ಆಡಳಿತಾತ್ಮಕ ಸುಧಾರಣೆಗೆ ಬೆಳಗಾವಿ ಜಿಲ್ಲೆ ವಿಭಜನೆ: ಸ್ಥಳೀಯ ಶಾಸಕರ ಒಮ್ಮತ ಅಗತ್ಯ – ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್
ಆಡಳಿತಾತ್ಮಕ ಸುಧಾರಣೆಗೆ ಬೆಳಗಾವಿ ಜಿಲ್ಲೆ ವಿಭಜನೆ: ಸ್ಥಳೀಯ ಶಾಸಕರ ಒಮ್ಮತ ಅಗತ್ಯ – ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಬೆಳಗಾವಿ: ರಾಜ್ಯದ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಬೆಳಗಾವಿ ಜಿಲ್ಲೆಯನ್ನು ವಿಭಜಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದ್ದಾರೆ. ಈ ಕುರಿತಾಗಿ ಸ್ಥಳೀಯ ಶಾಸಕರು ಒಗ್ಗಟ್ಟಿನಿಂದ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಬೆಳಗಾವಿ ಜಿಲ್ಲೆಯನ್ನು ಬೆಳಗಾವಿ ಮತ್ತು ಚಿಕ್ಕೋಡಿ ಎಂದು ಎರಡು ಜಿಲ್ಲೆಗಳಾಗಿ ರೂಪಿಸುವ ಪ್ರಸ್ತಾವನೆ ಕುರಿತು ಮಾತನಾಡಿದರು. ಮಂಗಳೂರಿಗೆ ತೆರಳುವ ವೇಳೆ ತಾವು ಮತ್ತು ಸಚಿವ ಸತೀಶ್ ಜಾರಕಿಹೋಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ವಿಷಯವಾಗಿ ಚರ್ಚೆ ನಡೆಸಿದ್ದು, ಹೊಸ ಜಿಲ್ಲೆಗಳ ರಚನೆಗೆ ಸಿಎಂ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿಸಿದರು. ಆಡಳಿತಾತ್ಮಕ ಅನುಕೂಲ ಮತ್ತು…
ಮುಂದೆ ಓದಿ..
