ನ್ಯಾಷನಲ್ ಹೆರಾಲ್ಡ್ ಪ್ರಕರಣ: ಡಿಸಿಎಂ ಡಿ.ಕೆ. ಶಿವಕುಮಾರ್ಗೆ ದೆಹಲಿ ಪೊಲೀಸ್ ಸಮನ್ಸ್
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಡಿಸಿಎಂ ಡಿ.ಕೆ. ಶಿವಕುಮಾರ್ಗೆ ದೆಹಲಿ ಪೊಲೀಸ್ ಸಮನ್ಸ್ ನ್ಯಾಷನಲ್ ಹೆರಾಲ್ಡ್ ವಿವಾದ ಇನ್ನೊಮ್ಮೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಅವರಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ಶಾಖೆಯಿಂದ ನೋಟಿಸ್ ಜಾರಿಗೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ನವೆಂಬರ್ 29 ರಂದು ನೀಡಲಾದ ನೋಟಿಸ್ ಪ್ರಕಾರ, ಕಾಂಗ್ರೆಸ್ ನಾಯಕರು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಅಕ್ಟೋಬರ್ 3ರಂದು ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಕುಮಾರ್ ಅವರು ಮಹತ್ವದ ದಾಖಲೆಗಳನ್ನು ಹೊಂದಿದ್ದಾರೆ ಎಂಬ ಶಂಕೆಯ ಹಿನ್ನೆಲೆ ಇದು. ಆದ್ದರಿಂದ ಡಿಸೆಂಬರ್ 19ರೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಅಥವಾ ಬೇಡಿಕೆ ಮಾಡಿದ ಹಣಕಾಸು ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ತನಿಖಾ ತಂಡವು ಶಿವಕುಮಾರ್ ಅವರ ವೈಯಕ್ತಿಕ, ರಾಜಕೀಯ ಹಿನ್ನೆಲೆ, ಕಾಂಗ್ರೆಸ್ ಪಕ್ಷದೊಂದಿಗೆ…
ಮುಂದೆ ಓದಿ..
