿ 275ರ ಎರಡನೇ ಹಂತದ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅಂತಿಮ ಅನುಮೋದನೆ ಲಭಿಸಿದ್ದು, ಡಿಸೆಂಬರ್ 8ರಿಂದ ಪ್ಯಾಕೇಜ್–2ರ ಕಾಮಗಾರಿ ಅಧಿಕೃತವಾಗಿ ಆರಂಭವಾಗಲಿದೆ. ಒಟ್ಟು 92.3 ಕಿಲೋಮೀಟರ್ ಉದ್ದದ ಈ ಹೆದ್ದಾರಿಯನ್ನು ನಾಲ್ಕು ಲೇನ್‌ಗಳಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದಕ್ಕಾಗಿ ₹4,126 ಕೋಟಿ ಮೊತ್ತವನ್ನು ಮೀಸಲಿರಿಸಲಾಗಿದೆ. ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಮೈಸೂರು–ಮಡಿಕೇರಿ ರಸ್ತೆಯಲ್ಲಿ ಉಂಟಾಗುತ್ತಿರುವ ತೀವ್ರ ಸಂಚಾರ ದಟ್ಟಣೆ ಕಡಿಮೆಯಾಗಲಿದ್ದು, ಮೈಸೂರು ಹಾಗೂ ಕೊಡಗು ಜಿಲ್ಲೆಗಳ ಪ್ರವಾಸೋದ್ಯಮ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಮಹತ್ವದ ಉತ್ತೇಜನ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 12, 2023ರಂದು ಮಂಡ್ಯದಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದರು. ಮೈಸೂರು–ಕೊಡಗು ಸಂಸದ…

ಮುಂದೆ ಓದಿ..
ಸುದ್ದಿ 

ರ‍್ಯಾಂಡಮ್‌ ಪರೀಕ್ಷೆ: 77 ಶಿಕ್ಷಣ ಸಂಸ್ಥೆಗಳ ಪೈಕಿ 20 ವಿದ್ಯಾರ್ಥಿಗಳಲ್ಲಿ ಮಾದಕ ಸೇವನೆ ಪತ್ತೆ

ಕಾಲೇಜು ಕ್ಯಾಂಪಸ್‌ಗಳಲ್ಲಿ ಡ್ರಗ್ಸ್‌ ವಿರುದ್ಧ ಪೊಲೀಸ್‌ ದಾಳಿ ರ‍್ಯಾಂಡಮ್‌ ಪರೀಕ್ಷೆ: 77 ಶಿಕ್ಷಣ ಸಂಸ್ಥೆಗಳ ಪೈಕಿ 20 ವಿದ್ಯಾರ್ಥಿಗಳಲ್ಲಿ ಮಾದಕ ಸೇವನೆ ಪತ್ತೆ ಮಂಗಳೂರು: ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಶಾಲಾ ಹಾಗೂ ಕಾಲೇಜು ಕ್ಯಾಂಪಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ವಹಿವಾಟಿಗೆ ಕಡಿವಾಣ ಹಾಕುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಜಾಗೃತಿ ಮತ್ತು ಡ್ರಗ್ಸ್‌ ತಪಾಸಣಾ ಅಭಿಯಾನದ ಮೊದಲ ಹಂತ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಅವಧಿಯಲ್ಲಿ 77 ಶಾಲಾ–ಕಾಲೇಜುಗಳಲ್ಲಿ ನಡೆಸಿದ ರ‍್ಯಾಂಡಮ್‌ ಪರೀಕ್ಷೆಯಲ್ಲಿ 20 ವಿದ್ಯಾರ್ಥಿಗಳಲ್ಲಿ ಮಾದಕ ಸೇವನೆ ಪತ್ತೆಯಾಗಿದೆ. ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್‌ ರೆಡ್ಡಿ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮಾದಕ ಜಾಲದ ವಿರುದ್ಧ ಕಠಿಣ ನಿಲುವು ತಳೆದಿದ್ದು, ವಿಶೇಷವಾಗಿ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ಗಳಲ್ಲಿ ಹೆಚ್ಚುತ್ತಿರುವ ಡ್ರಗ್ಸ್‌ ಬಳಕೆಯನ್ನು ನಿಯಂತ್ರಿಸಲು ಈ ಕಾರ್ಯಾಚರಣೆಗೆ ಚಾಲನೆ ನೀಡಲಾಗಿತ್ತು. ಕೆಲ ಕಾಲೇಜು ಆಡಳಿತ ಮಂಡಳಿಗಳಿಂದ…

