ಬಳ್ಳಾರಿ ಗಲಭೆ ಪ್ರಕರಣ: ಅಮಾನತು ಬೆನ್ನಲ್ಲೇ ಎಸ್ಪಿ ಪವನ್ ನೆಜ್ಜೂರು ಆತ್ಮಹತ್ಯೆಗೆ ಯತ್ನ.
ಬಳ್ಳಾರಿ ಗಲಭೆ ಪ್ರಕರಣ: ಅಮಾನತು ಬೆನ್ನಲ್ಲೇ ಎಸ್ಪಿ ಪವನ್ ನೆಜ್ಜೂರು ಆತ್ಮಹತ್ಯೆಗೆ ಯತ್ನ.. ಮಾತ್ರೆ ಸೇವಿಸಿ ತೀವ್ರ ಚಿಕಿತ್ಸೆ ಪಡೆಯುತ್ತಿರುವ ಮಾಹಿತಿಬಳ್ಳಾರಿ ನಗರವನ್ನು ಕಲುಷಿತಗೊಳಿಸಿದ್ದ ಗಲಭೆ ಪ್ರಕರಣದ ಹೊಣೆಗಾರಿಕೆ ವಿಚಾರದಲ್ಲಿ ತಲೆದಂಡವಾಗಿದ್ದ ಪವನ್ ನೆಜ್ಜೂರು, ಅಮಾನತು ಆದೇಶದ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜ್ಯ ಪೊಲೀಸ್ ವಲಯದಲ್ಲಿ ಆಘಾತ ಮೂಡಿಸಿದೆ.ಲಭ್ಯವಾಗಿರುವ ಪ್ರಾಥಮಿಕ ಮಾಹಿತಿಯಂತೆ, ಅಮಾನತು ಆದೇಶ ಪ್ರಕಟವಾದ ಕೆಲವೇ ಗಂಟೆಗಳ ಒಳಗೆ ಪವನ್ ನೆಜ್ಜೂರು ಅವರು ಅಧಿಕ ಪ್ರಮಾಣದಲ್ಲಿ ಮಾತ್ರೆಗಳನ್ನು ಸೇವಿಸಿದ್ದಾರೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ಬಳ್ಳಾರಿಯಲ್ಲಿ ನಡೆದ ಗಲಭೆ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾದ ಆರೋಪದ ಮೇಲೆ ಸರ್ಕಾರವು ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಿತ್ತು. ಗಲಭೆ ಸಂದರ್ಭದಲ್ಲಿ ಉಂಟಾದ ಆಸ್ತಿ…
ಮುಂದೆ ಓದಿ..
