ರಾಯರ ಹುಂಡಿಯಲ್ಲಿ 21 ದಿನಗಳಲ್ಲಿ 3.06 ಕೋಟಿ ರೂ. ಕಾಣಿಕೆ ಸಂಗ್ರಹ
ರಾಯರ ಹುಂಡಿಯಲ್ಲಿ 21 ದಿನಗಳಲ್ಲಿ 3.06 ಕೋಟಿ ರೂ. ಕಾಣಿಕೆ ಸಂಗ್ರಹ ರಾಯಚೂರು ಜಿಲ್ಲೆಯ ಮಂತ್ರಾಲಯದಲ್ಲಿರುವ ಪ್ರಸಿದ್ಧ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಹುಂಡಿ ಎಣಿಕೆ ಕಾರ್ಯ ಮಂಗಳವಾರ ಭಕ್ತಿಭಾವದ ವಾತಾವರಣದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ಕಳೆದ 21 ದಿನಗಳ ಅವಧಿಯಲ್ಲಿ ಭಕ್ತರಿಂದ ಒಟ್ಟು 3.06 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿರುವುದು ತಿಳಿದುಬಂದಿದೆ. ಶ್ರೀಮಠದ ಆವರಣದಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ಮಠದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಮ್ಮುಖದಲ್ಲಿ ಭದ್ರತಾ ಕ್ರಮಗಳೊಂದಿಗೆ ಹುಂಡಿಯನ್ನು ತೆರೆಯಲಾಗಿದ್ದು, ಕ್ರಮಬದ್ಧವಾಗಿ ಎಣಿಕೆ ಕಾರ್ಯ ನಡೆಸಲಾಯಿತು. ಈ ಅವಧಿಯಲ್ಲಿ ಹುಂಡಿಯಲ್ಲಿ 2,97,44,661 ರೂಪಾಯಿ ನಗದು ನೋಟುಗಳು, 9,37,000 ರೂಪಾಯಿ ಮೌಲ್ಯದ ನಾಣ್ಯಗಳು, ಜೊತೆಗೆ 23 ಗ್ರಾಂ ಚಿನ್ನ ಹಾಗೂ 490 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಭಕ್ತರಿಂದ ಸಲ್ಲಿಕೆಯಾಗಿದೆ. ದೇಶದ ವಿವಿಧ ಭಾಗಗಳಿಂದ ಆಗಮಿಸುವ ಲಕ್ಷಾಂತರ ಭಕ್ತರು ಶ್ರೀ ರಾಘವೇಂದ್ರಸ್ವಾಮಿಗಳ ಮೇಲೆ ಅಪಾರ ನಂಬಿಕೆ ಹಾಗೂ ಭಕ್ತಿಯಿಂದ ತಮ್ಮ…
ಮುಂದೆ ಓದಿ..