ಮುಂದೆ ಓದಿ..
ಸುದ್ದಿ 

ದಶಕ ಕಳೆದರೂ ಪುತ್ತೂರಿನಲ್ಲಿ ಒಂದೂ ನಿವೇಶನ ವಿತರಣೆ ಇಲ್ಲ

ದಶಕ ಕಳೆದರೂ ಪುತ್ತೂರಿನಲ್ಲಿ ಒಂದೂ ನಿವೇಶನ ವಿತರಣೆ ಇಲ್ಲ 4 ಸಾವಿರಕ್ಕೂ ಅಧಿಕ ಅರ್ಜಿಗಳು ಕಡತಗಳಲ್ಲೇ ಸಿಲುಕಿವೆ ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಜನಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದರೂ, ಮನೆ ಕಟ್ಟಲು ಅಗತ್ಯವಿರುವ ನಿವೇಶನ ವಿತರಣೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಯಾವುದೇ ಪ್ರಗತಿ ಕಂಡುಬಂದಿಲ್ಲ. ನಗರಸಭೆ ವ್ಯಾಪ್ತಿಯಲ್ಲಿ ಈ ಅವಧಿಯಲ್ಲಿ ಒಂದೇ ಒಂದು ನಿವೇಶನವೂ ವಿತರಿಸಲ್ಪಟ್ಟಿಲ್ಲ ಎಂಬುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಇದರ ಪರಿಣಾಮವಾಗಿ ಸುಮಾರು 4 ಸಾವಿರಕ್ಕೂ ಹೆಚ್ಚು ಮಂದಿ ನಿವೇಶನಕ್ಕಾಗಿ ಸಲ್ಲಿಸಿರುವ ಅರ್ಜಿಗಳು ವರ್ಷಗಳಿಂದ ನಗರಸಭೆ ಕಚೇರಿಗಳಲ್ಲೇ ಧೂಳು ಹಿಡಿದು ಮಲಗಿವೆ. ಸುಮಾರು 32 ಚದರ ಕಿಲೋಮೀಟರ್ ವ್ಯಾಪ್ತಿಯುಳ್ಳ ಪುತ್ತೂರು ನಗರಸಭೆ ಪ್ರದೇಶದಲ್ಲಿ ನೂರಾರು ನಿವೇಶನಗಳನ್ನು ರೂಪಿಸುವ ಸಾಧ್ಯತೆ ಇದ್ದರೂ, ತಾಂತ್ರಿಕ ಮತ್ತು ಕಾನೂನು ತೊಡಕುಗಳ ನೆಪದಲ್ಲಿ ಜಾಗಗಳನ್ನು ಪಡೆದುಕೊಳ್ಳುವಲ್ಲಿ ಆಡಳಿತ ವಿಫಲವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ನಿವೇಶನ ನಿರೀಕ್ಷೆಯಲ್ಲಿ ನೂರಾರು ಕುಟುಂಬಗಳು…

ಮುಂದೆ ಓದಿ..
ಸುದ್ದಿ 

ಅನಧಿಕೃತ ಹೋರ್ಡಿಂಗ್‌ಗಳಿಗೆ ಬ್ರೇಕ್‌! ಮಂಗಳೂರು ಪಾಲಿಕೆಯಲ್ಲಿ ಹೊಸ ಡಿಜಿಟಲ್ ವ್ಯವಸ್ಥೆ – ತೆರಿಗೆ ಆದಾಯ ದ್ವಿಗುಣ ಸಾಧ್ಯತೆ

