ಮೈಸೂರು ಯೂನಿಟಿ ಮಾಲ್ ವಿಚಾರ: ನ್ಯಾಯಾಲಯದ ತಡೆಯಾಜ್ಞೆ ಕುರಿತು ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ
ಮೈಸೂರು ಯೂನಿಟಿ ಮಾಲ್ ವಿಚಾರ: ನ್ಯಾಯಾಲಯದ ತಡೆಯಾಜ್ಞೆ ಕುರಿತು ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ ಮೈಸೂರಿನಲ್ಲಿ ಪ್ರಸ್ತಾಪಿತ ಯೂನಿಟಿ ಮಾಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಯಥಾಸ್ಥಿತಿ ಕಾಪಾಡುವಂತೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಯೂನಿಟಿ ಮಾಲ್ ಸ್ಥಾಪನೆಗೆ ತಮ್ಮ ವಿರೋಧವಿಲ್ಲ ಎಂದು ಹೇಳಿದ ಅವರು, ಆದರೆ ಖಾಸಗಿ ಆಸ್ತಿಯಲ್ಲಿ ನಿರ್ಮಾಣ ನಡೆಸುವುದು ಸೂಕ್ತವಲ್ಲ ಎಂಬುದನ್ನು ಪುನರುಚ್ಚರಿಸಿದ್ದಾರೆ. ರಾಜ್ಯದ ಕರಕುಶಲ ವಸ್ತುಗಳು ಹಾಗೂ ಜಿಐ ಟ್ಯಾಗ್ ಪಡೆದ ಉತ್ಪನ್ನಗಳ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಅವರು ತಿಳಿಸಿದ್ದಾರೆ. ಸರ್ಕಾರವು ತನ್ನದೇ ಆದ ಭೂಮಿಯಲ್ಲಿ ಯೂನಿಟಿ ಮಾಲ್ ನಿರ್ಮಿಸಿದರೆ ಅದಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದಿದ್ದಾರೆ. ಆದರೆ ತಮ್ಮ ಪೂರ್ವಜರಿಗೆ ಸೇರಿದ್ದ ಖಾಸಗಿ ಜಾಗವನ್ನು ಈ ಯೋಜನೆಗೆ ಬಳಸುವುದು ನ್ಯಾಯಸಮ್ಮತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ಕಸಬಾ ಹೋಬಳಿಯ ಸರ್ವೇ ನಂಬರ್…
ಮುಂದೆ ಓದಿ..