ಅನಧಿಕೃತ ಹೋರ್ಡಿಂಗ್‌ಗಳಿಗೆ ಬ್ರೇಕ್‌! ಮಂಗಳೂರು ಪಾಲಿಕೆಯಲ್ಲಿ ಹೊಸ ಡಿಜಿಟಲ್ ವ್ಯವಸ್ಥೆ – ತೆರಿಗೆ ಆದಾಯ ದ್ವಿಗುಣ ಸಾಧ್ಯತೆ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅನಧಿಕೃತ ಹೋರ್ಡಿಂಗ್‌ಗಳ ಸಮಸ್ಯೆಗೆ ಅಂತ್ಯ ಹಾಡಲು ಪಾಲಿಕೆ ಮಹತ್ವದ ಹೆಜ್ಜೆ ಇಟ್ಟಿದೆ. ಜಾಹೀರಾತು ಫಲಕಗಳ ನಿಯಂತ್ರಣ ಮತ್ತು ತೆರಿಗೆ ಸಂಗ್ರಹವನ್ನು ಸುಧಾರಿಸುವ ಉದ್ದೇಶದಿಂದ ಎಎಚ್‌ಎಂಎಸ್‌ (Advertisement Hoarding Management System) ಎಂಬ ನೂತನ ಸಾಫ್ಟ್‌ವೇರ್‌ ಸಿದ್ಧಗೊಂಡಿದ್ದು, ವಾರದೊಳಗೆ ಅನುಷ್ಠಾನಕ್ಕೆ ಬರಲಿದೆ. ನಗರದಲ್ಲಿ ಅಳವಡಿಸಿರುವ ಹೋರ್ಡಿಂಗ್‌ಗಳ ಪೈಕಿ ಶೇ.40ಕ್ಕೂ ಹೆಚ್ಚು ಫಲಕಗಳು ಪರವಾನಗಿ ಇಲ್ಲದೇ ಅಕ್ರಮವಾಗಿ ಸ್ಥಾಪನೆಯಾಗಿರುವುದು ಪಾಲಿಕೆಯ ಸರ್ವೇಗಳಿಂದಲೇ ಸ್ಪಷ್ಟವಾಗಿದೆ. ಇದರ ಪರಿಣಾಮವಾಗಿ ಪಾಲಿಕೆಗೆ ವರ್ಷದಿಂದ ವರ್ಷಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ನಷ್ಟವಾಗುತ್ತಿತ್ತು. ಸಿಬ್ಬಂದಿ ಕೊರತೆಗೆ ಡಿಜಿಟಲ್ ಪರಿಹಾರ ಹೋರ್ಡಿಂಗ್‌ಗಳ ಪರಿಶೀಲನೆ, ದಾಖಲೆ ಸಂಗ್ರಹ ಮತ್ತು ತೆರಿಗೆ ಲೆಕ್ಕಾಚಾರಕ್ಕೆ ಬೇಕಾದಷ್ಟು ಸಿಬ್ಬಂದಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ, ತಂತ್ರಜ್ಞಾನ ಆಧಾರಿತ ವ್ಯವಸ್ಥೆ ಜಾರಿಗೆ…

ಮುಂದೆ ಓದಿ..
ಸುದ್ದಿ 

ಬೀಡಿ ಕಾರ್ಮಿಕರಿಗೆ ತಿಂಗಳೊಳಗೆ ಕನಿಷ್ಠ ವೇತನ ಜಾರಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ

ಬೀಡಿ ಕಾರ್ಮಿಕರಿಗೆ ತಿಂಗಳೊಳಗೆ ಕನಿಷ್ಠ ವೇತನ ಜಾರಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ ಸಾವಿರ ಬೀಡಿಗೆ ₹301.91 ಕೂಲಿ ಜಾರಿಯಾದರೆ ಕಾರ್ಮಿಕರಿಗೆ ಲಾಭ ಬೆಳಗಾವಿ: ರಾಜ್ಯದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿರುವ ಲಕ್ಷಾಂತರ ಬೀಡಿ ಕಾರ್ಮಿಕರಿಗೆ ಸಂಬಂಧಿಸಿದಂತೆ ಕನಿಷ್ಠ ವೇತನ ನಿಗದಿ ಮಾಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಸ್ಪಷ್ಟ ಭರವಸೆ ನೀಡಿದೆ. ಮುಂದಿನ ಒಂದು ತಿಂಗಳೊಳಗೆ ಬೀಡಿ ಕಾರ್ಮಿಕರಿಗೆ ಕಾನೂನುಬದ್ಧ ಕನಿಷ್ಠ ಕೂಲಿ ಜಾರಿಗೊಳಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಸೋಮವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ, ಸದಸ್ಯ ಐವನ್ ಡಿಸೋಜಾ ಅವರು ಈ ವಿಷಯವನ್ನು ಪ್ರಸ್ತಾಪಿಸಿದರು. ಬೀಡಿ ಕಾರ್ಮಿಕರು ಸಂಪೂರ್ಣವಾಗಿ ಈ ಉದ್ಯೋಗವನ್ನೇ ಅವಲಂಬಿಸಿಕೊಂಡಿದ್ದು, ಸರ್ಕಾರ ಈಗಾಗಲೇ ನಿಗದಿಪಡಿಸಿರುವ ಕೂಲಿಯನ್ನು ಬೀಡಿ ಮಾಲೀಕರು ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು. ರಾಜ್ಯ ಸರ್ಕಾರ 2018ರ…

ಮುಂದೆ ಓದಿ..
ಸುದ್ದಿ 

ಹಾವೇರಿಯಲ್ಲಿ ಹೋರಿ ಹಬ್ಬಕ್ಕೆ ಹೈಕೋರ್ಟ್ ಹಸಿರು ನಿಶಾನೆ

ಹಾವೇರಿಯಲ್ಲಿ ಹೋರಿ ಹಬ್ಬಕ್ಕೆ ಹೈಕೋರ್ಟ್ ಹಸಿರು ನಿಶಾನೆ ಸುಪ್ರೀಂ ಕೋರ್ಟ್‌ ಷರತ್ತು ಕಟ್ಟುನಿಟ್ಟಾಗಿ ಪಾಲನೆಗೆ ಸರ್ಕಾರಕ್ಕೆ ನಿರ್ದೇಶನ ಹಾವೇರಿ ಜಿಲ್ಲೆಯಲ್ಲಿ ಸಾಂಪ್ರದಾಯಿಕವಾಗಿ ಆಚರಿಸಲಾಗುವ ಗೂಳಿ ಪಳಗಿಸುವ ‘ಹೋರಿ ಹಬ್ಬ’ಕ್ಕೆ ಕರ್ನಾಟಕ ಹೈಕೋರ್ಟ್‌ ಅನುಮತಿ ನೀಡಿದೆ. ಆದರೆ, ಈ ಉತ್ಸವವು ಜಲ್ಲಿಕಟ್ಟು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ವಿಧಿಸಿರುವ ಎಲ್ಲಾ ಷರತ್ತುಗಳಿಗೆ ಒಳಪಟ್ಟಿರಬೇಕು ಎಂದು ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಸ್ಪಷ್ಟ ಸೂಚನೆ ನೀಡಿದೆ. ಹಾವೇರಿ ಜಿಲ್ಲೆಯ ಇಜಾರಿ ಲಕ್ಮಾಪುರ ಗ್ರಾಮದ ಅಖಿಲ ಕರ್ನಾಟಕ ರೈತರ ಜಾನಪದ ಕ್ರೀಡೆಯ ಹೋರಿ ಹಬ್ಬ ಹೋರಾಟ ಸಮಿತಿ ಅಧ್ಯಕ್ಷ ಬಸವರಾಜ ದ್ಯಾಮಣ್ಣ ಬಂಡಿವಡ್ಡರ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್‌ ಪೀಠದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ಬಳಿಕ ನ್ಯಾಯಾಲಯ ಈ ಆದೇಶ ನೀಡಿದೆ. ಉತ್ಸವದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಜವಾಬ್ದಾರಿ ಪೊಲೀಸ್…

ಮುಂದೆ ಓದಿ..
ಸುದ್ದಿ 

ಬೆಳಗಾವಿ ಜಿಲ್ಲೆ ವಿಭಜನೆಗೆ ಸರ್ಕಾರ ಚಿಂತನೆ: ಚಿಕ್ಕೋಡಿ–ಗೋಕಾಕ ನೂತನ ಜಿಲ್ಲೆಗಳ ಕುರಿತು ಅಭಿಪ್ರಾಯ ಸಂಗ್ರಹ

ಬೆಳಗಾವಿ ಜಿಲ್ಲೆ ವಿಭಜನೆಗೆ ಸರ್ಕಾರ ಚಿಂತನೆ: ಚಿಕ್ಕೋಡಿ–ಗೋಕಾಕ ನೂತನ ಜಿಲ್ಲೆಗಳ ಕುರಿತು ಅಭಿಪ್ರಾಯ ಸಂಗ್ರಹ ಬೆಳಗಾವಿ:ರಾಜ್ಯದ ಅತಿ ದೊಡ್ಡ ಜಿಲ್ಲೆಗಳಲ್ಲೊಂದಾದ ಬೆಳಗಾವಿಯನ್ನು ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕವನ್ನು ನೂತನ ಜಿಲ್ಲೆಗಳಾಗಿ ಘೋಷಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಸಂಬಂಧ ಸಾರ್ವಜನಿಕರು, ಶಾಸಕರು ಹಾಗೂ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆ ಕಲಾಪದ ವೇಳೆ ಶಾಸಕ ದುರ್ಯೋಧನ ಐಹೊಳೆ ಅವರ ಗಮನ ಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಸಚಿವರು,“ದೊಡ್ಡ ಜಿಲ್ಲೆಗಳ ಆಡಳಿತಾತ್ಮಕ ನಿರ್ವಹಣೆ ಕಷ್ಟಕರವಾಗುತ್ತಿದೆ. ಬೆಳಗಾವಿಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ ವಿಭಜಿಸಬೇಕೆಂಬ ಬೇಡಿಕೆಗಳು ಸರ್ಕಾರದ ಮುಂದೆ ಬಂದಿವೆ. ಈ ವಿಷಯವನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಅಭಿಪ್ರಾಯ ಸಂಗ್ರಹದ ಬಳಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು,” ಎಂದು ತಿಳಿಸಿದರು. ಈ ವೇಳೆ ಬಿಜೆಪಿ ಶಾಸಕಿ…

ಮುಂದೆ ಓದಿ..
ಸುದ್ದಿ 

ಕಂಪ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕಂಪ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಕಂಪ್ಲಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಂಪ್ಲಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಸೋಮವಾರ ಅತಿಥಿಗೃಹದ ಆವರಣದಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎನ್. ವೀರಭದ್ರಗೌಡ, ಸಮಾಜದ ಧ್ವನಿಯಾಗಿ ಪತ್ರಕರ್ತರು ಮಹತ್ವದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ ಎಂದು ಹೇಳಿದರು. ರಾಜ್ಯದ ಅನೇಕ ಪತ್ರಕರ್ತರು ಜೀವನ ಭದ್ರತೆಯ ಕೊರತೆಯ ನಡುವೆಯೂ ಸಂಕಷ್ಟಗಳನ್ನು ಎದುರಿಸಿ ಕರ್ತವ್ಯ ನಿರ್ವಹಿಸುತ್ತಿರುವುದು ಆತಂಕಕಾರಿ ವಿಷಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಸಮಾಜದಲ್ಲಿನ ಅಸಮಾನತೆಗಳು, ಅಕ್ರಮಗಳು ಹಾಗೂ ಸರ್ಕಾರ ಮತ್ತು ಜನಪ್ರತಿನಿಧಿಗಳ ಕಾರ್ಯವೈಖರಿಯ ಕುರಿತು ಜನಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಬರಹಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಹೇಳಿದರು. ಚುನಾವಣೆಯಲ್ಲಿ ತಾಲೂಕು ಘಟಕದ ಅಧ್ಯಕ್ಷರಾಗಿ ಬಂಗಿ ದೊಡ್ಡ ಮಂಜುನಾಥ, ಉಪಾಧ್ಯಕ್ಷರಾಗಿ ಕರಿ ವಿರುಪಾಕ್ಷಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ. ವೀರೇಶ್, ಕಾರ್ಯದರ್ಶಿಯಾಗಿ ಎಸ್.…

ಮುಂದೆ ಓದಿ..
ಸುದ್ದಿ 

ಕಾಳಗಿ ಅಭಿವೃದ್ಧಿಗೆ ಶಾಸಕ ಅವಿನಾಶ್ ಜಾಧವ್ ಕೊಡುಗೆ ಶೂನ್ಯ ಎನ್ನುವ ಆರೋಪ ಅಸಂಬದ್ಧ

ಕಾಳಗಿ ಅಭಿವೃದ್ಧಿಗೆ ಶಾಸಕ ಅವಿನಾಶ್ ಜಾಧವ್ ಕೊಡುಗೆ ಶೂನ್ಯ ಎನ್ನುವ ಆರೋಪ ಅಸಂಬದ್ಧ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಆಹ್ವಾನ ಕಾಳಗಿ:ಕಾಳಗಿ ಪಟ್ಟಣದ ಅಭಿವೃದ್ಧಿಗೆ ಶಾಸಕ ಡಾ. ಅವಿನಾಶ್ ಜಾಧವ್ ಅವರ ಕೊಡುಗೆ ಶೂನ್ಯವೆಂಬ ಕಾಂಗ್ರೆಸ್ ಕಾರ್ಯಕರ್ತರ ಆರೋಪಗಳಿಗೆ ಬಿಜೆಪಿ ತೀವ್ರ ಪ್ರತಿಕ್ರಿಯೆ ನೀಡಿದೆ. ಕಾಂಗ್ರೆಸ್ ನಾಯಕರು ದಾಖಲೆಗಳೊಂದಿಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ್ ಕದಂ ಸವಾಲು ಹಾಕಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಡಾ. ಅವಿನಾಶ್ ಜಾಧವ್ ಅವರ ಅವಧಿಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ದಾಖಲೆಗಳನ್ನು ಬಿಡುಗಡೆ ಮಾಡಿದರು. ಕಾಳಗಿ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ನಾಯಕರ ಪಾತ್ರವಿದ್ದರೆ ಕನಿಷ್ಠ ಒಂದಾದರೂ ದಾಖಲೆ ಜನರ ಮುಂದೆ ತೋರಿಸಲಿ. ಸುಳ್ಳು ಆರೋಪಗಳ ಮೂಲಕ ಜನರನ್ನು ದಾರಿ ತಪ್ಪಿಸುವುದು ಸರಿಯಲ್ಲ…

ಮುಂದೆ ಓದಿ..
ಸುದ್ದಿ 

ನಕಲಿ ಮತದಾರರ ಗುರುತಿನ ಚೀಟಿ ಆರೋಪ ಪ್ರಕರಣ: ಬಿಜೆಪಿ ವಿರುದ್ಧದ ಮಾನಹಾನಿ ದಾವೆ ವಾಪಸ್ ಪಡೆದ ರಿಝ್ವಾನ್ ಅರ್ಷದ್

ನಕಲಿ ಮತದಾರರ ಗುರುತಿನ ಚೀಟಿ ಆರೋಪ ಪ್ರಕರಣ: ಬಿಜೆಪಿ ವಿರುದ್ಧದ ಮಾನಹಾನಿ ದಾವೆ ವಾಪಸ್ ಪಡೆದ ರಿಝ್ವಾನ್ ಅರ್ಷದ್ ಬೆಂಗಳೂರು: 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಕಲಿ ಮತದಾರರ ಗುರುತಿನ ಚೀಟಿಗಳನ್ನು ತಯಾರಿಸಲಾಗುತ್ತಿದೆ ಎಂಬ ಆರೋಪದಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗಿದ್ದ ಟ್ವೀಟ್‌ಗಳನ್ನು ಅಳಿಸಲಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಬಿಜೆಪಿ ವಿರುದ್ಧ ಸಲ್ಲಿಸಿದ್ದ ಮಾನಹಾನಿ ಮೊಕದ್ದಮೆಯನ್ನು ಶಿವಾಜಿನಗರ ಶಾಸಕ ರಿಝ್ವಾನ್ ಅರ್ಷದ್ ಹಿಂಪಡೆದಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಐಟಿ ಸೆಲ್ ಅಧ್ಯಕ್ಷರ ವಿರುದ್ಧ ರಿಝ್ವಾನ್ ಅರ್ಷದ್ ಅವರು ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆಯನ್ನು ನಗರದ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸಿಜೆಎಂ) ಕೆ.ಎನ್. ಶಿವಕುಮಾರ್ ಅವರು ಶುಕ್ರವಾರ ನಡೆಸಿದರು. ವಿಚಾರಣೆಯಲ್ಲಿ ದೂರುದಾರರ ಪರ ವಕೀಲರಾದ ಸೂರ್ಯ ಮುಕುಂದರಾಜ್ ಹಾಗೂ ಸಂಜಯ್ ಯಾದವ್ ಹಾಜರಾಗಿ ವಾದ ಮಂಡಿಸಿದರು. ಆಧಾರವಿಲ್ಲದ ಆರೋಪಗಳನ್ನು ಮಾಡುತ್ತಾ ಟ್ವಿಟರ್‌ನಲ್ಲಿ ಪೋಸ್ಟ್‌ಗಳನ್ನು ಪ್ರಕಟಿಸಲಾಗಿದ್ದ ಕಾರಣ…

ಮುಂದೆ ಓದಿ..